ರಾಜ್ಯ

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಮಸ್ಯೆ ಇದ್ದರೆ 15533ಗೆ ಕರೆ ಮಾಡಲು ಡಿಸಿಎಂ ಸೂಚನೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ, ಬಿಡ್ಲ್ಯೂಎಸ್ಎಸ್ಬಿ, ಅಗ್ನಿ ಶಾಮಕ ಅಧಿಕಾರಿಗಳ ಜೊತೆ ಇಂದು(ಜೂನ್ 03) ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಪ್ರತಿ ವಾರ್ಡ್ಗಳಲ್ಲೂ ನೀರು ಹೋಗಲು ವ್ಯವಸ್ಥೆ, ಬಿದ್ದ ಮರಗಳ ತೆರವು ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಿದರು. […]

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಮಸ್ಯೆ ಇದ್ದರೆ 15533ಗೆ ಕರೆ ಮಾಡಲು ಡಿಸಿಎಂ ಸೂಚನೆ Read More »

ಹವಾಮಾನ ವರದಿ| ರಾಜ್ಯಾದ್ಯಂತ ಮುಂಗಾರು ‌ಮಳೆ ಸಿಂಚನ| 17 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಆರಂಭವಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ ಬೆಂಗಳೂರಿನಲ್ಲಿ ಸೋಮವಾರ ಸುರಿದ ಮಳೆ 133 ವರ್ಷದ ದಾಖಲೆಯನ್ನೇ ನಿರ್ಮಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ,

ಹವಾಮಾನ ವರದಿ| ರಾಜ್ಯಾದ್ಯಂತ ಮುಂಗಾರು ‌ಮಳೆ ಸಿಂಚನ| 17 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ರೇವ್ ಪಾರ್ಟಿ ಹಾಜರಾಗಿದ್ದ ನಟಿ ಹೇಮಾ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಈ ಪಾರ್ಟಿಯಲ್ಲಿ ಹಾಜರಾಗಿದ್ದರು ಎನ್ನಲಾದ ತೆಲುಗು ನಟಿ ಹೇಮಾರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಟಿ ಹೇಮಾ ಹೆಸರು ಕೇಳಿ ಬಂದಾಗ ಆಕೆ ಆ ಸಂದರ್ಭದಲ್ಲಿ ನಾನು ಹೈದರಾಬಾದ್ ಫಾರ್ಮ್ ಹೌಸ್ ನಲ್ಲಿ ಇದ್ದೆ ಎಂದು ಹೇಳಿದ್ದರು. ಆದರೆ ಸಿಸಿಬಿ ಪೊಲೀಸರು ತಮಗೆ ಸಿಕ್ಕ ಖಚಿತ ಸಾಕ್ಷ್ಯಾಧಾರಗಳ ಮೇಲೆ

ರೇವ್ ಪಾರ್ಟಿ ಹಾಜರಾಗಿದ್ದ ನಟಿ ಹೇಮಾ ಅರೆಸ್ಟ್ Read More »

ಯುವತಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಂ ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗ ನಗರದ ಆರ್‌ಎಂಎಲ್ ನಗರದ ಸಮೀಪ ನಡೆದಿದೆ. ಶಿವಮೊಗ್ಗದ ನಂದನ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು ಈತ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ 20ಕ್ಕೂ ಹೆಚ್ಚು ಅನ್ಯ ಕೋಮಿನ ಯುವಕರು ನಂದನ್‌ನನ್ನು ತಡೆದು ಥಳಿಸಿದ್ದರು. ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು

ಯುವತಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ| ಮಹಿಳೆ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿ ಹಲವರನ್ನು ಪುಲಿಕೇಶಿ ನಗರ ಪೊಲೀಸ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್‌ ದಾಳಿ ಖಂಡಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ನಗರದ ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರು ಸೇರಿ ಹಲವರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನಂತರ ಠಾಣೆಗೆ ಕರೆದೊಯ್ದ ವೇಳೆ ಪ್ಯಾಲೆಸ್ತೀನ್‌

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ| ಮಹಿಳೆ ಪೊಲೀಸ್ ವಶಕ್ಕೆ Read More »

ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ‘ಕೈ’ ಕಾರ್ಯಕರ್ತ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಬಾಗಲಕೋಟೆಯ ಕಾಂಗ್ರೆಸ್‌ ಮುಖಂಡನೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿರುವ ಘಟನೆ ಜಿಲ್ಲೆಯ ಹವೇಲಿ ಗ್ರಾಮದಲ್ಲಿ ನಡೆದಿದೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿಷ್ಣುವರ್ಧನ್ ಸಾಂಗ್ ಹಾಕಿ ಕಾಂಗ್ರೆಸ್‌ ಮುಖಂಡ ಕೇಕ್ ಕಟ್ ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಳೆ ಹವೇಲಿ ಗ್ರಾಮದ ಕೈ ಮುಖಂಡ ರಮೇಶ್ ರಾಠೋಡ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ತಲ್ವಾರ್‌ನಿಂದ ಕೇಕ್ ಕತ್ತರಿಸಿದ ಮುಖಂಡನಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ. ಈ ವಿಡಿಯೊವನ್ನು ಇನ್ಸ್ಟಾಗ್ರಾಮ್‌ನಲ್ಲಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ‘ಕೈ’ ಕಾರ್ಯಕರ್ತ| ವಿಡಿಯೋ ವೈರಲ್ Read More »

ದ.‌ ಭಾರತದ‌ ಮೊದಲ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ

ಸಮಗ್ರ ನ್ಯೂಸ್: ಎಐಸಿಸಿ ರಾಷ್ಟ್ರೀಯ ಕೋ ಆರ್ಡಿನೇಟರ್ ಆಗಿರುವ, ಕರ್ನಾಟಕ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಈಗ ಸೇನಾ ಅಧಿಕಾರಿಯಾಗಿದ್ದಾರೆ. ಪ್ರಾದೇಶಿಕ ಸೇನೆಯಲ್ಲಿ ಕಮಿಷನ್‌ಡ್ ಆಫೀಸರ್ ಆಗಿ ಭವ್ಯ ನರಸಿಂಹಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ, ಭಾರತೀಯ ಸೇನೆ ಸಮವಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದು, ಇದು ನನ್ನ ಜೀವನದ ಹೆಮ್ಮೆಯ ಸಂದರ್ಭ ಎಂದು ಹೇಳಿದ್ದಾರೆ. 2022ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ

ದ.‌ ಭಾರತದ‌ ಮೊದಲ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ Read More »

ಸೌದೆ ತರಲು ಹೋದ ವ್ಯಕ್ತಿ ಮೇಲೆ ರೈಲು‌ ಹರಿದು ಸಾವು

ಸಮಗ್ರ ನ್ಯೂಸ್: ರೈಲು‌ ಹರಿದು ಕಾರ್ಮಿಕ‌ನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ರುದ್ರಪ್ಪ (68) ಮೃತ ದುರ್ದೈವಿ. ಇವರು ರೈಲ್ವೆ ಹಳಿಯ ಬಳಿ ಸೌದೆ ಆರಿಸುತ್ತಿದ್ದರು. ಅದೇ ಸಂದರ್ಭದಲ್ಲಿ ಮೈಸೂರು ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇನ್ನು ರುದ್ರಪ್ಪ, ಸ್ವಲ್ಪ ಕಿವುಡು ಹಾಗೂ ಕಣ್ಣು ಮಂಜಿನಿಂದ ಬಳಲುತ್ತಿದ್ದನಂತೆ. ಹೀಗಾಗಿ ರೈಲು ಬಂದ ಶಬ್ದ ಕೇಳಿಸದೇ ದುರ್ಘಟನೆ ಸಂಭವಿಸಿದ್ದು, ಈ ಕುರಿತು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೌದೆ ತರಲು ಹೋದ ವ್ಯಕ್ತಿ ಮೇಲೆ ರೈಲು‌ ಹರಿದು ಸಾವು Read More »

ವಿಧಾನ ಪರಿಷತ್ ಚುನಾವಣೆ/ ಸಿ ಟಿ ರವಿಗೆ ಒಲಿದ ಟಿಕೆಟ್

ಸಮಗ್ರ ನ್ಯೂಸ್: ಕರ್ನಾಟಕದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 03 ಕೊನೆ ದಿನವಾಗಿದ್ದು, ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್ ರವಿ ಕುಮಾ‌ರ್ ಅವರಿಗೆ

ವಿಧಾನ ಪರಿಷತ್ ಚುನಾವಣೆ/ ಸಿ ಟಿ ರವಿಗೆ ಒಲಿದ ಟಿಕೆಟ್ Read More »

ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉತ್ತೇಜನ‌/ ನಿಮ್ಹಾನ್ಸ್ ಗೆ ನೆಲ್ಸನ್ ಮಂಡೇಲಾ ಪ್ರಶಸ್ತಿ

ಸಮಗ್ರ ನ್ಯೂಸ್: ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ 2024ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನಿಮ್ಹಾನ್ಸ್ ಗೆ ನೀಡಿ ಗೌರವಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ

ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉತ್ತೇಜನ‌/ ನಿಮ್ಹಾನ್ಸ್ ಗೆ ನೆಲ್ಸನ್ ಮಂಡೇಲಾ ಪ್ರಶಸ್ತಿ Read More »