ರಾಜ್ಯ

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್‌ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಅಣ್ಣಿಗೇರಿ: ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್‌ : ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ. ಬಸವ ಜಯಂತಿ ಹಿನ್ನೆಲೆ ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವ ನಡೆದಿತ್ತು. ಸಂಜೆ ಸಾವಿರಾರು ಭಕ್ತರ ಮಧ್ಯೆ ರಥೋತ್ಸವ ಕೂಡ ನಡೆದಿತ್ತು. ತೇರು ಎಳೆಯುತ್ತಿದ್ದಂತೆ ಅಲ್ಲಿ ಸೇರಿದ್ದ ಭಕ್ತರು ತೇರಿಗೆ ಉತ್ತುತ್ತಿ ಹಣ್ಣುಗಳನ್ನು ತೂರಲಾರಂಭಿಸಿದರು. ಈ ವೇಳೆ ಬಾಬಾಸಾಬ್ ಮುಕಾಶಿ ಎಂಬಾತ ಉತ್ತುತ್ತಿ ಹಣ್ಣುಗಳನ್ನು ಆರಿಸಿಕೊಳ್ಳಲು ತೇರಿನ ಹತ್ತಿರ ಧಾವಿಸಿದ ವೇಳೆ ತೇರಿನ ಚಕ್ರಕ್ಕೆ ಸಿಲುಕಿದ್ದಾನೆ. ಇದರಿಂದ

ಅಣ್ಣಿಗೇರಿ: ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತ್ಯು Read More »

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ಅಕ್ಷಯ ಅನ್ನ ಕಾರ್ಯಕ್ರಮ

ಸಮಗ್ರ ನ್ಯೂಸ್‌ : ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌ ನಂಬಿಕೆಯಿಂದ ಅನೇಕ ಜನರು ಸಾಲ ಸೋಲ ಮಾಡಿ ಒಡವೆ ವಸ್ತ್ರ ಖರೀದಿ ಮಾಡುತ್ತಾರೆ. ಆದ್ರೆ ಇದೆಲ್ಲವನ್ನೂ ಮೀರುವಂತೆ ಮೈಸೂರಿನ ಸ್ಪಂದನ ಸೇವಾ ಸಂಸ್ಥೆ ವಿಭಿನ್ನವಾಗಿ ಅಕ್ಷಯ ತೃತೀಯ ದಿನವನ್ನು ಆಚರಿಸಿದೆ. ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಮಮತಾಶೆಟ್ಟಿ ಅವರು ಅಕ್ಷಯ ತೃತೀಯ ದಿನ ನಂಜನಗೂಡಿನ‌ ಶ್ರೀ ನಂಜುಂಡೇಶ್ವರ

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ಅಕ್ಷಯ ಅನ್ನ ಕಾರ್ಯಕ್ರಮ Read More »

ಧಾರವಾಡ: ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಸಮಗ್ರ ನ್ಯೂಸ್‌ : ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’, ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ ಲಕ್ಷ್ಮಿ ಬಳ್ಳಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಚನಗಾಯನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ, ಬಿ.ಎಚ್.ನಾಗೂರ, ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ.ಡಿ.ಬಿ.ಕರಡೋಣಿ, ಕರ್ನಾಟಕ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ.ಎಮ್.ಎಸ್.ಸಾಳುಂಕೆ, ಜಿಮಖಾನಾದ ಉಪಾಧ್ಯಕ್ಷರಾದ ಡಾ.ವಿ.ಬಿ.ಸಾವಿರಮಠ, ಡಾ.ಜಗದೀಶ್ ಗುಡಗೂರ, ಡಾ. ಆರ್.ಬಿ.ಬೂದಿಹಾಳ್, ಡಾ.ಮುಕುಂದ ಲಮಾಣಿ,

ಧಾರವಾಡ: ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ Read More »

ಕ್ರೂಸರ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವು| ಹಲವರು ಗಂಭೀರ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಮತ್ತು ಗೀತಾ ದೋಡಮನಿ, ಹಾಗೂ ಮಲಾಬಾದ ಗ್ರಾಮದ ಕಸ್ತೂರಿ ತಾವಂಶಿ ಎಂದು ಗುರುತಿಸಲಾಗಿದೆ. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ದ್ರಾಕ್ಷಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಬ್ಲ್ಯಾಸ್ಟ್ ಆಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೆ

ಕ್ರೂಸರ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವು| ಹಲವರು ಗಂಭೀರ Read More »

ಕಲಬುರಗಿ: ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದು

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಕುರಿತು ಸಂಶೋಧನೆ ನಡೆಸಿರುವ ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧಕರು ಹಲವು ಮಹತ್ವದ ಸಂಗತಿಗಳನ್ನು ಕಂಡುಕೊಂಡಿದ್ದಾರೆ. ಲಮಾಣಿ, ಲಂಬಾಡಿ, ಬಂಜಾರಿ (ಬಂಜಾರ), ಸುಗಾಲಿ ಎಂಬ ವಿವಿಧ ಹೆಸರುಗಳಿಂದ ಕರೆಯಲಾಗುವ ಈ ಭಾಷೆಯನ್ನು ಮಾತನಾಡುವವರ ಪೈಕಿ ಶೇ 20ರಷ್ಟು ಭಾಷಿಕರು ಕರ್ನಾಟಕದಲ್ಲಿಯೇ ಇದ್ದಾರೆ. ಸ್ವಂತ

ಕಲಬುರಗಿ: ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದು Read More »

ಕಲಬುರಗಿ: ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ ಸಲ್ಲಿಸಿದ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್‌ : ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಸರಳ ಮತ್ತು ಸಂಕೇತವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಗತ್ತ್ ವೃತ್ತದಲ್ಲಿರುವ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ಕಲಬುರಗಿ ಶಹಾಬಜಾರ ಸಾರಂಗಮಠ, ಶ್ರೀಶೈಲ ಹಾಗೂ ಸುಲಫಲಮಠ, ಜಗದ್ಗುರು, ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಷಟಸ್ಥಲ ಧ್ವಜಾರೋಹಣ

ಕಲಬುರಗಿ: ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ ಸಲ್ಲಿಸಿದ ಜಿಲ್ಲಾಧಿಕಾರಿ Read More »

ಪ್ರಜ್ವಲ್ ರೇವಣ್ಣರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ಬಹುಮಾನ ಘೋಷಣೆ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ.ಬಹುಮಾನ ನೀಡುವುದಾಗಿ ಜನತಾ ಪಕ್ಷ ಘೋಷಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪಕ್ಷ, ಈ ಘೋಷಣೆಯ ನೋಟಿಸ್‌ ಅನ್ನು ಬೆಂಗಳೂರಿನಲ್ಲಿ ವಿವಿಧಡೆ ಅಂಟಿಸಲು ಮುಂದಾಗಿದೆ. ರೆಡ್ಡಿ ಪೆಟ್ರೋಲ್‌ ಬಂಕ್‌ನಿಂದ ಶಿವಾನಂದ ಸರ್ಕಲ್‌, ಚಾಲುಕ್ಯ ಸರ್ಕಲ್‌, ಎಂ.ಎಸ್‌.ಬಿಲ್ಡಿಂಗ್‌, ಕೆ.ಆರ್‌.ಸರ್ಕಲ್‌, ಫ್ರೀಡಂ ಪಾರ್ಕ್‌, ಮೌರ್ಯ

ಪ್ರಜ್ವಲ್ ರೇವಣ್ಣರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ಬಹುಮಾನ ಘೋಷಣೆ Read More »

ಚಿತ್ರದುರ್ಗ: ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿಗೆ ವಾಂತಿ, ಭೇದಿ

ಸಮಗ್ರ ನ್ಯೂಸ್‌ : ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ಬ್ಬಾಳ ಗ್ರಾಮದಲ್ಲಿ ಕಾಲ್ಗೆರೆ ಗ್ರಾಮದ ಸಣ್ಣರುದ್ರಪ್ಪ ಎಂಬುವರ ಮಗಳ ಮದುವೆ ಸಮಾರಂಭ ನಡೆದಿತ್ತು. ಹೆಬ್ಬಾಳು ಮಠದಲ್ಲಿ ಆಯೋಜಿಸಿದ್ದ ಮದುವೆಗೆ ಬಂದಿದ್ದ ಸಂಬಂಧಿಕರು, ನೆಂಟರು, ಸ್ನೇಹಿತರು ಭರ್ಜರಿ ಮದುವೆ ಊಟವನ್ನು ಮಾಡಿದರು.ಮದುವೆ ಊಟ ಮಾಡಿದವರಲ್ಲಿ ಸಂಜೆ ವೇಳೆ ಎಲ್ಲರೂ ವಾಂತಿ, ಭೇದಿ ಜತೆಗೆ ಸುಸ್ತು ಕಾಣಿಸಿಕೊಂಡಿದೆ. ಅನಾರೋಗ್ಯ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

ಚಿತ್ರದುರ್ಗ: ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿಗೆ ವಾಂತಿ, ಭೇದಿ Read More »

ಹತ್ತನೇ ತರಗತಿ ಹುಡುಗಿಯ ರುಂಡ ಕತ್ತರಿಸಿದಾತ ಅರೆಸ್ಟ್

ಸಮಗ್ರ ನ್ಯೂಸ್: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ.

ಹತ್ತನೇ ತರಗತಿ ಹುಡುಗಿಯ ರುಂಡ ಕತ್ತರಿಸಿದಾತ ಅರೆಸ್ಟ್ Read More »