ರಾಜ್ಯ

ಸೋಮವಾರಪೇಟೆ: ಬುದ್ಧಿಮಾಂದ್ಯ ಬಾಲಕನ ಪೋಷಕರ ಪತ್ತೆಗೆ ಮನವಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ನಗರದಲ್ಲಿ ಅನಾಥ ಬುದ್ಧಿಮಾಂದ್ಯ ಹುಡುಗ ರಸ್ತೆ ಉದ್ದಕ್ಕೂ ಸುತ್ತುತ್ತಿರುವುದನ್ನು ಗಮನಿಸಿದ ಸಾರ್ವಜನಿಕ ಸೋಮವಾರಪೇಟೆ ವೃತ್ತ ನಿರೀಕ್ಷಕರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳು ಬಂದು ಈ ಹುಡುಗನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದಾಗ ಈ ಹುಡುಗ ಬುದ್ದಿಮಾಂದ್ಯ ಹುಡುಗ ಎಂದು ಗೊತ್ತಾಗಿದ್ದು, ಈ ಹುಡುಗನ ಹೆಸರು ಹೇಮಂತ್ ಇವರ ತಂದೆ ಹೆಸರು ಕೇಳಿದರೆ ಬೆಂಗಳೂರಿನ ಲಗ್ಗೆರೆ ನಿವಾಸಿಯಾದ ವೆಂಕಟಪ್ಪ ಹಾಗೂ ಇವರ ತಾಯಿಯ ಹೆಸರು ಪವಿ ಎಂದು

ಸೋಮವಾರಪೇಟೆ: ಬುದ್ಧಿಮಾಂದ್ಯ ಬಾಲಕನ ಪೋಷಕರ ಪತ್ತೆಗೆ ಮನವಿ Read More »

ಕಾರವಾರ: ಹೊಳೆಯಲ್ಲಿ ಮುಳುಗಿ ಇಬ್ಬರು ಮೃತ್ಯು

ಸಮಗ್ರ ನ್ಯೂಸ್ : ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. ಸೂರಜ್ ನಾಯ್ಕ (17), ಪಾರ್ವತಿ ಶಂಕರ ನಾಯ್ಕ (35) ಮೃತರು. ಮೃತರು ಭಟ್ಕಳದ ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. ಮೃತ ಸೂರಜ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕಾರವಾರ: ಹೊಳೆಯಲ್ಲಿ ಮುಳುಗಿ ಇಬ್ಬರು ಮೃತ್ಯು Read More »

ಹಾಸನ ಬಳಿಕ ರಾಮನಗರದಲ್ಲಿ ಮಹಾ ದುರಂತ|ಈಜಲು ತೆರಳಿದ ಮೂವರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್: ಹಾಸನಸಲ್ಲಿ ಈಜಲು ತೆರಳಿದ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ನಡೆದಿತ್ತು. ಇದು ಮಾಸುವ ಮುನ್ನವೇ ಮೇ 17ರಂದು ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ. ಇವರೆಲ್ಲರೂ ರಾಮನಗರ ಟೌನ್‌‌ ನ ಸುಲ್ತಾನ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿ ಈಜಲು ಹೊಂಡಕ್ಕೆ ಇಳಿದಿದ್ದರು.

ಹಾಸನ ಬಳಿಕ ರಾಮನಗರದಲ್ಲಿ ಮಹಾ ದುರಂತ|ಈಜಲು ತೆರಳಿದ ಮೂವರು ಮಕ್ಕಳು ನೀರುಪಾಲು Read More »

ಕೆಎಸ್‌ಆರ್‌ಟಿಸಿ ಬಸ್‌ ಕಿಟಕಿಯಲ್ಲಿ ಮಹಿಳೆ ತಲೆ ಲಾಕ್..!ಕೆಲ ಕಾಲ ಮಹಿಳೆ ಪರದಾಟ

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆ ಲಾಕ್‌ ಆದ ಘಟನೆ ನಡೆದಿದೆ. ಕಿಟಿಕಿಯಿಂದ ತಲೆಹೊರ ಹಾಕಿದ್ದಾರೆ. ಆಗ ತಲೆ ಸಿಕ್ಕಿಸಿಕೊಂಡಿದೆ. ಇದರ ಪರಿಣಾಮ ಮಹಿಳೆ ಕೆಲಕಾಲ ಪರದಾಡುವಂತಾಯಿತು. ಈ ಮಹಿಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಆಗ ಉಗುಳಲು ಬಸ್‌ನ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆಯನ್ನು ಹೊರಹಾಕಿದ್ದರು. ಹೀಗೆ ಹೊರ ಹಾಕಿದ ತಲೆಯು ವಾಪಸ್‌ ಹಿಂದಕ್ಕೆ ಬಾರದೇ ಅಲ್ಲೆ ಲಾಕ್‌ ಆಗಿತ್ತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅಲ್ಲೆ ತಲೆ ಲಾಕ್ ಆಗಿತ್ತು. ಮಹಿಳೆಯ ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ಕಿಟಕಿಯಲ್ಲಿ ಮಹಿಳೆ ತಲೆ ಲಾಕ್..!ಕೆಲ ಕಾಲ ಮಹಿಳೆ ಪರದಾಟ Read More »

ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಗ್ರೇಸ್ ಮಾರ್ಕ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು.

ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸೂಚನೆ Read More »

ಬೀದರ್: ಬಿರುಗಾಳಿ ಸಹಿತ ಮಳೆ: ಮಹಾದ್ವಾರ ಕುಸಿತ

ಸಮಗ್ರ ನ್ಯೂಸ್ : ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಎರಡು ದಶಕಗಳಷ್ಟು ಹಳೆಯದಾದ ಕಬ್ಬಿಣದ ಬಸವ ಮಹಾದ್ವಾರ ಶಿಥಿಲಗೊಂಡಿತ್ತು. ಇದನ್ನು ಅರಿತಿದ್ದ ಪ್ರಯಾಣಿಕರು, ಸಾರ್ವಜನಿಕರು ಬಿರುಗಾಳಿ ಸಹಿತ ಮಳೆ ಆರಂಭವಾಗುತ್ತಲೇ ಹೋಟೆಲ್ ಸೇರಿದಂತೆ ಇತರ ಸ್ಥಳಗಳಲ್ಲಿ ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದರು. ಹಾಗಾಗಿ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವಕೀಲ ಮಹೇಶ ರಾಚೋಟೆ ತಿಳಿಸಿದರು.

ಬೀದರ್: ಬಿರುಗಾಳಿ ಸಹಿತ ಮಳೆ: ಮಹಾದ್ವಾರ ಕುಸಿತ Read More »

ಬೀದರ್: ಅಕ್ರಮ ಎಣ್ಣೆ ಮಾರಾಟ: ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್ : ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಪಲ್ಟಿಯಾದ ಲಾರಿಯಿಂದ ಅಡುಗೆ ಎಣ್ಣೆ ಕಳವಾಗಿದೆ ಎಂದು ಸುಳ್ಳು ಹೇಳಿದ್ದ ಲಾರಿ ಚಾಲಕ ಪರಮೇಶ್ವರನನ್ನು ಪೊಲೀಸರು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಲಾರಿ ಮಾಲೀಕ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು 19 ಲಕ್ಷ ರೂ. ಅಧಿಕ ಹಣ ಕೂಡಾ

ಬೀದರ್: ಅಕ್ರಮ ಎಣ್ಣೆ ಮಾರಾಟ: ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು Read More »

ಸಾರ್ವಜನಿಕರೇ ಎಚ್ಚರ/ ಹೆಚ್ಚುತ್ತಿದೆ ಡೆಂಘೀ ಜ್ವರ

ಸಮಗ್ರ ನ್ಯೂಸ್: ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ಡೆಂಘೀ ಜ್ವರ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ದರ ಶೇ.21ಕ್ಕೆ ಏರಿಕೆಯಾಗಿದೆ. ಸಾವಿರಾರು ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರವೇ ಪ್ರಸಕ್ತ ಸಾಲಿನಲ್ಲಿ ಕಳೆದ ನಾಲ್ಕೂವರೆ ತಿಂಗಳಲ್ಲಿ ಒಟ್ಟು 2,877 ಮಂದಿಗೆ ಡೆಂಘೀ ಜ್ವರ ದೃಢಪಟ್ಟಿದೆ. ಕಳೆದ ವರ್ಷ ಈ ಅವಧಿಯಲ್ಲಿ ಕೇವಲ 1,724 ಪ್ರಕರಣ ವರದಿಯಾಗಿತ್ತು. ಕಳೆದ ಒಂದು ವಾರದಲ್ಲಿ 879 ಮಂದಿಗೆ

ಸಾರ್ವಜನಿಕರೇ ಎಚ್ಚರ/ ಹೆಚ್ಚುತ್ತಿದೆ ಡೆಂಘೀ ಜ್ವರ Read More »

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ 4 ವರ್ಷಗಳಿಗೊಮ್ಮೆ ನಡೆಯುವ ಸಾರಿಗೆ ನೌಕರರ ವೇತನ ಪರಿಷ್ಕರಣೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಬಾರಿಯೂ ಶೇ. 12ರಿಂದ 15ರಷ್ಟು ವೇತನ ಹೆಚ್ಚಳ ಮಾಡುವ ಸಂಬಂಧ ಚಿಂತನೆ ನಡೆದಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಸರಕಾರ ಅಳೆದು-ತೂಗಿ ಶೇ.15ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಇದು 2020ರ ಜ. 1ರಿಂದ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಇದರಲ್ಲಿ 38 ತಿಂಗಳ ವೇತನ ಪರಿಷ್ಕರಣೆಯ ಬಾಕಿ ಇನ್ನೂ ಪಾವತಿ ಮಾಡಬೇಕಿದೆ. ಅಷ್ಟರಲ್ಲಿ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ Read More »

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಪರಿಣಾಮ, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ. ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ Read More »