ರಾಜ್ಯ

ಮತದಾನ ಬಹಿಷ್ಕಾರ/ ನಾಗಾಲ್ಯಾಂಡ್‍ನ ಆರು ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ನಾಗಾಲ್ಯಾಂಡ್ ರಾಜ್ಯದ ಪೂರ್ವಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನವಾಗಿದೆ.ಪ್ರತ್ಯೇಕ ಪ್ರದೇಶವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಮತದಾನ ಬಹಿಷ್ಕರಿಸಿದ್ದಾರೆ. ಇಂದು ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ಇಎನ್‍ಪಿಒ), ಚುನಾವಣೆಯನ್ನು ಬಾಯ್ಕಾಟ್ ಮಾಡುವಂತೆ ‘ಪಬ್ಲಿಕ್ ಎಮರ್ಜೆನ್ಸಿ’ ಘೋಷಣೆ ಮಾಡಿ ಸಾರ್ವಜನಿಕರಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಹುತೇಕ ಇಲ್ಲಿ ಮತದಾನ ಆಗಿಲ್ಲ. ಈ ಬೆಳವಣಿಗೆ ಹಿನ್ನೆಲೆಯಲ್ಲಿ, ಇಎನ್‍ಪಿಒ ಸಂಘಟನೆಯು ಚುನಾವಣೆಯಲ್ಲಿ ಪ್ರಭಾವ ಬೀರಲು ಪ್ರಯತ್ನಿಸಿದೆ. ಪೂರ್ವ ನಾಗಾಲ್ಯಾಂಡ್‍ನ ನಿವಾಸಿಗಳು ಸಾರ್ವತ್ರಿಕ ಚುನಾವಣೆಯಲ್ಲಿ

ಮತದಾನ ಬಹಿಷ್ಕಾರ/ ನಾಗಾಲ್ಯಾಂಡ್‍ನ ಆರು ಜಿಲ್ಲೆಗಳಲ್ಲಿ ಶೂನ್ಯ ಮತದಾನ Read More »

ಉಡುಪಿ : ಯಾರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಗೆ ಬಿಟ್ಟ ವಿಚಾರ- ಸುಮಲತಾ

ಸಮಗ್ರ ನ್ಯೂಸ್‌ : ಮಂಡ್ಯದಲ್ಲಿ ಯಾರ ಪರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಅವರಿಗೆ ಬಿಟ್ಟ ವಿಚಾರ. ನಾನು ಸ್ಪರ್ಧೆ ಮಾಡಿದ್ರೆ ನನಗೆ ಸಪೋರ್ಟ್ ಮಾಡ್ತಾ ಇದ್ರು. ಆದ್ರೆ ಈಗ ನಾನು ಅಲ್ಲಿ ನಿಂತಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪರ ದರ್ಶನ್ ಪ್ರಚಾರ ಮಾಡುತ್ತಿದ್ದಾರಲ್ವಾ ಎಂಬ ಪ್ರಶ್ನೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದರು. ಸುಮಲತಾ ಅವರೇ ದರ್ಶನ್ ನನ್ನು ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ಕಳಿಸಿದ್ದಾರೆ ಎಂಬುದು ಊಹಾಪೋಹ. ಅದನ್ನು ನಂಬಬೇಡಿ. ನಾನೇ

ಉಡುಪಿ : ಯಾರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಗೆ ಬಿಟ್ಟ ವಿಚಾರ- ಸುಮಲತಾ Read More »

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಸವಾರನನ್ನು ಬ್ರಹ್ಮಾವರ ಮಟಪಾಡಿ ನಿವಾಸಿ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಅಂಬಾಗಿಲಿನಿಂದ ಪೆರಂಪಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಅಂಬಾಗಿಲು- ಪೆರಂಪಳ್ಳಿ ರಸ್ತೆಯ ತಿರುವಿನಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು Read More »

ಹುಬ್ಬಳ್ಳಿ : ನೇಹಾಳಿಗೆ ವೀರಶೈವ ಜಂಗಮ ವಿಧಿವಿಧಾನಗಳಿಂದ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್‌ : ಪಾಗಲ್ ಪ್ರೇಮಿಯಿಂದ ನಿನ್ನೆ ಹತ್ಯೆಯಾಗಿದ್ದ ನೇಹಾ ಹಿರೇಮಠ, ಮಣ್ಣಿನಲ್ಲಿ ಮಣ್ಣಾಗಿದ್ದಾಳೆ. ವೀರಶೈವ ಜಂಗಮ ವಿಧಿವಿಧಾನಗಳಂತೆ ಇಂದು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನ್‌ ಹಿರೇಮಠ ಪುತ್ರಿ ನೇಹಾ, ಬಿವಿಬಿ ಕಾಲೇಜಿನಲ್ಲಿ ಎಂಸಿಎ ಪ್ರಥಮ ವರ್ಷದಲ್ಲಿ ಓದುತ್ತಿದ್ದಳು. ತನ್ನ ಸಹಪಾಠಿ ಫಯಾಜ್‌ನಿಂದ ಹತ್ಯೆಗಿಡಾಗಿದ್ದಳು. ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ನೇಹಾ ಕೊಲೆಗೆ ಸಾವಿರಾರು ವಿದ್ಯಾರ್ಥಿಗಳು ಆರೋಪಿಗೆ ಶಿಕ್ಷೆಯಗಲೆಂದು ತಮ್ಮ ಆಕ್ರೋಶ ಕೂಡ ವ್ಯಕ್ತಪಡಿಸಿದ್ದಾರೆ. ಇನ್ನು, ನೇಹಾ ಅಂತ್ಯಸಂಸ್ಕಾರದಲ್ಲಿ

ಹುಬ್ಬಳ್ಳಿ : ನೇಹಾಳಿಗೆ ವೀರಶೈವ ಜಂಗಮ ವಿಧಿವಿಧಾನಗಳಿಂದ ಅಂತ್ಯಸಂಸ್ಕಾರ Read More »

ಬೆಳಗಾವಿ: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಗೆ ಮುನ್ನಡೆ ಖಚಿತ- ಅಶೋಕ್ ಪಟ್ಟಣ್

ಸಮಗ್ರ ನ್ಯೂಸ್‌ : ಬಿಜೆಪಿಯವರು ಎಷ್ಟೇ ಅಬ್ಬರಿಸಿದರೂ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರಿಗೆ ಮುನ್ನಡೆ ಸಿಗುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಪರ ಕ್ಷೇತ್ರದಾದ್ಯಂತ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿದರು. ರಾಮದುರ್ಗ ವಿಧಾನಸಭಾ ಕ್ಷೇತ್ರದ ಸುರೇಬಾನ್ ಮನಿಹಾಳ ಗ್ರಾಮದ ನಡೆದ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶಾಸಕರು, ರಾಮದುರ್ಗದಿಂದ 20 ರಿಂದ 25 ಸಾವಿರ ಮತಗಳು ಮುನ್ನಡೆ

ಬೆಳಗಾವಿ: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಗೆ ಮುನ್ನಡೆ ಖಚಿತ- ಅಶೋಕ್ ಪಟ್ಟಣ್ Read More »

ಹುಬ್ಬಳ್ಳಿ : ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನ್ನು ಗಲ್ಲಿಗೇರಿಸಿ: ಹಿಂದೂ ಜಾಗರಣೆ ವೇದಿಕೆ

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರವಾಗಿ ಕೊಲೆ ಮಾಡಿದ ಆರೋಪಿ ಫಯಾಜ್‌ನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣೆ ವೇದಿಕೆ ವತಿಯಿಂದ ಹೊಸೂರ ಸರ್ಕಲ್ ದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಇವರು, ನೇಹಾ ಆತ್ಮಕ್ಕೆ ಶಾಂತಿ ಸಿಗಬೇಕು ಆರೋಪಿ ಫಯಾಜ್‌ನ್ನು ಗಲ್ಲಿಗೇರಿಸಬೇಕು. ಇಲ್ಲದಿದ್ದರೆ ದಿನಂಪ್ರತಿ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ : ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನ್ನು ಗಲ್ಲಿಗೇರಿಸಿ: ಹಿಂದೂ ಜಾಗರಣೆ ವೇದಿಕೆ Read More »

ಹುಬ್ಬಳ್ಳಿ: “ನೇಹಾಳನ್ನ ಮಣ್ಣು ಮಾಡುವ ಮೊದಲು ಆ‌ ಕೊಲೆಗಡುಕನನ್ನ‌ ಮಣ್ಣು ಮಾಡಬೇಕು”

ಸಮಗ್ರ ನ್ಯೂಸ್‌ : ನೇಹಾಳನ್ನ ಮಣ್ಣು ಮಾಡುವ ಮೊದಲು ಆ‌ ಕೊಲೆಗಡುಕನನ್ನ‌ ಮಣ್ಣು ಮಾಡಬೇಕು. ಅಂದಾಗ ಮಾತ್ರ ನೇಹಾಳ ಆತ್ಮಕ್ಕೆ‌ ಶಾಂತಿ ಸಿಗುತ್ತದೆಂದು ರೀಲ್ಸ್ ಸ್ಟಾರ್ ಪ್ರೀಯಾ ಸವಡಿ ಕಣ್ಣೀರು ಹಾಕುತ್ತ ಹೇಳಿದರು. ಇನ್ನು ಸಾಂತ್ವನ ಹೇಳಲಿಕ್ಕೆ ಈಗ ಎಲ್ಲರೂ ಬರ್ತಾರೆ, ಸಾಂತ್ವನ ತೆಗೆದುಕೊಂಡು ಆ ಕುಟುಂಬ ಏನ್ ಮಾಡಬೇಕು. ನಮ್ಮ ಅಕ್ಕನನ್ನ ಯಾರು ಸಹ ತಂದು ಕೊಡುವುದಿಲ್ಲ. ತಮ್ಮ ಚುನಾವಣೆಯಿಂದ ಈ ಪ್ರಕರಣವನ್ನೇ‌ ಮುಚ್ಚಿ ಹಾಕುತ್ತಾರೆ. ನೇಹಾಳ ಸಾವಿಗೆ ಇವ್ಯಾರು ಸಹ ನ್ಯಾಯ ಕೊಡಿಸುವುದಿಲ್ಲವೆಂದು ರೀಲ್ಸ್

ಹುಬ್ಬಳ್ಳಿ: “ನೇಹಾಳನ್ನ ಮಣ್ಣು ಮಾಡುವ ಮೊದಲು ಆ‌ ಕೊಲೆಗಡುಕನನ್ನ‌ ಮಣ್ಣು ಮಾಡಬೇಕು” Read More »

ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ

ಸಮಗ್ರ ನ್ಯೂಸ್ : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಸುರಂಗ ಮಾರ್ಗದ ಕೆಲಸದ ವೇಳೆ ಏಕಾಏಕಿ ಏರ್ ಬ್ಲಾಸ್ಟ್ ಸಂಭವಿಸಿದೆ. ಈ ವೇಳೆ ಒಂದು ಬದಿಯಲ್ಲಿ ಮಣ್ಣು ಕುಸಿದಿದೆ. ಘಟನೆಯಲ್ಲಿ ಉಸಿರಾಟದ ಸಮಸ್ಯೆಯಿಂದ ನಿತ್ರಾಣಗೊಂಡು ಸುರಂಗದಲ್ಲೇ ಸಿಲುಕಿದ್ದ ಕಾರ್ಮಿಕರನ್ನ ಕೂಡಲೇ ರಕ್ಷಿಸಲಾಗಿದೆ. ಐವರು ಕಾರ್ಮಿಕರಿಗೆ ಗಾಯಗಳಾಗಿದೆ. ಓರ್ವ ಕಾರ್ಮಿಕನ ಮೇಲೆ ಕಲ್ಲುಗಳು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ.

ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ Read More »

ವಿಜಯಪುರ : 4 ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ 2 ನೇ ಹಂತದಲ್ಲಿ‌ ನಡೆಯುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶುಕ್ರವಾರ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಅವರು ಬಿಜೆಪಿ ಮಾಜಿ ಶಾಸಕರು ಹಾಗೂ ಮಹಿಳಾ ಮುಖಂಡರೊಂದಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು. ಸಂಸದ ರಮೇಶ ಜಿಗಜಿಣಗಿ ಅವರು ಈಗಾಗಲೇ ಏ.16 ರಂದು ಬೃಹತ್ ಶೋಭಾಯಾತ್ರೆ ಮೂಲಕ‌ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಹಾಗೂ ಮುಖಂಡರೊಂದಿಗೆ ತೆರಳಿ ಅಂದು

ವಿಜಯಪುರ : 4 ನೇ ಸೆಟ್ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ Read More »

ರಾಜ್ಯವನ್ನು ಬೆಚ್ಚಿ ಬೀಳಿಸುತ್ತಿರುವ ಸಾಲು ಸಾಲು ಮರ್ಡರ್ ಕೇಸ್| ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ

ಸಮಗ್ರ ನ್ಯೂಸ್: ಸಾಲು ಸಾಲು ಕೊಲೆ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಚುನಾವಣೆ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಒಂದೇ ದಿನದಲ್ಲಿ 12 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಡಿಜಿ & ಐಜಿಪಿ, ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿದ್ದಾರೆ. ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಆರೋಪಿಗಳ ವಿರುದ್ಧ ನಿರ್ಧಾಕ್ಷಿಣ್ಯ

ರಾಜ್ಯವನ್ನು ಬೆಚ್ಚಿ ಬೀಳಿಸುತ್ತಿರುವ ಸಾಲು ಸಾಲು ಮರ್ಡರ್ ಕೇಸ್| ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ Read More »