ರಾಜ್ಯ

ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ನಿಹಾನಿ ವಾಲ್ತಾಜೆ

ಸಮಗ್ರ ನ್ಯೂಸ್: ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ. ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, ಪರಿವೃತ್ತ ಪದ್ಮಸಾನದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಇವರು ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ವಾಲ್ತಾಜೆ ಪ್ರಶಾಂತ್ […]

ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ನಿಹಾನಿ ವಾಲ್ತಾಜೆ Read More »

ಮೈಸೂರು : ಉಳುಮೆ ಟ್ರಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು

ಸಮಗ್ರ ನ್ಯೂಸ್ : ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. 8 ವರ್ಷದ ಬಾಲಕ ಭವಿಷ್ ಟ್ರಕ್ಟರ್ ಗೆ ಸಿಲುಕಿ ಸಾವನ್ನಪ್ಪಿದ ಬಾಲಕ. ಟ್ರಕ್ಟರ್ ರೊಟಾವೆಲ್ಟರ್ಗೆ ಬಾಲಕ ಸಿಲುಕಿ ದೇಹ ಛಿದ್ರ ಛಿದ್ರವಾಗಿದೆ. ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ರಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದನು. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ

ಮೈಸೂರು : ಉಳುಮೆ ಟ್ರಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು Read More »

ಆಕ್ಷೇಪಾರ್ಹ ಹೇಳಿಕೆ ಪ್ರಕರಣ/ ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾಖರ್ಂಡ್ ಹೈಕೋರ್ಟ್

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಖರ್ಂಡ್ ಹೈಕೋರ್ಟ್ 1000 ರೂ. ದಂಡ ವಿಧಿಸಿದೆ. ಚೈಬಾಸಾದ ಕೆಳ ನ್ಯಾಯಾಲಯದಲ್ಲಿ ತಾಪ್ ಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಇದನ್ನು ಕೆಳ ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿತ್ತು. ಕಳೆದ ತಿಂಗಳು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ರಾಹುಲ್ ಗಾಂಧಿಗೆ ರಿಲೀಫ್ ನೀಡಿತ್ತು. ಚೈಬಾಸಾ ನ್ಯಾಯಾಲಯದಲ್ಲಿ ನಡೆಯುತ್ತಿರುವ

ಆಕ್ಷೇಪಾರ್ಹ ಹೇಳಿಕೆ ಪ್ರಕರಣ/ ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾಖರ್ಂಡ್ ಹೈಕೋರ್ಟ್ Read More »

ಬೆಳಗಾವಿ : ನದಿಯಲ್ಲಿ ಮುಳುಗಿ ನಾಲ್ವರು ದಾರುಣ ಸಾವು

ಸಮಗ್ರ ನ್ಯೂಸ್ : ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ ಬಸ್ತವಾಡೆ ಅಣೆಕಟ್ಟಿನಲ್ಲಿ ವೇದಗಂಗಾ ನದಿಯಲ್ಲಿ ನಡೆದಿದೆ. ಜಿತೇಂದ್ರ ವಿಲಾಸ್ ಲೋಕ್ರೆ (36), ರೇಷ್ಮಾ ದಿಲೀಪ್ ಏಳಮಲ್ಲೆ (34), ಸವಿತಾ ಅಮರ್ ಕಾಂಬಳೆ (27), ಯಶ್ ದಿಲೀಪ್ ಏಳಮಲ್ಲೆ (17) ಮೃತ ದುರ್ದೈವಿಗಳು. ಮೃತರಲ್ಲಿ ಇಬ್ಬರು ಬೆಳಗಾವಿಯ ಅಥಣಿ ತಾಲೂಕಿನವರು ಎಂದು ತಿಳಿದುಬಂದಿದೆ.ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ

ಬೆಳಗಾವಿ : ನದಿಯಲ್ಲಿ ಮುಳುಗಿ ನಾಲ್ವರು ದಾರುಣ ಸಾವು Read More »

ಮದ್ಯ ಪ್ರಿಯರಿಗೆ ಮತ್ತಷ್ಟು ನಶೆ/ ದೇಶೀಯ ಮದ್ಯದ ಬೆಲೆ ಹೆಚ್ಚಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್:ಐದು ಉಚಿತ ಖಾತರಿ ಯೋಜನೆಗಳಿಗೆ ಹಣವನ್ನು ಸಂಗ್ರಹಿಸಲು ಸರ್ಕಾರಕ್ಕೆ ಬಹಳ ಕಷ್ಟಕರವಾಗಿದ್ದು, ಇದೀಗ ರಾಜ್ಯ ಸರ್ಕಾರ ಮೂಲ ಆದಾಯಕ್ಕೆ ಮಣೆ ಹಾಕಿ ದೇಶೀಯ ಮದ್ಯದ ಬೆಲೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಬ್ರಾಂಡ್‍ಗಳ ಅಗ್ಗದ ಮದ್ಯದ ಬೆಲೆಗಳು ತುಂಬಾ ಕಡಿಮೆ. ವಿದೇಶಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ಮದ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಅಗ್ಗದ ಮದ್ಯದ ಮಾರಾಟ ಹೆಚ್ಚಿದ್ದು, ಮದ್ಯದ ಬೆಲೆಯನ್ನು ಹೆಚ್ಚಿಸುವ ಬಗ್ಗೆ

ಮದ್ಯ ಪ್ರಿಯರಿಗೆ ಮತ್ತಷ್ಟು ನಶೆ/ ದೇಶೀಯ ಮದ್ಯದ ಬೆಲೆ ಹೆಚ್ಚಿಸಲು ನಿರ್ಧರಿಸಿದ ರಾಜ್ಯ ಸರ್ಕಾರ Read More »

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ಇನ್ನಿಲ್ಲ

ಸಮಗ್ರ ನ್ಯೂಸ್: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತನ್ನ 14ನೇ ವಯಸ್ಸಿನಲ್ಲೇ ಮುಂಬೈಗೆ ತೆರಳಿದ್ದ ರಘುನಂದನ್ ಕಾಮತ್ ತನ್ನ ಸಹೋದರನ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದರು. 1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ಇನ್ನಿಲ್ಲ Read More »

ಇಂದು ಬೆಂಗಳೂರಿನಲ್ಲಿ ಬೆಂಗಳೂರು – ಚೆನ್ನೈ ನಡುವೆ ಪಂದ್ಯ/ ಕ್ಯಾಂಟೀನ್ ಆಹಾರ ಪರೀಕ್ಷೆಗೆ ಮುಂದಾದ ಸರ್ಕಾರ

ಸಮಗ್ರ ನ್ಯೂಸ್: ಇಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಹತ್ವದ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಆಹಾರ ಮತ್ತು ಸುರಕ್ಷತಾ ಇಲಾಖೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಹಾರ ಪರೀಕ್ಷೆ ನಡೆಸಲು ಮುಂದಾಗಿದೆ. ಸ್ಟೇಡಿಯಂ ಕ್ಯಾಂಟೀನ್‍ನಲ್ಲಿರುವ ಆಹಾರ ಸೇವಿಸಿ ವ್ಯಕ್ತಿಯೊಬ್ಬರು ಅಸ್ವಸ್ಥರಾದ ವರದಿ ಬೆನ್ನಲ್ಲೇ ಆಹಾರ ಮತ್ತು ಸುರಕ್ಷತಾ ಇಲಾಖೆ ಎಚ್ಚೆತ್ತುಕೊಂಡು ಪರೀಕ್ಷೆ ನಡೆಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‍ಗೆ ಪತ್ರದ ಮೂಲಕ ತಿಳಿಸಿದೆ. ಕ್ಯಾಂಟೀನ್‍ನಲ್ಲಿ ಸಿದ್ಧವಾದ ಆಹಾರವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ.

ಇಂದು ಬೆಂಗಳೂರಿನಲ್ಲಿ ಬೆಂಗಳೂರು – ಚೆನ್ನೈ ನಡುವೆ ಪಂದ್ಯ/ ಕ್ಯಾಂಟೀನ್ ಆಹಾರ ಪರೀಕ್ಷೆಗೆ ಮುಂದಾದ ಸರ್ಕಾರ Read More »

ಕೊಡಗು:ಮುಂಡ್ರೋಟು ಅರಣ್ಯದಲ್ಲಿ ಮರಗಳ ಹನನ

ಸಮಗ್ರ ನ್ಯೂಸ್: ತನಿಖೆಗೆ ಆದೇಶ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಏಕೀಕರಣ ರಂಗವು ಈ ನಿಟ್ಟಿನಲ್ಲಿ ಗಮನ ಸೆಳೆದಿತ್ತು. ಮುಂಡ್ರೋಟು ಮೀಸಲು ಅರಣ್ಯದಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವ ಬಗ್ಗೆ ಕೊಡಗು ಏಕೀಕರಣ ರಂಗ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ದೂರು ಸಲ್ಲಿಸಿದ್ದ ಹಿನ್ನಲೆ ಪೊನ್ನಣ್ಣ ಅವರ ಗಮನ ಸೆಳೆಯುವ ಸೂಚನೆ ಮೇರೆಗೆ ಇದೀಗ ಮರಗಳ ಹನನ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿರುವ ಸಚಿವ ಖಂಡ್ರೆಈಗಾಗಲೇ ಪ್ರಕರಣದ ಬಗ್ಗೆ ಎಫ್ ಐ ಆರ್

ಕೊಡಗು:ಮುಂಡ್ರೋಟು ಅರಣ್ಯದಲ್ಲಿ ಮರಗಳ ಹನನ Read More »

ಪೆನ್ ಡ್ರೈವ್ ಕೇಸಲ್ಲಿ ದೇವರಾಜೇಗೌಡ ಸ್ಫೋಟಕ ಹೇಳಿಕೆ| ಡಿಕೆಶಿ 100 ಕೋಟಿ ರೂಪಾಯಿ ಆಫರ್‌

ಸಮಗ್ರ ನ್ಯೂಸ್: ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಮೇ 17 ರಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇವರು ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ

ಪೆನ್ ಡ್ರೈವ್ ಕೇಸಲ್ಲಿ ದೇವರಾಜೇಗೌಡ ಸ್ಫೋಟಕ ಹೇಳಿಕೆ| ಡಿಕೆಶಿ 100 ಕೋಟಿ ರೂಪಾಯಿ ಆಫರ್‌ Read More »

ಸೋಮವಾರಪೇಟೆ: ಬುದ್ಧಿಮಾಂದ್ಯ ಬಾಲಕನ ಪೋಷಕರ ಪತ್ತೆಗೆ ಮನವಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ನಗರದಲ್ಲಿ ಅನಾಥ ಬುದ್ಧಿಮಾಂದ್ಯ ಹುಡುಗ ರಸ್ತೆ ಉದ್ದಕ್ಕೂ ಸುತ್ತುತ್ತಿರುವುದನ್ನು ಗಮನಿಸಿದ ಸಾರ್ವಜನಿಕ ಸೋಮವಾರಪೇಟೆ ವೃತ್ತ ನಿರೀಕ್ಷಕರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳು ಬಂದು ಈ ಹುಡುಗನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದಾಗ ಈ ಹುಡುಗ ಬುದ್ದಿಮಾಂದ್ಯ ಹುಡುಗ ಎಂದು ಗೊತ್ತಾಗಿದ್ದು, ಈ ಹುಡುಗನ ಹೆಸರು ಹೇಮಂತ್ ಇವರ ತಂದೆ ಹೆಸರು ಕೇಳಿದರೆ ಬೆಂಗಳೂರಿನ ಲಗ್ಗೆರೆ ನಿವಾಸಿಯಾದ ವೆಂಕಟಪ್ಪ ಹಾಗೂ ಇವರ ತಾಯಿಯ ಹೆಸರು ಪವಿ ಎಂದು

ಸೋಮವಾರಪೇಟೆ: ಬುದ್ಧಿಮಾಂದ್ಯ ಬಾಲಕನ ಪೋಷಕರ ಪತ್ತೆಗೆ ಮನವಿ Read More »