ರಾಜ್ಯ

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಶಾಕ್.. ಟಿಕೆಟ್ ದರ ಏರಿಕೆ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇತ್ತೀಚೆಗೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಕಂಡಿತು ಇದಾದ ಬೆನ್ನಲ್ಲೇ ಈಗ ಸಾರಿಗೆ ಬಸ್‌ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಾಕ್ ನೀಡಲು ಮುಂದಾಗಿದೆ. ಹೌದು ಬಸ್ ಟಿಕೆಟ್‌ ದರ ಏರಿಕೆ ವಿಚಾರವಾಗಿ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್ ಸುಳಿವು ನೀಡಿದ್ದು, ಇದಕ್ಕೆ ಪ್ರಯಾಣಿಕರಿಂದ ಇದೀಗ ಆಕ್ರೋಶ ವ್ಯಕ್ತವಾಗಿದೆ. ಗುಬ್ಬಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್ ಅವರು, ಇಂಧನ ದರ, ವಾಹನ ಬಿಡಿ ಭಾಗಗಳ […]

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಶಾಕ್.. ಟಿಕೆಟ್ ದರ ಏರಿಕೆ? Read More »

ಜು.22 ರಿಂದ ರಾಜ್ಯದ 250 ಅಂಗನವಾಡಿಗಳಲ್ಲಿ LKG, UKG ಆರಂಭ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ( LKG, UKG ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ

ಜು.22 ರಿಂದ ರಾಜ್ಯದ 250 ಅಂಗನವಾಡಿಗಳಲ್ಲಿ LKG, UKG ಆರಂಭ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಇಂದಿನಿಂದ ವಿಧಾನ ಮಂಡಲ ಅಧಿವೇಶನ| ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಅಧಿಕಾರಿಗಳ ಜೊತೆ ಸಭೆ ಮಾಡಿದರು. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ

ಇಂದಿನಿಂದ ವಿಧಾನ ಮಂಡಲ ಅಧಿವೇಶನ| ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ Read More »

ಮಡಿಕೇರಿ: ರಸ್ತೆ ಬದಿ ನಿಲ್ಲಿಸಿದ ಸ್ವಿಫ್ಟ್‌ ಕಾರಿಗೆ ಬೆಂಕಿ

ಸಮಗ್ರ ನ್ಯೂಸ್: ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ 275ರ ಸಂಪಿಗೆ ಕಟ್ಟೆ ಬಳಿ ತಾಂತ್ರಿಕ ದೋಷದಿಂದ ಸ್ವಿಫ್ಟ್‌ ಕಾರುವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರು ಸುಟ್ಟು ಕರಕಲಾಗಿದೆ. ಈ ಅವಘಡದಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಳೂರಿನ ಶ್ರೀನಿವಾಸ್ ಎಂಬುವವರು ಶನಿವಾರ ಬೆಳಗ್ಗೆ ಅಪಘಾತವಾಗಿದ್ದ ಕಾರನ್ನು ಹೆದ್ದಾರಿ ಬದಿ ನಿಲ್ಲಿಸಿದರು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಕಾರಿನಲ್ಲಿದ್ದವರು ಹೊರಗಡೆ ಬಂದಿದ್ದಾರೆ.

ಮಡಿಕೇರಿ: ರಸ್ತೆ ಬದಿ ನಿಲ್ಲಿಸಿದ ಸ್ವಿಫ್ಟ್‌ ಕಾರಿಗೆ ಬೆಂಕಿ Read More »

ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆಯಿಂದ ಪರಿಹಾರ/ ವಯಸ್ಸಿಗೆ ಅನುಗುಣವಾಗಿ ತರಗತಿಗೆ ಪ್ರವೇಶ

ಸಮಗ್ರ ನ್ಯೂಸ್‌: ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ವಯೋಮಿತಿ ನಿಗದಿಪಡಿಸಿ ಪರಿಹಾರ ಕಲ್ಪಿಸಿದೆ. ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ಹಾಗೂ ಗರಿಷ್ಠ ವಯೋಮಿತಿಯನ್ನು ಕ್ರಮವಾಗಿ 4 ರಿಂದ 6 ವರ್ಷ, 5ರಿಂದ 7 ವರ್ಷ ಮತ್ತು 6ರಿಂದ 8 ವರ್ಷಗಳಿಗೆ ನಿಗದಿಪಡಿಸಿ, 2023-24ನೇ ಸಾಲಿನಿಂದ ಪೂರ್ವಾನ್ವಯವಾಗುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇದರ ಜೊತೆಗೆ 8 ವರ್ಷ ದಾಟಿದ ಮಕ್ಕಳಿಗೆ

ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆಯಿಂದ ಪರಿಹಾರ/ ವಯಸ್ಸಿಗೆ ಅನುಗುಣವಾಗಿ ತರಗತಿಗೆ ಪ್ರವೇಶ Read More »

ವಿಶ್ವಾಸ ಮತ ಕಳೆದುಕೊಂಡ ಪ್ರಚಂಡ/ ಹುದ್ದೆಗೆ ರಾಜೀನಾಮೆ ನೀಡಿದ ನೇಪಾಳ ಪ್ರಧಾನಿ

ಸಮಗ್ರ ನ್ಯೂಸ್‌: ನೇಪಾಳ ಸಂಸತ್ತಿನಲ್ಲಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರು ವಿಶ್ವಾಸ ಮತವನ್ನು ಕಳೆದುಕೊಂಡಿದ್ದು, ಮುಂದಿನ ಪ್ರಧಾನಿಯಾಗಿ ಕಮ್ಯುನಿಸ್ಟ್ ಪ್ರತಿಸ್ಪರ್ಧಿ ಕೆ.ಪಿ ಶರ್ಮಾ ಓಲಿ ಆಯ್ಕೆಯಾಗಿದ್ದಾರೆ. ಹೀಗಾಗಿ ಪ್ರಧಾನಿ ಸ್ಥಾನಕ್ಕೆ ಪ್ರಚಂಡ ಅವರು ರಾಜೀನಾಮೆ ನೀಡಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕಿಸ್ಟ್‌ ಲೆನಿನಿಸ್ಟ್ (CPN-UML) ತನ್ನ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡ ನಂತರ ಮತ್ತು ನೇಪಾಳಿ ಕಾಂಗ್ರೆಸ್‌ನೊಂದಿಗೆ ತಡರಾತ್ರಿಯ ಸಮ್ಮಿಶ್ರ ಒಪ್ಪಂದವನ್ನು ಮಾಡಿಕೊಂಡ ನಂತರ ಪ್ರಚಂಡ ಅವರು ಐದನೇ ವಿಶ್ವಾಸ ಮತಕ್ಕೆ ಕರೆ ನೀಡಿದರು.

ವಿಶ್ವಾಸ ಮತ ಕಳೆದುಕೊಂಡ ಪ್ರಚಂಡ/ ಹುದ್ದೆಗೆ ರಾಜೀನಾಮೆ ನೀಡಿದ ನೇಪಾಳ ಪ್ರಧಾನಿ Read More »

ಮುಖ್ಯಮಂತ್ರಿಗೆ ಬಂದಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ/ ರೈತ ಸಂಘಗಳ ಆಕ್ರೋಶ

ಸಮಗ್ರ ನ್ಯೂಸ್‌: ಜುಲೈ 10ರಂದು ಚಾಮರಾಜನಗರದಲ್ಲಿ ನಡೆದಿದ್ದ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ರೈತರು ಮತ್ತು ಆಮ್ಲಜನಕ ದುರಂತದ ಸಂತ್ರಸ್ತರು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ವಿವಿಧ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದರು. ಈ ಅರ್ಜಿಗಳು ಕಸದ ರಾಶಿಯಲ್ಲಿ ಮತ್ತು ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬಿದ್ದಿವೆ. ಸಾರ್ವಜನಿಕರು, ರೈತರು ಗಂಟೆಗಟ್ಟಲೆ ಕಾದು ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರೂ

ಮುಖ್ಯಮಂತ್ರಿಗೆ ಬಂದಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ/ ರೈತ ಸಂಘಗಳ ಆಕ್ರೋಶ Read More »

ಮಾಜಿ ಶಾಸಕ ಡಿ.ಎಸ್ ವೀರಯ್ಯರನ್ನು ಬಂಧಿಸಿದ ಸಿಐಡಿ

ಸಮಗ್ರ ನ್ಯೂಸ್: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ ಹಗರಣ ನಡೆದ ಆರೋಪವಿದ್ದು, ಇದರ ತನಿಖೆ ಹಿನ್ನೆಲೆಯಲ್ಲಿ‌ ಬಂಧನ ಮಾಡಲಾಗಿದೆ. 2021 ರಿಂದ 2023ರ ನಡುವೆ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತಾಗಿ ಹಾಲಿ ವ್ಯವಸ್ಥಾಪಕ ನಿರ್ದೇಶಕರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್ 23ರಂದು ಎಫ್‌ಐಆರ್ ದಾಖಲಾಗಿದ್ದು, ಇದೇ ಪ್ರಕರಣವನ್ನು ರಾಜ್ಯ

ಮಾಜಿ ಶಾಸಕ ಡಿ.ಎಸ್ ವೀರಯ್ಯರನ್ನು ಬಂಧಿಸಿದ ಸಿಐಡಿ Read More »

ಅನಂತ್‌ ಅಂಬಾನಿ ಮದುವೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯ ತಿನಿಸುಗಳು..!

ಸಮಗ್ರ ನ್ಯೂಸ್: ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹವು ಅದ್ಧೂರಿಯಾಗಿ ನೆರವೇರಿಸಿದೆ. ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರು ಹಾರ ಬದಲಾಯಿಸಿಕೊಳ್ಳುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ದೇಶ-ವಿದೇಶಗಳ ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳ ಸಮ್ಮುಖದಲ್ಲಿ ನವ ಜೋಡಿಯು ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಇನ್ನು ಮದುವೆ ಆಗಮಿಸಿದ ಸಾವಿರಾರು ಗಣ್ಯರಿಗೆ ಅಂಬಾನಿ ಕುಟುಂಬಸ್ಥರು ಭರ್ಜರಿ ಭೋಜನ ಹಾಕಿಸಿದ್ದಾರೆ. ಅದರಲ್ಲೂ, ಬೆಂಗಳೂರಿನಲ್ಲಿರುವ, ಖ್ಯಾತ ರಾಮೇಶ್ವರಂ

ಅನಂತ್‌ ಅಂಬಾನಿ ಮದುವೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯ ತಿನಿಸುಗಳು..! Read More »

ಹವಾಮಾನ ವರದಿ| ರಾಜ್ಯಾದ್ಯಂತ ಮತ್ತೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇನ್ನು ಚಿಕ್ಕಮಗಳೂರು, ಕೊಡಗು,

ಹವಾಮಾನ ವರದಿ| ರಾಜ್ಯಾದ್ಯಂತ ಮತ್ತೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ Read More »