ರಾಜ್ಯ

ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ವಿವಾಹ/ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್

ಸಮಗ್ರ ನ್ಯೂಸ್: ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆಯ ನಡುವಣ ವಿವಾಹ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಶೇಷ ವಿವಾಹ ಕಾಯ್ದೆಯಡಿ ಮದುವೆ ಮಾಡಿಕೊಡಿದ್ದರೂ, ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅದನ್ನು ಕ್ರಮಬದ್ಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾ. ಗುರುಪಾಲ್ ಸಿಂಗ್ ಅಹ್ಲುವಾಲಿಯಾ ಅವರಿದ್ದ ಪೀಠ ಹೇಳಿದೆ. ಮಹಮದೀಯ ಕಾನೂನಿನ ಪ್ರಕಾರ, ಮೂರ್ತಿ ಪೂಜಕ ಅಥವಾ ಅಗ್ನಿ ಆರಾಧನೆ ಮಾಡುವ ಯುವತಿಯ ಜತೆ ಮುಸ್ಲಿಂ ಯುವಕನ ವಿವಾಹ ಅಸಿಂಧುವಾಗುತ್ತದೆ. ವಿಶೇಷ […]

ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ವಿವಾಹ/ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್ Read More »

ಕುಟುಂಬದ ಜೊತೆ ಎಚ್.ಡಿ ಕುಮಾರಸ್ವಾಮಿ ಜಾಲಿ ಟ್ರಿಪ್… ಟೀಕಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಪ್ರಜ್ವಲ್ ಭಾರತಕ್ಕೆ ಬಂದಾಯ್ತು..ಈ ಪೆನ್ ಡ್ರೈವ್ ಪ್ರಕರಣ ಮತ್ತು ಲೋಕ ಚುನಾವಣೆಯಿಂದ ಬ್ರೇಕ್ ಪಡೆಯಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕುಟುಂಬದ ಜೊತೆ ಜಾಲಿ ಟ್ರಿಪ್ ಕೈಗೊಂಡಿದ್ದಾರೆ. ಕಬಿನಿ ಹಿನ್ನೀರಿನಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಕುಟುಂಬದವರನ್ನು ಬಿಟ್ಟು ಯಾರನ್ನು ನಾನು ಭೇಟಿ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಚುನಾವಣೆ ಫಲಿತಾಂಶ ಮೊದಲೇ ಬೆಂಗಳೂರಿಗೆ ಬರಲು ತೀರ್ಮಾನ ಮಾಡಿದ್ದಾರೆ. ಇನ್ನೂ ಪ್ರಜ್ವಲ್ ಬಂಧನದ ಹಿನ್ನೆಲೆ ಕುಮಾರಸ್ವಾಮಿ ಜಾಲಿ ಟ್ರಿಪ್ ಹೋಗಿರೋದ್ರಿಂದ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್

ಕುಟುಂಬದ ಜೊತೆ ಎಚ್.ಡಿ ಕುಮಾರಸ್ವಾಮಿ ಜಾಲಿ ಟ್ರಿಪ್… ಟೀಕಿಸಿದ ಕಾಂಗ್ರೆಸ್ Read More »

ಲೋಕಸಭಾ ಚುನಾವಣೆ| ಇಂದು ಕೊನೆಯ ಹಂತದ ಮತದಾನ| ಪ್ರಧಾನಿ ಮೋದಿ ಸೇರಿ ಹಲವರ ಭವಿಷ್ಯ ನಿರ್ಧಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು(ಜೂನ್ 1) ಆರಂಭವಾಗಿದೆ. ಈ ಹಂತದಲ್ಲಿ ಸ್ಪರ್ಧಿಸುತ್ತಿರುವ ಪ್ರಮುಖ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ. ಏಳು ರಾಜ್ಯಗಳು ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸೇರಿ 904 ಮಂದಿ ಕಣದಲ್ಲಿದ್ದಾರೆ. ದೇಶದಾದ್ಯಂತ ಪ್ರಮುಖ ನಾಯಕರು ಬೃಹತ್ ರ್‍ಯಾಲಿಗಳನ್ನು ನಡೆಸುವ ಮೂಲಕ ಚುನಾವಣಾ ಪ್ರಚಾರವು ಗುರುವಾರ ಮುಕ್ತಾಯಗೊಂಡಿದೆ. ಉತ್ತರ

ಲೋಕಸಭಾ ಚುನಾವಣೆ| ಇಂದು ಕೊನೆಯ ಹಂತದ ಮತದಾನ| ಪ್ರಧಾನಿ ಮೋದಿ ಸೇರಿ ಹಲವರ ಭವಿಷ್ಯ ನಿರ್ಧಾರ Read More »

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ವಿದ್ಯುತ್‌ ಲೆ„ನ್‌ ದುರಸ್ತಿ ವೇಳೆ ಲೈನ್‌ ಆಫ್‌ ಮಾಡಲಾಗಿದ್ದನ್ನು ಆನ್‌ ಮಾಡಲು ಯತ್ನಿಸಿದ ಯುವಕನ ಕೃತ್ಯ ಸಿಸಿ ಕೆಮರಾದಲ್ಲಿ ಪತ್ತೆಯಾದ ಘಟನೆ ಬುಧವಾರ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿ ನಡೆದಿದೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಬಾರೀ ದುರಂತವೊಂದು ತಪ್ಪಿದೆ. ಪಂಜ ಮೆಸ್ಕಾಂ ವ್ಯಾಪ್ತಿಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್‌ ಲೆ„ನ್‌ಗೆ ತಾಗುತ್ತಿದ್ದ ಮರದ ಗೆಲ್ಲು ತೆರವು ಮಾಡಲು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಯಾರೂ ಕೂಡ ಆಫ್‌ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಬಳಿಕ ಕೆಲಸ

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ Read More »

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿವೆ ಎನ್ನಲಾಗಿದೆ. ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಲೋಕಸಭೆ ಚುನಾವಣೆಯ

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ Read More »

ಉಡುಪಿ: ಗ್ಯಾಂಗ್ ವಾರ್ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು

ಸಮಗ್ರ ನ್ಯೂಸ್‌ : ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶುಕ್ರವಾರ ನಗರ ಠಾಣಾ ಪೊಲೀಸರು ಹಾಜರುಪಡಿಸಿದರು. ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಅಲ್ಫಾಝ್, ಮಜಿದ್, ರಾಕಿಬ್, ಶರೀಫ್ ನನ್ನು ಬಾಡಿ ವಾರೆಂಟ್ ಮೂಲಕ ತನಿಖೆಗೆ ಪಡೆಯಲಾಗಿದ್ದು, ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದು, ತನಿಖೆಯಲ್ಲಿ ಆರೋಪಿಗಳ ಕೃತ್ಯಕ್ಕೆ ಬಳಸಿದ 2

ಉಡುಪಿ: ಗ್ಯಾಂಗ್ ವಾರ್ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು Read More »

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಠಾಣೆಗೆ ನುಗ್ತೀರಾ? ಶಾಸಕ ಹರೀಶ್ ಪೂಂಜಾಗೆ ಛಾಟಿ ಬೀಸಿದ ಹೈಕೊರ್ಟ್

ಸಮಗ್ರ ನ್ಯೂಸ್: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ? ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಉಚ್ಚ ನ್ಯಾಯಾಲಯ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಉಚ್ಚ ನ್ಯಾಯಾಲಯ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಠಾಣೆಗೆ ನುಗ್ತೀರಾ? ಶಾಸಕ ಹರೀಶ್ ಪೂಂಜಾಗೆ ಛಾಟಿ ಬೀಸಿದ ಹೈಕೊರ್ಟ್ Read More »

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ| ಯಾವುದೇ ಕ್ಷಣ ಬಂಧನದ ಸಾಧ್ಯತೆ

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಪ್ರಕರಣದ ತನಿಖೆ

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ| ಯಾವುದೇ ಕ್ಷಣ ಬಂಧನದ ಸಾಧ್ಯತೆ Read More »

6 ದಿನಗಳ ಕಾಲ ಎಸ್ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ|

ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ. ಹಾಸನದ 33 ವರ್ಷದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಮಾನ ನಿಲ್ದಾಣದಿಂದ ವಶಕ್ಕೆ ತೆಗೆದುಕೊಂಡಿದೆ. ದೇಶವನ್ನು ತೊರೆದ ಸುಮಾರು ಒಂದು ತಿಂಗಳ ನಂತರ ಅವರು ಗುರುವಾರ ಮಧ್ಯರಾತ್ರಿ ಜರ್ಮನಿಯಿಂದ ಭಾರತಕ್ಕೆ ಮರಳಿದರು.

6 ದಿನಗಳ ಕಾಲ ಎಸ್ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ| Read More »

“ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ”- ಡಿಕೆಶಿ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ಚುನಾವಣೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. “ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ” ಎಂಬುದಾಗಿ ಹೇಳಿಕೆ ನೀಡಿರುವುದು ಈಗ ಸಂಚಲನ ಮೂಡಿಸಿದೆ. ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ

“ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ”- ಡಿಕೆಶಿ ಸ್ಫೋಟಕ ಹೇಳಿಕೆ Read More »