ರಾಜ್ಯ

ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಶಾಲಾ ಪರೀಕ್ಷೆ ಮತ್ತು‌ ಮೌಲ್ಯಮಾಪನ ಮಂಡಳಿ ನಡೆಸಿದ್ದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ. ಈ ಕುರಿತಂತೆ ಮಂಡಳಿಯು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಧಿಕೃತ ಫಲಿತಾಂಶ ವಿವರವನ್ನು ಮೇ. ೯ರಂದು ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಗುವುದು ಎಂದು ತಿಳಿಸಿದೆ. ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲು

ಸಮಗ್ರ ನ್ಯೂಸ್‌ : ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದನು. ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದನು. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಸ್ಥಳೀಯರು ಹಳ್ಳದಲ್ಲಿ ವಿನಾಯಕನ ಮೃತದೇಹವನ್ನು ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ಪ್ರಕರಣ

ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲು Read More »

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ಗಾಂಧಿ ಚೌಕ್ದಲ್ಲಿನ ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ ಬಟ್ಟೆ ಅಂಗಡಿಗೆ ನುಗ್ಗಿದೆ. ಇದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿ ಪುಡಿ, ಪುಡಿಯಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು Read More »

108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿ‌ಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು

ಸಮಗ್ರ ನ್ಯೂಸ್: ಮೂರು ತಿಂಗಳ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ 108 ಆರೋಗ್ಯ ಕವಚದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಂಬ್ಯುಲೆನ್ಸ್‌ ಸಿಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಮಂಗಳವಾರ ಕೈ ಬಿಟ್ಟಿದ್ದಾರೆ. ಆರೋಗ್ಯ ಇಲಾಖೆ ಆಯುಕ್ತ ಡಾ| ರಣದೀಪ್‌ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108 ಸಿಬಂದಿ, ತಮ್ಮ ಸಮಸ್ಯೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಯಾಗಿ ಸರಕಾರದ ನಿಲುವನ್ನು ಪ್ರತಿಪಾದಿಸಿದ ಆಯುಕ್ತರು, ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ. ಸಿಬಂದಿಗೆ ವೇತನ ಪಾವತಿ ಮಾಡಬೇಕಿರುವ ಜಿವಿಕೆ

108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿ‌ಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು Read More »

ರಿಲಾಕ್ಸ್ ಮೂಡ್ ನಲ್ಲಿ ಸಿಎಂ ಡಿಸಿಎಂ| ರೆಸಾರ್ಟ್ ನಲ್ಲಿ ಡಿಕೆಶಿ, ಊಟಿಯಲ್ಲಿ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಲೋಕ ಚುನಾವಣೆಯ ಮೊದಲ ಹಂತ ಮತ್ತು ಎರಡನೇ ಹಂತ ಎಲೆಕ್ಷನ್ ರಾಜ್ಯದಲ್ಲಿ ಏಪ್ರೀಲ್ 26 ಮತ್ತು ಮೇ 7 ರಂದು ನಡೆದಿದ್ದು ಇದೀಗ ಮುಕ್ತಾಯವಾಗಿದೆ, ಇನ್ನೂ ರಿಸಲ್ಟ್ ಗಷ್ಟೆ ಕಾಯಬೇಕಿದೆ. ಇದೇ ಸಂದರ್ಭದಲ್ಲಿ ಎಲ್ಲ ಪಕ್ಷಗಳು ಕರ್ನಾಟಕದಲ್ಲಿ ರಾಜ್ಯಾದ್ಯಂತ ಪ್ರಚಾರ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಿರಂತರವಾಗಿ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದರು. ಕಳೆದ ಎರಡೂ ತಿಂಗಳಿನಿಂದ ರಾಜ್ಯದ ಮೂಲೆ-ಮೂಲೆಗೆ ತೆರಳಿ ತಮ್ಮ ಅಭ್ಯರ್ಥಿಗಳ ಪ್ರಚಾರ

ರಿಲಾಕ್ಸ್ ಮೂಡ್ ನಲ್ಲಿ ಸಿಎಂ ಡಿಸಿಎಂ| ರೆಸಾರ್ಟ್ ನಲ್ಲಿ ಡಿಕೆಶಿ, ಊಟಿಯಲ್ಲಿ ಸಿದ್ದರಾಮಯ್ಯ Read More »

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ..!

ಸಮಗ್ರ ನ್ಯೂಸ್; ಬೆಂಗಳೂರಿನಲ್ಲಿ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭೀಕರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಕಾರ್ತಿಗೇಯನ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಕಾರ್ತಿಗೇಯನ್ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ಆಗಿ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ..! Read More »

ಎಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು| ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾಕ್ಕೆ ಶಿಫ್ಟ್

ಸಮಗ್ರ ನ್ಯೂಸ್; ಪೆನ್‌ಡ್ರೈವ್‌ ಪ್ರಕರಣಕ್ಕೆ ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಸಂಬಂಧ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಹೊಟ್ಟೆನೋವು ಹಾಗೂ ಎದೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಡಿಸ್ಟಾರ್ಜ್ ಮಾಡಲಾಯಿತು. ಡಾ. ದಿವ್ಯ ಪ್ರಕಾಶ್ ನೇತೃತ್ವದ ತಂಡ ತಪಾಸಣೆ ನಡೆಸಿ ಸದ್ಯಕ್ಕೆ ರೇವಣ್ಣ ಆರಾಮಾಗಿದ್ದಾರೆ. ಆರೋಗ್ಯ ಸ್ಟೇಬಲ್ ಆಗಿದೆ ಅಂತಾ ವೈದ್ಯರು ತಿಳಿಸಿದ್ದಾರೆ. ಸಂಜೆ

ಎಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು| ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾಕ್ಕೆ ಶಿಫ್ಟ್ Read More »

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್‌ ಮೇಲೆ ಇದೀಗ ಅದರ ತಂತ್ರವೇ ತಿರುಮಂತ್ರವಾಗಿ ಪರಿಣಮಿಸಿದೆ. ಏಕೆಂದರೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ಆಡಿಯೋ ಆಚೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಕಾರಣ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಪೋಸ್ಟರ್‌ಗಳು ಎಲ್ಲೆಡೆ ರಾಜಾಜಿಸುತ್ತಿವೆ. ನಗರದ ಅನೇಕ ಕಡೆ ರಾತ್ರೋರಾತ್ರಿ ಕೆಲವರು ಪೋಸ್ಟರ್‌ಗಳನ್ನು ಅಂಟಿಸಿ ಮುಖ್ಯಮಂತ್ರಿ

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ Read More »

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಶಾಂತಿಯುತ| ಉತ್ಸಾಹದಿಂದ ಮತ ಚಲಾಯಿಸಿದ ಉತ್ತರ ಕರ್ನಾಟಕ ಮಂದಿ

ಸಮಗ್ರ ನ್ಯೂಸ್: ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂತು. ಸಂಜೆ 5 ಗಂಟೆ ವೇಳೆಗೆ ಸರಾಸರಿ ಶೇ.66.05ರಷ್ಟು ಮತದಾನವಾಗಿ, ಮತದಾನ ಮಕ್ತಾಯದ ವೇಳೆಗೆ ಶೇ.70ಕ್ಕೂ ಹೆಚ್ಚು ಮತದಾನವಾಗಿದ್ದು,ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಶಾಂತಿಯುತ| ಉತ್ಸಾಹದಿಂದ ಮತ ಚಲಾಯಿಸಿದ ಉತ್ತರ ಕರ್ನಾಟಕ ಮಂದಿ Read More »

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಸಮಗ್ರ ನ್ಯೂಸ್‌ : ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಮೊದಲಿಗೆ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಮುಂದಿನ ಬಟನ್ ಒತ್ತಿದ್ದಂತೆ ಮಾಡುವ ಮತದಾನ ನಂತರ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ಮತ ಹಾಕಿ ಸನ್ನೆ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯಾರಿಗೆ ಮತದಾನ ಮಾಡಲಾಗಿದೆ ಎಂಬುದುನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಕಾನೂನಿನ ಪ್ರಕಾರ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಆದರೆ, ಮತದಾರ

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ Read More »