ರಾಜ್ಯ

ಖ್ಯಾತ ಜ್ಯೋತಿಷಿ ಭೀಮರಾವ್ ವಾಷ್ಠರ್ ಅವರು ಕರ್ನಾಟಕ ರಾಜ್ಯ ಅಲೆಮಾರಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಬೆಂಗಳೂರು (ರಿ ) ಇದರ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕ, ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ (ಗೊಂಧಳಿ) ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಪ್ರಕಾಶ್ ಎಂ ಮತ್ತು ಗೌರವಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರುಗಳು ಬೆಂಗಳೂರಿನ ಗಾಂಧಿ […]

ಖ್ಯಾತ ಜ್ಯೋತಿಷಿ ಭೀಮರಾವ್ ವಾಷ್ಠರ್ ಅವರು ಕರ್ನಾಟಕ ರಾಜ್ಯ ಅಲೆಮಾರಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ Read More »

‘ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ‌ಒಬ್ಬ ಹುಚ್ಚ. ಆಸ್ಪತ್ರೆಗೆ ಸೇರಿ‌ ಚಿಕಿತ್ಸೆ ಪಡೆಯಲಿ’| ಡಿಸಿಎಂ ಡಿ.ಕೆ ಶಿವಕುಮಾರ್ ‌ವಾಗ್ದಾಳಿ

ಸಮಗ್ರ ನ್ಯೂಸ್: ‘ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣ ಹೊರಬರುವಲ್ಲಿ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂಬ ಕುಮಾರಸ್ವಾಮಿ ಪರೋಕ್ಷ ಆರೋಪಕ್ಕೆ ಶುಕ್ರವಾರ ವಿಧಾನಸೌಧದಲ್ಲಿ ಕಿಡಿಕಾರಿದ ಅವರು, ಮುಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು. ಕೆಲವೊಬ್ಬರಿಗೆ ಪ್ರತಿದಿನ ನನ್ನನ್ನು ನೆನಪಿಸಿಕೊಳ್ಳದಿದ್ದರೆ

‘ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ‌ಒಬ್ಬ ಹುಚ್ಚ. ಆಸ್ಪತ್ರೆಗೆ ಸೇರಿ‌ ಚಿಕಿತ್ಸೆ ಪಡೆಯಲಿ’| ಡಿಸಿಎಂ ಡಿ.ಕೆ ಶಿವಕುಮಾರ್ ‌ವಾಗ್ದಾಳಿ Read More »

ಕೆಎಸ್ಆರ್ ಟಿಸಿಗೆ ಸೇರ್ಪಡೆಯಾಗಲಿವೆ 300 ಹೊಸ‌ ಎಲೆಕ್ಟ್ರಿಕ್ ಬಸ್| ಈಗ ಪ್ರಯಾಣ ಮತ್ತಷ್ಟು ಸುಲಭ!

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತನ್ನ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಶೀಘ್ರದಲ್ಲಿಯೇ ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಬಿಡಲಿದೆ. 225 ನಾನ್-ಎಸಿ ಹಾಗೂ 75 ಎಸಿ ಒಳಗೊಂಡಂತೆ ಒಟ್ಟು 300 ಎಲೆಕ್ಟ್ರಿಕ್ ಬಸ್‌ಗಳು ಗುತ್ತಿಗೆ ಮಾದರಿಯಲ್ಲಿ ಸಾರಿಗೆ ಸಂಸ್ಥೆಗೆ ಸೇರ್ಪಡೆಯಾಗಲಿವೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು, ‘ಈ ಬಸ್‌ಗಳನ್ನು 12 ವರ್ಷಗಳ ಅವಧಿಗೆ ಒಪ್ಪಂದದ ಮೇರೆಗೆ (Gross Cost Contract Model) ಪಡೆಯಲು ನಿರ್ಧರಿಸಲಾಗಿದ್ದು, ಟೆಂಡರ್

ಕೆಎಸ್ಆರ್ ಟಿಸಿಗೆ ಸೇರ್ಪಡೆಯಾಗಲಿವೆ 300 ಹೊಸ‌ ಎಲೆಕ್ಟ್ರಿಕ್ ಬಸ್| ಈಗ ಪ್ರಯಾಣ ಮತ್ತಷ್ಟು ಸುಲಭ! Read More »

ರಾಜ್ಯದಲ್ಲಿ ಝೀಕಾ ವೈರಸ್ ಗೆ ಬಿತ್ತು ಮೊದಲ ಬಲಿ| ಶಿವಮೊಗ್ಗದಲ್ಲಿ ವೃದ್ಧ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ, ಝೀಕಾ ವೈರಸ್ ಕೂಡ ರಾಜ್ಯಕ್ಕೆ ಒಕ್ಕರಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ವೃದ್ಧರನ್ನು ಶಿವಮೊಗ್ಗದ ಆಸ್ಪತ್ರೆಗೆ ಅವರ ಕುಟುಂಬ ದಾಖಲು‌ ಮಾಡಿತ್ತು. ಈ ವೇಳೆ ಅವರಿಗೆ ಝೀಕಾ ಸೋಂಕು ಇರುವುದು ಪತ್ತೆಯಾಗಿದೆ. ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ

ರಾಜ್ಯದಲ್ಲಿ ಝೀಕಾ ವೈರಸ್ ಗೆ ಬಿತ್ತು ಮೊದಲ ಬಲಿ| ಶಿವಮೊಗ್ಗದಲ್ಲಿ ವೃದ್ಧ ಸಾವು Read More »

ಬರೋಬ್ಬರಿ 100 ಜನರಿಂದ ಸುಲಿಗೆ ನಡೆಸಿದ ದಿವ್ಯಾ ವಸಂತ & ಗ್ಯಾಂಗ್| ರಾಜ್ಯವೇ ಖುಷಿ ಪಡುವ ಸುದ್ದಿ‌ ಕೊಟ್ಟವಳು ಸದ್ದಿಲ್ಲದೆ ಪರಾರಿ| ಆರೋಪಿಗಳ ಬೆನ್ನುಬಿದ್ದ ಖಾಕಿ ಪಡೆ

ಸಮಗ್ರ ನ್ಯೂಸ್: ಬೆಂಗಳೂರಿನ ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ‘ರಾಜ್ ನ್ಯೂಸ್ ಕನ್ನಡ’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್‌ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್‌ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ. ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ನಿರೂಪಕಿ ದಿವ್ಯಾ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು

ಬರೋಬ್ಬರಿ 100 ಜನರಿಂದ ಸುಲಿಗೆ ನಡೆಸಿದ ದಿವ್ಯಾ ವಸಂತ & ಗ್ಯಾಂಗ್| ರಾಜ್ಯವೇ ಖುಷಿ ಪಡುವ ಸುದ್ದಿ‌ ಕೊಟ್ಟವಳು ಸದ್ದಿಲ್ಲದೆ ಪರಾರಿ| ಆರೋಪಿಗಳ ಬೆನ್ನುಬಿದ್ದ ಖಾಕಿ ಪಡೆ Read More »

ಕರಾವಳಿಗೆ ರೆಡ್ ಅಲರ್ಟ್| ಇಂದು (ಜು.6) ದ.ಕ ಜಿಲ್ಲೆಯ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪ.ಪೂರ್ವ ಕಾಲೇಜುಗಳಿಗೆ ಜುಲೈ06ರ ಶನಿವಾರ ರಜೆ ಘೋಷಿಸಲಾಗಿದೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಖಾಸಗಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ( 12 ನೇ ತರಗತಿ) ಭಾರೀ ಮಳೆ

ಕರಾವಳಿಗೆ ರೆಡ್ ಅಲರ್ಟ್| ಇಂದು (ಜು.6) ದ.ಕ ಜಿಲ್ಲೆಯ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ನಾಳೆ(ಜು.6) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಮೊದಲು ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಅವರು ಆದೇಶಿಸಿದ್ದರು.

ಭಾರೀ ಮಳೆ ಹಿನ್ನೆಲೆ| ನಾಳೆ(ಜು.6) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ಜು.6ರಂದು ಉಡುಪಿ ಜಿಲ್ಲೆಯ ಈ‌ ತಾಲೂಕಿನ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.06ರಂದು ರಜೆಯನ್ನು ಘೋಷಿಸಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಕುಂದಾಪುರ ‌ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನಲೆ| ಜು.6ರಂದು ಉಡುಪಿ ಜಿಲ್ಲೆಯ ಈ‌ ತಾಲೂಕಿನ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ Read More »

NEET PG ಪರೀಕ್ಷೆಯ ದಿನಾಂಕ ಪ್ರಕಟ

ಸಮಗ್ರ ನ್ಯೂಸ್‌: ನೀಟ್‌ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ಮುಂದೂಡಲಾಗಿದ್ದ ದಿನಾಂಕವನ್ನು ಇದೀಗ ಘೋಷಿಸಲಾಗಿದ್ದು, ಪರೀಕ್ಷೆಯು ಆಗಸ್ಟ್ 11 ರಂದು ನಡೆಯಲಿದೆ. ಪರೀಕ್ಷೆಯು ಆಗಸ್ಟ್ 11 ರಂದು ಬೆಳಿಗ್ಗೆ ಮತ್ತು ಮಧ್ಯಾಹ್ನದ ಎರಡು ಪಾಳಿಗಳಲ್ಲಿ ನಡೆಯಲಿದೆ. ಈ ಹಿಂದೆ ಜೂನ್ 23ಕ್ಕೆ ನೀಟ್ ಪರೀಕ್ಷೆ ನಿಗದಿಯಾಗಿತ್ತು. ಅಕ್ರಮ ಚಟುವಟಿಕೆಗಳ ವರದಿಯಿಂದಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು.

NEET PG ಪರೀಕ್ಷೆಯ ದಿನಾಂಕ ಪ್ರಕಟ Read More »

ಇನ್ಮುಂದೆ ಚಿಲ್ಲರೆ ಕೊಡಿ ಎಂಬ ಮಾತಿಲ್ಲ/ KSRTC ಶೀಘ್ರದಲ್ಲೇ ಕ್ಯಾಶ್‌ಲೆಸ್‌

ಸಮಗ್ರ ನ್ಯೂಸ್‌: ಪ್ರಯಾಣದ ಸಮಯದಲ್ಲಿ ಟಿಕೆಟ್ ಗೆ ಸಂಬಂಧಿಸಿದಂತೆ ಪ್ರಯಾಣಿಕರು ಮತ್ತು ಕಂಡಕ್ಟರ್‌ಗಳ ನಡುವೆ ಸದಾ ವಾಗ್ವಾದ ನಡೆಯುತ್ತಲೇ ಇರುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಕೆಎಸ್‌ಆರ್‌ಟಿಸಿ Google Pay, Phone Pay & Paytm ಮೂಲಕ ಪಾವತಿಸಲು ಪ್ರಯಾಣಿಕರಿಗೆ ಅನುವು ಮಾಡಿಕೊಡುವ ಹೊಸ ವ್ಯವಸ್ಥೆಯನ್ನು ಪ್ರಾರಂಭಿಸಲು ಯೋಜಿಸುತ್ತಿದ್ದು, ಶೀಘ್ರದಲ್ಲೇ ಈ ವ್ಯವಸ್ಥೆ ಜಾರಿಗೆ ಬರುವ ನಿರೀಕ್ಷೆ ಇದೆ. ಕೆಎಸ್‌ಆರ್‌ಟಿಸಿ ವತಿಯಿಂದ 10245 ಸಾವಿರ ETM ಟಿಕೆಟ್ ಯಂತ್ರಗಳನ್ನು ತಿಂಗಳಿಗೆ 645 ರೂ ಬಾಡಿಗೆ ದರದಲ್ಲಿ ಖರೀದಿಸಲು ಮುಂದಾಗಿದೆ.

ಇನ್ಮುಂದೆ ಚಿಲ್ಲರೆ ಕೊಡಿ ಎಂಬ ಮಾತಿಲ್ಲ/ KSRTC ಶೀಘ್ರದಲ್ಲೇ ಕ್ಯಾಶ್‌ಲೆಸ್‌ Read More »