ರಾಜ್ಯ

BMTC ಬಸ್ ನಲ್ಲಿ ಹಿಂದಿ ಬೋರ್ಡ್ ಅಳವಡಿಕೆ: ಸಾರ್ವಜನಿಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂ‌ಟಿಸಿ ಬಸ್‌ನಲ್ಲಿ ಹಿಂದಿ ಬೋರ್ಡ್ ಹಾಕಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಟಿಸಿಗೆ (BMTC Bus) ಹಿಂದಿ ಮೇಲಿನ ಪ್ರೇಮ ಹೆಚ್ಚಾಗಿದ್ಯಾ? ಈ ಹಿಂದಿ ಭಾಷೆ ಬೋರ್ಡ್‌ ಹಿಂದಿರುವ ವಿಜ್ಞಾನಿ‌ ಯಾರು ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿಯನ್ನು ಟ್ಯಾಗ್ ಮಾಡಿ ಪೋಸ್ಟ್‌ ಮಾಡಿರುವ ನೆಟ್ಟಿಗರು, ಹಿಂದಿ ಹೇರಿಕೆ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ಎಕ್ಸ್ ಖಾತೆಯಲ್ಲಿ ವೈರಲ್ ಆಗಿರುವ ವಿಡಿಯೊ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ವಿಡಿಯೊ […]

BMTC ಬಸ್ ನಲ್ಲಿ ಹಿಂದಿ ಬೋರ್ಡ್ ಅಳವಡಿಕೆ: ಸಾರ್ವಜನಿಕರಿಂದ ಆಕ್ರೋಶ Read More »

ನೀಟ್‌ ರದ್ದು/ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಸಮಗ್ರ ನ್ಯೂಸ್‌: ವಿಧಾನಸಭೆಯಲ್ಲಿ ಕೇಂದ್ರದ ನೀಟ್‌ ಪರೀಕ್ಷೆಯನ್ನ ರದ್ದುಗೊಳಿಸುವ ಸಂಬಂಧ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಂಡಿಸಿದ್ದ ಮಸೂದೆ ಅಂಗೀಕಾರಗೊಂಡಿದೆ. ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಬಡ ಮಕ್ಕಳಿಗೆ ಹಿನ್ನಡೆ ಆಗುತ್ತಿದೆ. ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಹಿನ್ನಡೆ ಆಗುತ್ತಿದೆ. ಕೇಂದ್ರದ ನೀಟ್ ವ್ಯವಸ್ಥೆಯಿಂದ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದು ಮಾಡಬೇಕೆಂದು ನಿರ್ಣಯ ಮಂಡಿಸಿದರು.

ನೀಟ್‌ ರದ್ದು/ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ Read More »

ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಸಮಗ್ರ ನ್ಯೂಸ್‌: ವಿಶ್ವಪ್ರಸಿದ್ಧ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೆಆರ್‌ಎಸ್‌ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ. ಈ ಕಾರಣದಿಂದ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳು ಕೂಡ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದ್ರೆ ವಾಕಿಂಗ್ ಪಾಥ್‌ಗೂ ನೀರು ನುಗ್ಗುವ ಸಾಧ್ಯತೆ ಇದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್

ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ Read More »

ಅರಬ್ ರಾಷ್ಟ್ರಗಳಲ್ಲಿ ಉದ್ಯೋಗ ಬೇಕಾ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ| ಈಗಲೇ ನೇರ ಸಂದರ್ಶನಕ್ಕೆ ತಯಾರಾಗಿ

ಸಮಗ್ರ ನ್ಯೂಸ್: ಭಾರತ ಸರಕಾರದ ವಿದೇಶಾಂಗ ಇಲಾಖೆಯ ಅಂಗೀಕೃತ ಸಂಸ್ಥೆಯಾದ ನೂರ್ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ ಕಾರ್ಯಕ್ರಮವು ಜು.26 ರಂದು ನಡೆಯಲಿದೆ. ಇದರಲ್ಲಿ ನೀವು ನಿಮ್ಮ ಕನಸಿನ ವಿದೇಶಿ ಉದ್ಯೋಗವನ್ನು ಪಡೆಯುವ ಸುವರ್ಣ ಅವಕಾಶ ಲಭ್ಯವಾಗಲಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9:00 ರಿಂದ ಸಂಜೆ 6:00ರ ವರೆಗೆ ನಡೆಯಲಿದ್ದು, ಇದರಲ್ಲಿ 22 ರಿಂದ 36 ವಯಸ್ಸಿನ (ಹೊಸಬರು /ಅನುಭವಿ)ಯುವಕರು ಭಾಗವಹಿಸಬಹುದು. ಲಕ್ಷದವರೆಗಿನ ಮಾಸಿಕ ವೇತನ ಗಳಿಸಬಹುದಾದ ಈ ವಿದೇಶಿ ಉದ್ಯೋಗ ಸಂದರ್ಶನದ

ಅರಬ್ ರಾಷ್ಟ್ರಗಳಲ್ಲಿ ಉದ್ಯೋಗ ಬೇಕಾ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ| ಈಗಲೇ ನೇರ ಸಂದರ್ಶನಕ್ಕೆ ತಯಾರಾಗಿ Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ/ ಶೀಘ್ರದಲ್ಲೇ ಹೆಚ್ಚಾಗುತ್ತೆ ಗೌರವಧನ

ಸಮಗ್ರ ನ್ಯೂಸ್‌: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ/ ಶೀಘ್ರದಲ್ಲೇ ಹೆಚ್ಚಾಗುತ್ತೆ ಗೌರವಧನ Read More »

ಕಾಂಗ್ರೆಸ್‌ ಗ್ಯಾರೆಂಟಿಗೆ ಬ್ರೇಕ್‌ ಹಾಕಿದ ರಾಜಸ್ಥಾನ ಬಿಜೆಪಿ ಸರ್ಕಾರ

ಸಮಗ್ರ ನ್ಯೂಸ್‌: ರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಪ್ರತಿ ಮನೆಗೆ ಮಾಸಿಕ 100 ಯುನಿಟ್‌ ಉಚಿತ ವಿದ್ಯುತ್‌ ಹಾಗೂ ಮಹಿಳೆಯರಿಗೆ ಉಚಿತ ಮೊಬೈಲ್‌ ಫೋನ್‌ ಸ್ಕೀಂಗಳಿಗೆ ಈಗಿನ ಬಿಜೆಪಿ ಸರ್ಕಾರ ಬ್ರೇಕ್‌ ಹಾಕಿದ್ದು, ಹಳೆಯ ಫಲಾನುಭವಿಗಳಿಗೆ ಯೋಜನೆ ಮುಂದುವರಿಸಿ ಹೊಸಬರಿಗೆ ಯೋಜನೆ ಅನ್ವಯ ಆಗದಂತೆ ನಿಯಮ ಮಾರ್ಪಡಿಸಿದೆ. ಈ ವರ್ಷದ ಕೊನೆಯಲ್ಲಿ ನಡೆದ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್‌ನ ಅಶೋಕ್‌ ಗೆಹ್ಲೋಟ್ ಸರ್ಕಾರ ಪ್ರತಿ ಮನೆಗೆ ಮಾಸಿಕ 100

ಕಾಂಗ್ರೆಸ್‌ ಗ್ಯಾರೆಂಟಿಗೆ ಬ್ರೇಕ್‌ ಹಾಕಿದ ರಾಜಸ್ಥಾನ ಬಿಜೆಪಿ ಸರ್ಕಾರ Read More »

ಚಿಕ್ಕಮಗಳೂರು: ಭಾರೀ ಗಾಳಿ-ಮಳೆ ಹಿನ್ನಲೆ |6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆ ಇದ್ದರೂ, ಭಾರೀ ಗಾಳಿ ಬೀಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಇಂದು (ಜು. 25) ಮಾತ್ರ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು: ಭಾರೀ ಗಾಳಿ-ಮಳೆ ಹಿನ್ನಲೆ |6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ Read More »

ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ|ಅಲ್ಲೇ ಊಟ ಅಲ್ಲೇ ನಿದ್ದೆ..!

ಸಮಗ್ರ ನ್ಯೂಸ್: ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನಲೆ ವಿಧಾನಸಭೆ ಒಳಗಡೆಯೇ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸಿದೆ. ಸದನದ ಬಾವಿಯೊಳಗೇ ಹಾಡು, ಭಜನೆಯ ಮಾಡಿದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು, ಸ್ವಂತ ಖರ್ಚಿನಲ್ಲಿಯೇ ಊಟ ತರಿಸಿಕೊಂಡು ಊಟ ಮಾಡಿದರು. ಬಳಿಕ ಸೋಫಾ, ನೆಲದ ಮೇಲೆ ಮಲಗಿದರು. ವಿಧಾನಸೌಧದಲ್ಲಿ ಸ್ಪೀಕರ್‌ ಊಟೋಪಚಾರವನ್ನು ತಿರಸ್ಕರಿಸಿದ ಪ್ರತಿಪಕ್ಷ ನಾಯಕರು, ಸ್ವಂತ ಖರ್ಚಿನಲ್ಲೇ ವಿಧಾನಸೌಧಕ್ಕೆ ಊಟ ತರಿಸಿಕೊಂಡು ಊಟ ಮಾಡಿದರು. ಭ್ರಷ್ಟಾಚಾರದ ಹಣದಲ್ಲಿ ನಾವು ಊಟ ಮಾಡುವುದಿಲ್ಲ

ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ|ಅಲ್ಲೇ ಊಟ ಅಲ್ಲೇ ನಿದ್ದೆ..! Read More »

ಭಾರೀ ಮಳೆ ಹಿನ್ನಲೆ| ಇಂದು(ಜು.25) ಸಕಲೇಶಪುರ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಉಪ ವಿಭಾಗಾಧಿಕಾರಿಗಳ ನಿರ್ದೇಶನದಂತೆ ಹಾಗೂ ಉಪ ನಿರ್ದೇಶಕರು ಆಡಳಿತ ಹಾಸನ ಇವರ ಸೂಚನೆಯ ಮೇರೆಗೆ ಸಕಲೇಶಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂದು ದಿನಾಂಕ 25 /7/2024 ರಂದು ಸಕಲೇಶಪುರ ತಾಲೂಕಿನ ಎಲ್ಲಾ ಸರ್ಕಾರಿ ,ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನಲೆ| ಇಂದು(ಜು.25) ಸಕಲೇಶಪುರ ತಾಲೂಕಿನ ಶಾಲೆಗಳಿಗೆ ರಜೆ Read More »

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿರುವ ಟ್ರಕ್‌ ಗಂಗಾವಳಿ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಭಾರೀ ಮಳೆಯಿಂದಾಗಿ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಈಗ ಗುಡ್ಡದ ಮುಂಭಾಗದಲ್ಲಿರುವ ಗಂಗಾವಳಿಯಲ್ಲಿರುವುದು ಪತ್ತೆಯಾಗಿದೆ. ದುರಂತದಲ್ಲಿ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಈ ಪೈಕಿ ಕಾರ್ಯಾಚರಣೆ ಮೂಲಕ ಈವರೆಗೆ ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿಯಲ್ಲಿ ಪತ್ತೆಯಾಗಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ದುರಂತ ಸಂಭವಿಸಿದ ಎಂಟು ದಿನಗಳು ಕಳೆದ ಬಳಿಕ ಟ್ರಕ್ ಪತ್ತೆಯಾಗಿದ್ದು, ಕಾರ್ಯಚರಣೆ ತೀವ್ರಗೊಂಡಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿರುವ ಟ್ರಕ್‌ ಗಂಗಾವಳಿ ನದಿಯಲ್ಲಿ ಪತ್ತೆ Read More »