ರಾಜ್ಯ

ಹಿರಿಯ ಪತ್ರಕರ್ತೆ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ‌‌ ನೇಮಕ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದರೊಂದಿಗೆಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಮಹಿಳೆಯೊಬ್ಬರು ಅಧ್ಯಕ್ಷರಾಗಿ ನೇಮಕಗೊಂಡಿರುವುದು ಇದೇ ಮೊದಲು. ಪ್ರಥಮ ಬಾರಿಗೆ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸ್ಥಾನವನ್ನು ಉನ್ನತ ಶ್ರೇಣಿಯ ಅಲ್ಪಸಂಖ್ಯಾತ ಮಹಿಳೆಯೊಬ್ಬರು ತಮ್ಮ ವೃತ್ತಿಪರತೆಯನ್ನು ಉಳಿಸಿಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರು 20 ವರ್ಷಗಳಿಂದ ಮಾಧ್ಯಮ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ದಿ ಏಷ್ಯನ್ ಏಜ್, ಸ್ಟಾರ್ ನ್ಯೂಸ್, ಆಜ್ ತಕ್, ದೂರದರ್ಶನ […]

ಹಿರಿಯ ಪತ್ರಕರ್ತೆ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ‌‌ ನೇಮಕ Read More »

ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು?

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎಂಬ ಕಾಲೇಜು ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ. ನೇಹಾ ಹಿರೇಮಠ ಹತ್ಯೆಗೆ ಆರೋಪಿಯ ಹತಾಶೆಯೇ ಕಾರಣ ಎಂದು ಸಿಐಟಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ, ಲವ್ ಜಿಹಾದ್​ ಕುರಿತ ಯಾವುದೇ ವಿಚಾರಗಳನ್ನು ನಮೂದಿಸಿಲ್ಲ. ಒಟ್ಟು 483 ಪುಟಗಳ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.ಆರೋಪಿ ಫಯಾಜ್

ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು? Read More »

ರಾಹುಲ್ ಗಾಂಧಿ ವಿರುದ್ದ ವಿವಾದಾತ್ಮಕ ಹೇಳಿಕೆ| ಶಾಸಕ‌ ಭರತ್ ಶೆಟ್ಟಿ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಕಾಂಗ್ರೆಸ್​​ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯೆ, ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ರಾಹುಲ್ ಗಾಂಧಿ ವಿರುದ್ದ ವಿವಾದಾತ್ಮಕ ಹೇಳಿಕೆ| ಶಾಸಕ‌ ಭರತ್ ಶೆಟ್ಟಿ ಮೇಲೆ ಎಫ್ಐಆರ್ Read More »

ಆಮ್‌ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್‌/ ಮಾಜಿ ಸಚಿವ ರಾಜ್‌ಕುಮಾರ್ ಆನಂದ್ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್‌: ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅವರು ಇಂದು ದೆಹಲಿಯಲ್ಲಿ ಬಿಜೆಪಿಯ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್‌ ದೇವ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್‌ ಉಪಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. “ನನಗೆ ಪಕ್ಷಕ್ಕೆ ಸೇರಲು ಅವಕಾಶ ನೀಡಿದ ಬಿಜೆಪಿಗೆ ನಾನು ಆಭಾರಿಯಾಗಿದ್ದೇನೆ. ವಿಶೇಷವಾಗಿ ನಾನು ಸೇರಿರುವ ಉದ್ದೇಶ ದಲಿತ ಸಮುದಾಯದ ಕಲ್ಯಾಣಕ್ಕಾಗಿ, ಅದಕ್ಕಾಗಿ ಕೆಲಸ ಮಾಡಲು ನಾನು ಬದ್ಧನಾಗಿದ್ದೇನೆ” ಎಂದು ಆನಂದ್‌ ಹೇಳಿದರು. ಇದೇ ಸಂದರ್ಭದಲ್ಲಿ

ಆಮ್‌ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್‌/ ಮಾಜಿ ಸಚಿವ ರಾಜ್‌ಕುಮಾರ್ ಆನಂದ್ ಬಿಜೆಪಿ ಸೇರ್ಪಡೆ Read More »

ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶವನ್ನು ಪಡೆಯಲು ಅರ್ಹಳು/ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌

ಸಮಗ್ರ ನ್ಯೂಸ್‌: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶವನ್ನು ಪಡೆಯಲು ಅರ್ಹಳು ಎಂದು ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ ನೀಡಿದೆ. ಮುಸ್ಲಿಂ ಮಹಿಳೆಯರ (ವಿಚ್ಛೇದನದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆ 1986, ಜಾತ್ಯತೀತಕ್ಕಿಂತ ಮೇಲುಗೈ ಸಾಧಿಸುವುದಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು, ತನ್ನ ಮಾಜಿ ಪತ್ನಿಗೆ ₹10,000 ಮಧ್ಯಂತರ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ ನೀಡಿರುವ

ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶವನ್ನು ಪಡೆಯಲು ಅರ್ಹಳು/ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ Read More »

ವಾಲ್ಮೀಕಿ ನಿಗಮ‌ ಅಕ್ರಮ ಆರೋಪ| ಮಾಜಿ ಸಚಿವ ಬಿ.‌ನಾಗೇಂದ್ರರನ್ನು ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಂತರ ವಶಕ್ಕೆ ಪಡೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹185 ಕೋಟಿಗಳಿಗೂ ಹೆಚ್ಚಿನ ಅವ್ಯವಹಾರದ ಹಿನ್ನೆಲೆಯಲ್ಲಿ, ನಾಗೇಂದ್ರ ಅವರ ಡಾಲರ್ಸ್ ಕಾಲೋನಿಯ ಮನೆ ಸೇರಿದಂತೆ, ಸಂಬಂಧಿಸಿದ ಆಸ್ತಿಗಳಿರುವ ಬಿಇಎಲ್ ರೋಡ್,

ವಾಲ್ಮೀಕಿ ನಿಗಮ‌ ಅಕ್ರಮ ಆರೋಪ| ಮಾಜಿ ಸಚಿವ ಬಿ.‌ನಾಗೇಂದ್ರರನ್ನು ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ Read More »

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಬಿ. ಮನೆ ಸೇರಿದಂತೆ ಹಲವು ಕಡೆ‌ ಇಡಿ ದಾಳಿ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ ಇ.ಡಿ ದಾಳಿ ನಡೆದಿದೆ. ಡಾಲರ್ಸ್‌ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ವಾಲ್ಮೀಕಿ

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಬಿ. ಮನೆ ಸೇರಿದಂತೆ ಹಲವು ಕಡೆ‌ ಇಡಿ ದಾಳಿ Read More »

14 ಉತ್ಪನ್ನಗಳ ಮಾರಾಟ ನಿಲ್ಲಿಸಿದ ಪತಂಜಲಿ/ ಸುಪ್ರೀಂ ಕೋರ್ಟ್‌ಗೆ ಮಾಹಿತಿ

ಸಮಗ್ರ ನ್ಯೂಸ್‌: 14 ಉತ್ಪನ್ನಗಳ ಮಾರಾಟ ನಿಲ್ಲಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಉತ್ಪನ್ನಗಳನ್ನು ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಅಂಗಡಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಮತ್ತು ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಹಿಂತೆಗೆದುಕೊಳ್ಳುವಂತೆ ಮಾಧ್ಯಮ ವೇದಿಕೆಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂಪನಿ ನ್ಯಾಯಾಲಯಕ್ಕೆ ತಿಳಿಸಿದೆ. ಜಾಹೀರಾತುಗಳನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ ಮಾಡಿದ ಮನವಿಯನ್ನು ಪೂರೈಸಲಾಗಿದೆಯೇ ಅಥವಾ ಇಲ್ಲವೇ ಎಂದು ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ

14 ಉತ್ಪನ್ನಗಳ ಮಾರಾಟ ನಿಲ್ಲಿಸಿದ ಪತಂಜಲಿ/ ಸುಪ್ರೀಂ ಕೋರ್ಟ್‌ಗೆ ಮಾಹಿತಿ Read More »

ನಡುರಸ್ತೆಯಲ್ಲೇ ಧಗಧಗನೇ ಉರಿದು ಹೋದ ಬಿಎಂಟಿಸಿ ಬಸ್

ಸಮಗ್ರ ನ್ಯೂಸ್: ಬೆಂಗಳೂರಿನ ಎಂ.ಜಿ ರೋಡ್​ನ ಅನಿಲ್​ ಕುಂಬ್ಳೆ ಸರ್ಕಲ್​ ಬಳಿ 144ಈ ಮಾರ್ಗದ ಬಿಎಂಟಿಸಿ ಬಸ್​ವೊಂದು ದಿಢೀರ್​ ಅಗ್ನಿಗೆ ಆಹುತಿಯಾಗಿದೆ. ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲಾ ಪ್ರಯಾಣಿಕರನ್ನು ಬಸ್​ನಿಂದ ಕೆಳಗಿಳಿಸಿದ ಚಾಲಕ ಮತ್ತು ನಿರ್ವಾಹಕ, ತಕ್ಷಣವೇ ಸ್ಥಳದಿಂದ ದೂರ ಓಡಿದ್ದಾರೆ. ಕ್ಷಣಮಾತ್ರದಲ್ಲಿ ಬಸ್​ ಧಗಧಗನೆ ಹೊತ್ತಿ ಉರಿದ ದೃಶ್ಯ ಸ್ಥಳೀಯರ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಡುರಸ್ತೆಯಲ್ಲೇ ಧಗಧಗನೇ ಉರಿದು ಹೋದ ಬಿಎಂಟಿಸಿ ಬಸ್ Read More »

ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸರ್ಕಾರ ನಿಗದಿ ಪಡಿಸಿದ ನಿಯಮಗಳನ್ನು ಗಾಳಿಗೆ ತೂರಿ ತಡರಾತ್ರಿವರೆಗೂ ಪಬ್ ತೆರೆದು ಪಾರ್ಟಿಗಳಿಗೆ ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿರುವ ಪಬ್, ರೆಸ್ಟೋರೆಂಟ್, ಬಾರ್ ಗಳ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜುಲೈ 6ರಂದು ರಾತ್ರಿ

ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ Read More »