ರಾಜ್ಯ

ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ

ಸಮಗ್ರ ನ್ಯೂಸ್‌ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶಾಸಕನಾಗಿರಲು ನಾಲಾಯಕ್‌ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಖಂಡ್ರೆ ಕುಟುಂಬ ಲಿಂಗಾಯತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಯತ್ನಾಳ ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ್ದೇ ಶತಾಯುಷಿ ಭೀಮಣ್ಣ

ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ Read More »

ಬೀದರ್: ಮುಸ್ಲಿಮರಿಗೆ ಮೀಸಲಾತಿ| ಬಿಜೆಪಿ ಅಪಪ್ರಚಾರ ಮಾಡುತ್ತಿದೆ; ಮಾವಳ್ಳಿ ಶಂಕರ್‌

ಸಮಗ್ರ ನ್ಯೂಸ್‌ : ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂದು ಆರ್‌ಎಸ್‌ಎಸ್‌, ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಹೀಗೆ ಮಾಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ’ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡ ಮಾವಳ್ಳಿ ಶಂಕರ್‌ ಹೇಳಿದರು. ಅವರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು, ದೇಶದಲ್ಲಿನ ಎಲ್ಲ ಬಿಕ್ಕಟ್ಟುಗಳಿಗೆ ಆರ್‌ಎಸ್‌ಎಸ್‌ ಕಾರಣ. ಜನ ಹಸಿವು, ಅರಾಜಕತೆಯಿಂದ ನರಳುತ್ತಿರಬೇಕೆನ್ನುವುದು ಇವರ ಅಜೆಂಡಾ. ಇದನ್ನು ಸ್ವತಃ ಆರ್‌ಎಸ್‌ಎಸ್‌ನ

ಬೀದರ್: ಮುಸ್ಲಿಮರಿಗೆ ಮೀಸಲಾತಿ| ಬಿಜೆಪಿ ಅಪಪ್ರಚಾರ ಮಾಡುತ್ತಿದೆ; ಮಾವಳ್ಳಿ ಶಂಕರ್‌ Read More »

ಈಶ್ವರಪ್ಪ ಪುತ್ರ ಕಾಂತೇಶ್ ರದ್ದೂ ಅಶ್ಲೀಲ ವಿಡಿಯೋ ಇದ್ಯಾ? ಕೋರ್ಟ್ ನಿಂದ ಸ್ಟೇ ತಂದಿದ್ಯಾಕೆ ಮಾಜಿ ಡಿಸಿಎಂ ಪುತ್ರ!?

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಕೆಎಸ್ ಈಶ್ವರಪ್ಪ ಅವರ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ. ಲೋಕಸಭೆ ಚುನಾವಣೆ

ಈಶ್ವರಪ್ಪ ಪುತ್ರ ಕಾಂತೇಶ್ ರದ್ದೂ ಅಶ್ಲೀಲ ವಿಡಿಯೋ ಇದ್ಯಾ? ಕೋರ್ಟ್ ನಿಂದ ಸ್ಟೇ ತಂದಿದ್ಯಾಕೆ ಮಾಜಿ ಡಿಸಿಎಂ ಪುತ್ರ!? Read More »

ಬಾಲಕಿಯೊರ್ವಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್

ಸಮಗ್ರ ನ್ಯೂಸ್: ರಶ್ಮಿ ಎಂಬುವವರ ಕೈಯಲ್ಲಿ ರೆಡ್ಮಿ ಮೊಬೈಲ್ ಸ್ಪೋಟಗೊಂಡ ಘಟನೆ ಮಡಿಕೇರಿಯ ಮಂಗಳದೇವಿ ನಗರದ ನಡೆದಿದೆ. ಸಾರ್ವಜನಿಕರು ಈ ರೀತಿಯ ರೆಡ್ಮಿ ಹಾಗೂ ಇನ್ನಿತರ ಮೊಬೈಲ್ ಗಳನ್ನು ಉಪಯೋಗಿಸುವ ಸಂದರ್ಭ ಎಚ್ಚರವಹಿಸಬೇಕು ಹಾಗೂ ಆದಷ್ಟು ಮಕ್ಕಳ ಕೈಯಲ್ಲಿ ಮೊಬೈಲ್ ನೀಡುವುದನ್ನು ನಿಲ್ಲಿಸಿ, ಈಗಿನ ತಾಪಮಾನ ಹೆಚ್ಚಿರುವುದರಿಂದ ಮೊಬೈಲ್ ಗಳು ಬಿಸಿಯಾಗುತ್ತಿವೆ. ಹಾಗೂ ಚಾರ್ಜ್ ಹಾಕಿ ಉಪಯೋಗ ಮಾಡುವುದು ಒಳ್ಳೆಯದಲ್ಲ. ಈ ರೀತಿಯ ಮೊಬೈಲ್ ಬಳಕೆ ಬಗ್ಗೆ ಎಚ್ಚರ ವಹಿಸಬೇಕು.

ಬಾಲಕಿಯೊರ್ವಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್ Read More »

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ಸಮಗ್ರ ನ್ಯೂಸ್‌ : ಪವಾಡ ಪುರುಷ ಮಲೆ ಮಹದೇಶ್ವರ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ, ಮೂರು ಕೋಟಿ ನಾಲ್ಕು ಲಕ್ಷದ ಐವತ್ತೇಳು ಸಾವಿರದ ಇನ್ನೂರು ನಲವತ್ತಾರು ರೂಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ, ಸಾಲೂರು ಬೃಹ್ಮನ್ಮಠಾಧಿಪತಿ ಶ್ರೀಶಾಂತ ಮಲ್ಲಿಕಾರ್ಜುನಸ್ವಾಮಿ ಸಾನಿಧ್ಯದಲ್ಲಿ ಹುಂಡಿ

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ Read More »

ವಿಜಯಪುರ: ಲೋಕಸಭೆ ಚುನಾವಣೆ ಮಹತ್ವ ಈಗ ಅರ್ಥವಾಗಿದೆ-ಸುನೀಲಗೌಡ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯ ಮಹತ್ವವನ್ನು ನಮ್ಮ ಜನ ಅರಿಯುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು. ಅವರು ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಚುನಾವಣಾ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಪಂ, ವಿಧಾನಸಭೆಯಂತೆ ಲೋಕಸಭೆ ಕ್ಷೇತ್ರವೂ ಅಷ್ಟೇ ಮುಖ್ಯವಾಗಿದೆ ಎಂದರು. ನಮ್ಮ ಸಮಸ್ಯೆ ಪರಿಹಾರಕ್ಕೆ ಸಂಸದರೂ ಅಷ್ಟೇ ಅಗತ್ಯ. ಜಿಲ್ಲೆಯಲ್ಲಿ ನೀರಾವರಿ ಯೋಜನೆಯಿಂದ ಬಹಳ ಅಭಿವೃದ್ಧಿಯಾಗಿದೆ. ರಾಜ್ಯ ಸರಕಾರ, ಸಚಿವ ಎಂ.ಬಿ.ಪಾಟೀಲರ ಕಳಕಳಿಯಿಂದ ಇದು ಸಾಧ್ಯವಾಗಿದೆ. ಹಾಗೆಯೇ

ವಿಜಯಪುರ: ಲೋಕಸಭೆ ಚುನಾವಣೆ ಮಹತ್ವ ಈಗ ಅರ್ಥವಾಗಿದೆ-ಸುನೀಲಗೌಡ Read More »

‘ಕೋವಿಶೀಲ್ಡ್’ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ| ಅಡ್ಡಪರಿಣಾಮ ಇದೆ ಎಂದ ಕಂಪೆನಿ!!

ಸಮಗ್ರ ನ್ಯೂಸ್: ಅಸ್ಟ್ರಾಜೆನೆಕಾ ಮಹತ್ವದ ತಿರುವಿನಲ್ಲಿ, ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆಯಿಂದ ಉಂಟಾದ ಗಂಭೀರ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿ ವರ್ಗ-ಕ್ರಮ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆಯ ಅಡ್ಡಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ. ಕಂಪನಿಯ ಪ್ರವೇಶವು ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಒಂದು ಪ್ರಮುಖ ಕ್ಷಣವನ್ನು

‘ಕೋವಿಶೀಲ್ಡ್’ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ| ಅಡ್ಡಪರಿಣಾಮ ಇದೆ ಎಂದ ಕಂಪೆನಿ!! Read More »

“ನಾವಂತೂ ಪ್ರಜ್ವಲ್ ಪರ ನಿಲ್ಲೋದಿಲ್ಲ”| ಸೆಕ್ಸ್ ಪ್ರಕರಣ ಕುರಿತು ಅಮಿತ್ ಶಾ ಮಹತ್ವದ ಹೇಳಿಕೆ

ಸಮಗ್ರ ನ್ಯೂಸ್: ಸದ್ಯ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ. ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿ ಜೊತೆಗೆ ನಿಂತಿದ್ದೇವೆ. ರೇವಣ್ಣ, ಪ್ರಜ್ವಲ್ ವಿರುದ್ಧದ ಆರೋಪ ಆಧಾರರಹಿತ, ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಮಹಿಳೆಯರ ಮೇಲಿನ ಅಪಮಾನ ಸಹಿಸುವುದಿಲ್ಲ, ನಾವು ಪ್ರಜ್ವಲ್ ಪರ ನಿಲ್ಲೋದಿಲ್ಲ, ಎಂದು ಹೇಳಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ವಿಚಾರವಾಗಿ ಕಾಂಗ್ರೆಸ್ ವಿರುದ್ಧ

“ನಾವಂತೂ ಪ್ರಜ್ವಲ್ ಪರ ನಿಲ್ಲೋದಿಲ್ಲ”| ಸೆಕ್ಸ್ ಪ್ರಕರಣ ಕುರಿತು ಅಮಿತ್ ಶಾ ಮಹತ್ವದ ಹೇಳಿಕೆ Read More »

ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ/ ಸುಳಿವು ನೀಡಿದ ಈಶ್ವರಪ್ಪ

ಸಮಗ್ರ ನ್ಯೂಸ್: ಹಿಂದುಳಿದವರಿಗೆ, ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪ್ರಾರಂಭಿಸಿದ್ದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅಮಿತ್ ಶಾ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಬೇಕು ಅಂತ ಹೇಳಿದ್ದಕ್ಕೆ ಮರು ಮಾತನಾಡದೆ ನಿಲ್ಲಿಸಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಈಗ ಇದ್ದಿದ್ದರೆ ಹಿಂದುಳಿದವರಿಗೆ ನ್ಯಾಯ ಸಿಗುತ್ತಿತ್ತೇನೋ. ನಾನು ಯಾವಾಗಲೂ ಹಿರಿಯರ ಮಾತು ಮೀರಿರಲಿಲ್ಲ ಹೀಗಾಗಿ ಕೈಬಿಟ್ಟೆ. ನಾನು ಆವಾಗಲೇ ಅವರ ಮಾತು ಮೀರಿದ್ದರೆ ಸರಿ ಹೋಗುತಿತ್ತು. ಹೀಗೆ ಹೇಳುವ ಮೂಲಕ ಕೆಎಸ್

ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ/ ಸುಳಿವು ನೀಡಿದ ಈಶ್ವರಪ್ಪ Read More »

ಮಾಲಿನ್ಯ ನಿಯಂತ್ರಣ/ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶ

ಸಮಗ್ರ ನ್ಯೂಸ್: ಪರಿಸರ ಸಂರಕ್ಷಣೆ ದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ, 2023-24ನೇ ಸಾಲಿನಲ್ಲಿ ನಿಯಮ ಉಲ್ಲಂಘಿಸಿದ 131 ಉದ್ದಿಮೆಗಳ ಸ್ಥಗಿತಕ್ಕೆ ಹಾಗೂ ಕ್ರಮಕ್ಕೆ ಆದೇಶಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಡಿರುವ ಆದೇಶದಲ್ಲಿರುವಂತೆ ಬೆಂಗಳೂರಿನಲ್ಲಿನ ಉದ್ದಿಮೆಗಳ ಸಂಖ್ಯೆಯೇ ಹೆಚ್ಚಿದೆ. 131ರ ಪೈಕಿ 100ಕ್ಕೂ ಹೆಚ್ಚಿನ ಉದ್ದಿಮೆಗಳು ಬೆಂಗಳೂರಿನದ್ದಾಗಿವೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹೆಚ್ಚಿವೆ. ಅಲ್ಲದೆ, ಅವುಗಳು ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯ ನಿಯಂತ್ರಣ

ಮಾಲಿನ್ಯ ನಿಯಂತ್ರಣ/ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶ Read More »