ರಾಜ್ಯ

ಸುಭದ್ರ ಸರ್ಕಾರಕ್ಕಾಗಿ NDA ಜೊತೆ ನಿಲ್ತೇವೆ| ಪತ್ರಿಕಾಗೋಷ್ಠಿಯಲ್ಲಿ ಚಂದ್ರಬಾಬು‌ ನಾಯ್ಡು ಪುನರುಚ್ಛಾರ

ಸಮಗ್ರ ನ್ಯೂಸ್: ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿದ್ದಾರೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಇಂದು ಹೇಳಿದ್ದಾರೆ. “ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷ ಕಾರ್ಯಕರ್ತರ ಅಪಾರ ಶ್ರಮವಿದೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಐದು ವರ್ಷ ಹೋರಾಡಿದೆವು. ಇಂದು ಯಶಸ್ವಿಯಾಗಿದ್ದೇವೆ,” ಎಂದು ಅವರು […]

ಸುಭದ್ರ ಸರ್ಕಾರಕ್ಕಾಗಿ NDA ಜೊತೆ ನಿಲ್ತೇವೆ| ಪತ್ರಿಕಾಗೋಷ್ಠಿಯಲ್ಲಿ ಚಂದ್ರಬಾಬು‌ ನಾಯ್ಡು ಪುನರುಚ್ಛಾರ Read More »

ಆಂದ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂ.9ರಂದು ಪ್ರಮಾಣವಚನ

ಸಮಗ್ರ ನ್ಯೂಸ್: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ ನೇತೃತ್ವದ ಮೈತ್ರಿಕೂಟವು 175 ವಿಧಾನಸಭಾ ಕ್ಷೇತ್ರಗಳ ಪೈಕಿ 158 ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದು, ನಾಯ್ಡು ಅವರು ಆಂಧ್ರಪ್ರದೇಶವನ್ನು ಮತ್ತೆ ಆಳಲು ಸಜ್ಜಾಗಿದ್ದಾರೆ. 74 ವರ್ಷದ ನಾಯ್ಡು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಅವರು 1995 ರಿಂದ 2004 ರವರೆಗೆ ಅವಿಭಜಿತ

ಆಂದ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂ.9ರಂದು ಪ್ರಮಾಣವಚನ Read More »

ಚಕ್ರವರ್ತಿ ಬೆತ್ತಲಾಗಿದ್ದಾನೆ; ಅಹಂಕಾರ ಪಂಕ್ಚರ್ ಆಗಿದೆ| ಲೋಕಸಭಾ ಚುನಾವಣಾ ಫಲಿತಾಂಶ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಟ್ವೀಟ್

ಸಮಗ್ರ ನ್ಯೂಸ್: 2024ರ ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಬಹುಮತ ಪಡೆದರೂ ಇಂಡಿಯಾ ಒಕ್ಕೂಟದ ಅತ್ಯುತ್ತಮ ಸಾಧನೆ ಮಾಡಿದೆ. ಈ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಮಾಡಿರುವ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಹಂಕಾರ ಪಂಕ್ಚರ್ ಮಾಡಿದ್ದಕ್ಕೆ ಧನ್ಯವಾದಗಳು ಎಂದು ನಟ ಬರೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆಯಕ್ಟೀವ್​ ಆಗಿರುವ ​ ಪ್ರಕಾಶ್ ರಾಜ್​ ವಿಡಿಯೋವೊಂದನ್ನು ಶೇರ್​ ಮಾಡಿಕೊಂಡಿದ್ದಾರೆ. 400 ದಾಟಲು (ಚಾರ್​ ಸೌ ಪಾರ್​) ಬಿಜೆಪಿಗೆ ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿರುವುದು ಈ ವಿಡಿಯೋದಲ್ಲಿದೆ.

ಚಕ್ರವರ್ತಿ ಬೆತ್ತಲಾಗಿದ್ದಾನೆ; ಅಹಂಕಾರ ಪಂಕ್ಚರ್ ಆಗಿದೆ| ಲೋಕಸಭಾ ಚುನಾವಣಾ ಫಲಿತಾಂಶ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಟ್ವೀಟ್ Read More »

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ ನೀಡಿ

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ Read More »

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಬಳಿಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಸಸಿಕಾಂತ್ ಸೆಂಥಿಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, ಜಯಭೇರಿ ಬಾರಿಸಿದ್ದಾರೆ.ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ Read More »

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ| ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲು| ‘ಕೈ’ ಹಿಡಿಯದ ಗ್ಯಾರಂಟಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್‌ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ. ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ವಿರುದ್ಧ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ 2,68.094 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ,

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ| ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲು| ‘ಕೈ’ ಹಿಡಿಯದ ಗ್ಯಾರಂಟಿ Read More »

ಚಿಕ್ಕೋಡಿ: ಪಾಕಿಸ್ತಾನ ಪರ ಘೋಷಣೆ!? | ಮೋದಿಗೆ ನಿಂದನೆಗೈದು ಅವಮಾನ!!

ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಫಲಿತಾಂಶ ಬರುವ ಮುನ್ನವೇ ಚಿಕ್ಕೋಡಿಯಲ್ಲಿ ಕೈ ಕಾರ್ಯಕರ್ತರು ನಾಲಗೆ ಹರಿಬಿಟ್ಟಿದ್ದಾರೆ. ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದು, ಈ ವೇಳೆ ಅಭಿಮಾನಿಯೊಬ್ಬ ಮೋದಿ ಹಮಾರಾ ಕು# ಹೈ ಎಂದು ಕೂಗಿದ್ದಾನೆ. ಅಷ್ಟೇ ಅಲ್ಲದೆ ಪಾಕಿಸ್ತಾನ್‌ ಪರ ಘೋಷಣೆಗಳೂ ಕೇಳಿಬಂದಿದೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿಯವರಿಗೆ ಅಶ್ಲೀಲ ಪದಗಳಿಂದ ನಿಂದಿಸಲಾಗಿದ್ದು ಈ ವಿಡಿಯೋ ವೈರಲ್‌ ಆಗಿದೆ.

ಚಿಕ್ಕೋಡಿ: ಪಾಕಿಸ್ತಾನ ಪರ ಘೋಷಣೆ!? | ಮೋದಿಗೆ ನಿಂದನೆಗೈದು ಅವಮಾನ!! Read More »

ಜೆಡಿಎಸ್ ಗೆ ಮಂಡ್ಯದಲ್ಲಿ ಸಿಹಿ, ಹಾಸನದಲ್ಲಿ ಕಹಿ| ಕುಮಾರಸ್ವಾಮಿ ಗೆಲುವು; ಪ್ರಜ್ವಲ್ ಗೆ ಹೀನಾಯ ಸೋಲು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಬಿಸಿ ಜೋರಾಗಿದ್ದು, ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹಾಸನ ಅಶ್ಲೀಲ ವಿಡಿಯೋ ಕೇಸ್​ನಿಂದ ಬೇಸತ್ತಿದ್ದ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಮೂರು ದಿನಗಳ ಕಾಲ ಪ್ರವಾಸದಲ್ಲಿ ಇದ್ದರು. ಬಳಿಕ ಒಂದಷ್ಟು ದಿನ ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ಇಂದು ತನ್ನ ಗೆಲುವಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ

ಜೆಡಿಎಸ್ ಗೆ ಮಂಡ್ಯದಲ್ಲಿ ಸಿಹಿ, ಹಾಸನದಲ್ಲಿ ಕಹಿ| ಕುಮಾರಸ್ವಾಮಿ ಗೆಲುವು; ಪ್ರಜ್ವಲ್ ಗೆ ಹೀನಾಯ ಸೋಲು Read More »

ತೆಲಂಗಾಣ: ಓವೈಸಿ ವಿರುದ್ದ ಹಿಂದೂ ಪೈರ್ ಬ್ರ್ಯಾಂಡ್ ಮಾಧವಿ ಲತಾ ಭಾರೀ ಮುನ್ನಡೆ

ಸಮಗ್ರ ನ್ಯೂಸ್: ತೆಲಂಗಾಣದ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಚುನಾವಣೆ ರಣಕಣವು ಈ ಬಾರಿ ಭಾರಿ ಕುತೂಹಲದಿಂದ ಕೂಡಿದೆ. ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ ವಿರುದ್ಧ ಬಿಜೆಪಿಯಿಂದ ಹಿಂದು ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಕಣಕ್ಕಿಳಿದಿದ್ದು, ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಪ್ರಖರ ಹಿಂದುತ್ವವಾದಿಯೂ ಆಗಿರುವ ಮಾಧವಿ ಲತಾ ಅವರು ಈಗ ಮುಸ್ಲಿಮರ ಮತಗಳನ್ನೂ ಸೆಳೆಯಲು ಪ್ರಯತ್ನಿಸಿದ್ದರು. ಇದಕ್ಕಾಗಿ ಅವರು ಹೈದರಾಬಾದ್‌ನಲ್ಲಿರುವ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಮುಸ್ಲಿಂ ಗಲ್ಲಿಗಲ್ಲಿಗಳಲ್ಲಿ ಪ್ರಚಾರ ಕೈಗೊಂಡಿದ್ದರು. ಸದ್ಯ, ಒಂದು ಲಕ್ಷಕ್ಕೂ ಅಧಿಕ ಮತಗಳನ್ನು

ತೆಲಂಗಾಣ: ಓವೈಸಿ ವಿರುದ್ದ ಹಿಂದೂ ಪೈರ್ ಬ್ರ್ಯಾಂಡ್ ಮಾಧವಿ ಲತಾ ಭಾರೀ ಮುನ್ನಡೆ Read More »

ಬೆಂಗಳೂರು: ಹಾಸ್ಟೆಲ್ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾಲಯದ ಬಿಸಿಎಂ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, 40 ವಿದ್ಯಾರ್ಥಿಗಳಿಗೆ ವಾಂತಿ, ಬೇಧಿಯಾಗಿರುವ ಘಟನೆ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಆಗಿದ್ದು. ಊಟ ಸರಿಯಿಲ್ಲವೆಂದು ಆರೋಪಿಸಿ ರೋಡಿಗಿಳಿದಿದ್ದ ವಿದ್ಯಾರ್ಥಿಗಳು ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ಧರಣಿ ಮಾಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಆಗಮಿಸಿ ಹಾಸ್ಟೆಲ್ ವಿದ್ಯಾರ್ಥಿಗಳ ಮನವೊಲಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರ ಮನವೊಲಿಕೆ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದ

ಬೆಂಗಳೂರು: ಹಾಸ್ಟೆಲ್ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ Read More »