ರಾಜ್ಯ

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗಲು ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ಬಿಎಸ್ ಯಡಿಯೂರಪ್ಪ ಕಾಲಾವಕಾಶ ಕೇಳಿದ್ದಾರೆ. ನೋಟಿಸ್‌ ನೀಡಿದ ಬೆನ್ನಲ್ಲೇ ಇಂದೇ ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆ ನಡೆಯಬೇಕಿದೆ. ಈ ನಡುವೆ ಯಡಿಯೂರಪ್ಪ […]

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ Read More »

ಕ್ಯಾನ್ಸರ್ ನಿಂದ ಪತಿ ಸಾವು: ಶವವನ್ನು ಮನೆ ಒಳಗೆ ತರಬೇಡಿ ಎಂದ ಪತ್ನಿ…!

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸೋಮವಾರಪೇಟೆಯ ಗುರು ಕಿತ್ತೂರ (51) ಎಂಬುವರು ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. ಈ ಕ್ಯಾನ್ಸರ್ ಗೆ ಹೆದರಿ ಪತಿಯ ಶವವನ್ನು ಪತ್ನಿ ಹಾಗೂ ಪತ್ನಿಯ ಕುಟುಂಬಸ್ಥರು ಮನೆಯೊಳಗೆ ತರಲು ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಬಳಿಕ ಸ್ಥಳೀಯರು ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಶವವನ್ನು ಆಧಾರವಾಗಿಸಿ ಕೂರಿಸಿದ್ದಾರೆ. ಗುರು ಕಿತ್ತೂರು ಕಳೆದೆರಡು ತಿಂಗಳಿಂದ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಕ್ಯಾನ್ಸರ್ನಿಂದ ಜಿಗುಪ್ಸೆಗೊಂಡ ಗುರು ಕಿತ್ತೂರು ಇತ್ತೀಚಿಗೆ ಮನೆ ತೊರೆದಿದ್ದರು. ಮಂಗಳವಾರ (ಜೂನ್ 11)

ಕ್ಯಾನ್ಸರ್ ನಿಂದ ಪತಿ ಸಾವು: ಶವವನ್ನು ಮನೆ ಒಳಗೆ ತರಬೇಡಿ ಎಂದ ಪತ್ನಿ…! Read More »

‘ದರ್ಶನ್ ಗಿಂತ ನಾನೇನು ಕಡಿಮೆ?ಬಾ…’| ಪವಿತ್ರಾಗೆ ಆ ಫೋಟೋ ಕಳಿಸಿದ್ನಂತೆ ರೇಣುಕಾಸ್ವಾಮಿ!!

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಪ್ರಕರಣದಲ್ಲಿ ಮೊತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿರುವ ಜತೆಗೆ ಕಳೆದ ಶುಕ್ರವಾರ ಮರ್ಮಾಂಗದ ಫೋಟೊ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿರುವುದಾಗಿ ವರದಿಯಾಗಿದೆ. ಪವಿತ್ರಾ ಗೌಡ ಹಾಗೂ ದರ್ಶನ್‌ ನಡುವೆ ಇರುವ ಗಾಸಿಪ್‌ ಹೊಸದೇನಲ್ಲ. ಈ ಮುಂಚೆ ದರ್ಶನ್‌ ಪತ್ನಿ ಹಾಗೂ ಪವಿತ್ರಾ ಗೌಡ ಅವರ ನಡುವೆ ಸೋಷಿಯಲ್‌

‘ದರ್ಶನ್ ಗಿಂತ ನಾನೇನು ಕಡಿಮೆ?ಬಾ…’| ಪವಿತ್ರಾಗೆ ಆ ಫೋಟೋ ಕಳಿಸಿದ್ನಂತೆ ರೇಣುಕಾಸ್ವಾಮಿ!! Read More »

ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಎಂದು ಕೂಗಿದ ವಿಚಾರಣಾಧೀನ ಖೈದಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೇ ನಟೋರಿಯಸ್​ ಕ್ರಿಮಿನಲ್ ಒಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆತನ ಕುಕೃತ್ಯದಿಂದ ಕೋಪಗೊಂಡ ಸ್ಥಳದಲ್ಲಿದ್ದವರು ಧರ್ಮದೇಟು ಕೊಟ್ಟಿದ್ದಾರೆ. ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟ್ ಒಳ ಭಾಗದಲ್ಲೇ ಆತನಿಗೆ ಪೆಟ್ಟಿ ಬಿದ್ದಿದೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಹೊರ

ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಎಂದು ಕೂಗಿದ ವಿಚಾರಣಾಧೀನ ಖೈದಿ Read More »

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಐಡಿ‌ ನೋಟೀಸ್|

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ ನೀಡಲಾಗಿದೆ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು. ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಐಡಿ‌ ನೋಟೀಸ್| Read More »

ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ಕಾಫಿನಾಡಿನ ಜನರ ತತ್ತರ | ತ್ರಿಶತಕ ದಾಟಿದ ಡೆಂಗ್ಯೂ ಪ್ರಕರಣ

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಡೆಂಗ್ಯೂ ಮಹಾಮಾರಿ ತಾಂಡವವಾಡುತ್ತಿದೆ. ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದ್ದು, ಸದ್ಯಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಇದರಿಂದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಬರದಿಂದ ಕಂಗೆಟ್ಟಿದ್ದ ಜಿಲ್ಲೆಯಲ್ಲಿ ಸದ್ಯಕ್ಕೆ ಉತ್ತಮ ಮಳೆಯಾಗ್ತಿದೆ. ಈ ಮಧ್ಯೆ ಡೆಂಗ್ಯೂ ಪ್ರಕರಣಗಳ ರುದ್ರನರ್ತನ ಕೂಡ ದಿನದಿಂದ ದಿನಕ್ಕೆ ಜಿಲ್ಲೆಯನ್ನು ಕಾಡುತ್ತಿದೆ.

ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ಕಾಫಿನಾಡಿನ ಜನರ ತತ್ತರ | ತ್ರಿಶತಕ ದಾಟಿದ ಡೆಂಗ್ಯೂ ಪ್ರಕರಣ Read More »

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ‘ಅವನಿ’ ಕಿರು ಚಿತ್ರತಂಡದವರಿಂದ ಸನ್ಮಾನ| 58ನೇ ಹುಟ್ಟುಹಬ್ಬದ ಶುಭಾಶಯ

ಸಮಗ್ರ ನ್ಯೂಸ್: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ರವರನ್ನು ಇಂದು ರಾಜ್ಯ ಕೇಂದ್ರ ಕಚೇರಿಯಲ್ಲಿ ‘ಅವನಿ’ ಕಿರು ಚಿತ್ರತಂಡದ ವತಿಯಿಂದ ಶಾಲು ಹೊದಿಸಿ ಫಲ ಪುಷ್ಪ ನೀಡಿ 58ನೇ ಹುಟ್ಟುಹಬ್ಬದ ಶುಭಾಶಯದೊಂದಿಗೆ ಸನ್ಮಾನಿಸಲಾಯಿತು.. ಅವನಿ ಕಿರು ಚಿತ್ರವು ಶಶಿ ಬೆಳ್ಳಾಯರು ಅವರ ಕಥೆ, ಸಾಹಿತ್ಯ,ನಿರ್ದೇಶನದಲ್ಲಿ ಮೂಡಿಬರಲಿದ್ದು, ಎಸ್.ಆರ್.ಎಸ್ ಪ್ರೊಡಕ್ಷನ್ ಹೌಸಿನ ಹಾಗೂ ಧಾರವಾಹಿಯ ನಿರ್ವಹಣೆ, ಕಾರ್ಯಕಾರಿ ನಿರ್ಮಾಪಕ ಸುಜಿತ್ ಕುಮಾರ್ ಫರಂಗಿಪೇಟೆ, ಲಯನ್ ಅನಿಲ್ ದಾಸ್ ಮಂಗಳೂರು, ದಿನೇಶ್ ಸುವರ್ಣ ಪಡುಪಣಂಬೂರು ಇವರ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ‘ಅವನಿ’ ಕಿರು ಚಿತ್ರತಂಡದವರಿಂದ ಸನ್ಮಾನ| 58ನೇ ಹುಟ್ಟುಹಬ್ಬದ ಶುಭಾಶಯ Read More »

ಚುರುಕುಗೊಂಡ ಮುಂಗಾರು ಮಳೆ| ಈ ವಾರ ಪೂರ್ತಿ ವರ್ಷಧಾರೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮುಂಗಾರು ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಬೆಂಗಳೂರು ಹವಾಮಾನ ಕೇಂದ್ರದ (IMD) ವಿಜ್ಞಾನಿಎಫ್’ ಮುಖ್ಯಸ್ಥರಾದ ಡಾ.ಎನ್.ಪುವಿಯರಸನ್ ಮಾಹಿತಿ ಹಂಚಿಕೊಂಡಿದ್ದಾರೆ. ಜೂನ್ 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ. ವಿಜಯಪುರ,

ಚುರುಕುಗೊಂಡ ಮುಂಗಾರು ಮಳೆ| ಈ ವಾರ ಪೂರ್ತಿ ವರ್ಷಧಾರೆ ಸಾಧ್ಯತೆ Read More »

ಬೆಂಗಳೂರಿನ ಪಾರ್ಕ್ ಗಳ ಸಮಯ ವಿಸ್ತರಣೆ| ಹೊಸ ಸಮಯ ನಿಗದಿ ಪಡಿಸಿ ಡಿಸಿಎಂ ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನ ಜನರಿಗೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಗುಡ್ ನ್ಯೂಸ್ ನೀಡಿದೆ. ಹೌದು ಬೆಂಗಳೂರಿನಲ್ಲಿರುವ ಎಲ್ಲಾ ಪಾರ್ಕ್ ಗಳ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇನ್ನು ಮುಂದೆ ಪ್ರತಿದಿನ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪಾರ್ಕ್ ಗಳು ತೆರೆದಿರುತ್ತದೆ. ಇದೇ ವಿಚಾರವಾಗಿ ಡಿಸಿಎಂ, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ನಿನ್ನೆ ಮಾಧ್ಯಮಗೋಷ್ಠಿ ನಡೆಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ

ಬೆಂಗಳೂರಿನ ಪಾರ್ಕ್ ಗಳ ಸಮಯ ವಿಸ್ತರಣೆ| ಹೊಸ ಸಮಯ ನಿಗದಿ ಪಡಿಸಿ ಡಿಸಿಎಂ ಆದೇಶ Read More »

ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ

ಸಮಗ್ರ ನ್ಯೂಸ್: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ

ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ Read More »