ರಾಜ್ಯ

ಎಸಿಪಿ ಚಂದನ್ ಗೆ ಸವಾಲೆಸೆದಿದ್ದ ಪ್ರತಾಪ್ ಸಿಂಹಗೆ ಮುಖಭಂಗ| ಮಾಜಿ ಸಂಸದರ ಎದುರೇ ಪುನೀತ್ ಕೆರೆಹಳ್ಳಿಗೆ ಡ್ರಿಲ್

ಸಮಗ್ರ ನ್ಯೂಸ್: ಪುನೀತ್‌ ಕೆರೆಹಳ್ಳಿ ಬಂಧನವನ್ನು ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿ ಎಸಿಪಿ ಚಂದನ್‌ ಗೆ ಸವಾಲು ಹಾಕಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಭಾರೀ ಮುಖಭಂಗವಾಗಿದೆ. ಸವಾಲನ್ನು ಸ್ವೀಕರಿಸಿ ರಜೆಯ ಮೇಲೆ ಊರಿಗೆ ತೆರಳಿದ್ದರೂ ವಾಪಸ್‌ ಬಂದಿದ್ದ ಎಸಿಪಿ ಚಂದನ್‌, ಪ್ರತಾಪ್‌ ಸಿಂಹ ಎದುರಿನಲ್ಲಿಯೇ ಮತ್ತೆ ಪುನೀತ್‌ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ವಾರ್ನ್‌ ಮಾಡಿ ಬಿಡುಗಡೆ ಮಾಡಿದ್ದಾರೆ. ನಾಯಿ ಮಾಂಸ ವಿವಾದದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧಿತನಾಗಿ ಜಾಮೀನು ಪಡೆದು ಹೊರಬಂದಿದ್ದ […]

ಎಸಿಪಿ ಚಂದನ್ ಗೆ ಸವಾಲೆಸೆದಿದ್ದ ಪ್ರತಾಪ್ ಸಿಂಹಗೆ ಮುಖಭಂಗ| ಮಾಜಿ ಸಂಸದರ ಎದುರೇ ಪುನೀತ್ ಕೆರೆಹಳ್ಳಿಗೆ ಡ್ರಿಲ್ Read More »

ಸೋಮವಾರಪೇಟೆ: ಮಳೆಯಿಂದ ಸಂತ್ರಸ್ತರಾದವರಿಗೆ ನೆರವು ನೀಡಿದ ಕ.ರಾ.ವೇ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯತಿಗೆ ಸೇರಿದ ಚನ್ನಾಪುರ ಗ್ರಾಮದಲ್ಲಿ ಹಾಗೂ ಶುಂಠಿ ಮಂಗಳೂರು ಗ್ರಾಮದಲ್ಲಿ ಮಳೆಗಾಳಿಗೆ ಮನೆಗಳು ಸಂಪೂರ್ಣ ಬಿದ್ದು ಹೋಗಿದ್ದವು. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ರವರು ಮನೆಗಳ ವಿವರ ತೆಗೆದುಕೊಂಡು ಕೊಪರ್ ಎಸ್ಟೇಟ್ ಮಾಲೀಕರಾದ ನಿಶಾಂತ್ ಕೆ. ವಿ ಅವರಿಗೆ ತಿಳಿಸಿ ಸಂತ್ರಸ್ತರಿಗೆ ಸಹಾಯವನ್ನು ಮಾಡಲಾಯಿತು. ತೊಂದರೆಗೆ ಒಳಗಾದ ಎಂಟು ಕುಟುಂಬದವರಿಗೆ ಅಹಾರ ಸಾಮಗ್ರಿಗಳು ಹಾಗೂ ತರಕಾರಿ ಹಾಗೂ ಹಾಲನ್ನು ಕರ್ನಾಟಕ ರಕ್ಷಣಾ

ಸೋಮವಾರಪೇಟೆ: ಮಳೆಯಿಂದ ಸಂತ್ರಸ್ತರಾದವರಿಗೆ ನೆರವು ನೀಡಿದ ಕ.ರಾ.ವೇ Read More »

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ|ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬದುಕಿದ ಜೀವ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದ ಘಟನೆ ನಡೆದಿದೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು. ಬಸ್ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ|ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬದುಕಿದ ಜೀವ Read More »

ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ

ಸಮಗ್ರ ನ್ಯೂಸ್‌: ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ

ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ Read More »

ಬೆಂಗಳೂರಿನ ಪಿಜಿಗಳಲ್ಲಿ ಸುರಕ್ಷತೆಯ ನಿರ್ವಹಣೆ/ ಶೀಘ್ರದಲ್ಲೇ ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ

ಸಮಗ್ರ ನ್ಯೂಸ್‌: ರಾಜಧಾನಿ ಬೆಂಗಳೂರಿನಲ್ಲಿ ಪಿಜಿ ಕೇಂದ್ರಗಳ ನಿರ್ವಹಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧವಾಗಿದೆ. ನಿಗದಿತ ಮಾನದಂಡಗಳನ್ನು ಅನುಸರಿಸಲು ವಿಫಲವಾದರೆ ಪಿಜಿಗಳ ವ್ಯಾಪಾರ ಪರವಾನಗಿ ರದ್ದುಗೊಳಿಸಲಾಗುತ್ತದೆ ಎಂದು ಬಿಬಿಎಂಪಿ ಎಚ್ಚರಿಸಿದೆ. ಒಂದೆರಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುವುದು. ಮಾರ್ಗಸೂಚಿಗಳಲ್ಲಿ ನಿವಾಸಿಗಳ ಸಂಖ್ಯೆ ಮತ್ತು ಅವರ ಸುರಕ್ಷತೆಯ ಮೇಲೆ ಮಿತಿ ಇರುತ್ತದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. ವಾರ್ಡ್ ಅಧಿಕಾರಿಗಳು ಕಾನೂನು ಮತ್ತು ಮಾರ್ಗಸೂಚಿಗಳ ಬಗ್ಗೆ ಮಾತನಾಡುತ್ತಿದ್ದರೆ, ನಿವಾಸಿಗಳು

ಬೆಂಗಳೂರಿನ ಪಿಜಿಗಳಲ್ಲಿ ಸುರಕ್ಷತೆಯ ನಿರ್ವಹಣೆ/ ಶೀಘ್ರದಲ್ಲೇ ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ Read More »

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ

ಸಮಗ್ರ ನ್ಯೂಸ್: ಇರಾನ್‌ ನ ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗಾಜಾ ಗುಂಪಿನ ಹೇಳಿಕೆಯ ಪ್ರಕಾರ, ಅವರ ಸಾವಿಗೆ ಇಸ್ರೇಲ್ ಅನ್ನು ದೂಷಿಸಲಾಗಿದೆ. ಅಕ್ಟೋಬರ್ 7ರ ದಾಳಿಯ ನಂತರ ಇಸ್ಮಾಯಿಲ್ ಹನಿಯೇಹ್ ಅವರನ್ನು ಕೊಂದು ಹಮಾಸ್ ಗುಂಪನ್ನು ನಾಶಮಾಡುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆಯ ಹಿಂದೆ ಇಸ್ರೇಲ್‌ನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಇಸ್ಮಾಯಿಲ್ ಹನಿಯೆಹ್ ಅವರ ಅಂಗ ರಕ್ಷಕ ಕೂಡ ಹತರಾಗಿದ್ದಾರೆ

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ Read More »

ವಯನಾಡ್ ಗುಡ್ಡ ಕುಸಿತದಲ್ಲಿ ಸಾವು ಗೆದ್ದ ಕುಟುಂಬ| ಪ್ರಾಣ‌ ರಕ್ಷಿಸಿದ ಹಸು!!

ಸಮಗ್ರ ನ್ಯೂಸ್: ಕೇರಳದ ಭೂ ಕುಸಿತದಲ್ಲಿ ಕ್ಷಣಮಾತ್ರದಲ್ಲಿ ಚಾಮರಾಜನಗರದ ಕುಟುಂಬ ಬಚಾವ್ ಆದ ಘಟನೆ ವೈನಾಡಿನ ಚೂರಲ್ ಮಲೆಯಲ್ಲಿ ನಡೆದಿದೆ‌. ಚೂರಲ್ ಮಲೆಯಲ್ಲಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವವರು ಪಾರಾಗಿದ್ದು, ಮೆಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ. ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೆಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್ ಮಲೆಯಲ್ಲಿದ್ದರು‌. ಚೂರಲ್ ಮಲೆಗೂ ಮೆಪಾಡಿಗೂ

ವಯನಾಡ್ ಗುಡ್ಡ ಕುಸಿತದಲ್ಲಿ ಸಾವು ಗೆದ್ದ ಕುಟುಂಬ| ಪ್ರಾಣ‌ ರಕ್ಷಿಸಿದ ಹಸು!! Read More »

ಕೇರಳದ ವಯನಾಡ್ ಬಳಿಕ ಕರ್ನಾಟಕದ ಪಶ್ಚಿಮ ಘಟ್ಟಗಳಿಗೆ ಕುಸಿತದ ಭೀತಿ!? ಎಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ಯಾಕೆ?

ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ದುರಂತವಾಗುತ್ತಿದ್ದಂತೆ ಇತ್ತ ಕರ್ನಾಟಕದಲ್ಲೂ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಭಾರೀ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ದುರಂತ ನಡೆದಿದೆ. ಗುಡ್ಡ ಕುಸಿದಿದ್ದು, ನದಿಯಲ್ಲಿ ಪ್ರವಾಹ ಉಕ್ಕಿ ಹರಿದ ಪರಿಣಾಮ 120 ಕ್ಕೂ ಹೆಚ್ಚಿನ ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ, ಸಾವಿರಾರು ಮಂದಿ ಮನೆ

ಕೇರಳದ ವಯನಾಡ್ ಬಳಿಕ ಕರ್ನಾಟಕದ ಪಶ್ಚಿಮ ಘಟ್ಟಗಳಿಗೆ ಕುಸಿತದ ಭೀತಿ!? ಎಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ಯಾಕೆ? Read More »

ವಯನಾಡು ದುರಂತ| 150ರ ಗಡಿ ದಾಟಿದ ಸಾವಿನ‌ ಸಂಖ್ಯೆ

ಸಮಗ್ರ ನ್ಯೂಸ್: ಕೇರಳ‌ ರಾಜ್ಯ ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದ್ದು, ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ನಡುವೆ ಭಾರತ ಹವಾಮಾನ ಇಲಾಖೆ ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ. ʼʼಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ವಯನಾಡು ದುರಂತ| 150ರ ಗಡಿ ದಾಟಿದ ಸಾವಿನ‌ ಸಂಖ್ಯೆ Read More »

ಉಡುಪಿ: ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು,ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಗಳು ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶ ನೀಡದೇ ಇದ್ದರೂ ಆಯಾ ತಾಲೂಕಿನ ತಹಶೀಲ್ದಾರರಿಗೆ ಶಾಲೆಗೆ ರಜೆ ನೀಡುವ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ನಾಲ್ಕು ತಾಲೂಕುಗಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.

ಉಡುಪಿ: ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ Read More »