ರಾಜ್ಯ

ಶಿರೂರು ಗುಡ್ಡ ಪ್ರಕರಣ| ‘ ನೀವ್ ಹೇಳ್ದಂಗೆ ಕೇಳೋಕೆ ಆಗಲ್ಲ’| ಐಆರ್ ಬಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಐಆರ್‌ಬಿಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಕಾರವಾರ ನಗರದ ಸಿಇಒ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐಆರ್‌ಬಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸಖತ್‌ ಕ್ಲಾಸ್ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೇ ಟೋಲ್ ಸಂಗ್ರಹ ಸರಿಯಿಲ್ಲ. 2016ಕ್ಕೆ ಮುಕ್ತಾಯವಾಗಬೇಕಿದ್ರೂ ಈವರೆಗೂ ಮುಕ್ತಾಯಗೊಳಿಸಿಲ್ಲ. ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುತ್ತಿದ್ದೀರಿ. ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ. ನೀವು ಹೇಳಿದ ಹಾಗೆ ಕೇಳುವುದಕ್ಕೆ […]

ಶಿರೂರು ಗುಡ್ಡ ಪ್ರಕರಣ| ‘ ನೀವ್ ಹೇಳ್ದಂಗೆ ಕೇಳೋಕೆ ಆಗಲ್ಲ’| ಐಆರ್ ಬಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ Read More »

ಇಂದು ಪ್ರಜ್ವಲ್‌, ಸೂರಜ್‌ ರೇವಣ್ಣ ಜಾಮೀನು ಭವಿಷ್ಯ: ಸಹೋದರರಿಗೆ ಸಿಗುತ್ತಾ ಬಿಗ್ ರಿಲೀಫ್..!

ಸಮಗ್ರ ನ್ಯೂಸ್: ಅತ್ಯಾಚಾರ ಕೇಸ್ ನಲ್ಲಿ ಜೈಲಿನಲ್ಲಿ ಇರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪುತ್ರರಾದ ಪ್ರಜ್ವಲ್‌ ರೇವಣ್ಣ ಮತ್ತು ಸೂರಜ್‌ ರೇವಣ್ಣ ಪಾಲಿಗೆ ಇಂದು ಮಹತ್ವದ ದಿನ ಆಗಲಿದೆ. ಇಂದು ಸಹೋದರರ ಜಾಮೀನು ಕುರಿತಾದ ಆದೇಶ ಇಂದು ಪ್ರಕಟವಾಗಲಿದೆ. ಹೀಗಾಗಿ ಇಬ್ಬರಿಗೂ ರಿಲೀಫ್‌ ಸಿಗುತ್ತಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಜೈಲು ಕಂಬಿ ಎಣಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. ಸಿಐಡಿ

ಇಂದು ಪ್ರಜ್ವಲ್‌, ಸೂರಜ್‌ ರೇವಣ್ಣ ಜಾಮೀನು ಭವಿಷ್ಯ: ಸಹೋದರರಿಗೆ ಸಿಗುತ್ತಾ ಬಿಗ್ ರಿಲೀಫ್..! Read More »

ಉತ್ತರ ಕನ್ನಡ: ಗುಡ್ಡ ಕುಸಿತ ಸ್ಥಳ ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭಾನುವಾರ (ಜು.21) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ, ಉನ್ನತ ಮೆಟಲ್ ಡಿಟೆಕ್ಟರ್ ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ಮತ್ತು ಸೂಚನೆ. ಜೊತೆಗೆ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯವರಿಗೆ ಸಿಎಂ ಶ್ಲಾಘನೆ

ಉತ್ತರ ಕನ್ನಡ: ಗುಡ್ಡ ಕುಸಿತ ಸ್ಥಳ ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ Read More »

ಭರ್ತಿಯಾದ ಕೆಆರ್‌ಎಸ್‌/ ಜು.27ರಂದು ಮುಖ್ಯಮಂತ್ರಿಯಿಂದ ಬಾಗಿನ

ಸಮಗ್ರ ನ್ಯೂಸ್‌: ಉತ್ತಮ ಮಳೆಯಿಂದ ಜುಲೈ ತಿಂಗಳಲ್ಲೇ ಕೆಆರ್‌ಎಸ್‌ ಅಣೆಕಟ್ಟೆ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಜು.27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು. ನಮ್ಮ ರೈತ ಕುಲಕ್ಕೆ ಇದೊಂದು ರೀತಿಯ ಹಬ್ಬ. ಹೀಗಾಗಿ ತುಂಬಿರುವ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಾಗುವುದು ಎಂದು ಕೆಆರ್‌ಎಸ್‌ ವೀಕ್ಷಣೆ ಮಾಡಿದ ಬಳಿಕ ಹೇಳಿದರು. ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿ ಸಚಿವರು ಹಾಗೂ ಮಂಡ್ಯ, ಮೈಸೂರು ಭಾಗದ

ಭರ್ತಿಯಾದ ಕೆಆರ್‌ಎಸ್‌/ ಜು.27ರಂದು ಮುಖ್ಯಮಂತ್ರಿಯಿಂದ ಬಾಗಿನ Read More »

ಹವಾಮಾನ ವರದಿ| ಜು.25ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ‌ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಬೆಳಗಾವಿ, ಬೀದರ್‌, ಕಲಬುರಗಿ

ಹವಾಮಾನ ವರದಿ| ಜು.25ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ‌ಮಳೆ ಸಾಧ್ಯತೆ Read More »

ಕನ್ನಡಿಗರಿಗೆ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌

ಸಮಗ್ರ ನ್ಯೂಸ್: ಇತ್ತೀಚೆಗೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಇದೀಗ ಕ್ಷಮೆಯಾಚಿಸಿದ್ದಾರೆ. ಈ ಕಾರಣಕ್ಕೆ ಕರ್ನಾಟಕದಾದ್ಯಂತ ಬಾಯ್ಕಾಟ್‌ ಫೋನ್‌ ಪೇ (Boycott PhonePe) ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಸಮೀರ್‌ ನಿಗಮ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದ ಪೋಸ್ಟ್‌ ಮೂಲಕ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ನಿಗಮ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಕಳೆದ ವಾರ

ಕನ್ನಡಿಗರಿಗೆ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌ Read More »

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ

ಸಮಗ್ರ ನ್ಯೂಸ್: ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಪ್ರೋತ್ಸಾಹದನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಮಹಿಳಾ ಡಬಲ್ಸ್

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಈ ಭಯಾನಕ ಕೃತ್ಯ ಐಫೋನ್ ನಲ್ಲಿ ಸೆರೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಕೊಲೆ ಮಾಡಿದ ಆರೋಪಿಗಳು ಹಲ್ಲೆ ಮಾಡಿದ ಬಳಿಕ ಐ ಫೋನ್‌ನಲ್ಲಿ ರೆಕಾರ್ಡ್‌ ಕೂಡ ಮಾಡಿರುವುದು ತಿಳಿದು ಬಂದಿದೆ. ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಾಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು ಪ್ಲ್ಯಾನ್‌ ಕೂಡ ಆಗಿತ್ತು. ಅದರಲ್ಲಿಯೇ ಒಬ್ಬ ಆರೋಪಿ ಹಲ್ಲೆ ನಡೆದ ಬಳಿಕ ಐಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರಂತೆ. ಐವರು ಆರೋಪಿಗಳಿಗೆ ಸಿಮ್ ಕಾರ್ಡ್ ಕೊಟ್ಟಿದ್ದವರ ವಿಚಾರಣೆಯನ್ನು ಕಾಮಾಕ್ಷಿಪಾಳ್ಯ ಪೊಲೀಸರು

ರೇಣುಕಾಸ್ವಾಮಿ ಕೊಲೆ ಪ್ರಕರಣ| ಈ ಭಯಾನಕ ಕೃತ್ಯ ಐಫೋನ್ ನಲ್ಲಿ ಸೆರೆ Read More »

ಶೃಂಗೇರಿ ಶಾರದೆಯ ಸನ್ನಿದಿಗೆ ಬರುವವರಿಗೆ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ| ದೇವಸ್ಥಾನ ಆಡಳಿತ ಮಂಡಳಿಯಿಂದ ಪ್ರಕಟಣೆ

ಸಮಗ್ರ ನ್ಯೂಸ್: ಶೃಂಗೇರಿಯ ಶಾರದಾಂಬೆ ದೇವಾಲಯದಲ್ಲಿ ಆ.15 ರಿಂದ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಲಿದೆ. ದೇವಾಲಯ ಪ್ರವೇಶಿಸುವವರು ಸಂಪ್ರದಾಯಬದ್ಧ ಭಾರತೀಯ ಉಡುಪಿನಲ್ಲಿದ್ದರೆ ಮಾತ್ರ ದೇವಾಲಯದಲ್ಲಿ ಹತ್ತಿರದಿಂದ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇವಾಲಯ ಹಾಗೂ ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ. ಒಂದು ವೇಳೆ ಭಾರತೀಯ ಉಡುಪುಗಳನ್ನಲ್ಲದೇ ಬೇರೆ ಉಡುಪುಗಳನ್ನು ಧರಿಸಿದರೆ, ದೇವಾಲಯದಲ್ಲಿ ಅರ್ಧ ಮಂಟಪದಿಂದ ಹೊರಭಾಗದಲ್ಲಿ ನಿಂತು ದೇವರ ದರ್ಶನ ಪಡೆಯಬೇಕಾಗುತ್ತದೆ ಅವರಿಗೆ ಒಳ ಭಾಗದಲ್ಲಿರುವ ಪರಿಕ್ರಮಕ್ಕೆ ಪ್ರವೇಶವಿರುವುದಿಲ್ಲ ಎಂದು ಆಡಳಿತಾಧಿಕಾರಿಗಳು

ಶೃಂಗೇರಿ ಶಾರದೆಯ ಸನ್ನಿದಿಗೆ ಬರುವವರಿಗೆ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ| ದೇವಸ್ಥಾನ ಆಡಳಿತ ಮಂಡಳಿಯಿಂದ ಪ್ರಕಟಣೆ Read More »

ರೇಣುಕಾಸ್ವಾಮಿ ಹತ್ಯೆ ಎ4 ಆರೋಪಿ ರಘು ತಾಯಿ ಸಾವು

ಸಮಗ್ರ ನ್ಯೂಸ್: ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ4 ಆರೋಪಿ ರಾಘವೇಂದ್ರ ಅಲಿಯಾಸ್ ರಘು ತಾಯಿ ಸಾವನ್ನಪ್ಪಿದ್ದಾರೆ. ಆರೋಪಿಯ ತಾಯಿ ಮಂಜುಳಮ್ಮ ನಿಧನರಾಗಿದ್ದಾರೆ. ಬಂಧನಕ್ಕೂ ಮುಂಚೆಯೇ ರಘು ಪ್ರೇಮ ವಿವಾಹವಾಗಿ ಮನೆಯಿಂದ ಹೊರಗಿದ್ದರು. ಈ ಹಿನ್ನೆಲೆ ಮಂಜುಳಮ್ಮ ಅವರನ್ನು ರಾಘವೇಂದ್ರ ಸಹೋದರ ನೋಡಿಕೊಳ್ಳುತ್ತಿದ್ದರು. ಇದೀಗ ವಯೋಸಹಜ ಕಾಯಿಲೆಯಿಂದ ಮಂಜುಳಮ್ಮ ನಿಧನರಾಗಿದ್ದಾರೆ. ಇತ್ತ ದರ್ಶನ್ ಜೊತೆ ಆರೋಪಿ ರಾಘವೇಂದ್ರ ಜೈಲು ಸೇರಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಎ4 ಆರೋಪಿ ರಘು ತಾಯಿ ಸಾವು Read More »