ರಾಜ್ಯ

ಬೀದರ್:ನೀರಿಗಾಗಿ ವನ್ಯಪ್ರಾಣಿಗಳ ಪರದಾಟ

ಸಮಗ್ರ ನ್ಯೂಸ್‌ : ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ಇಲ್ಲಿ ಕೃಷ್ಣಮೃಗ, ನವಿಲು, ನರಿ, ಮೊಲ, ತೋಳ, ಕಾಡು ಹಂದಿ, ಮುಳ್ಳು ಹಂದಿ ಸೇರಿದಂತೆ 10 ರಿಂದ 12 ಪ್ರಭೇದದ ವನ್ಯವೀವಿಗಳಿವೆ. ಆದರೆ ಈ

ಬೀದರ್:ನೀರಿಗಾಗಿ ವನ್ಯಪ್ರಾಣಿಗಳ ಪರದಾಟ Read More »

ವಿಜಯಪುರ: ಅನುಭವಿ ಆಲಗೂರ್ ಜಯದಿಂದ ಜಿಲ್ಲೆ ಅಭಿವೃದ್ಧಿ;ಯಶವಂತರಾಯಗೌಡ ಪಾಟೀಲ

ಸಮಗ್ರ ನ್ಯೂಸ್‌ : ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ವಿಜಯಪುರ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ತಾಲೂಕಿನ ಅಗರಖೇಡ ಹಾಗೂ ಹಿರೇ ಬೇನೂರಲ್ಲಿ ನಡೆದ ಜಿಪಂ ವ್ಯಾಪ್ತಿಯ ಲೋಕಸಭೆ ಚುನಾವಣೆ ಸಭೆಯಲ್ಲಿ ಮಾತನಾಡಿ, ಭೀಮೆಯ ದಡದ ಗ್ರಾಮಗಳಿಗೆ ಹಲವು ಅನುಕೂಲ ಮಾಡಿಕೊಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನೀರಾವರಿ, ಪ್ರವಾಸೋದ್ಯಮ, ಲಿಂಬೆ ಬೆಳೆಗಳಿಗೆ ಪ್ರಾತಿನಿಧ್ಯ ಸೇರಿದಂತೆ ನೂರಾರು ಕೆಲಸಗಳು ತಮಗಾಗಲಿವೆ. ಕೆಲಸ ಮಾಡುವವರಿಗೆ ಮತ

ವಿಜಯಪುರ: ಅನುಭವಿ ಆಲಗೂರ್ ಜಯದಿಂದ ಜಿಲ್ಲೆ ಅಭಿವೃದ್ಧಿ;ಯಶವಂತರಾಯಗೌಡ ಪಾಟೀಲ Read More »

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.. ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯು ವ್ಯಕ್ತವಾಗಿದೆ. ಮೃತದೇಹವನ್ನು ನೋಡಿ ಇಂದು ಬೆಳಗ್ಗೆ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23),

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು Read More »

ಬೀದರ್‌ : ʼನೇಹಾ ಹತ್ಯೆ ಕೇಸ್‌ನಲ್ಲಿ ಬಿಜೆಪಿಯವರಿಗೆ ಮಾತಾಡೋದಕ್ಕೆ ಯಾವುದೇ ನೈತಿಕ ಹಕ್ಕಿಲ್ಲʼ

ಸಮಗ್ರ ನ್ಯೂಸ್‌ : ನೇಹಾ ಹತ್ಯೆಯನ್ನ ಈಗಾಗಲೇ ಖಂಡಿಸಿದ್ದೇನೆ, ಈಗಲೂ ಖಂಡಿಸುತ್ತೇನೆ ಎಂದು ನಗರದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದೇವೆ, ವಿಶೇಷ ನ್ಯಾಯಲಯ ಮಾಡಬೇಕು ಅಂತ ಹೇಳಿದ್ದೇನೆ. ಅಪರಾಧಿಗೆ ಕಠಿಣ ಶಿಕ್ಷೆಯಾಗಬೇಕು, ಘೋರ ಶಿಕ್ಷ ಕೊಡಲು ಪ್ರಯತ್ನ ಮಾಡಬೇಕೆಂದು ಮಾತಾಡಿದ್ದೇನೆ. ಅವರ ತಂದೆ ಜೊತೆಗೂ ಮಾತಾಡಿ, ಆರೋಪಿಗೆ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದೆವೆಂದು ಹೇಳಿದ್ದೇನೆ. ಬಿಜೆಪಿಯವರು ಒಂದಾದರೂ ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..? ನೇಹಾ ಪ್ರಕರಣವನ್ನ ಸಿಐಡಿ ತನಿಖೆ ನಡೆಸುತ್ತಿದೆ, ಬಿಜೆಪಿಯವರಿಗೆ

ಬೀದರ್‌ : ʼನೇಹಾ ಹತ್ಯೆ ಕೇಸ್‌ನಲ್ಲಿ ಬಿಜೆಪಿಯವರಿಗೆ ಮಾತಾಡೋದಕ್ಕೆ ಯಾವುದೇ ನೈತಿಕ ಹಕ್ಕಿಲ್ಲʼ Read More »

ದಾವಣಗೆರೆ : ತಾಯಿಯ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಂದ ಮಗ

ಸಮಗ್ರ ನ್ಯೂಸ್‌ : ಕುಡುಕ ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ತಾಯಿ ಸಾವಿಗೆ ತಂದೆಯೇ ಕಾರಣವೆಂದು ಸಿಟ್ಟಾದ ಮಗ ಕಲ್ಲು ಎತ್ತಿ ಹಾಕಿ ತಂದೆಯನ್ನೇ ಕೊಂದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ‌ ಲಕ್ಕಿಂಪುರ ಗ್ರಾಮದಲ್ಲಿ ನಡೆದಿದೆ. ತಿಪ್ಪಮ್ಮ (52) ಎಂಬಾಕೆ ಆತ್ಮಹತ್ಯೆಗೆ ಶರಣಾದರೆ, ಅಂಜನಪ್ಪ (60) ಪುತ್ರನಿಂದಲೇ ಕೊಲೆಯಾಗಿದ್ದಾರೆ. ರಮೇಶ್‌ (30) ಕೊಲೆ ಮಾಡಿ ಜೈಲು ಸೇರಿದ್ದಾನೆ. ರಮೇಶ್‌ ತಂದೆ ಅಂಜನಪ್ಪ ಕಟ್ಟಡ ಕೆಲಸ ಮಾಡುತ್ತಿದ್ದರು. ಕುಡಿತದ ದಾಸರಾಗಿದ್ದ ಅಂಜನಪ್ಪ, ನಿತ್ಯ

ದಾವಣಗೆರೆ : ತಾಯಿಯ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಂದ ಮಗ Read More »

ಲೋಕಸಭಾ ಚುನಾವಣೆ – 2024| ಹಾಸನ ಕ್ಷೇತ್ರದಲ್ಲೀಗ ರಾಸಲೀಲೆಯದ್ದೇ ಸುದ್ದಿ!!

ಸಮಗ್ರ ನ್ಯೂಸ್: ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ. ಆದರೆ, ಈ ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಿರುವ ಅಭ್ಯರ್ಥಿಯ ಬೆಂಬಲಿಗರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರನ್ನೂ

ಲೋಕಸಭಾ ಚುನಾವಣೆ – 2024| ಹಾಸನ ಕ್ಷೇತ್ರದಲ್ಲೀಗ ರಾಸಲೀಲೆಯದ್ದೇ ಸುದ್ದಿ!! Read More »

ಬೀದರ್: ಲಗ್ನ ಪತ್ರಿಕೆಯಲ್ಲಿ ಶರಣರ ವಚನ| ಜಿಲ್ಲೆಯಲ್ಲಿ ಪತ್ರಿಕೆಯದ್ದೇ ಫುಲ್ ಹವಾ..!

ಸಮಗ್ರ ನ್ಯೂಸ್‌ : ಇತ್ತೀಚೆಗೆ ಲಗ್ನಪತ್ರಿಕೆಯಲ್ಲಿ ಮತದಾನ ಮಾಡಿ ಎಂದು ಮುದ್ರಿಸಿ ಜಾಗೃತಿ ಮೂಡಿಸಲಾಗಿತ್ತು, ಆದ್ರೆ ಇಲ್ಲೊಂದು ಕುಟುಂಬ ತಮ್ಮ ಲಗ್ನ ಪತ್ರಿಕೆಯಲ್ಲಿ ಸಾಂಸ್ಕೃತಿಕ ನಾಯಕ ಬಸವಾದಿ ಶರಣರ ವಚನಗಳ ಸಂದೇಶ ನೀಡುವ ಮೂಲಕ ಹೊಸ ಪ್ರಯೋಗ ಮಾಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಗ್ರಾಮದ ಜುಮ್ಮಾ-ವಲ್ಲೇಪೂರೆ ಪರಿವಾರದಿಂದ ಈ ವಿನೂತನ ಪ್ರಯೋಗ ಮಾಡಿದ್ದು, ಸುಖಿ ಜೀವನದ 3 ಸೂತ್ರ ಸೇರಿ 31 ಸಂದೇಶವನ್ನು ಮದುವೆ ಪತ್ರಿಕೆ ಒಳಗೊಂಡಿದೆ. ಸದ್ಯ ಜಿಲ್ಲೆಯಲ್ಲಿ ವಿನೂತನ ಮದುವೆ ಆಹ್ವಾನ

ಬೀದರ್: ಲಗ್ನ ಪತ್ರಿಕೆಯಲ್ಲಿ ಶರಣರ ವಚನ| ಜಿಲ್ಲೆಯಲ್ಲಿ ಪತ್ರಿಕೆಯದ್ದೇ ಫುಲ್ ಹವಾ..! Read More »

ನಾಳೆ ಮೊದಲ ಹಂತದ ಮತದಾನ/ ಉಚಿತ ಸೇವೆ ನೀಡಲಿರುವ ರಾಪಿಡೋ

ಸಮಗ್ರ ನ್ಯೂಸ್: ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಪಿಡೋ ಸಂಸ್ಥೆಯೊಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಮತದಾನದ ದಿನದಂದು ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ವಿಕಲಾಂಗರಿಕಗೆ ಮತ್ತು ಹಿರಿಯ ನಾಗರೀಕರಿಗೆ ಉಚಿತ ಸೇವೆ ನೀಡಲಿದ್ದು ಎಲ್ಲರೂ ಈ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಮತದಾನ ಮಾಡಲು ರಾಪಿಡೋ ಉಪಯೋಗಿಸಿ ಮತಗಟ್ಟೆಗೆ ಹೋಗಿ ಮತದಾನ ಮಾಡಿದೆ ಎಂದು ಹೇಳಿ. ಈ ಸೇವೆಯನ್ನು ಬಳಸಿಕೊಳ್ಳುವ ಹಿರಿಯ ನಾಗರೀಕರು, ವಿಕಲಚೇತನರು

ನಾಳೆ ಮೊದಲ ಹಂತದ ಮತದಾನ/ ಉಚಿತ ಸೇವೆ ನೀಡಲಿರುವ ರಾಪಿಡೋ Read More »

ನಾಳೆ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ/ ಬೆಳಗ್ಗೆ ಏಳರಿಂದ ಮತದಾನ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಚುನಾವಣೆಯ ನಡೆಯಲಿದ್ದು, ಬೆಳಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ನಾಳೆ

ನಾಳೆ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ/ ಬೆಳಗ್ಗೆ ಏಳರಿಂದ ಮತದಾನ ಆರಂಭ Read More »

ಲಾರಿಗೆ ಬೊಲೆರೋ ವಾಹನ ಡಿಕ್ಕಿ… ಇಬ್ಬರು ಸಾವು

ಸಮಗ್ರ ನ್ಯೂಸ್: ಲಾರಿಯ ಹಿಂಬದಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ನಡೆದಿದೆ. ಈ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಈ ಮೃತಪಟ್ಟ ವ್ಯಕ್ತಿಗಳು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು. ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು

ಲಾರಿಗೆ ಬೊಲೆರೋ ವಾಹನ ಡಿಕ್ಕಿ… ಇಬ್ಬರು ಸಾವು Read More »