ರಾಜ್ಯ

ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್‌ ಅವರಿಗೆ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಭೀಮಣ್ಣ ನಾಯ್ಕ್ ಸೇರಿ ಅವರ ಜೊತೆಯಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ನಗರಸಭೆ ಪೌರಾಯುಕ್ತ ಕಾಂತರಾಜ ಜತೆ ಶಾಸಕ ಬುಧವಾರ ತೆರಳಿದ್ದರು. ಈ ವೇಳೆ ಸಮೀಪದಲ್ಲಿದ್ದ ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಾಸಕ ಭೀಮಣ್ಣ ನಾಯ್ಕ್‌, ಪೌರಾಯುಕ್ತ ಕಾಂತರಾಜ, ಸದಸ್ಯ ಖಾದರ್ ಆನವಟ್ಟಿ ಮತ್ತಿತರರು

ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ| ಆಸ್ಪತ್ರೆಗೆ ದಾಖಲು Read More »

ಕರ್ನಾಟಕದಲ್ಲಿ ಪದವಿ ತರಗತಿ ಮೂರು ವರ್ಷಕ್ಕಷ್ಟೇ ಸೀಮಿತ| ಎನ್ಇಪಿ ಶಿಫಾರಸು ಕೋರ್ಸ್ ರದ್ದುಪಡಿಸಿದ‌ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಸಾರ್ವಜನಿಕ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಶಿಫಾರಸು ಮಾಡಿದ ಎನ್‌ಇಪಿ – 2020 ಅನ್ನು ಕರ್ನಾಟಕ ಸರ್ಕಾರ ಬುಧವಾರ ರದ್ದುಗೊಳಿಸಿದೆ. 2024-25ರ ಶೈಕ್ಷಣಿಕ ವರ್ಷಕ್ಕೆ ಮೂರು ವರ್ಷಗಳ ಪದವಿ ಕಾರ್ಯಕ್ರಮವನ್ನು ಮತ್ತೆ ಪರಿಚಯಿಸಲಾಗಿದೆ. ಎನ್‌ಇಪಿ ಪ್ರಕಾರ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಮುಂದುವರಿಸುವಲ್ಲಿ ಸ್ಪಷ್ಟತೆಯ ಕೊರತೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಕಾಲೇಜುಗಳು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಪ್ರೊಫೆಸರ್ ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ

ಕರ್ನಾಟಕದಲ್ಲಿ ಪದವಿ ತರಗತಿ ಮೂರು ವರ್ಷಕ್ಕಷ್ಟೇ ಸೀಮಿತ| ಎನ್ಇಪಿ ಶಿಫಾರಸು ಕೋರ್ಸ್ ರದ್ದುಪಡಿಸಿದ‌ ರಾಜ್ಯ ಸರ್ಕಾರ Read More »

ಕಡಿಮೆ ಬೆಲೆಗೆ ಬೊಲೆರೋ ಆಸೆ ತೋರಿಸಿ ಚಾಲಕನಿಗೆ 131500 ರೂ. ಪಂಗನಾಮ! ನಕಲಿ ಯೋಧನ ಹೆಸರಿನಲ್ಲಿ ಆನ್ ಲೈನ್ ಟೋಪಿ!!

ಸಮಗ್ರ ನ್ಯೂಸ್: ಖತರ್ನಾಕ್ ಚೋರನೊಬ್ಬ ಚಾಲಕನಿಗೆ ಕಡಿಮೆ ಬೆಲೆಗೆ ಐಷಾರಾಮಿ ಬೊಲೆರೋ ವಾಹನ ಮಾರಾಟ ಮಾಡುವುದಾಗಿ ಆಮಿಷವೊಡ್ಡಿ ಹಣ ಪಡೆದು ಚಳ್ಳೆಹಣ್ಣು ತಿನ್ನಿಸಿರುವ ದೋಖಾ ಪ್ರಕರಣ ಬೆಳಕಿಗೆ ಬಂದಿದೆ.   ಯಾರದ್ದೋ ಬೊಲೆರೋ ತೋರಿಸಿದ್ದ ವಂಚಕ!ಸುಂಟಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ವಿ.ಆರ್. ಸುರೇಶ್ ಎಂಬುವವರಿಗೆ ಏ. 30ರಂದು ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ನನ್ನ ಹೆಸರು ರಮೇಶ್, ಭಾರತೀಯ ಸೇನೆಯ  ಪಾರ್ಸೆಲ್ ವಿಭಾಗ ಬೆಂಗಳೂರಿನಲ್ಲಿ ಡ್ಯೂಟಿ ಮಾಡಿಕೊಂಡಿದ್ದೇನೆ. ನನಗೆ ಜಮ್ಮು ಕಾಶ್ಮೀರಕ್ಕೆ ಟ್ರಾನ್ಸ್ ಫರ್ ಆಗಿದೆ.  ನನ್ನತ್ತಿರ ಬೊಲೆರೋ

ಕಡಿಮೆ ಬೆಲೆಗೆ ಬೊಲೆರೋ ಆಸೆ ತೋರಿಸಿ ಚಾಲಕನಿಗೆ 131500 ರೂ. ಪಂಗನಾಮ! ನಕಲಿ ಯೋಧನ ಹೆಸರಿನಲ್ಲಿ ಆನ್ ಲೈನ್ ಟೋಪಿ!! Read More »

ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ| ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಸಮಗ್ರ ನ್ಯೂಸ್: ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬಿಕನಹಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಯುವಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಮೇ.18ರಂದು ಬಿಡದಿಯ ನುರಿತ ಶಿಲ್ಪಿಯಿಂದ ಗ್ರಾಮದಲ್ಲಿ ನಿರ್ಮಾಣಗೊಂಡಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣನ ಕತ್ತಿ, ಕೈ, ಕಾಲು ಸೇರಿದಂತೆ ವಿವಿಧ ಭಾಗದಲ್ಲಿ ಹಾನಿಗೊಳಿಸಿ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಘಟನೆಯ ಕುರಿತು ಮಾತನಾಡಿದ ಗ್ರಾಮದ ಮುಖಂಡ ಬಿಕನಹಳ್ಳಿ ಗ್ರಾಮದ ಹಿರೇಗೌಡ ಸರ್ವ ಸಮುದಾಯ ನಾಯಕ ಮತ್ತು

ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ| ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ Read More »

ಕೋಲಾರ: ಭಾರೀ ಮಳೆಗೆ ಬೈಕ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟ ಘಟನೆ ಕೋಲಾರ ಗಡಿಯ ದೆಂಕಣಿಕೋಟೆ ಅಂತೇವನಪಲ್ಲಿ ಗ್ರಾಮದಲ್ಲಿ ಬಳಿ ನಡೆದಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕ್ನಲ್ಲಿದ್ದ ಇಬ್ಬರ ಪೈಕಿ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ತೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯು ಕೋಲಾರದ-

ಕೋಲಾರ: ಭಾರೀ ಮಳೆಗೆ ಬೈಕ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಮೃತ್ಯು Read More »

ಹುಬ್ಬಳ್ಳಿ: ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ಸಮಗ್ರ ನ್ಯೂಸ್ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀರ್ ಎಂಬುವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತಷ್ಟು ವಿಡಿಯೋಗಳು ವೈರಲ್ ಆಗಿವೆ. ಗೌಪ್ಯ ಮತದಾನ ಮಾಡಬೇಕೆಂದು ನಿಯಮವಿದ್ದರೂ ನಿಯಮಗಳನ್ನು ಉಲ್ಲಂಘನೆ ಮಾಡಿದ ಕೆಲ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿರುವ ವಿಡಿಯೋ ವೈರಲ್ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೊಬೈಲ್ ಉಪಯೋಗಕ್ಕೆ ಅವಕಾಶ ಇಲ್ಲ. ಆದರೂ ಮೊಬೈಲ್ನ್ನ ಮತಗಟ್ಟೆಗೆ ತೆಗೆದುಕೊಂಡ ಹೋಗಿ ಮತದಾನವನ್ನ ಬಹಿರಂಗ

ಹುಬ್ಬಳ್ಳಿ: ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ Read More »

ಚಾಮರಾಜನಗರ: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

ಸಮಗ್ರ ನ್ಯೂಸ್ : ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ ಹಿಂದಿರುಗಿದ ಘಟನೆ ನಡೆದಿದೆ. ಸುಡು ಬಿಸಿಲ ಬೇಗೆಗೆ ಕಾಡಿನಲ್ಲಿ ನೀರಿಲ್ಲದೆ ವನ್ಯಪ್ರಾಣಿಗಳ ಐರಾಣಾಗಿ ಹೋಗಿದ್ದು ಇತಿಹಾಸ ಪ್ರಸಿದ್ಧ ಮಲೇ ಮಹದೇಶ್ವರ ಬೆಟ್ಟದ ಕಾಡಂಚಿನ ಸಮೀಪದ ಹಾಡಿಯೊಂದರ ಜಾನುವಾರುಗಳು ಕುಡಿಯುವ ನೀರಿನ ತೊಟ್ಟಿಯ ಸಮೀಪ ಬಂದ ಕಾಡಾನೆ ಹಿಂಡು ನೀರನ್ನ ಕುಡಿದು ದಾಹ ತೀರಿಸಿಕೊಂಡಿವೆ. ಕಾಡಾನೆಗಳ ಹಿಂಡು ನೀರು ಕುಡಿಯುತ್ತಿರುವ ದ್ರಶ್ಯವನ್ನ ಸ್ಥಳೀಯರೊಬ್ಬರು

ಚಾಮರಾಜನಗರ: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು Read More »

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಗೆದ್ದು ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ (ಮೇ.8) ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ Read More »

ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು… ಮೇ 14 ರವರೆಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಪೆನ್‌ಡ್ರೈವ್‌ ಪ್ರಕರಣಕ್ಕೆ ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ವಿಚಾರವಾಗಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ನ್ಯಾಯಾಂಗ ಬಂಧನವಾಗಿದೆ.ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ. ಪರಪ್ಪನ ಅಗ್ರಹಾರ ಜೈಲಿಗೆ ರೇವಣ್ಣ ಶಿಫ್ಟ್. ಕೆ.ಆರ್ ನಗರ ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು.ACMM ನ್ಯಾಯಾಲಯದಿಂದ ಆದೇಶಿಸಲಾಗಿದೆ. 7 ದಿನಗಳ ಕಾಲ ಮಾಜಿ ಸಚಿವ ರೇವಣ್ಣ ಕಂಬಿ ಹಿಂದೆ. ಅಮಾವಾಸ್ಯೆ ದಿನವೇ ರೇವಣ್ಣ ಜೈಲಿಗೆ. SIT ಅಧಿಕಾರಿಗಳು ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ

ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು… ಮೇ 14 ರವರೆಗೆ ನ್ಯಾಯಾಂಗ ಬಂಧನ Read More »

ಚಿಕ್ಕಮಗಳೂರು : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್

ಸಮಗ್ರ ನ್ಯೂಸ್ : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ. ರಾಜ್ಯವ್ಯಾಪಿ ಪೆನ್ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ. ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಇವರೇ ಎಂದು ಕಿಡಿಕಾರಿದರು. ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ

ಚಿಕ್ಕಮಗಳೂರು : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್ Read More »