ರಾಜ್ಯ

ದರ್ಶನ್ ಹಿಂದೆ ರೌಡಿಗ್ಯಾಂಗ್| ತನಿಖೆ ವೇಳೆ ಪಾತಕಿಗಳ ನಂಟು ಬಯಲು

ಸಮಗ್ರ ನ್ಯೂಸ್: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ ಮತ್ತು ತಂಡದ ಸದಸ್ಯರ ಮೊಬೈಲ್ ಕರೆಗಳ ವಿವರ, ವಾಟ್ಸ್‌ ಆ್ಯಪ್‌ ಅನ್ನು ತಾಂತ್ರಿಕ ತಜ್ಞರು ಪರಿಶೀಲಿಸಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರು ರೌಡಿಗಳ ಸಂಪರ್ಕದಲ್ಲಿ ಇದ್ದದ್ದು ಗೊತ್ತಾಗಿದೆ. ‘ಬಂಧಿತ ಆರೋಪಿಗಳ ಆರು ತಿಂಗಳ ಮೊಬೈಲ್‌ ಕರೆಗಳ ವಿವರ ಪಡೆಯಲಾಗುತ್ತಿದೆ. ಬಂಧಿತರು ರೌಡಿಗಳ ಸಂಪರ್ಕದಲ್ಲಿ ಇರುವುದು ತನಿಖೆಯಿಂದ ಬಯಲಾಗುತ್ತಿದೆ. ಆರೋಪಿಗಳು ಯಾವ ಉದ್ದೇಶದಿಂದ ರೌಡಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ. […]

ದರ್ಶನ್ ಹಿಂದೆ ರೌಡಿಗ್ಯಾಂಗ್| ತನಿಖೆ ವೇಳೆ ಪಾತಕಿಗಳ ನಂಟು ಬಯಲು Read More »

ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್‌ ಸಿಗ್ನಲ್ ಕೊಟ್ಟ ಹೈಕೋರ್ಟ್

ಸಮಗ್ರ ನ್ಯೂಸ್: ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡಲು ಕರ್ನಾಟಕ ಹೈಕೋಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾ‌ರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ಆದೇಶದವರೆಗೂ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸಿಂಗ್, ಬೆಟ್ಟಿಂಗ್ ಚಟುವಟಿಕೆ ಮುಂದುವರಿಸುವಂತೆ ಮಧ್ಯಂತರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25ರ ಸಾಲಿನ ರೇಸಿಂಗ್ ಬೆಟ್ಟಿಂಗ್ ಚಟುವಟಿಕೆಗೆ ಅನುಮತಿ ನಿರಾಕರಿಸಲಾಗಿತ್ತು. ಬೆಟ್ಟಿಂಗ್ ಅವ್ಯವಹಾರಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿ ಆದೇಶಿಸಿತ್ತು. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು

ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್‌ ಸಿಗ್ನಲ್ ಕೊಟ್ಟ ಹೈಕೋರ್ಟ್ Read More »

ಜೂನ್ 27ಕ್ಕೆ ಕೆಂಪೇಗೌಡ ಜಯಂತಿ/ ಡಿ‌ ಕೆ‌ ಶಿವಕುಮಾರ್ ಹೇಳಿಕೆ

ಸಮಗ್ರ ನ್ಯೂಸ್: ಜೂನ್ 27ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜಾಗದ ಸಮಸ್ಯೆ ಕಾರಣಕ್ಕೆ ಸ್ಟೇಡಿಯಂ ಅಥವಾ ಅರಮನೆ ಮೈದಾನದಲ್ಲಿ ಜಯಂತಿ ಮಾಡಲು ಸಲಹೆಗಳು ಬಂದಿದ್ದು, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹೇಳಿದರು. ಸಂಘ, ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಚರ್ಚೆ ಮಾಡಿದ್ದೇವೆ. ಪಕ್ಷ, ಜಾತಿ, ಧರ್ಮ ದೂರವಿಟ್ಟು ಸಭೆ ಮಾಡಿದ್ದೇವೆ. ಜೂನ್ 27ರಂದು ಬೆಂಗಳೂರಿನಲ್ಲಿ ಜಯಂತಿ ಆಚರಣೆ ಆಗಲಿದೆ ಎಂದು ತಿಳಿಸಿದರು.

ಜೂನ್ 27ಕ್ಕೆ ಕೆಂಪೇಗೌಡ ಜಯಂತಿ/ ಡಿ‌ ಕೆ‌ ಶಿವಕುಮಾರ್ ಹೇಳಿಕೆ Read More »

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ಭಯಭೀತರಾದ ಜನ

ಸಮಗ್ರ ನ್ಯೂಸ್: ಉಡುಪಿಯಲ್ಲಿ ಮೊನ್ನೆಯಷ್ಟೇ ಒಂದು ಗ್ಯಾಂಗ್ ವಾರ್ ನಡೆದಿತ್ತು, ಇದಾದ ಬಳಿಕ ಈಗ ಮತ್ತೊಂದು ಇದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್ ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಬರಲು ತಿಳಿಸಿದರು. ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಪ್ರವೀಣ್ ಆ್ಯಂಡ್

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ಭಯಭೀತರಾದ ಜನ Read More »

ಹೊಸದಾಗಿ ಸಾವಿರ ಬಸ್ ರಸ್ತೆಗಿಳಿಸಲೂ ಕೆಎಸ್ಆರ್ಟಿಸಿ ಪ್ಲಾನ್

ಸಮಗ್ರ ನ್ಯೂಸ್: ಶಕ್ತಿ ಯೋಜನೆ ಆರಂಭವಾದಾಗಿನಿಂದ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಉಂಟಾಗಿತ್ತು. ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಬಸ್ ಸಮಸ್ಯೆ ಎದುರಾಗಿತ್ತು. ಇದರ ಮುಖಾಂತರ ಹೆಚ್ಚಿನ ಬಸ್ ಗೆ ಮನವಿ ಮಾಡಲಾಗಿತ್ತು. ಇದರಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ. ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು KSRTC ಗುರುತಿಸಿ ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ.

ಹೊಸದಾಗಿ ಸಾವಿರ ಬಸ್ ರಸ್ತೆಗಿಳಿಸಲೂ ಕೆಎಸ್ಆರ್ಟಿಸಿ ಪ್ಲಾನ್ Read More »

ರಾಜ್ಯದಲ್ಲಿ ಬಾಕಿ ಉಳಿದ ರೈಲ್ವೆ ಯೋಜನೆಗಳು ಎರಡೇ ವರ್ಷದಲ್ಲಿ ಪೂರ್ಣ; ಕೇಂದ್ರ ಸಚಿವ ವಿ.ಸೋಮಣ್ಣ

ಸಮಗ್ರ ನ್ಯೂಸ್: ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಬಂಪರ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ವಿಳಂಬವಾಗಿರುವ ಸುಮಾರು 1264 ಕಿಲೋ ಮೀಟರ್ ಒಳಗೊಂಡ 9 ರೈಲ್ವೆ ಯೋಜನೆ 2025 -26ರ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ತುಮಕೂರು -ಕಲ್ಯಾಣದುರ್ಗ – ರಾಯದುರ್ಗ, ತುಮಕೂರು -ಚಿತ್ರದುರ್ಗ -ದಾವಣಗೆರೆ, ಗಿಣಿಗೇರಾ -ರಾಯಚೂರು, ಬಾಗಲಕೋಟ -ಕುಡಚಿ, ಗದಗ -ವಾಡಿ, ಕಡೂರು -ಚಿಕ್ಕಮಗಳೂರು,

ರಾಜ್ಯದಲ್ಲಿ ಬಾಕಿ ಉಳಿದ ರೈಲ್ವೆ ಯೋಜನೆಗಳು ಎರಡೇ ವರ್ಷದಲ್ಲಿ ಪೂರ್ಣ; ಕೇಂದ್ರ ಸಚಿವ ವಿ.ಸೋಮಣ್ಣ Read More »

ಹವಾಮಾನ ವರದಿ| ಮತ್ತೆ ಚುರುಕುಗೊಂಡ ಮುಂಗಾರು| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಕ್ಷೀಣಗೊಂಡಿತ್ತು, ಈಗ ಮತ್ತೆ ಮಾರುತಗಳು ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತೆ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಬಿರುಗಾಳಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಮತ್ತು ಉತ್ತರ

ಹವಾಮಾನ ವರದಿ| ಮತ್ತೆ ಚುರುಕುಗೊಂಡ ಮುಂಗಾರು| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಸಮಗ್ರ ನ್ಯೂಸ್:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿಯ ಬೆಟ್ಟಗೇರಿ ಮುಖ್ಯರಸ್ತೆಯ ತಳೂರು ಜಂಕ್ಷನ್ ಬಳಿ ಭಾನುವಾರ(ಜೂ.16) ನಡೆದಿದೆ. ಭಾಗಮಂಡಲ ಕಡೆಯಿಂದ ಮಡಿಕೇರಿ ಕಡೆಗೆ ಟಿ. ನರಸೀಪುರದ ನಿವಾಸಿ ನಾಗೇಂದ್ರ ಎಂಬುವವರು ಚಲಾಯಿಸುತಿದ್ದ ಕಾರು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿಬಿದ್ದು ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಜಖಂಗೊಂಡಿದ್ದು, ಕಾರಲ್ಲಿದ್ದ ನಾಗೇಂದ್ರ ಹಾಗೂ ಅವರ ಪತ್ನಿ ಮಗುವಿಗೆ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಹಾಸ್ಯನಟ ಚಿಕ್ಕಣ್ಣನಿಗೂ ನೋಟೀಸ್!?

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ದರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಬಹುದು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ಹಾಸ್ಯನಟ ಚಿಕ್ಕಣ್ಣನಿಗೂ ನೋಟೀಸ್!? Read More »

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು ಬಿಜೆಪಿ -ಜೆಡಿಎಸ್ ಪ್ರತಿಭಟನೆ

ಸಮಗ್ರ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ. ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಸಾರ್ವಜನಿಕರು ಆಕ್ರೋಶ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು ಬಿಜೆಪಿ -ಜೆಡಿಎಸ್ ಪ್ರತಿಭಟನೆ Read More »