ರಾಜ್ಯ

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ಲವ್ ಸ್ಟೋರಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಲವ್ ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಆದರೆ ಹುಡುಗಿಯೂ ಒಪ್ಪಲಿಲ್ಲ. ಅವರ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳನ್ನು […]

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ಲವ್ ಸ್ಟೋರಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ Read More »

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ

ಸಮಗ್ರ ನ್ಯೂಸ್: ಚಿತ್ರಮಂದಿರಗಳಿಗೆ ಜನ ಬರುವುದು ಇತ್ತೀಚೆಗೆ ತೀವ್ರವಾಗಿ ಕಡಿಮೆಯಾಗಿದ್ದು. ಇದರಿಂದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಜನರಿಲ್ಲದೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ನಡೆಸುವುದು ಕಷ್ಟವಾಗಿದೆ ಎಂದು ತೆಲಂಗಾಣದಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಕೆಲ ದಿನಗಳ ಕಾಲ ಬಂದ್ ಮಾಡುವ ನಿರ್ಧಾರ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗ ಕರ್ನಾಟಕದಲ್ಲಿಯೂ ಚಿತ್ರಮಂದಿರಗಳು ಅನುಭವಿಸುತ್ತಿರುವ ನಷ್ಟದಿಂದ ಪಾರಾಗಲು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಬಂದ್ ಮಾಡಬೇಕು ಎಂಬ ಚರ್ಚೆ ಜೋರಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಚಿತ್ರರಂಗದ ಪ್ರಮುಖರ ಸಭೆ

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ Read More »

ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ| ಪೋಷಕರಲ್ಲಿ ಅಸಮಾಧಾನ

ಸಮಗ್ರ ನ್ಯೂಸ್: ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ

ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ| ಪೋಷಕರಲ್ಲಿ ಅಸಮಾಧಾನ Read More »

ಬ್ಯಾಂಕ್ ಗ್ರಾಹಕರೇ…ಪಂಗನಾಮ ಬಿದ್ದೀತು ಜೋಕೆ| ಬ್ಯಾಂಕಿಂಗ್ ಆ್ಯಪ್ ಡೌನ್ ಲೋಡ್ ಮುನ್ನ ಎಚ್ಚರ ವಹಿಸಿ

ಸಮಗ್ರ ನ್ಯೂಸ್: ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಕಳೆದ ಕೆಲವು ದಿನಗಳಿಂದ ಸೈಬರ್ ವಂಚಕರು ಕೆನರಾ ಬ್ಯಾಂಕ್ ಮತ್ತು ಇತರೆ ಬ್ಯಾಂಕುಗಳ ನೈಜವಾಗಿ ಕಾಣುವಂತಹ ಚಿಹ್ನೆಗಳನ್ನು ಬಳಸಿಕೊಂಡು ವಾಟ್ಸಾಪ್, ಟೆಲಿಗ್ರಾಂ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಸ್ಟಮರ್ ಸರ್ವಿಸ್ ಪಾಯಿಂಟ್ ಎಂಬ ಫೇಕ್ ಮೊಬೈಲ್ ಅಪ್ಲಿಕೇಶನ್ ಫೈಲ್ ಅನ್ನು ಸೆಂಡ್ ಮಾಡಿ ಇದು ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ

ಬ್ಯಾಂಕ್ ಗ್ರಾಹಕರೇ…ಪಂಗನಾಮ ಬಿದ್ದೀತು ಜೋಕೆ| ಬ್ಯಾಂಕಿಂಗ್ ಆ್ಯಪ್ ಡೌನ್ ಲೋಡ್ ಮುನ್ನ ಎಚ್ಚರ ವಹಿಸಿ Read More »

ಹವಾಮಾನ ವರದಿ| ರಾಜ್ಯಾದ್ಯಂತ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23ರಿಂದ 25ರವರೆಗೆ ವ್ಯಾಪಕ ಮಳೆಯಾಗಲಿದೆ. ಮೇ 23 ರಂದು ಮೈಸೂರು, ಕೊಡಗು, ಮೇ 24 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಮೇ 23ರಿಂದ 25ರ ಅವಧಿಯಲ್ಲಿ ಉತ್ತರ

ಹವಾಮಾನ ವರದಿ| ರಾಜ್ಯಾದ್ಯಂತ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ Read More »

ಮೈಸೂರು: ಸಿಲಿಂಡರ್ ಸೋರಿಕೆ| ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ದಾರುಣ ಸಾವು

ಸಮಗ್ರ ನ್ಯೂಸ್: ಸಿಲಿಂಡರ್ ಸೋರಿಕೆ ಆಗಿ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಚಿರನಿದ್ರಗೆ ಜಾರಿದ ಆಘಾತಕಾರಿ ಘಟನೆ ಅರಮನೆ ನಗರಿ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಯರಗನಹಳ್ಳಿ ನಿವಾಸಿಗಳಾದ ಕುಮಾರಸ್ವಾಮಿ, ಮಂಜುಳಾ, ಆರತಿ, ಸ್ವಾತಿ ಎಂದು ಗುರುತಿಸಲಾಗಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರಾಗಿದ್ದು, ಮೈಸೂರಿನಲ್ಲಿ ನೆಲೆಸಿದ್ದರು, ಬಟ್ಟೆಗೆ ಇಸ್ತಿ ಹಾಕುವ ಕೆಲಸವನ್ನು ಈ ದಂಪತಿ ಮಾಡುತ್ತಿದ್ದರು. ಭಾನುವಾರ ಕುಟುಂಬಸ್ಥರ ಮದುವೆಗೆ ಹೋಗಿದ್ದ ಈ ಕುಟುಂಬ ಸದಸ್ಯರು ಸೋಮವಾರ ವಾಪಸ್ ಬಂದು ಮನೆಯಲ್ಲೇ ರಾತ್ರಿ ಮಲಗಿದ್ದಾರೆ. ಆದರೆ

ಮೈಸೂರು: ಸಿಲಿಂಡರ್ ಸೋರಿಕೆ| ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ದಾರುಣ ಸಾವು Read More »

‘ಗೃಹಲಕ್ಷ್ಮಿ’ ಹಣದಿಂದ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆ| ಸಿಎಂ, ಡಿಸಿಎಂ‌ಗೆ ಧನ್ಯವಾದ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪೈಕಿ ಗೃಹ ಲಕ್ಷ್ಮೀ ಯೋಜನೆಯು ಒಂದಾಗಿದೆ. ಈಗಾಗಲೇ 10ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಬಡ ಕುಟುಂಬಗಳಿಗೆ ನೆರವಾಗಿದೆ. ಪ್ರತಿ ತಿಂಗಳು ನೀಡುವ 2,000 ರೂಪಾಯಿ ಹಣವನ್ನು ಕೂಡಿಟ್ಟು ಮಹಿಳೆಯರು ಫ್ರಿಡ್ಜ್ ಹಾಗೂ ಬಂಗಾರವನ್ನು ಖರೀದಿಸಿದ್ದು ಗೊತ್ತೇ ಇದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮನಿಹಾಳ ಗ್ರಾಮದ ಸಕ್ಕುಬಾಯಿ ಕರದಿನ ಎಂಬ ಮಹಿಳೆ ಹಲವು ತಿಂಗಳನಿಂದ ಬಲಗಣ್ಣಿಗೆ ಸಮಸ್ಯೆಯನ್ನು ಎದುರಿಸುತ್ತಿದ್ದರು. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಷ್ಟು ಹಣ ಇಲ್ಲದ ಕಾರಣದಿಂದ, ನೋವಿನಲ್ಲೇ

‘ಗೃಹಲಕ್ಷ್ಮಿ’ ಹಣದಿಂದ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆ| ಸಿಎಂ, ಡಿಸಿಎಂ‌ಗೆ ಧನ್ಯವಾದ Read More »

ಅಗ್ನಿವೀರ್ ಮೋದಿ ಯೋಜನೆಯೇ ಹೊರತು ಸೇನೆಯದ್ದಲ್ಲ| ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ – ರಾಗಾ

ಸಮಗ್ರ ನ್ಯೂಸ್: ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನ ರದ್ದುಗೊಳಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ ಅಗ್ನಿವೀರ್ ಯೋಜನೆ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಇದು ಮೋದಿಯವರ ಯೋಜನೆಯೇ ಹೊರತು ಸೇನೆಯ ಯೋಜನೆಯಲ್ಲ. ಸೇನೆಗೆ ಅದು ಬೇಕಿಲ್ಲ” ಎಂದರು. ಮಹೇಂದ್ರಗಢ-ಭಿವಾನಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರ ರಚಿಸಿದಾಗ, ನಾವು ಅಗ್ನಿವೀರ್ ಯೋಜನೆಯನ್ನ ಕಸದ ಬುಟ್ಟಿಗೆ

ಅಗ್ನಿವೀರ್ ಮೋದಿ ಯೋಜನೆಯೇ ಹೊರತು ಸೇನೆಯದ್ದಲ್ಲ| ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ – ರಾಗಾ Read More »

ಮಹಾ‌ದುರಂತಕ್ಕೆ ಹದಿನಾಲ್ಕು ‌ವರ್ಷ| ಭಯಾನಕ ಘಟನೆಯ ಮರುನೆನಪು

ಸಮಗ್ರ ವಿಶೇಷ: ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ 14 ವರ್ಷಗಳ ಹಿಂದೆ ಇದೇ ದಿನ (2010 ಮೇ 22) ನಡೆದ ಆ ಒಂದು ದುರ್ಘಟನೆಯು ದೇಶದಾದ್ಯಂತ ಉಂಟುಮಾಡಿದ ನೋವಿನ ಅಲೆಗಳನ್ನು ಈಗ ಕಲ್ಪನೆ ಮಾಡಲೂ ಭಯವಾಗುತ್ತದೆ! ದುಬೈಯಿಂದ ಹೊರಟ ಭಾರತದ ವೈಭವದ ಬೋಯಿಂಗ್ 737-800 ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅದರಲ್ಲಿ ಎಲ್ಲ ಪ್ರಾಯದವರೂ ಇದ್ದರು. ಹೆಚ್ಚಿನವರು ಕರ್ನಾಟಕ ಮತ್ತು ಕೇರಳದವರು. ನೂರಾರು ಕನಸುಗಳನ್ನು ಹೊತ್ತು ತಮ್ಮ ತಾಯ್ನೆಲಕ್ಕೆ ಹೊರಟವರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂಜಾನೆ ಸೂರ್ಯೋದಯಕ್ಕೆ ಮೊದಲು

ಮಹಾ‌ದುರಂತಕ್ಕೆ ಹದಿನಾಲ್ಕು ‌ವರ್ಷ| ಭಯಾನಕ ಘಟನೆಯ ಮರುನೆನಪು Read More »

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ

ಸಮಗ್ರ ನ್ಯೂಸ್: ಉಡುಪಿ, ದಕ್ಷಿಣ ಕನ್ನಡ ಜಿಲಲೆಗಳು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮೇ 22ರಿಂದ 24ರವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಲ್ಲೂ ನಡೆಯಿತು ದೈವನರ್ತನ:ಕರಾವಳಿಯಲ್ಲಿ ಮುಂಗಾರು

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ Read More »