ರಾಜ್ಯ

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ

ಸಮಗ್ರ ನ್ಯೂಸ್: ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವುದೂ ಹೊಸ ನಿಯಮಾವಳಿಯ ಗುರಿಗಳಲ್ಲಿ ಒಂದಾಗಿದೆ. ಅತೀ ವೇಗದ ಚಾಲನೆಗೆ ದಂಡ 1000ರಿಂದ […]

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ Read More »

ಇಂದು (ಮೇ.21) ದ್ವಿತೀಯ ಪಿಯುಸಿ‌ ಪರೀಕ್ಷೆ -೨ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಲಾಖೆಯು ವೆಬ್‌ ಸೈಟ್‌ ನಲ್ಲಿ https://karresults.nic.in ಫಲಿತಾಂಶ ಲಭ್ಯವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಇಂದು (ಮೇ.21) ದ್ವಿತೀಯ ಪಿಯುಸಿ‌ ಪರೀಕ್ಷೆ -೨ ಫಲಿತಾಂಶ ಪ್ರಕಟ Read More »

ಹವಾಮಾನ ವರದಿ| ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡದಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದ್ದು, ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ. ಯಲ್ಲಾಪುರ, ಎಚ್​ಡಿಕೋಟೆ, ಕೊಳ್ಳೇಗಾಲ, ಸಿರಾ, ಯುಗಟಿಯಲ್ಲಿ ಹೆಚ್ಚು ಮಳೆಯಾಗಿದೆ. ಹೊನ್ನಾವರ, ದೇವನಹಳ್ಳಿ, ಶ್ರವಣಬೆಳಗೊಳ, ಭಾಗಮಂಡಲ, ಕಿರವತ್ತಿ, ಮಂಗಳೂರು, ಹಗರಿಬೊಮ್ಮನಹಳ್ಳಿ, ಹೊಸದುರ್ಗಾ, ಚನ್ನರಾಯಪಟ್ಟಣ, ಶಿವಮೊಗ್ಗ, ದಾವಣಗೆರೆ,

ಹವಾಮಾನ ವರದಿ| ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ಸಂಸತ್ ಭವನಕ್ಕೆ ಮೇ 20ರಿಂದ ಬರೋಬ್ಬರಿ 3300 ಸಿಬ್ಬಂದಿ ಭದ್ರತೆ/ ಭದ್ರತಾ ಹೊಣೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲ(ಸಿಐಎಸ್‍ಎಫ್)ದ ಹೆಗಲಿಗೆ

ಸಮಗ್ರ ನ್ಯೂಸ್: ಸಂಸತ್ ಭವನಕ್ಕೆ ಈವರೆಗೆ ಭದ್ರತೆ ಒದಗಿಸುತ್ತಿದ್ದ 1400 ಸಿಆರ್‍ಪಿಎಫ್ ಸಿಬ್ಬಂದಿಯನ್ನು ಸಂಪೂರ್ಣ ಹಿಂಪಡೆದು, ಮೇ 20ರಿಂದ ಬರೋಬ್ಬರಿ 3300 ಸಿಐಎಸ್‍ಎಫ್ (ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲ) ಸಿಬ್ಬಂದಿ ಭದ್ರತೆ ಒದಗಿಸಲಿದ್ದಾರೆ. , ಹೊಸ ಹಾಗೂ ಹಳೆಯ ಸಂಸತ್ ಭವನದಲ್ಲಿ ಭಯೋತ್ಪಾದನೆ ನಿಗ್ರಹ ಚಟುವಟಿಕೆ, ಸುರಕ್ಷತಾ ತಪಾಸಣೆ ಸೇರಿದಂತೆ ಎಲ್ಲಾ ರೀತಿಯ ಭದ್ರತಾ ಜವಾಬ್ದಾರಿಯನ್ನು ಸಿಐಎಸ್‍ಎಫ್‍ಗೆ ವಹಿಸಲಾಗುತ್ತಿದೆ. ಕೆಲ ತಿಂಗಳ ಹಿಂದೆ ಸಂಸತ್ ಭವನದೊಳಗೆ ಕಿಡಿಗೇಡಿಗಳು ನುಸುಳಿ ಹೊಗೆ ಬಾಂಬ್ ಸಿಡಿಸಿದ ಪ್ರಕರಣದ ಬಳಿಕ ಭದ್ರತಾ

ಸಂಸತ್ ಭವನಕ್ಕೆ ಮೇ 20ರಿಂದ ಬರೋಬ್ಬರಿ 3300 ಸಿಬ್ಬಂದಿ ಭದ್ರತೆ/ ಭದ್ರತಾ ಹೊಣೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲ(ಸಿಐಎಸ್‍ಎಫ್)ದ ಹೆಗಲಿಗೆ Read More »

5,8 ಮತ್ತು 9ನೇ ತರಗತಿ ಗುಡ್ ನ್ಯೂಸ್ ನೀಡಿದ ಸರ್ಕಾರ

ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕುರಿತ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿ ಇನ್ನೂ ನಿರ್ಧಾರ ಆಗದಿರುವ ಕಾರಣ, ಈಗಾಗಲೇ ಶಾಲೆಗಳಲ್ಲಿ ಮಾಸಿಕವಾಗಿ, ಅರ್ಧ ವಾರ್ಷಿಕವಾಗಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಅಗ್ರಿಗೇಟ್ ಮಾಡಿ ಮುಂದಿನ ತರಗತಿಗಳಿಗೆ ದಾಖಲಿಸಲು ಮುಂದಾಗಿದೆ. ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್ 08ರಂದು ಪಬ್ಲಿಕ್ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈಗ ಈ ಸಂಬಂಧ ತೀರ್ಪು ಪ್ರಕಟವಾಗುವ ಮೂಲಕ ಪಬ್ಲಿಕ್ ಪರೀಕ್ಷೆಯ ಬಗ್ಗೆ ನಿರ್ಧಾರವಾಗಬೇಕಿದೆ. ಅಂದರೆ, 2023-24ನೇ ಸಾಲಿನ 5, 8

5,8 ಮತ್ತು 9ನೇ ತರಗತಿ ಗುಡ್ ನ್ಯೂಸ್ ನೀಡಿದ ಸರ್ಕಾರ Read More »

ರೈತರಿಗೆ ಶುಭ ಸುದ್ದಿ ನೀಡಿದ ಹವಾಮಾನ ಇಲಾಖೆ| ಭಾರತಕ್ಕೆ ಪ್ರವೇಶಿಸಿದ ಮುಂಗಾರು ಮಳೆ

ಸಮಗ್ರ ನ್ಯೂಸ್: ಕಳೆದ ವರ್ಷ ಬರದಿಂದ ಕಂಗೆಟ್ಟಿದ್ದ ರೈತರಿಗೆ ಪ್ರಸಕ್ತ ಹಂಗಾಮಿಗೆ ಶುಭ ಸುದ್ದಿ ಹೊರಬಿದ್ದಿದೆ. ಕೇಂದ್ರ ಹವಾಮಾನ ಇಲಾಖೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಲಾ ನಿನಾ ಪರಿಸ್ಥಿತಿಯಿಂದಾಗಿ ಪೆಸಿಫಿಕ್ ಸಾಗರದ ತಂಪಾಗುವಿಕೆಯು ಈ ವರ್ಷ ಉತ್ತಮ ಮಳೆಯಾಗಲು ಕಾರಣವಾಗುತ್ತದೆ. ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಈಗಾಗಲೇ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ‘ನೈಋತ್ಯ ಮುಂಗಾರು ಮಾಲ್ಡೀವ್ಸ್‌ ಹಾಗೂ ಕಮೋರಿನ್‌ ದ್ವೀಪಗಳನ್ನು ದಾಟಿ ಬಂಗಾಳ ಕೊಲ್ಲಿಯ ನಿಕೋಬಾರ್‌

ರೈತರಿಗೆ ಶುಭ ಸುದ್ದಿ ನೀಡಿದ ಹವಾಮಾನ ಇಲಾಖೆ| ಭಾರತಕ್ಕೆ ಪ್ರವೇಶಿಸಿದ ಮುಂಗಾರು ಮಳೆ Read More »

ಹವಾಮಾನ ವರದಿ| ವಾಯುಭಾರ ಕುಸಿತ; 14 ಜಿಲ್ಲೆಗಳಲ್ಲಿ ಅಲರ್ಟ್

ಸಮಗ್ರ ನ್ಯೂಸ್: ಕಳೆದ 6 ತಿಂಗಳಿನಿಂದ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಈಗ ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿದ್ದು ಹವಾಮಾನ ಇಲಾಖೆ 14 ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು

ಹವಾಮಾನ ವರದಿ| ವಾಯುಭಾರ ಕುಸಿತ; 14 ಜಿಲ್ಲೆಗಳಲ್ಲಿ ಅಲರ್ಟ್ Read More »

ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್| ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ. ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು.

ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್| ಯುವಕ ಅರೆಸ್ಟ್ Read More »

ವಾಯುಭಾರ ಕುಸಿತ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಂಭವವಿದ್ದು, ಇದೇ 22ರವರೆಗೆ ಕರಾವಳಿಯುದ್ಧಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ. ಇದೇ 20ರಂದು ಮತ್ತು ಇದೇ 22ರಂದು ಕರಾವಳಿಯಲ್ಲಿ ಪ್ರತಿಕೂಲ ಹವಾಮಾನ ಇರಲಿದ್ದು, ಗಂಟೆಗೆ 45 ಕಿ.ಮೀ ಯಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಗಾಳಿಯು ಗಂಟೆಗೆ 65 ಕಿ.ಮೀ.

ವಾಯುಭಾರ ಕುಸಿತ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ಸೂಚನೆ Read More »

ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ/ ನಿರ್ಮಾಣ ಕಾಮಗಾರಿಗಳಿಗೆ ಅಸ್ತು ಎಂದ ಚುನಾವಣಾ ಆಯೋಗ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆಯನ್ನು ರಾಜ್ಯದಲ್ಲಿ ಸಡಿಲಿಸಲಾಗಿದ್ದು, ಬರ ಪರಿಹಾರ ಪರಿಶೀಲನಾ ಸಭೆ ಮತ್ತು ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಂತಹ ಉದ್ದೇಶಗಳಿಗಾಗಿ ನಿಬರ್ಂಧಗಳನ್ನು ತೆಗೆದುಹಾಕಲು ಚುನಾವಣಾ ಆಯೋಗ ಅಸ್ತು ಎಂದಿದೆ. ಮೇ 8 ರಂದು ರಾಜ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ಸಲ್ಲಿಸಿದ ಮನವಿಯ ಆಧಾರದ ಮೇಲೆ ಚುನಾವಣಾ ಆಯೋಗವು ವಿವಿಧ ಉದ್ದೇಶಗಳಿಗಾಗಿ ನೀತಿ ಸಮಿತಿಯಿಂದ ವಿನಾಯಿತಿಗಳನ್ನು ನೀಡಿತು. ನಾಗರಿಕ ಕಾಮಗಾರಿಗಳು, ಮೂಲಸೌಕರ್ಯ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಗೆ

ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ/ ನಿರ್ಮಾಣ ಕಾಮಗಾರಿಗಳಿಗೆ ಅಸ್ತು ಎಂದ ಚುನಾವಣಾ ಆಯೋಗ Read More »