ರಾಜ್ಯ

ಕಳಸ ಕಲ್ಮಕ್ಕಿ ಬಳಿ ಟೂರ್ ಬಸ್ ಪಲ್ಟಿ: ಹಲವರಿಗೆ ಗಾಯ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್‌ಗೆ ತೆರಳುತ್ತಿದ್ದ ಸುಮಾರು 48 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಮುಂಜಾನೆ 5.30ಗೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. […]

ಕಳಸ ಕಲ್ಮಕ್ಕಿ ಬಳಿ ಟೂರ್ ಬಸ್ ಪಲ್ಟಿ: ಹಲವರಿಗೆ ಗಾಯ Read More »

ಲೀಟರ್ ಹಾಲಿಗೆ ಪ್ರೋತ್ಸಾಹ ಧನ ₹7 ಕ್ಕೆ ಏರಿಕೆ – ಸಿಎಂ

ಸಮಗ್ರ ನ್ಯೂಸ್: ರೈತರಿಗೆ 1 ಲೀಟರ್ ಹಾಲಿಗೆ ಸಹಾಯಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ. ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ

ಲೀಟರ್ ಹಾಲಿಗೆ ಪ್ರೋತ್ಸಾಹ ಧನ ₹7 ಕ್ಕೆ ಏರಿಕೆ – ಸಿಎಂ Read More »

15 ವರ್ಷ ಮೀರಿದ ವಾಹನಗಳು ಜಪ್ತಿ – ರಾಮಲಿಂಗಾರೆಡ್ಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್​​ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್​​ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ

15 ವರ್ಷ ಮೀರಿದ ವಾಹನಗಳು ಜಪ್ತಿ – ರಾಮಲಿಂಗಾರೆಡ್ಡಿ Read More »

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ ಬಂದ ಹಿನ್ನೆಲೆಯಲ್ಲಿ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ – ಸಚಿವ ದಿನೇಶ್ ಗುಂಡೂರಾವ್ Read More »

ಹವಾಮಾನ ವರದಿ| ಕರ್ನಾಟಕದಲ್ಲಿ ಮುಂದಿನ 5 ದಿನ ತಾಪಮಾನ ಇಳಿಕೆ

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಈಶಾನ್ಯ ದಿಕ್ಕಿನ ಮಾರುತಗಳು ಮತ್ತು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಮೇಲೆ ಪೂರ್ವ ದಿಕ್ಕಿನ ಮಾರುತಗಳು ರಾಜ್ಯದ ಮೇಲೆ ಕೆಳ ಉಷ್ಣವಲಯದ ಮಟ್ಟದಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆ ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಡಿಸೆಂಬರ್‌ 22ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಈ ವೇಳೆ ಚಳಿಯು ತೀವ್ರಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಭಾಗದಲ್ಲಿ

ಹವಾಮಾನ ವರದಿ| ಕರ್ನಾಟಕದಲ್ಲಿ ಮುಂದಿನ 5 ದಿನ ತಾಪಮಾನ ಇಳಿಕೆ Read More »

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುವ ಶಿಕ್ಷಕರ ಜವಾಬ್ದಾರಿಯನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವ ಸಮಯಕ್ಕಿಂತ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೆ ಹೆಚ್ಚಿನ ಸಮಯ

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ Read More »

ಗೃಹಲಕ್ಷ್ಮಿ‌ಹಣ ಲೆಕ್ಕದಲ್ಲಿ ಎಡವಿದ ಸಚಿವೆ| ಆರ್ಥಿಕ ಇಲಾಖೆಯನ್ನು ಹೊಣೆ ಮಾಡಿದ ಡಿಸಿಎಂ

ಸಮಗ್ರ ನ್ಯೂಸ್: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುದಾನದ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಷಾದ ವ್ಯಕ್ತಪಡಿಸಿದ ಪ್ರಸಂಗ ನಡೆದರೆ, ಮತ್ತೊಂದೆಡೆ ಸಚಿವೆ ಬೆನ್ನಿಗೆ ನಿಂತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನೇ ದೂರುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಖಾತೆಯತ್ತ ಬೊಟ್ಟು ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹಲಕ್ಷ್ಮಿ ಯೋಜನೆಗೆ

ಗೃಹಲಕ್ಷ್ಮಿ‌ಹಣ ಲೆಕ್ಕದಲ್ಲಿ ಎಡವಿದ ಸಚಿವೆ| ಆರ್ಥಿಕ ಇಲಾಖೆಯನ್ನು ಹೊಣೆ ಮಾಡಿದ ಡಿಸಿಎಂ Read More »

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ| ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

ಸಮಗ್ರ ನ್ಯೂಸ್: ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್‌.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್‌ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಇವರ ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 13 ಮತ್ತು 14ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾಟದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಚರ್ಚ್‌ಗಳಿಂದ ಒಟ್ಟು 19 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಕ್ರಿಕೆಟ್ ತಂಡವು ಕುಡ್ಲ ಟ್ರೋಫಿಯನ್ನು

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ| ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್ Read More »

ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಕಾಮಗಾರಿ ವೇಳೆ ಉರುಳಿ ಬಿದ್ದ ಕ್ರೇನ್

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಬುಧವಾರ ಕ್ರೇನ್ ಪ್ಲಾಟ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್ ನ ಸೈಡ್ ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ

ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಕಾಮಗಾರಿ ವೇಳೆ ಉರುಳಿ ಬಿದ್ದ ಕ್ರೇನ್ Read More »

ಪ.ಪೂ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಕಾರ್ಯಭಾರವನ್ನು ಕಡಿಮೆ ಮಾಡಲು ಹಾಲಿ ಇರುವ ನಿಯಮವನ್ನು ಹಿಂಪಡೆಯುವ ಬಗ್ಗೆ ಸದಸ್ಯರ ಜೊತೆ ಚರ್ಚೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪನವರು ವಿಧಾನಪರಿಷತ್‍ನಲ್ಲಿ ಹೇಳಿದ್ದಾರೆ. ಸದಸ್ಯ ಬೋಜೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಸಿಎಸ್?ಆರ್ ನಿಯಮಗಳ ಪ್ರಕಾರ ಯಾವುದೇ ನಿಯಮಗಳಲ್ಲಿ ಸರ್ಕಾರ ನಿಗದಿಪಡಿಸಿದ ಕಾರ್ಯಭಾರ ಮತ್ತು ಕರ್ತವ್ಯದ ಪ್ರಕಾರ ಕಾರ್ಯ ನಿರ್ವಹಿಸಬೇಕು. ಆದರೆ ಪ್ರಸ್ತುತ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ

ಪ.ಪೂ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ Read More »