ರಾಜ್ಯ

ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ನಾಳೆ ಚುನಾವಣೆ| ಚು. ಆಯೋಗದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಏಪ್ರಿಲ್ 9 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಮಂಗಳವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳು ಈಗ ಮನೆ ಮನೆ ಪ್ರಚಾರದತ್ತ ಗಮನ ಹರಿಸಿದ್ದಾರೆ. ಈ ಮೂರೂ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನಲ್ಲಿ 18-19 ವರ್ಷ ವಯಸ್ಸಿನ ಸುಮಾರು 57.5 ಮಿಲಿಯನ್ ಯುವಕರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ವಿಶೇಷ. ಇತ್ತ […]

ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ನಾಳೆ ಚುನಾವಣೆ| ಚು. ಆಯೋಗದಿಂದ ಸಕಲ ಸಿದ್ಧತೆ Read More »

ಶಿಕ್ಷಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ| ಕೇಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಎಸ್ಐ ಸಂದೇಶ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಯೊಂದರ ಮುಖ್ಯ ಶಿಕ್ಷಕಿ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ ಆರೋಪದಲ್ಲಿ ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಮೂಡಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಪಿ.ಜಿ.ಸಂದೇಶ್‌ ಅವರಿಗೆ ಚಾಟಿ ಬೀಸಿದ ಹೈಕೋರ್ಟ್, ‘ಒಬ್ಬ ಪೊಲೀಸ್ ಅಧಿಕಾರಿಯಾಗಿ ಹೀಗೆಲ್ಲ ಮಾಡುವಂತಿಲ್ಲ’ ಎಂದು ಕಟುವಾಗಿ ಹೇಳಿದೆ. ಅತ್ಯಾಚಾರ ಆರೋಪ ಸಂಬಂಧ ಶಿಕ್ಷಕಿಯೊಬ್ಬರು ದಾಖಲಿಸಿರುವ ದೂರು ಆಧರಿಸಿ ದಕ್ಷಿಣ ಕನ್ನಡದ ವೇಣೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪಿ.ಜಿ.ಸಂದೇಶ್‌, ಉಡುಪಿಯ ಸ್ಮಿತಾ ಪೂರ್ಣಿಮಾ ಆರ್‌.ಮಲ್ಯ ಮತ್ತು ಮಂಗಳೂರಿನ

ಶಿಕ್ಷಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ| ಕೇಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಎಸ್ಐ ಸಂದೇಶ್ Read More »

ಲಾಕ್ ಡೌನ್ ಲಾಕಪ್ ಡೆತ್ ಪ್ರಕರಣ| 9 ಮಂದಿ ಪೊಲೀಸ್ ಅಧಿಕಾರಿಗಳಿಗೆ ಗಲ್ಲು ವಿಧಿಸಲು ಕಾರಣಳಾದ ಸಹೋದ್ಯೋಗಿ| ಯಾರು ಗೊತ್ತಾ ಈ ರೇವತಿ?

ಸಮಗ್ರ ನ್ಯೂಸ್: 2020ರಲ್ಲಿ ಕೋವಿಡ್​-19 ಲಾಕ್​ಡೌನ್ ಸಮಯದಲ್ಲಿ ನಡೆದ ಇಬ್ಬರ ಲಾಕಪ್​ ಡೆತ್​ ಕೇಸ್​ನಲ್ಲಿ 9 ಪೊಲೀಸ್​ ಅಧಿಕಾರಿಗಳಿಗೆ ಕಡೆಗೂ ಮಧುರೈ ಕೋರ್ಟ್ ಗಲ್ಲು ಶಿಕ್ಷೆ ತೀರ್ಪು ಘೋಷಿಸಿದೆ. 6 ವರ್ಷಗಳಿಂದ ಬಂಧನದಲ್ಲಿದ್ದ ಆರೋಪಿ ಖಾಕಿಗಳ ವಿರುದ್ಧ ನ್ಯಾಯಾಲಯ ನೀಡಿದ ಐತಿಹಾಸಿಕ ತೀರ್ಪಿಗೆ ಸದ್ಯ ದೇಶದ ಜನತೆ ತಲೆಬಾಗಿದ್ದಾರೆ. ಈ ಸಂದರ್ಭದಲ್ಲಿ, ಅಮಾಯಕರ ಜೀವವನ್ನು ಬಲಿ ಪಡೆದ ಪೊಲೀಸ್​ ಅಧಿಕಾರಿಗಳ ವಿರುದ್ಧ ದಿಟ್ಟತನದಿಂದ ಸಾಕ್ಷಿ ಹೇಳಿದ ಓರ್ವ ಸಾಮಾನ್ಯ ಮಹಿಳಾ ಕಾನ್​ಸ್ಟೇಬಲ್​ಗೆ ಸಲಾಂ ರೇವತಿ ಎಂಬ ಕೂಗುಗಳು

ಲಾಕ್ ಡೌನ್ ಲಾಕಪ್ ಡೆತ್ ಪ್ರಕರಣ| 9 ಮಂದಿ ಪೊಲೀಸ್ ಅಧಿಕಾರಿಗಳಿಗೆ ಗಲ್ಲು ವಿಧಿಸಲು ಕಾರಣಳಾದ ಸಹೋದ್ಯೋಗಿ| ಯಾರು ಗೊತ್ತಾ ಈ ರೇವತಿ? Read More »

ಪುತ್ತೂರು: ಜಾತ್ರೋತ್ಸವದ ಧ್ವಜಾರೋಹಣ ಅರ್ಹತೆ ಇಲ್ಲದ ಜಗನ್ನಿವಾಸ ರಾವ್ ನಡೆಸಿದರೆ ದೇಗುಲಕ್ಕೆ ಕಪ್ಪುಚುಕ್ಕೆ – ಶೈವಕ್ಷೇತ್ರ ಸಂರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಜಾತ್ರೋತ್ಸವದ ಧ್ವಜಾರೋಹಣ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕೃತ ಅರ್ಹತೆ ಇಲ್ಲದ ಪಿ.ಜಿ. ಜಗನ್ನಿವಾಸ ರಾವ್ ಅವರು ಭಾಗವಹಿಸುವುದು ದೇವಸ್ಥಾನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಲಿದೆ ಎಂದು ಶೈವಕ್ಷೇತ್ರ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ಶ್ರೀನಾಥ್ ಟಿ.ಎಸ್. ಸುಬ್ರಹ್ಮಣ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಪಾವಿತ್ರ್ಯತೆ ಮತ್ತು ಸಂಪ್ರದಾಯಗಳ ಉಲ್ಲಂಘನೆಯಾಗುತ್ತಿರುವ ಕುರಿತು ಹಲವು ಗಂಭೀರ ಆರೋಪಗಳನ್ನು ಮಾಡಿದರು. “ದೇವಸ್ಥಾನದ ನಿಯಮದಂತೆ ಧ್ವಜಾರೋಹಣ ಮತ್ತು ಅವರೋಹಣ ಮಾಡುವ ಜವಾಬ್ದಾರಿ ಕೇವಲ ಖಾಯಂ

ಪುತ್ತೂರು: ಜಾತ್ರೋತ್ಸವದ ಧ್ವಜಾರೋಹಣ ಅರ್ಹತೆ ಇಲ್ಲದ ಜಗನ್ನಿವಾಸ ರಾವ್ ನಡೆಸಿದರೆ ದೇಗುಲಕ್ಕೆ ಕಪ್ಪುಚುಕ್ಕೆ – ಶೈವಕ್ಷೇತ್ರ ಸಂರಕ್ಷಣಾ ವೇದಿಕೆ Read More »

ಪುತ್ತೂರು: ಏಕಾಏಕಿ ಎಲ್.ಪಿ.ಜಿ ದರದಲ್ಲಿ ಭಾರೀ ಏರಿಕೆ| ರಿಕ್ಷಾ ಚಾಲಕರಿಂದ ಪ್ರತಿಭಟನೆ; ಬಂಕ್ ಬಂದ್ ಮಾಡಿದ ಮಾಲೀಕರು

ಸಮಗ್ರ ನ್ಯೂಸ್: ಪುತ್ತೂರು ನಗರದಲ್ಲಿ ಎಲ್.ಪಿ.ಜಿ (LPG) ಬೆಲೆಯಲ್ಲಿ ಏಕಾಏಕಿ ಭಾರಿ ಏರಿಕೆ ಮಾಡಿರುವುದನ್ನು ವಿರೋಧಿಸಿ ಆಟೋ ರಿಕ್ಷಾ ಚಾಲಕರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಉಂಟಾದ ಆಕ್ರೋಶದ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಅನಿವಾರ್ಯವಾಗಿ ವ್ಯಾಪಾರ ಸ್ಥಗಿತಗೊಳಿಸಿ ಬಂಕ್ ಬಂದ್ ಮಾಡಿದ್ದಾರೆ. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಮುಂಭಾಗವಿರುವ ಎಲ್.ಪಿ.ಜಿ ಬಂಕ್‌ನಲ್ಲಿ ಪ್ರತಿ ಕೆ.ಜಿ ಅನಿಲಕ್ಕೆ 120 ರೂಪಾಯಿ ನಿಗದಿಪಡಿಸಲಾಗಿತ್ತು. ನಗರದ ಇತರ ಕೆಲವು ಬಂಕ್‌ಗಳಲ್ಲಿ 95 ರೂಪಾಯಿಗೆ ಎಲ್.ಪಿ.ಜಿ ಸಿಗುತ್ತಿದ್ದರೆ, ಇಲ್ಲಿ ಮಾತ್ರ 25

ಪುತ್ತೂರು: ಏಕಾಏಕಿ ಎಲ್.ಪಿ.ಜಿ ದರದಲ್ಲಿ ಭಾರೀ ಏರಿಕೆ| ರಿಕ್ಷಾ ಚಾಲಕರಿಂದ ಪ್ರತಿಭಟನೆ; ಬಂಕ್ ಬಂದ್ ಮಾಡಿದ ಮಾಲೀಕರು Read More »

ಕಡಬ: ಅಕ್ರಮ ಗೋಸಾಗಾಟ; ಆರೋಪಿಯ ಬಂಧನ

ಸಮಗ್ರ ನ್ಯೂಸ್: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ 19 ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಹಾಸನ ಕಡೆಯಿಂದ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡು ಬಂದಿದೆ. ಹೊಸೂರು ಮೂಲದ ಅಕ್ರಮ್ ಪಾಷಾ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ

ಕಡಬ: ಅಕ್ರಮ ಗೋಸಾಗಾಟ; ಆರೋಪಿಯ ಬಂಧನ Read More »

ಕೊಕ್ಕಡ: ಬಾರ್ ನಲ್ಲಿ ಹೊಡೆದಾಟ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕೊಕ್ಕಡ ಗ್ರಾಮದ ಬಾರ್ ಒಂದರಲ್ಲಿ ಮದ್ಯ ಸೇವಿಸುವ ಸಮಯ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಕ್ಕಡ ಗ್ರಾಮದ ಹೊಸಮನೆ ನಿವಾಸಿ ಅಕ್ಷಯ್ ಮಾರ್ಚ್‌ 29ರಂದು ರಾತ್ರಿ ಬಾರ್‌ನಲ್ಲಿ ಇದ್ದಾಗ ಯತೀಶ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡುವಂತೆ ಹೊರಗೆ ಎಳೆದುಕೊಂಡು ಗೋಗಿದ್ದ. ಬಾರ್‌ನ ಹಿಂಬದಿಯಲ್ಲಿ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ಸೇರಿ ಹಲ್ಲೆ ನಡೆಸಿ ಕೊಲೆ ಬೆದರಿಕೆ

ಕೊಕ್ಕಡ: ಬಾರ್ ನಲ್ಲಿ ಹೊಡೆದಾಟ; ಪ್ರಕರಣ ದಾಖಲು Read More »

ಮಹಾಲಿಂಗೇಶ್ವರ ದೇವರ ಕಾರ್ಯದಯ ಜಗನ್ನಿವಾಸ ರಾವ್ ನನ್ನು ಹೊರಗಿಡಿ, ಇಲ್ಲದಿದ್ರೆ ಕೊಡಿಮರದಡಿ ಕುಳಿತು ಪ್ರತಿಭಟಿಸುವೆ| ಅತ್ಯಾಚಾರ ಸಂತ್ರಸ್ತೆ ತಾಯಿ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಅವರನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಧಾರ್ಮಿಕ ಕಾರ್ಯಗಳಿಂದ ದೂರ ಇಡಬೇಕು , ಇಲ್ಲದಿದ್ದರೆ ಜಾತ್ರೆ ಧ್ವಜಾರೋಹಣದ ವೇಳೆ ಕೊಡಿಮರದಡಿ ಕುಳಿತು ದೇವರಲ್ಲಿ ನ್ಯಾಯ ಕೇಳುತ್ತೇನೆ ಎಂದು ಸಂತ್ರಸ್ತೆಯ ತಾಯಿ ನಮಿತಾ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೂ ಯುವತಿಗೆ ಅನ್ಯಾಯ ಮಾಡಿದವರನ್ನು ದೇವರ ಕೆಲಸದಲ್ಲಿ ತೊಡಗಿಸಲು ಬಿಡಬಾರದು. ಏಪ್ರಿಲ್ 10 ರಂದು ನಡೆಯಲಿರುವ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಗನ್ನಿವಾಸ್ ರಾವ್ ಭಾಗವಹಿಸಬಾರದು.

ಮಹಾಲಿಂಗೇಶ್ವರ ದೇವರ ಕಾರ್ಯದಯ ಜಗನ್ನಿವಾಸ ರಾವ್ ನನ್ನು ಹೊರಗಿಡಿ, ಇಲ್ಲದಿದ್ರೆ ಕೊಡಿಮರದಡಿ ಕುಳಿತು ಪ್ರತಿಭಟಿಸುವೆ| ಅತ್ಯಾಚಾರ ಸಂತ್ರಸ್ತೆ ತಾಯಿ ಹೇಳಿಕೆ Read More »

ಹನುಮ ಜಯಂತಿ ಆಚರಣೆ ಹಿನ್ನಲೆ| ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್, 02 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು

ಹನುಮ ಜಯಂತಿ ಆಚರಣೆ ಹಿನ್ನಲೆ| ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ Read More »

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

ಸಮಗ್ರ ನ್ಯೂಸ್: ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆ. ಬಲವಾದ ಕಂಪನಗಳ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದ ಆಸ್ತಿ ಮತ್ತು ಜೀವಕ್ಕೆ ಎಷ್ಟು ಹಾನಿಯಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಗುರುವಾರ ಬೆಳಿಗ್ಗೆ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೇಹ್ ಪ್ರದೇಶದಲ್ಲಿಯೂ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್‌ಸಿಎಸ್) ಮಾಹಿತಿಯ ಪ್ರಕಾರ, ಇಂದು ಮುಂಜಾನೆ ಭೂಕಂಪ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ Read More »