ರಾಜ್ಯ

ಎತ್ತಿನಭುಜ ಚಾರಣ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಚಾರಣ ಪ್ರಿಯರ ಮೆಚ್ಚಿನ ಸ್ಥಳ ಎತ್ತಿನಭುಜಕ್ಕೆ ಸದ್ಯ ಪ್ರವಾಸಿಗರು ಭೇಟಿ ನೀಡದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರವಾಸೋದ್ಯಮದ ಅಡಿ ರಾಜ್ಯದ ವಿವಿಧೆಡೆ ಆನ್‌ಲೈನ್ ಟಿಕೆಟ್ ವ್ಯವಸ್ಥೆ ಮಾಡಿ ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಚಾರಣ ಪ್ರದೇಶಗಳಲ್ಲಿ ಪ್ರವೇಶ ನಿರ್ಬಂಧಿಸಿ ಈಗಾಗಲೇ ಸೂಚನೆ ನೀಡಲಾಗಿದೆ. ಆದರೂ ಜೂ. 15, 16, 17ರಂದು ರಜೆ ಇದ್ದ ಕಾರಣ ಮುಳ್ಳಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ವರದಿಗಳಾಗಿವೆ. ತಾತ್ಕಾಲಿಕವಾಗಿ ಚಾರಣ ನಿರ್ಬಂಧವಾಗಿದ್ದರೂ ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ […]

ಎತ್ತಿನಭುಜ ಚಾರಣ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ Read More »

ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ‌ ನಿಧನ

ಸಮಗ್ರ‌ ನ್ಯೂಸ್: ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಹೃದಯಾಘಾತದಿಂದ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಕಮಲಾ ಹಂಪನಾ ಅವರು ಕನ್ನಡದ ಲೇಖಕರು. ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ. ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು,

ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ‌ ನಿಧನ Read More »

ಹವಾಮಾನ ವರದಿ| ವೀಕೆಂಡ್ ‌ನಲ್ಲಿ ಕರಾವಳಿಗೆ ರೆಡ್ ಅಲರ್ಟ್| ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಸಮಗ್ರ ನ್ಯೂಸ್: ಮುಂಗಾರು ಚೇತರಿಕೆ ಕಾಣುವ ಲಕ್ಷಣ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಜೂ.22 ಮತ್ತು 23ರಂದು ಕರಾವಳಿ ಭಾಗದಲ್ಲಿ “ರೆಡ್‌ ಅಲರ್ಟ್‌’ ಘೋಷಿಸಿದೆ. ಮಂಗಳೂರು ನಗರ ಸಹಿತ ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಮಳೆಯ ತೀವ್ರತೆ ತುಸು ಕಡಿಮೆಯಾಗಿದ್ದು, ಮತ್ತೆ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. “ರೆಡ್‌ ಅಲರ್ಟ್‌’ ಅವಧಿಯಲ್ಲಿ ಕರಾವಳಿ ಭಾಗದಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ನಿರೀಕ್ಷೆ ಇದೆ.

ಹವಾಮಾನ ವರದಿ| ವೀಕೆಂಡ್ ‌ನಲ್ಲಿ ಕರಾವಳಿಗೆ ರೆಡ್ ಅಲರ್ಟ್| ಬೆಂಗಳೂರಿನಲ್ಲಿ ಧಾರಾಕಾರ ಮಳೆ Read More »

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ಸಂತ್ರಸ್ತ ಚೇತನ್ ವಿರುದ್ಧವೇ ಎಫ್ಐಆರ್

ಸಮಗ್ರ ನ್ಯೂಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಯುವಕನ ವಿರುದ್ಧವೇ ಹಾಸನ ಜಿಲ್ಲೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೂರಜ್ ಬ್ರಿಗೇಡ್‌ನ ಖಜಾಂಜಿ ಶಿವಕುಮಾರ್ ಹೆಚ್‌.ಎಲ್‌ ಎಂಬವರು ದೂರು ನೀಡಿದ್ದು “ಯುವಕ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ನೀಡದಿದ್ದರೆ ಸೂರಜ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡುವುದಾಗಿ ಬೆದರಿಕೆ ಹಾಕಿದ್ದ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ. “ಖಾಸಗಿ

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ಸಂತ್ರಸ್ತ ಚೇತನ್ ವಿರುದ್ಧವೇ ಎಫ್ಐಆರ್ Read More »

ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್: ಭಾರತೀಯ ನ್ಯಾಯ ಸಂಹಿತಾ, ಭಾರತೀಯ ಸಾಕ್ಷಿ ಅಧಿನಿಯಮ್ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಎಂಬ ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರ ಬರೆದಿದ್ದಾರೆ. ಈ ಕಾನೂನುಗಳ ಸನ್ನಿಹಿತ ಅನುಷ್ಠಾನದ ಬಗ್ಗೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023, ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್‌ಎ) ಅನುಷ್ಠಾನವನ್ನು ಮುಂದೂಡಲು ನಮ್ಮ ಮನವಿಯನ್ನು

ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ Read More »

ಮದ್ಯಪ್ರಿಯರಿಗೆ ಗುಡ್ ನ್ಯೂಸ್| ಜು.1 ರಿಂದ ಎಣ್ಣೆರೇಟ್ ಇಳಿಸಲು ರಾಜ್ಯ ಸರ್ಕಾರದ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮದ್ಯಪ್ರಿಯರ ಕುರಿತು ಫೆಬ್ರವರಿಯಲ್ಲಿ ಬಜೆಟ್‌ನಲ್ಲಿ ಕೊಟ್ಟಿದ್ದ ಭರವಸೆಯನ್ನು ಉಳಿಸಿಕೊಳ್ಳುವುದಾಗಿ ತಿಳಿಸಿರುವ ರಾಜ್ಯ ಸರ್ಕಾರ, ಜುಲೈ 1ರಿಂದ ವಿವಿಧ ಮದ್ಯದ ಬೆಲೆ ಇಳಿಕೆ ಜಾರಿಗೆ ತರಲಿದೆ. ಜುಲೈ 1ರಿಂದ ವಿವಿಧ ದುಬಾರಿ ಪ್ರಿಮಿಯಂ ಮದ್ಯದ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಇಂಧನ ಬೆಲೆ ಹಾಗೂ ದಿನಸಿ ವಸ್ತುಗಳು ಬೆಲೆ ಏರಿಕೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದ್ಯದ ಬೆಲೆ ಇಳಿಸುವ ನಿರ್ಧಾರ

ಮದ್ಯಪ್ರಿಯರಿಗೆ ಗುಡ್ ನ್ಯೂಸ್| ಜು.1 ರಿಂದ ಎಣ್ಣೆರೇಟ್ ಇಳಿಸಲು ರಾಜ್ಯ ಸರ್ಕಾರದ ಚಿಂತನೆ Read More »

ಸಾರಿಗೆ ನೌಕರರು ಮುಷ್ಕರ ಮಾಡುವಂತಿಲ್ಲ| ಸರ್ಕಾರದ ಆದೇಶಕ್ಕೆ ಅಸಮಾಧಾನ

ಸಮಗ್ರ ನ್ಯೂಸ್: ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಯಾವುದೇ ಕಾರಣಕ್ಕೂ ಮುಷ್ಕರ , ಪ್ರತಿಭಟನೆ , ಹರತಾಳ ಹಾಗೂ ಅಸಹಕಾರ ಚಳುವಳಿಗಳನ್ನು ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಆರು ತಿಂಗಳು ಯಾವುದೇ ಸಮಸ್ಯೆಗಳಿದ್ದರೂ ಸಹ ಅವರು ಪ್ರತಿಭಟನೆ ನಡೆಸುವಂತಿಲ್ಲ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದು, ಇದು ಸಾರಿಗೆ ಕಾರ್ಮಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರಿಗೆ ಇಲಾಖೆಯ ನೌಕರರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಹಿಂದೆಯೂ ಸರ್ಕಾರದ ವಿರುದ್ದ ತಿರುಗಿಬಿದ್ದಿದ್ದರು. ಬಿಜೆಪಿ ಸರ್ಕಾರದ ಆಡಳಿತದಲ್ಲಿ

ಸಾರಿಗೆ ನೌಕರರು ಮುಷ್ಕರ ಮಾಡುವಂತಿಲ್ಲ| ಸರ್ಕಾರದ ಆದೇಶಕ್ಕೆ ಅಸಮಾಧಾನ Read More »

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ನೇಮಕ

ಸಮಗ್ರ ನ್ಯೂಸ್: ಒಡಿಶಾದ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕ‌ರ್ ಆಗಿ ನೇಮಿಸಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಂಗಾಮಿ ಸ್ಪೀಕ‌ರ್ ಸಹಾಯಕ್ಕೆ ಸುರೇಶ್ ಕೋಡಿಕುನ್ನಿಲ್‌, ತಾಳಿಕೋಟೆ ರಾಜುತೇವರ್‌ ಬಾಲು, ರಾಧಾ ಮೋಹನ್ ಸಿಂಗ್, ಫಗ್ಗನ್

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ನೇಮಕ Read More »

ದರ್ಶನ್ ಪರ ಆವಾಜ್ ಹಾಕಿದವರಿಗೆ ಕಾದಿದೆ ಮಾರಿಹಬ್ಬ| ಪೊಲೀಸರ ಕೈ ಸೇರಿದೆಯಂತೆ ಅಭಿಮಾನಿಗಳ ಲಿಸ್ಟ್

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಸಿನಲ್ಲಿ ಅಂಧರ್ ಆಗಿದ್ದಾರೆ. ದರ್ಶನ್ ಜೊತೆಗೆ ಪವಿತ್ರಾಗೌಡ ಮತ್ತವನ ಪಟಾಲಂ ಸೇರಿ 18 ಮಂದಿಯ ಎರಡನೇ ಅವಧಿಯ ಪೊಲೀಸ್ ಅವಧಿ ಇಂದು ಅಂತ್ಯಗೊಂಡಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಮತ್ತೆ ಮುಂದಿನ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ. ಇದರ ಜೊತೆಗೆ ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಮನಬಂದಂತೆ ಆವಾಜ್ ಹಾಕಿದೆ ಡಿ.ಅಭಿಮಾನಿಗಳ ಲಿಸ್ಟ್ ಪೊಲೀಸರ ಕೈ ಸೇರಿದೆ. ದರ್ಶನ್ ಪರವಾಗಿ ಮಾತನಾಡುವ ಭರದಲ್ಲಿ ಯಾರೆಲ್ಲ ಸಾಮಾಜಿಕ ಜಾಲತಾಣದಲ್ಲಿ ಬಾಲ ಬಿಚ್ಚಿದ್ದರು,

ದರ್ಶನ್ ಪರ ಆವಾಜ್ ಹಾಕಿದವರಿಗೆ ಕಾದಿದೆ ಮಾರಿಹಬ್ಬ| ಪೊಲೀಸರ ಕೈ ಸೇರಿದೆಯಂತೆ ಅಭಿಮಾನಿಗಳ ಲಿಸ್ಟ್ Read More »

ಹವಾಮಾನ ವರದಿ| ಜೂ. 23 ರಿಂದ ಭಾರಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಚುರುಕಾಗಲಿದ್ದು, ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ ಎಂಬ ಮಾಹಿತಿ ಇಲ್ಲಿದೆ. ಜೂನ್ 23 ರಿಂದ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ದಿನಗಳಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ

ಹವಾಮಾನ ವರದಿ| ಜೂ. 23 ರಿಂದ ಭಾರಿ ಮಳೆ ಸಾಧ್ಯತೆ Read More »