ರಾಜ್ಯ

ವಿರಾಜಪೇಟೆ ಗಾಂಧಿನಗರದ ಬಳಿ ಶಾಲಾ ವಾಹನ ಅಪಘಾತ

ಸಮಗ್ರ ನ್ಯೂಸ್: ವಿರಾಜಪೇಟೆಯ ಗಾಂಧಿನಗರದ ಕೃಷಿ ಇಲಾಖೆಯ ಮುಂಭಾಗ ತ್ರಿವೇಣಿ ಶಾಲೆಯ ಶಾಲಾ ವಾಹನ ಒಂದು ಅಪಘಾತಕ್ಕೀಡಾಗಿ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಚಾಲಕ ಅನಾರೋಗ್ಯದಿಂದ ದಿಡೀರನೆ ಕುಸಿದು ಬಿದ್ದ ಪರಿಣಾಮ ನೇರವಾಗಿ ಟ್ರ್ಯಾಕ್ಟರ್ ಹಾಗೂ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದು ಕಾರನ್ನು 80 ಮೀಟರ್ ದೂರ ಎಳೆದುಕೊಂಡು ಹೋಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ರವಣಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲು […]

ವಿರಾಜಪೇಟೆ ಗಾಂಧಿನಗರದ ಬಳಿ ಶಾಲಾ ವಾಹನ ಅಪಘಾತ Read More »

ರೇಣುಕಾಸ್ವಾಮಿ ಕೊಲೆ‌ ಪ್ರಕರಣ| ಆರೋಪಿ ದರ್ಶನ್ ಮತ್ತು ಗ್ಯಾಂಗ್ ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ

ಸಮಗ್ರ ನ್ಯೂಸ್: ನಟ ದರ್ಶನ್ & ಗ್ಯಾಂಗ್​​​​ನಿಂದ ಚಿತ್ರದುರ್ಗದ ರೇಣುಕಾಸ್ವಾಮಿಯ ಭೀಕರ ಕೊಲೆ ಕೇಸ್ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಎಸಿಎಂಎಂ ಕೋರ್ಟ್ ದರ್ಶನ್​​​ ಸೇರಿದಂತೆ 6 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಪ್ರಕರಣದ ಆರೋಪಿಗಳ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಆರೋಪಿಗಳನ್ನು ಇಂದು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಮೃತನ, ಹಾಗೂ ಆರೋಪಿಯ ಮೊಬೈಲ್ ಗಳನ್ನು ಕಲೆ ಹಾಕಬೇಕು. ಇದರಿಂದ ಹೆಚ್ಚು ಮಾಹಿತಿ ಸಿಗಲಿದೆ. ಇದು ಭೀಕರ ಕೊಲೆ ಕೇಸ್ ಆಗಿದ್ದರಿಂದ

ರೇಣುಕಾಸ್ವಾಮಿ ಕೊಲೆ‌ ಪ್ರಕರಣ| ಆರೋಪಿ ದರ್ಶನ್ ಮತ್ತು ಗ್ಯಾಂಗ್ ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ Read More »

ಹಾಸನದಲ್ಲಿ ಹಾಡುಹಗಲೇ ಗುಂಡಿನ ದಾಳಿ| ಅಟ್ಟಾಡಿಸಿ‌ ಕೊಂದ ಪಾತಕಿಗಳು

ಸಮಗ್ರ ನ್ಯೂಸ್: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದೆ. ಪಾತಕಿಗಳು ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದಿದ್ದಾರೆ. ಹಾಸನ ನಗರದ ಹೊಯ್ಸಳ‌ನಗರ ಬಡಾವಣೆಯಲ್ಲಿ ಜೂನ್‌ 20ರ ಮಧ್ಯಾಹ್ನ ಘಟನೆ ನಡೆದಿದೆ. ಸ್ಥಳಕ್ಕೆ ಕೆಆರ್‌ಪುರಂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದ ಇಬ್ಬರನ್ನು ಅಟ್ಟಾಡಿಸಿ ಹಂತಕರು ಗುಂಡಿಟ್ಟು ಕೊಂದಿದ್ದಾರೆ ಎನ್ನಲಾಗಿದೆ. ಕಾರಿನೊಳಗೆ ಒಬ್ಬನ ಮೃತದೇಹ ಇದ್ದರೆ ಮತ್ತೊಬ್ಬ ಶವ ರಸ್ತೆ ಬದಿಯಲ್ಲಿ ಬಿದ್ದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದಾರೆ. ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು ತಜ್ಞರು

ಹಾಸನದಲ್ಲಿ ಹಾಡುಹಗಲೇ ಗುಂಡಿನ ದಾಳಿ| ಅಟ್ಟಾಡಿಸಿ‌ ಕೊಂದ ಪಾತಕಿಗಳು Read More »

ಎನ್ಆರ್ ಪುರ: ಭದ್ರಾ ಹಿನ್ನೀರಿನಲ್ಲಿ ತೆಪ್ಪ‌ ಮುಳುಗಿ ಮೂವರು ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗದ ಮೂವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ವಿದ್ಯಾನಗರ ಬಡಾವಣೆಯ ಅದಾಖಾನ್‌ (23), ಆದಿಲ್‌ (19) ಹಾಗೂ ಸಾಜೀದ್‌(24) ಮೃತ ದುರ್ದೈವಿಗಳು ಎನ್ನಲಾಗಿದೆ. ಮಾರಿದಿಬ್ಬ ಬಳಿಯಿಂದ ಹಿನ್ನೀರಿನ ವಿಹಂಗಮ ನೋಟ ಸವಿಯಲು ನಾಲ್ವರು ಯುವಕರು ಒಟ್ಟಿಗೆ ಬಂದಿದ್ದರು. ಇವರ ಪೈಕಿ ಒಬ್ಬರು ದಡದಲ್ಲಿ ಕುಳಿತಿದ್ದರು. ಉಳಿದ ಮೂವರು ಬದಿಯಲ್ಲಿದ್ದ ತೆಪ್ಪ ತೆಗೆದುಕೊಂಡು ಹಿನ್ನೀರಿನೊಳಗೆ ಸ್ವಲ್ಪ ದೂರ ತೆರಳಿದ್ದಾರೆ. ಚಾಲನೆ ಗೊತ್ತಿಲ್ಲದಿದ್ದರಿಂದ

ಎನ್ಆರ್ ಪುರ: ಭದ್ರಾ ಹಿನ್ನೀರಿನಲ್ಲಿ ತೆಪ್ಪ‌ ಮುಳುಗಿ ಮೂವರು ಸಾವು Read More »

ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ/ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಸಮಗ್ರ ನ್ಯೂಸ್: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಆಗಿದ್ದು, ಪ್ರತಿ ಹೋಬಳಿಗೂ ವಸತಿ ಶಾಲೆ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ್ದು, ಈಗಾಗಲೇ ಅನುಮೋದನೆ ದೊರೆತಿರುವ 20 ಹೋಬಳಿಗಳಲ್ಲಿ ಈ ವರ್ಷ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು. ಹಂತ ಹಂತವಾಗಿ ಎಲ್ಲ ಹೋಬಳಿಗಳಲ್ಲಿ ವಸತಿ ಶಾಲೆಗಳು ಬರಲಿವೆ. ಸರ್ಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ಅವರನ್ನು ಪ್ರೋತ್ಸಾಹಿಸಲು ಪ್ರೋತ್ಸಾಹಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ

ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ/ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ Read More »

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ‌ ಸ್ವಚ್ಚತಾ ಕಾರ್ಯ| ನದಿಯಲ್ಲಿ ಸಿಕ್ತು ಲೋಡುಗಟ್ಟಲೆ ಬಟ್ಟೆ, ಕಸದ ರಾಶಿ!!

ಸಮಗ್ರ ನ್ಯೂಸ್: ಸೀನಿಯರ್ ಚೇಂಬರ್ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಲಿಜನ್ ನಿಂದ ನಡೆಸಲ್ಪಟ್ಟ ಕುಮಾರಧಾರ ಸ್ನಾನಘಟ್ಟ ಸ್ವಚ್ಚತಾ ಕಾರ್ಯದ ವೇಳೆ ಲೋಡುಗಟ್ಟಲೆ ಬಟ್ಟೆ ಹಾಗೂ ಕಸದ ರಾಶಿ ಸಿಕ್ಕಿದೆ. ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟದಲ್ಲಿ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿತ್ತು. ಅಲ್ಲದೇ ಹರಿಯುತ್ತಿರುವ ನದಿಯಲ್ಲೂ ವಸ್ತ್ರಗಳು ತೇಲಿಕೊಂಡು ಬಂದು ಇಕ್ಕೆಲಗಳಲ್ಲಿ ಶೇಖರಣೆಗೊಂಡಿತ್ತು. ಇದರ ತೆರವಿಗಾಗಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ‌ ಸ್ವಚ್ಚತಾ ಕಾರ್ಯ| ನದಿಯಲ್ಲಿ ಸಿಕ್ತು ಲೋಡುಗಟ್ಟಲೆ ಬಟ್ಟೆ, ಕಸದ ರಾಶಿ!! Read More »

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. ಈ ಹಿಂದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ವಾಹನ ಸವಾರರಿಗೆ ಬಿಗ್ ರಿಲೀಪ್|HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಕಾಶ ವಿಸ್ತರಣೆ|

ಸಮಗ್ರ ನ್ಯೂಸ್: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಹಿಂದೆ ಕರ್ನಾಟಕ ಹೈಕೋಟ್ರ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜುಲೈ.4ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ ಗಡವುನ್ನು ವಿಸ್ತರಿಸಲು

ವಾಹನ ಸವಾರರಿಗೆ ಬಿಗ್ ರಿಲೀಪ್|HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಕಾಶ ವಿಸ್ತರಣೆ| Read More »

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ಜೂನ್ 19.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 16ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮಗಳು ಜೂ. 21 ರಂದು ಗಾಂಧಿನಗರದಲ್ಲಿ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಗಳಲ್ಲಿ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು,ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರದ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಕೊಟ್ಯಾಡಿ ಟರ್ಫ್ ನಲ್ಲಿ ಆಟೋಟ ಸಾಂಸ್ಕೃತಿಕ

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ Read More »

ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಅವಕಾಶವಿಲ್ಲ| ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ

ಸಮಗ್ರ ನ್ಯೂಸ್:ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೋಲಿಸ್ ಇಲಾಖೆ ಮತ್ತು ಭಗಂಡೇಶ್ವರ ದೇವಾಲಯ ಸಿಬ್ಬಂದಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಭಾಗಮಂಡಲ ಮೇಲ್ಸೇತುವೆ ವೀಕ್ಷಣೆಯ ಸಂಧರ್ಭದಲ್ಲಿ ಪ್ರವಾಸಿಗರು ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದನ್ನುಕಂಡು ಗರಂ ಆಗಿ ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು.ತ್ರಿವೇಣಿ ಸಂಗಮದಲ್ಲಿ ಜಲ ಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಹೊರತು

ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಅವಕಾಶವಿಲ್ಲ| ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ Read More »