ರಾಜ್ಯ

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ತಂದೆ ತಾಯಿ ಕೌಟುಂಬಿಕ ಕಲಹದಿಂದ ಮನನೊಂದು 17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡ ಘಟನೆ ಬೆಂಗಳೂರಿನ ಹೋಸಕೆರೆಹಳ್ಳಿಯ ಮಂಜುನಾಥ್ ನಗರದಲ್ಲಿ ಜ.1 ರಂದು ನಡೆದಿದೆ. ಮೃತ ಬಾಲಕಿ ಲೇಖನಾ (17) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಲೇಖನಾ ನಿನ್ನೆ ಮಧ್ಯಾಹ್ನ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯೊಳಗೆ ನೇಣಿಗೆ ಶರಣಾಗಿದ್ದಾಳೆ. ಸಂಜೆ ಊಟಕ್ಕೆಂದು ತಾಯಿ ಮನೆಗೆ ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಆಕೆಯನ್ನು ಆಸ್ಪತ್ರೆಗೆ […]

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ Read More »

ರಾಜ್ಯದ ‌12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ರಾಜ್ಯ Australian ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಶಿವಮೊಗ್ಗ ಡಿಸಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಎಸ್ಪಿಯಾಗಿದ್ದ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ. ಇನ್ನು ಸಾಗರದ ಎಎಸ್ಪಿಯಾಗಿದ್ದ ಯತೀಶ್ ಅವರನ್ನು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಕೋಲಾರದ ಎಸ್ಪಿ ನಿಖಿಲ್ ಅವರನ್ನು

ರಾಜ್ಯದ ‌12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ Read More »

‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಸ್ವತಃ ಭಾಗವಹಿಸಲು ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಅವಕಾಶ ಕಲ್ಪಿಸಬೇಕು ಎಂದು ಕೋರಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬುಧವಾರ ಅರ್ಜಿ ಸಲ್ಲಿಸಲಾಗಿದೆ. ‘ಈ ಪ್ರಕರಣದ ಆರೋಪಿಗಳು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ರಿಟ್ ಅರ್ಜಿಯಲ್ಲಿ ಧರ್ಮಸ್ಥಳ ದೇವಸ್ಥಾನದ ಹೆಸರನ್ನು ಉಲ್ಲೇಖಿಸಿದ್ದರು. ಅದನ್ನು ಪರಿಗಣಿಸಿ, ಸಂತ್ರಸ್ತ ಎಂಬ ನೆಲೆಯಲ್ಲಿ ಶ್ರೀ ಕ್ಷೇತ್ರ

‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ Read More »

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಅರ್ಚಕ ದಂಪತಿಯ ಬಂಧನ

ಸಮಗ್ರ ನ್ಯೂಸ್: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿರುವ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್ ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಡಿಸೆಂಬರ್ 17ರಂದು ಆರೋಪಿಗಳು ಎ.ವಿ ನಾರಾಯಣ ಮತ್ತು ಅವರ ಪತ್ನಿಯನ್ನು ಬೆದರಿಸಿ ಚಿನ್ನಾಭರಣ ಕಿತ್ತುಕೊಳ್ಳಲು

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಅರ್ಚಕ ದಂಪತಿಯ ಬಂಧನ Read More »

ದ್ವಾದಶ ರಾಶಿಗಳ 2026ರ ವರ್ಷ ಭವಿಷ್ಯ

ಸಮಗ್ರ ನ್ಯೂಸ್: ಈ ವರ್ಷದ ಜೂನ್ ತಿಂಗಳಲ್ಲಿ ಗುರುಗ್ರಹ ತಾನು ಇದುವರೆಗೂ ಇದ್ದ ಮಿಥುನ ರಾಶಿಯನ್ನು ಬಿಟ್ಟು ಕರ್ಕರಾಶಿಯನ್ನು ಪ್ರವೇಶಿಸುತ್ತಾನೆ. ಅಕ್ಟೋಬರ್ 31 ರಂದು ಕರ್ಕದಿಂದ ಸಿಂಹರಾಶಿಗೆ ಪ್ರವೇಶಿಸಿ 2026 ಪೂರ್ತಿಯಾಗಿ ಸಿಂಹರಾಶಿಯಲ್ಲೇ ಇರುತ್ತಾನೆ. ಶನಿ ಈ ವರ್ಷ ಪೂರ್ತಿ ಮೀನರಾಶಿಯಲ್ಲೇ ಇರುತ್ತಾನೆ. ರಾಹುಕೇತುಗಳು 06-12-26 ರಂದು ತಾವು ಇದುವರೆಗೂ ಇದ್ದ ಕುಂಭ-ಸಿಂಹ ರಾಶಿಯನ್ನು ಬಿಟ್ಟು ಕಟಕ ಮಕರ ರಾಶಿಗೆ ಪ್ರವೇಶ ಮಾಡುತ್ತಾರೆ. ಈ ವರ್ಷದ ಅದೃಷ್ಟ ರಾಶಿಗಳು ವೃಷಭ, ಮಿಥುನ, ಕನ್ಯಾ, ತುಲಾ,ವೃಶ್ಚಿಕ, ಮಕರ, ಮೀನ.

ದ್ವಾದಶ ರಾಶಿಗಳ 2026ರ ವರ್ಷ ಭವಿಷ್ಯ Read More »

ಮೊಬೈಲ್ ಬಳಕೆದಾರರೇ ಎಚ್ಚರ| ಹೊಸ ವರ್ಷದ ವಿಶ್ ಓಪನ್ ಮಾಡೋ ಮುನ್ನ ಜೋಪಾನ

ಸಮಗ್ರ ನ್ಯೂಸ್: ಹೊಸ ವರ್ಷಕ್ಕೆ ಶುಭಾಶಯ ಕೋರುವ ವಾಟ್ಸ್‌ಆ್ಯಪ್ ಹಾಗೂ ಸಾಮಾನ್ಯ ಸಂದೇಶಗಳು ಹಾಗೂ ಲಿಂಕ್‌ಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಇದೇ ಈಗ ಡಿಜಿಟಲ್‌ ಹ್ಯಾಕರ್ಸ್‌ಗಳಿಗೆ ಬಂಡವಾಳವಾಗಿದ್ದು, ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. 2026ರ ಕ್ಯಾಲೆಂಡರ್ ವರ್ಷವನ್ನು ಸ್ವಾಗತಿಸಲು ಕೆಲವೇ ಗಂಟೆಗಳು ಬಾಕಿ ಇವೆ. ಈ ನಡುವೆ ಅಪರಿಚಿತ ವ್ಯಕ್ತಿ, ಬ್ಯಾಂಕ್‌ಗಳು, ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳ ಹೆಸರಿನಲ್ಲಿ ನಿಮಗೆ ಲಿಂಕ್‌ಗಳ ಸಮೇತ ವಾಟ್ಸ್‌ಆಯಪ್‌ ಮತ್ತು ಸಾಮಾನ್ಯ ಸಂದೇಶಗಳು ಬರಲಿವೆ. ಆದರೆ, ಅದು ಕೇವಲ ಶುಭಾಶಯ ಕೋರುವ

ಮೊಬೈಲ್ ಬಳಕೆದಾರರೇ ಎಚ್ಚರ| ಹೊಸ ವರ್ಷದ ವಿಶ್ ಓಪನ್ ಮಾಡೋ ಮುನ್ನ ಜೋಪಾನ Read More »

2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಗೆ ರಾಜ್ಯ ಸರ್ಕಾರ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 2026ನೇ ಸಾಲಿನ 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ ಮಂಜೂರಾತಿ ನೀಡಿದೆ. ಭಾನುವಾರ ಬರುವ ಮಹಾ ಶಿವರಾತ್ರಿ (ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ (ಅ.25), ಕನ್ನಡ ರಾಜ್ಯೋತ್ಸವ (ನ.1) ಹಾಗೂ ನರಕ ಚತುರ್ದಶಿ (ನ.8) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನು (ಅ.10) ಸಾರ್ವತ್ರಿಕ ರಜೆ ದಿನಗಳ ಪಟ್ಟಿಯಲ್ಲಿ ನಮೂದಿಸಿಲ್ಲ.

2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಗೆ ರಾಜ್ಯ ಸರ್ಕಾರ ಅನುಮೋದನೆ Read More »

ಕಾಸರಗೋಡು: ಬೇಕಲ್ ಬೀಚ್ ಉತ್ಸವದಲ್ಲಿ ಕಾಲ್ತುಳಿತ| ಓರ್ವ ಸಾವು, ಹಲವರಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ್ ಬೀಚ್ ಉತ್ಸವದಲ್ಲಿ ಮಲಯಾಳಂ ರ‍್ಯಾಪರ್ ವೇದನ್ ಅವರ ಸಂಗೀತ ಕಚೇರಿಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಮಕ್ಕಳು ಸೇರಿದಂತೆ ಹಲವು ಗಾಯಗೊಂಡಿದ್ದಾರೆ. ಇದೇ ವೇಳೆ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನಪ್ಪಿದ್ದಾನೆ ಎಂದು ವರದಿಯಾಗಿದೆ. ಪೊಯಿನಾಚಿಯ ಶಿವಾನಂದ (19) ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಕ್ಕಳು , ಹಿರಿಯರು ಸೇರಿದಂತೆ ಹಲವು ಮಂದಿ ಕುಸಿದು ಬಿದ್ದ ಘಟನೆಯೂ ನಡೆದಿದೆ. ಘಟನೆ ಬಳಿಕ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು ಎಂದು ತಿಳಿದು

ಕಾಸರಗೋಡು: ಬೇಕಲ್ ಬೀಚ್ ಉತ್ಸವದಲ್ಲಿ ಕಾಲ್ತುಳಿತ| ಓರ್ವ ಸಾವು, ಹಲವರಿಗೆ ಗಾಯ Read More »

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದೆರಡು ದಿನಗಳ(ಡಿ.27) ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30ರಂದು ಪತ್ತೆಯಾಗಿದೆ. ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು.ಅವರ ಪತ್ತೆಗಾಗಿ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ Read More »

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ‌ ರಿಲೀಸ್| ಈ ಬಾರಿಯೂ ನಂ.1 ಸ್ಥಾನ ಕಾಯ್ದುಕೊಂಡ ಕುಕ್ಕೆ ಸುಬ್ರಹ್ಮಣ್ಯ

ಸಮಗ್ರ ನ್ಯೂಸ್: ರಾಜ್ಯ ಮುಜರಾಯಿ ಇಲಾಖೆ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಅಗ್ರಸ್ಥಾನ ಪಡೆದಿದೆ. ರಾಜ್ಯದ ಎ ಗ್ರೇಡ್‌ ದೇವಾಲಯಗಳ ಪೈಕಿ ಕರಾವಳಿ ದೇವಾಲಯಗಳೇ ಪಾರಮ್ಯ ಮೆರೆದಿವೆ. ರಾಜ್ಯದ ದೇವಳಗಳ ಆದಾಯದಲ್ಲಿ ಟಾಪ್‌ 10ರಲ್ಲಿ ಕರಾವಳಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೊಲ್ಲೂರು ಶ್ರೀಮೂಕಾಂಬಿಕಾ ದೇವಳ, ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಳ ಸ್ಥಾನ ಪಡೆದುಕೊಂಡಿವೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023-24ರಲ್ಲಿ 146.01 ಕೋಟಿ ಆದಾಯ ಪಡೆದಿದ್ದರೆ, 2024-24ರಲ್ಲಿ

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ‌ ರಿಲೀಸ್| ಈ ಬಾರಿಯೂ ನಂ.1 ಸ್ಥಾನ ಕಾಯ್ದುಕೊಂಡ ಕುಕ್ಕೆ ಸುಬ್ರಹ್ಮಣ್ಯ Read More »