ರಾಜ್ಯ

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ

ಸಮಗ್ರ ನ್ಯೂಸ್: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಜಮೀರ್ ಅಹ್ಮದ್ ಖಾನ್, ಮಾನ್ಯ ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದೆ.

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ Read More »

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ. ಹಾಗೂ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ವಾರ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್ Read More »

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ| ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಪ್ರೀತಮ್ ಗೌಡಗೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗೂ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಲು ಎಸ್‌ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರೀತಮ್ ಗೌಡ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ| ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ Read More »

ಅಡ್ವಾಣಿ ಆರೋಗ್ಯದಲ್ಲಿ ಸುಧಾರಣೆ/ ಆಸ್ಪತ್ರೆಯಿಂದ ಬಿಡುಗಡೆ

ಸಮಗ್ರ ನ್ಯೂಸ್‌: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ .ಅಡ್ವಾಣಿ ಅವರು ಅನಾರೋಗ್ಯ ಸಮಸ್ಯೆಯಿಂದ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯ ಸುಧಾರಣೆ ಕಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಗಿದೆ. ʼಅಡ್ವಾಣಿಯವರನ್ನು ವಯೋಸಹಜ ಕಾಯಿಲೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ವಿಭಾಗದ ವೈದ್ಯರು ಅಡ್ವಾಣಿ ಅವರ ಆರೋಗ್ಯವನ್ನು ಪರಿಶೀಲಿಸಿದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರ

ಅಡ್ವಾಣಿ ಆರೋಗ್ಯದಲ್ಲಿ ಸುಧಾರಣೆ/ ಆಸ್ಪತ್ರೆಯಿಂದ ಬಿಡುಗಡೆ Read More »

ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ/ ತಮಿಳುನಾಡು ಸರ್ಕಾರದಿಂದ ಘೋಷಣೆ

ಸಮಗ್ರ ನ್ಯೂಸ್‌: ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಆರಂಭಕ್ಕೆ ಸಿದ್ಧತೆ ಆರಂಭಿಸಿದ ಬೆನ್ನಲ್ಲೇ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದ್ದು, ಈ ಕುರಿತ ಘೋಷಣೆ ಮಾಡಿದೆ. ತಮಿಳುನಾಡಿದ ಗಡಿ ಜಿಲ್ಲೆಗಳಾದ ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೈಗಾರಿಕಾ ಅಗತ್ಯಗಳನ್ನು ಪೂರೈಸಲು ಮತ್ತು ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದೊಂದಿಗೆ ಹೊಸೂರಿನಲ್ಲಿ 2 ಸಾವಿರ ಎಕರೆಯಲ್ಲಿ

ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ/ ತಮಿಳುನಾಡು ಸರ್ಕಾರದಿಂದ ಘೋಷಣೆ Read More »

ಪಟ್ಲ ಬೆಟ್ಟಕ್ಕೆ ರಸ್ತೆ ನಿರ್ಮಿಸಿದ್ಯಾರು? | ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಆದೇಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಸಿಲೆ ಘಾಟ್ ನ ಪಟ್ಲ ಬೆಟ್ಟದಲ್ಲಿ ಇತ್ತಿಚೆಗೆ ಪ್ರವಾಸಿ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ನಡೆಸಿದ ಹಲ್ಲೆಯ ನಂತರ ಮಹತ್ವದ ಬೆಳವಣಿಗೆ ನಡೆದಿದ್ದು, ಸ್ಥಳೀಯ ವ್ಯಕ್ತಿಗಳಿಗೆ ಬಿಸಿ‌ ಮುಟ್ಟುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು, ಮಾಧ್ಯಮಗಳ ವರದಿ ಆಧರಿಸಿ ಕರ್ನಾಟಕ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ 3 ದಿನಗಳಲ್ಲಿ ಘಟನೆ ಕುರಿತ ಸಂಪೂರ್ಣ‌ವರದಿ ಒಪ್ಪಿಸುವಂತೆ ಆದೇಶ ಹೊರಡಿಸಿದ್ದಾರೆ. ಸಚಿವರ ಆದೇಶದಲ್ಲಿ ಏನಿದೆ..?ಹಾಸನ ಜಿಲ್ಲೆ ಸಕಲೇಶಪುರ

ಪಟ್ಲ ಬೆಟ್ಟಕ್ಕೆ ರಸ್ತೆ ನಿರ್ಮಿಸಿದ್ಯಾರು? | ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಆದೇಶ Read More »

ಚಿಕ್ಕಮಗಳೂರು:ಭಾರೀ ಮಳೆ ಹಿನ್ನೆಲೆ| ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ಮಲೆನಾಡಿನಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಿ ತಹಶಿಲ್ದಾರ್ ಪರಮಾನಂದ ಆದೇಶಿಸಿದ್ದಾರೆ. ರಜೆ ಇಂದು ( ಜೂ.28) ರಂದು ಇರಲಿದ್ದು, ಪ್ರೌಢಶಾಲೆವರೆಗಿನ ಖಾಸಗಿ, ಅನುದಾನಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ತೆರೆಯುವುದಿಲ್ಲ. ಉಳಿದಂತೆ ಪಿಯುಸಿ ಹಾಗೂ ಪದವಿ ತರಗತಿಗಳು ಯಥಾವತ್ತಾಗಿ ನಡೆಯಲಿವೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಚಿಕ್ಕಮಗಳೂರು:ಭಾರೀ ಮಳೆ ಹಿನ್ನೆಲೆ| ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ Read More »

ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಮೊಮ್ಮಗಳ ಮೇಲೆ ಕಾಮುಕ ತಾತನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮೊಮ್ಮಗಳ ಮೇಲೆ ಕಾಮುಕ ತಾತ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ತಾಯಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಹೇಯ ಕೃತ್ಯ ನಡೆಸಿದ್ದಾನೆ. ಈ ಬಾಲಕಿಗೆ 6 ವರ್ಷ. ಲೈಂಗಿಕ ದೌರ್ಜನ್ಯ ನಡೆಸಿರುವುದು ಬಾಲಕಿ ತಾಯಿಗೆ ತಿಳಿಯುತ್ತಿದ್ದಂತೆ ಯಾರಿಗೂ ಹೇಳದಂತೆ ಆರೋಪಿಗಳು ಆಮಿಷವೊಡ್ಡಿದ್ದಾರೆ. ಮನೆಯನ್ನು ಮೊಮ್ಮಗಳ ಹೆಸರಿಗೆ ಬರೆಯುತ್ತೇವೆ. ಚಿನ್ನದ ಒಡವೆ ಕೊಡಿಸುತ್ತೇವೆ ಎಂದು ಆಸೆ ತೋರಿಸಿದ್ದಾರೆ. ಆದರೆ ಆರೋಪಿಗಳ ವಿರುದ್ಧ

ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಮೊಮ್ಮಗಳ ಮೇಲೆ ಕಾಮುಕ ತಾತನಿಂದ ಅತ್ಯಾಚಾರ Read More »

ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣ: ಎಂ.ಕೆ.ಸ್ಟಾಲಿನ್‌ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಕೇವಲ 4೦ ಕಿಲೋಮೀಟರ್‌ ದೂರದಲ್ಲಿರುವ, ತಮಿಳುನಾಡಿನ ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಘೋಷಣೆ ಮಾಡಿದ್ದಾರೆ. ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್‌ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಿಸಲಾಗುವುದು ಎಂಬುದಾಗಿ ಘೋಷಣೆ ಮಾಡಿದ್ದಾರೆ. ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುತ್ತಿದೆ. ಹಾಗಾಗಿ, ಹೊಸೂರಿನಲ್ಲಿ ಹಲವು

ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣ: ಎಂ.ಕೆ.ಸ್ಟಾಲಿನ್‌ ಸ್ಪಷ್ಟನೆ Read More »

ಮಳೆ ಆರ್ಭಟ: ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಸಮಗ್ರ ನ್ಯೂಸ್: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೂನ್‌ 27ರಿಂದ ಸೆಪ್ಟೆಂಬರ್‌ 15ರವರೆಗೆ ಆಗುಂಬೆ ಘಾಟಿ ರಸ್ತೆಗಳಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗಗಳನ್ನೂ ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆ, ವಾಹನಗಳ ಓಡಾಟ ಜಾಸ್ತಿಯಾಗಿದೆ. ಇದರ ಮಧ್ಯೆ, ಭಾರಿ ಗಾತ್ರದ ವಾಹನಗಳ ಓಡಾಟವೂ ಮುಂದುವರಿದರೆ ಭೂಕುಸಿತ ಉಂಟಾಗುವ

ಮಳೆ ಆರ್ಭಟ: ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ Read More »