ರಾಜ್ಯ

ನಂಜನಗೂಡು: ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು

ಸಮಗ್ರ ನ್ಯೂಸ್‌ : ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೃಹತ್ ರಂಗೋಲಿ ಬಿಡಿಸಿ ಸುತ್ತಲೂ‌ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗುವ ಮೂಲಕ ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿಯು ಅಪಾರ ಭಕ್ತರಿಗೆ ಮತದಾನ ಜಾಗೃತಿ ಮೂಡಿಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಆರ್ ಎಲ್ ಎಂ ಸಂಘದ ಮಹಿಳೆಯರು ದೇಗುಲದ ಮುಂಭಾಗ ರಂಗೋಲಿಯಲ್ಲಿ ಬಿಡಿಸಿದ್ದ ಇ.ವಿ.ಎಂ ಯಂತ್ರ, ತೋರು ಬೆರಳಿಗೆ ಶಾಹಿ ಗುರುತು, ಮತದಾನ ಕುರಿತ ಘೋಷವಾಕ್ಯಗಳು ನೆರದಿದ್ದ ಭಕ್ತರ ಗಮನ ಸೆಳೆಯಿತು.

ನಂಜನಗೂಡು: ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು Read More »

ಬೆಂಗಳೂರಿನಲ್ಲಿ ಕರಗ ಮಹೋತ್ಸವ: ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಏ.23 ರಂದು ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ

ಬೆಂಗಳೂರಿನಲ್ಲಿ ಕರಗ ಮಹೋತ್ಸವ: ಮದ್ಯ ಮಾರಾಟ ನಿಷೇಧ Read More »

ಚಿಕ್ಕಮಗಳೂರು : ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಯಿಂದ ಚಿನ್ನಾಭರಣ ಕಳವು

ಸಮಗ್ರ ನ್ಯೂಸ್‌ : ಸಾಧು ಸಂತರಂತೆ ಕಾವಿ ಧರಿಸಿ ಮನೆಯೊಂದಕ್ಕೆ ಬಂದು ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ತರೀಕೆರೆಯಲ್ಲಿ ನಡೆದಿದೆ. ನಾಲ್ವರು ಕಾವಿಧಾರಿಗಳು ಮಹಿಳೆಯ ಮನೆಗೆ ಬಂದಿದ್ದು, ಬಳಿಕ ಪೂಜೆ ಮಾಡುವುದಾಗಿ ನಂಬಿಸಿ ಮಹಿಳೆಯ ಎಚ್ಚರ ತಪ್ಪಿಸಿ, ಮಹಿಳೆ ಧರಿಸಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮಹಿಳೆಗೆ ಎಚ್ಚರವಾದ ಮೇಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ವೇಳೆ ಮಹಿಳೆ ನೆರೆಹೊರೆಯವರಿಗೆ ನಡೆದ ಘಟನೆ ತಿಳಿಸಿದ್ದಾರೆ. ಕಳ್ಳರನ್ನು ಹುಡುಕಿ ಹೋದ ಜನ, ರಸ್ತೆಯಲ್ಲಿ ಹೋಗುತ್ತಿದ್ದ ಅಮಾಯಕ ಬುಡುಬುಡುಕೆ

ಚಿಕ್ಕಮಗಳೂರು : ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಯಿಂದ ಚಿನ್ನಾಭರಣ ಕಳವು Read More »

ವಿಜಯಪುರ : ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್

ಸಮಗ್ರ ನ್ಯೂಸ್‌ : ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಜಿ. ಲಾಡ್ ಹೇಳಿದರು. ಚಡಚಣ ತಾಲೂಕಿನ ಬರಡೋಲ ಸಮೀಪದ ವಿಠ್ಠಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಇಂಡಿ ಮತ್ತು ನಾಗಠಾಣ ಮತಕ್ಷೇತ್ರದ ಮರಾಠಾ ಸಮುದಾಯದ ಬೃಹತ್ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ನೂರಾರು ಭರವಸೆ ನೀಡಿ ಅಧಿಕಾರಕ್ಕೆ ಬಂದವರು ಸುಳ್ಳಿನ ಸಾಮ್ರಾಜ್ಯ ಸೃಷ್ಟಿಸಿದ್ದಾರೆ ಎಂದರು. ಶಿವಾಜಿಯವರು ಮುಸ್ಲಿಂ ರಾಜರ ವಿರುದ್ಧ ಹೋರಾಡಿದರೇ ಹೊರತು ಮುಸ್ಲಿಂರ

ವಿಜಯಪುರ : ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್ Read More »

ಹುಬ್ಬಳ್ಳಿ : ನೇಹಾ ಕೊಲೆ ಪ್ರಕರಣವನ್ನು ನಾವು ಖಂಡಿಸುತ್ತೇವೆ ಎಂದ ಎ.ಎಮ್.ಹಿಂಡಸಗೇರಿ

ಸಮಗ್ರ ನ್ಯೂಸ್‌ : ಬಹಳ‌ ದುರ್ದೈವದ ಸಂಗತಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ. ನಾವು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದೇವೆ. ಶೀಘ್ರ ತನಿಖೆ ಆಗಬೇಕು, ಹೀನ ಕೆಲಸ ಮಾಡಿದ ಹುಡುಗನಿಗೆ ಶಿಕ್ಷೆ ಆಗಬೇಕು.ನೇಹಾ ನಮ್ಮ ಮಗಳು ಎಂದು ಭಾವಿಸಿದ್ದೇವೆ.ನಿರಂಜನ ಮತ್ತು ನಾವು ಬಹಳ ವರ್ಷದಿಂದ ಸಂಪರ್ಕದಲ್ಲಿ ಇದ್ದೇವೆ.ಈ ಘಟನೆಯನ್ನು ನಾವು ಖಂಡಿಸುತ್ತೇವೆ‌ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಮ್. ಹಿಂಡಸಗೇರಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ‌ ಹಿಂದೆ ಯಾರಾದರೂ ಇದ್ದರೆ ಪತ್ತೆ ಹಚ್ಚಬೇಕು. ಫಾಸ್ಟ್‌ಟ್ರ್ಯಾಕ್ ಕೋರ್ಟ್

ಹುಬ್ಬಳ್ಳಿ : ನೇಹಾ ಕೊಲೆ ಪ್ರಕರಣವನ್ನು ನಾವು ಖಂಡಿಸುತ್ತೇವೆ ಎಂದ ಎ.ಎಮ್.ಹಿಂಡಸಗೇರಿ Read More »

ತಾಪಮಾನದ ಸುದ್ದಿ ಓದುತ್ತಿರುವಾಗಲೇ ಲೈವ್‌ನಲ್ಲಿ ಕುಸಿದು ಬಿದ್ದ ಟಿವಿ ನಿರೂಪಕಿ

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಓಡಾಡೊದಕ್ಕಿಂತ ಮನೆಯಲ್ಲಿ ಕೂರುವುದು ಕಷ್ಟವಾಗಿದೆ. ಭಾರತದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ನಿಂದ 46 ಡಿಗ್ರಿ ಸೆಲ್ಸಿಯಸ್‌ವರೆಗೆ ಇದೆ. ಇದೇ ವಿಚಾರವಾಗಿ ಡಿಡಿ ದೂರದರ್ಶನದ ವಾರ್ತಾ ವಾಚಕಿಯೊಬ್ಬರು ಹವಾಮಾನ ವರದಿ ನೀಡುತ್ತಿರುವಾಗಲೇ ಲೈವ್‌ನಲ್ಲಿ ಕುಸಿದು ಬಿದ್ದಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಸೇರಿದ ಬೆಂಗಾಲಿ ದೂರದರ್ಶನದ ಲೈವ್‌ನಲ್ಲಿ ಈ ಘಟನೆ ನಡೆದಿದೆ. ಕೋಲ್ಕತಾ ದೂರದರ್ಶನದ ನಿರೂಪಕಿ ಲೋಪಮುದ್ರ ಸಿನ್ಹಾ ಕುಸಿದು ಬಿದ್ದವರು. ದೂರದರ್ಶನ ಚಾನೆಲ್‌ನಲ್ಲಿ ಪ್ರತಿದಿನದಂತೆ ಅಂದೂ ರಾಜ್ಯದ

ತಾಪಮಾನದ ಸುದ್ದಿ ಓದುತ್ತಿರುವಾಗಲೇ ಲೈವ್‌ನಲ್ಲಿ ಕುಸಿದು ಬಿದ್ದ ಟಿವಿ ನಿರೂಪಕಿ Read More »

ಹುಬ್ಬಳ್ಳಿ : ಜೋಶಿ ಸಾಹೇಬ್ರೆ ನೀವು ಭಕ್ತ ಪ್ರಹ್ಲಾದ್ ಆಗಬಾರದು ಉಗ್ರ ನರಸಿಂಹ ತರ ಆಗಬೇಕು – ನಟ ಪ್ರಥಮ

ಸಮಗ್ರ ನ್ಯೂಸ್‌ : ಹುಬ್ಬಳಿಗೆ ಸಿನಿಮಾ ಪ್ರಚಾರಕ್ಕೆ ಬರ್ತಿದ್ವಿ ಆದ್ರೆ ಇಂತಹ ಸಾವಿಗೆ ಬರೋ ಪರಿಸ್ಥಿತಿ ಬಂದಿದೆ. ಇದ್ರಿಂದ ತುಂಬಾ ನೋವಾಗ್ತಿದೆ. ಇಡೀ ದೇಶವೇ ದುಃಖ ಪಡುವಂತಾಗಿದೆ. ಈ ಭಾಗದ ಎಂಪಿ ಪ್ರಹ್ಲಾದ್ ಜೋಶಿ ಸಾಹೇಬ್ರೆ ನೀವು ಭಕ್ತ ಪ್ರಹ್ಲಾದ್ ಆಗಬಾರದು ಉಗ್ರ ನರಸಿಂಹ ತರ ಆಗಬೇಕು ಇಲ್ಲವಾದ್ರೆ ಹಿರಣ್ಯ ಕಷ್ಯಪ್ಪ ತರ ಬಲಿಯಾಗಿ ಬಿಡ್ತೇವಿ ಎಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ವರ್ಷ ಅಧಿಕಾರದಲ್ಲಿದ್ದೀರಿ ಸಾಧ್ಯವಾದರೆ

ಹುಬ್ಬಳ್ಳಿ : ಜೋಶಿ ಸಾಹೇಬ್ರೆ ನೀವು ಭಕ್ತ ಪ್ರಹ್ಲಾದ್ ಆಗಬಾರದು ಉಗ್ರ ನರಸಿಂಹ ತರ ಆಗಬೇಕು – ನಟ ಪ್ರಥಮ Read More »

ಹುಬ್ಬಳ್ಳಿ : ನೇಹಾ ತಂದೆಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ ಡಾ. ವಿಜಯ ಸಂಕೇಶ್ವರ

ಸಮಗ್ರ ನ್ಯೂಸ್‌ : ನೇಹಾ ಹಿರೇಮಠ‌ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ನೇಹಾ ಮನೆಗೆ ಡಾ.ವಿಜಯ ಸಂಕೇಶ್ವರ ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನಯ್ಯ ಹಿರೇಮಠ ಸಂಕೇಶ್ವರ ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು. ಇನ್ನು ನೇಹಾ ಮನೆಗೆ ಭೇಟಿ ನೀಡಿ‌ದ ಸಂಕೇಶ್ವರ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೇಹಾ ತಂದೆ ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ‌ ಹೇಳಿ ಧೈರ್ಯ ತುಂಬಿದರು.

ಹುಬ್ಬಳ್ಳಿ : ನೇಹಾ ತಂದೆಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ ಡಾ. ವಿಜಯ ಸಂಕೇಶ್ವರ Read More »

ಉಡುಪಿ : ಬಿಜೆಪಿ ಬೆಂಬಲಿಸಿದರೆ ಜನರಿಗೆ ಚೆಂಬೇ ಗತಿ- ರಮೇಶ್ ಕಾಂಚನ್ ಟೀಕೆ

ಸಮಗ್ರ ನ್ಯೂಸ್‌ : ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಕಾಂಗ್ರೆಸ್ ಭವನದ ಎದುರು ಇಂದು ಚೆಂಬು ಹಿಡಿದುಕೊಂಡು ಪ್ರತಿಭಟನೆ ನಡೆಸಲಾಯಿತು. ಆ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೈಗೊಳ್ಳಲಾಯಿತು. ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದರು. ಉಡುಪಿ ಬ್ಲಾಕ್ ನ 133 ಬೂತ್ ಗಳಲ್ಲಿ ಕೂಡ ಪ್ರಚಾರಕ್ಕೆ ಹೋಗುವ ಕಾರ್ಯಕರ್ತರು ಈ ವಿಭಿನ್ನ ಅಭಿಯಾನದ ಮೂಲಕ ಮತಪ್ರಚಾರ

ಉಡುಪಿ : ಬಿಜೆಪಿ ಬೆಂಬಲಿಸಿದರೆ ಜನರಿಗೆ ಚೆಂಬೇ ಗತಿ- ರಮೇಶ್ ಕಾಂಚನ್ ಟೀಕೆ Read More »

ಕೋಲಾರ : ಈ ದೇಶದ ಶನಿ ಮೋದಿ-ರಮೇಶ್ ಕುಮಾರ್

ಸಮಗ್ರ ನ್ಯೂಸ್‌ : ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಕೋಲಾರದಲ್ಲಿ ಮಾತನಾಡಿ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾ ಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟೆ. ಎಲ್ಲಾ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವರು ಬಂದು ಕೂತಿದ್ದಾನೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೇವೆ. ಪ್ರಧಾನಿ ಸುಳ್ಳು

ಕೋಲಾರ : ಈ ದೇಶದ ಶನಿ ಮೋದಿ-ರಮೇಶ್ ಕುಮಾರ್ Read More »