ರಾಜ್ಯ

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಸಮಗ್ರ ನ್ಯೂಸ್: ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ನಟಿ ಅಮೂಲ್ಯ ಅವರ ಮಾವ, ಮಾಜಿ ಕಾರ್ಪೊರೇಟರ್‌ ಹಾಗೂ ಬಿಜೆಪಿ ಮುಖಂಡ ಆಗಿರುವ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳು ನಿನ್ನೆ ತಡರಾತ್ರಿ 10ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಸದ್ಯ ರಾಮಚಂದ್ರ ಅವರು, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮನೆಯಲ್ಲೇ ಇದ್ದಾರೆ.

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ Read More »

ಲೋಕ ಚುನಾವಣೆ| 3 ದಿನ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆಯಲಿದೆ. ಈ ಹಿನ್ನೆಲೆ ಅಬ್ಬರದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಸಂಜೆ 6 ಗಂಟೆಯಿಂದ 14 ಕ್ಷೇತ್ರಗಳಲ್ಲಿ 144 ಸೆಕ್ಷನ್​​​​​​ ಜಾರಿಯಾಗಿದ್ದು, ಸಭೆ, ಸಮಾರಂಭ, ಮೆರವಣಿಗೆ, ಧ್ವನಿವರ್ಧಕ ಬಳಕೆಗೆಲ್ಲ ಬ್ರೇಕ್​​ ಬಿದ್ದಿದೆ. ಅಷ್ಟೇ ಅಲ್ಲದೆ 14 ಕ್ಷೇತ್ರಗಳಲ್ಲಿ 3 ದಿನ ಮದ್ಯ ಮಾರಾಟ ನಿಷೇಧ ಮಾಡಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಲಿಕ್ಕರ್ ಶಾಪ್​​ಗಳು ಕ್ಲೋಸ್​ ಆಗಿದ್ದು, ಶುಕ್ರವಾರದ ಏಪ್ರಿಲ್ 26ರಂದು

ಲೋಕ ಚುನಾವಣೆ| 3 ದಿನ ಮದ್ಯ ಮಾರಾಟ ನಿಷೇಧ Read More »

ಹಲ್ಲೆ ಪ್ರಕರಣ: ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

ಸಮಗ್ರ ನ್ಯೂಸ್: ಮೊನ್ನೆ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಪಾರ್ಕಿಂಗ್ ವಿಚಾರವಾಗಿ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರನ್ನು ದಂಪತಿಗಳು ಭೇಟಿ ಮಾಡಿದ್ದಾರೆ. ʻಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು. ನಿಮ್ಮ ಜೊತೆ ನಾವಿದ್ದೇವೆ

ಹಲ್ಲೆ ಪ್ರಕರಣ: ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ Read More »

ಮತದಾನ ಮಾಡಿದವರಿಗೆ ಉಚಿತ ಊಟ/ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸದಸ್ಯರಿಗೆ ಹೈಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಉಚಿತ ಊಟ ನೀಡಲು ಕರ್ನಾಟಕ ಹೈಕೋರ್ಟ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸದಸ್ಯರಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಅಂದು ಮತದಾನ ಮಾಡುವವರಿಗೆ ಹಾಗೂ ಪೂರಕ ದಾಖಲೆಗಳನ್ನು ನೀಡುವವರಿಗೆ ಉಚಿತ ಊಟ ನೀಡಲು ಸೂಚಿಸಲಾಗಿದೆ. ಕಳೆದ ವರ್ಷದ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಬೆಂಗಳೂರಿನ ಕೆಲವು ಹೋಟೆಲ್‍ಗಳು ಇದೇ

ಮತದಾನ ಮಾಡಿದವರಿಗೆ ಉಚಿತ ಊಟ/ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸದಸ್ಯರಿಗೆ ಹೈಕೋರ್ಟ್ ಸೂಚನೆ Read More »

ಚಿಕ್ಕೋಡಿ:-ಜೊಲ್ಲೆಗೆ ಢವ ಢವ ; ಖಾಲಿ ಕುರ್ಚಿಗೆ ಭಾಷಣ

ಸಮಗ್ರ ನ್ಯೂಸ್: ಚಿಕ್ಕೋಡಿ ಲೋಕಸಭಾ ಅಖಾಡದಲ್ಲಿ ನಿರೀಕ್ಷೆಯಂತೆ ಜನರು ಆಗಮಿಸದೆ ಬಿಜೆಪಿ ನಾಯಕರಿಗೆ ನಿರಾಸೆ ಮೂಡಿಸಿದ್ದಾರೆ ಬಿಜೆಪಿ ಭೂತ ಮಟ್ಟದ ಸಮಾವೇಶದಲ್ಲಿ ಪತಿ ಪರ ಪ್ರಚಾರಕ್ಕೆ ಆಗಮಿಸಿದ ಶಾಸಕಿ ಶಶಿಕಲಾ ಜೊಲ್ಲೆಗೆ ಭಾರಿ ಮುಖಭಂಗ ಎದುರಾಗಿದೆ. ಅಥಣಿ ತಾಲೂಕಿನ ಸಂಕೋನಹಟ್ಟಿ ಗ್ರಾಮದಲ್ಲಿ ಮತಯಾಚನೆಗೆ ಬಂದ ಶಶಿಕಲಾ ಜೋಲ್ಲೆ ಭಾಷಣದ ಮೊದಲೇ ಸಭೆಯಿಂದ ಮಹಿಳೆಯರು ಎದ್ದು ಹೊಗಿದ್ದಾರೆ ಖಾಲಿ ಇದ್ದ ನೂರಾರು ಕುರ್ಚಿಗಳಿಗೆ ಭಾಷಣ ಮಾಡಿ ಜೊಲ್ಲೆ ಮುಜುಗುರಕ್ಕೆ ಒಳಗಾಗಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದ್ರೂ ಅಣ್ಣಾಸಾಬ ಜೊಲ್ಲೆಗೆ

ಚಿಕ್ಕೋಡಿ:-ಜೊಲ್ಲೆಗೆ ಢವ ಢವ ; ಖಾಲಿ ಕುರ್ಚಿಗೆ ಭಾಷಣ Read More »

ಇಂದು ಬೆಂಗಳೂರಿಗರ ನೆರಳು ಕಾಣೆಯಾಗಲಿದೆ!! ಏನಿದು ಪ್ರಕೃತಿ ವಿಸ್ಮಯ?

ಸಮಗ್ರ ನ್ಯೂಸ್: ಬೆಂಗಳೂರಿನ ನಿವಾಸಿಗಳು ಬುಧವಾರ ಅಪರೂಪದ ಘಟನೆಗೆ ಸಾಕ್ಷಿಯಾಗಲಿದ್ದಾರೆ. ಇಂದು (ಎ.24) ‘ಶೂನ್ಯ ನೆರಳು ದಿನ’ದ ಸಮಯದಲ್ಲಿ ತಮ್ಮ ನೆರಳುಗಳು ಕ್ಷಣಿಕವಾಗಿ ಕಣ್ಮರೆಯಾಗುವುದರಿಂದಈ ವಿಶಿಷ್ಟ ಖಗೋಳ ಘಟನೆಯನ್ನು ಏಪ್ರಿಲ್ 24 ರಂದು ಮಧ್ಯಾಹ್ನ 12:17 ರಿಂದ 12:23 ರ ಅನುಭವಿಸಬಹುದಾಗಿದೆ. ಬೆಂಗಳೂರಿನ ಅದೇ ಅಕ್ಷಾಂಶದಲ್ಲಿರುವ ಸ್ಥಳಗಳಲ್ಲಿ ಇದನ್ನು ವೀಕ್ಷಿಸಬಹುದು. 13.0 ಡಿಗ್ರಿ ಉತ್ತರ ಅಕ್ಷಾಂಶದಲ್ಲಿರುವ ಬೆಂಗಳೂರು ವರ್ಷಕ್ಕೆ ಎರಡು ಬಾರಿ ಈ ವಿದ್ಯಮಾನವನ್ನು ಅನುಭವಿಸುತ್ತದೆ, ಸಾಮಾನ್ಯವಾಗಿ ಏಪ್ರಿಲ್ 24/25 ಮತ್ತು ಆಗಸ್ಟ್ 18 ರ ಸುಮಾರಿಗೆ

ಇಂದು ಬೆಂಗಳೂರಿಗರ ನೆರಳು ಕಾಣೆಯಾಗಲಿದೆ!! ಏನಿದು ಪ್ರಕೃತಿ ವಿಸ್ಮಯ? Read More »

ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ| ಗ್ರಾಹಕರು ಫುಲ್ ಖುಷ್

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸತತ 2ನೇ ದಿನವೂ ಇಳಿಕೆ ದಾಖಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಮಂಗಳವಾರ ಒಂದೇ ದಿನ 1,450 ರೂ.ಗಳ ಇಳಿಕೆಯೊಂದಿಗೆ 10 ಗ್ರಾಂಗೆ 72,200 ರೂ.ಗಳಾಗಿದೆ. ಬೆಳ್ಳಿ ಬೆಲೆಯೂ ಕೆ.ಜಿ.ಗೆ 2,300 ರೂ.ಗಳಷ್ಟು ಕಡಿಮೆಯಾಗಿದ್ದು, ಕೆ.ಜಿ. ಬೆಳ್ಳಿಗೆ 83,500 ರೂ.ಗಳಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆಯು 10 ಗ್ರಾಂಗೆ 1,530ರಷ್ಟು ಕಡಿಮೆಯಾಗಿ 72,160 ರೂ.ಗಳಿಗೆ ತಲುಪಿದೆ. ಬೆಳ್ಳಿ ಬೆಲೆಯು 2,500 ರೂ.ಗಳಷ್ಟು ಕಡಿಮೆಯಾಗಿ ಕೆ.ಜಿ.ಗೆ 83,000 ರೂ.ಗಳಿಗೆ

ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ| ಗ್ರಾಹಕರು ಫುಲ್ ಖುಷ್ Read More »

ಬೈಕ್ – ಬಸ್ ನಡುವೆ ಭೀಕರ ಅಪಘಾತ|ಇಬ್ಬರು ಸಾವು

ಸಮಗ್ರ ನ್ಯೂಸ್: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್‌ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ರಸ್ತೆಯಲ್ಲೇ ಚಾಲಕ ಬಸ್ ನಿಲ್ಲಿಸಿದ್ದು, ಬಸ್‌ನಿಂದ ಕೆಳಗಿಳಿದು

ಬೈಕ್ – ಬಸ್ ನಡುವೆ ಭೀಕರ ಅಪಘಾತ|ಇಬ್ಬರು ಸಾವು Read More »

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ – 2024ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಸುವ್ಯವಸ್ಧೆಯನ್ನು ಕಾಪಾಡುವ ದೃಷ್ಟಿಯಿಂದ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ವೆಂಕಟ್ ರಾಜಾ ಅವರು ಜಿಲ್ಲಾದ್ಯಂತ ಮಧ್ಯ ಮಾರಾಟ ನಿಷೇಧ ಆದೇಶ ಹೊರಡಿಸಿದ್ದಾರೆ. ಎ.24 ರಂದು ಸಂಜೆ 5 ಗಂಟೆಯಿಂದ ಎ.26 ರ ಮಧ್ಯರಾತ್ರಿ 12 ಗಂಟೆವರೆಗೆ ಮತ್ತು ಜೂ.3 ರಂದು ಸಂಜೆ 5 ಗಂಟೆಯಿಂದ ಜೂ.4 ರ ಮಧ್ಯರಾತ್ರಿ 12 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮಧ್ಯಗಳ ಸಾಗಣಿಕೆ, ಶೇಕರಣೆ

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ Read More »

ಮತದಾನಕ್ಕೆ ಪ್ರೆರೇಪಣೆ/ ಮೈಸೂರಿನಲ್ಲಿ ಪ್ರವಾಸಿ ತಾಣಗಳು ಬಂದ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ಹಿನ್ನಲೆಯಲ್ಲಿ ಮೈಸೂರು, ಮತದಾನದ ದಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುತ್ತದೆ. ಮೈಸೂರಿನಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು, ಮತದಾನದ ರಜೆಯನ್ನು ಭೇಟಿ ಮಾಡೋದಕ್ಕೆ ಜನ ಬಳಸುವ ಸಾಧ್ಯತೆ ಇರುವುದರಿಂದ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಏಪ್ರಿಲ್ 26ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ

ಮತದಾನಕ್ಕೆ ಪ್ರೆರೇಪಣೆ/ ಮೈಸೂರಿನಲ್ಲಿ ಪ್ರವಾಸಿ ತಾಣಗಳು ಬಂದ್ Read More »