ರಾಜ್ಯ

ಜೂ.8 ಅಲ್ಲ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ|ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರಮಾಡಲಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ ಹೋಗಿದ್ದು, ಜೂ.9 ಕ್ಕೆ ನಿಗದಿಯಾಗಿದೆ. ಹಾಗೂ ಸಂಸದ ಕುಮಾರಸ್ವಾಮಿ ಅವರು ಕೂಡ ಜೂ.9 ರಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಜೂ.9 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ […]

ಜೂ.8 ಅಲ್ಲ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ|ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ! Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ| ಸಚಿವ ಸ್ಥಾನಕ್ಕೆ‌ ಬಿ.ನಾಗೇಂದ್ರ ರಾಜೀನಾಮೆ

ಸಮಗ್ರ ನ್ಯೂಸ್: ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. ಅಲ್ಲದೆ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಶಾಸಕರುಗಳಾದ ಕೆ.ಗೋಪಾಲಯ್ಯ , ಅಶ್ವಥ್ ನಾರಾಯಣ, ಬೈರತಿ ಬಸವರಾಜ್ , ರವಿಕುಮಾರ್ ಸೇರಿದಂತೆ ಪ್ರಮುಖ ಮುಖಂಡರ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ| ಸಚಿವ ಸ್ಥಾನಕ್ಕೆ‌ ಬಿ.ನಾಗೇಂದ್ರ ರಾಜೀನಾಮೆ Read More »

ಉಡುಪಿ: ಹೃದಯಾಘಾತಕ್ಕೆ ಒಳಗಾಗಿದ್ದ ಶಾಲಾ ಬಸ್ ಚಾಲಕ ಮೃತ್ಯು

ಸಮಗ್ರ ನ್ಯೂಸ್: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತಪಟ್ಟ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ. ಅವರು ಬುಧವಾರ ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.

ಉಡುಪಿ: ಹೃದಯಾಘಾತಕ್ಕೆ ಒಳಗಾಗಿದ್ದ ಶಾಲಾ ಬಸ್ ಚಾಲಕ ಮೃತ್ಯು Read More »

ಮಂಡ್ಯದ ನೂತನ ಸಂಸದರಾಗಿ ಕುಮಾರಸ್ವಾಮಿ ಆಯ್ಕೆ/ ಶುಭ ಹಾರೈಸಿದ ನಿರ್ಗಮಿತ ಸಂಸದೆ

ಸಮಗ್ರ ನ್ಯೂಸ್: ಮಂಡ್ಯದ ನಿರ್ಗಮಿತ ಸಂಸದರಾದ ಸುಮಲತಾ ಅಂಬರೀಶ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಮಂಡ್ಯದ ಜನರ ಧ್ವನಿಯನ್ನು ಖರೀದಿಸಲು ಸಾಧ್ಯವಿಲ್ಲ ಎಂದು ನಮ್ಮ ಜನರು ಸಾಬೀತುಪಡಿಸಿದ್ದಾರೆ.” ಹಲವು ಆಮಿಷಗಳನ್ನು ನೀಡಿ, ಸಂತಸದ ಭರವಸೆ ನೀಡಿ ಜನರನ್ನು ವಂಚಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿದ ಮಂಡ್ಯ ಜನತೆಗೆ ಅಭಿನಂದನೆಗಳು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ಮಂಡ್ಯದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನ ಹೃತ್ತೂರ್ವಕ ಅಭಿನಂದನೆಗಳು. ಎಂದು ಫೇಸ್‍ಬುಕ್ ಪೋಸ್ಟ್ ಮಾಡಿದ್ದಾರೆ.

ಮಂಡ್ಯದ ನೂತನ ಸಂಸದರಾಗಿ ಕುಮಾರಸ್ವಾಮಿ ಆಯ್ಕೆ/ ಶುಭ ಹಾರೈಸಿದ ನಿರ್ಗಮಿತ ಸಂಸದೆ Read More »

ಹವಾಮಾನ ವರದಿ| ಜೂ.10ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಜೂನ್​ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಇನ್ನುಳಿದಂತೆ ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ,

ಹವಾಮಾನ ವರದಿ| ಜೂ.10ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ವಿಧಾನಸಭೆಯ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ಎದುರಾಗಲಿದೆ. ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ

ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್ Read More »

ಸಚಿವ ನಾಗೇಂದ್ರ ಜೊತೆ ಸಿಎಂ ಮಹತ್ವದ ಚರ್ಚೆ|ಇಂದು ರಾಜೀನಾಮೆ ಸಾಧ್ಯತೆ..?

ಸಮಗ್ರ ನ್ಯೂಸ್: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ, ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದೆ. ಅಷ್ಟೇ ಅಲ್ಲದೆ ಮತ್ತೊಂದೆಡೆ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟುಹಿಡಿದಿದೆ. ಸಚಿವ ನಾಗೇಂದ್ರ ಆಪ್ತ ಪಿಎ ನೆಕ್ಕುಂಟಿ ನಾಗರಾಜ್ನನ್ನು ಸಹ ಎಸ್ಐಟಿ ಅರೆಸ್ಟ್ ಮಾಡಿದೆ. ಇನ್ನು ಈ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಈ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ಇಂದು ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ

ಸಚಿವ ನಾಗೇಂದ್ರ ಜೊತೆ ಸಿಎಂ ಮಹತ್ವದ ಚರ್ಚೆ|ಇಂದು ರಾಜೀನಾಮೆ ಸಾಧ್ಯತೆ..? Read More »

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಹಾಸನದಲ್ಲಿ ಇಂದು ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ಹಾಸನದ ಹೇಮಾವತಿನಗರದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಮೃತಪಟ್ಟಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ Read More »

ಉಡುಪಿ: ಬಸ್ ಚಾಲನೆ ವೇಳೆ ಹೃದಯಾಘಾತ| ಶಾಲಾ ಮಕ್ಕಳು ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಸುಮಾರು 65 ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಆಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ. ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ

ಉಡುಪಿ: ಬಸ್ ಚಾಲನೆ ವೇಳೆ ಹೃದಯಾಘಾತ| ಶಾಲಾ ಮಕ್ಕಳು ಅಪಾಯದಿಂದ ಪಾರು Read More »

ಹಿಮಾಚಲ ಪ್ರದೇಶದಲ್ಲಿ ಗೆಲುವು/ ಗೆಲುವನ್ನು ಮೋದಿಗೆ ಅರ್ಪಿಸಿದ ಕಂಗನಾ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನಟಿ ಕಂಗನಾ ರನೌತ್ ತಮ್ಮ ಗೆಲುವನ್ನು ಪ್ರಧಾನಿ ಮೋದಿಗೆ ಅರ್ಪಿಸಿದ್ದಾರೆ. ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿಯವರ ‘ಸಲ್ಮಾ ಸಾಥ್, ಸಬ್ಬಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ. ಬಹುಶಃ ಬೇರೊಬ್ಬರು ತಮ್ಮ ಬ್ಯಾಗ್ ವ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆ ಎಂದು ಹೇಳಿದೆ. ಹಾಗೆಯೇ ಆಗಲಿದೆ, ಪ್ರಧಾನಿ ಮೋದಿಗೆ ನನ್ನ

ಹಿಮಾಚಲ ಪ್ರದೇಶದಲ್ಲಿ ಗೆಲುವು/ ಗೆಲುವನ್ನು ಮೋದಿಗೆ ಅರ್ಪಿಸಿದ ಕಂಗನಾ Read More »