ರಾಜ್ಯ

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದ ಸಂದರ್ಭದಲ್ಲಿ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಗದಗದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್​ ಅವರ ಮದುವೆ

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ Read More »

ಹವಾಮಾನ ವರದಿ| ರಾಜ್ಯಾದ್ಯಂತ ೪-೫ ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿ ಗುರುವಾರ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಏಪ್ರಿಲ್ 22 ರವರೆಗೆ ಮಳೆಯಾಗಲಿದ್ದು, 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ

ಹವಾಮಾನ ವರದಿ| ರಾಜ್ಯಾದ್ಯಂತ ೪-೫ ದಿನ ಮಳೆ ಸಾಧ್ಯತೆ Read More »

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್‌ : ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ. ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಇಂದು ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿ ಸಾವು Read More »

ವಿಜಯಪುರ : ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಗೆ ಹಾನಿ

ಸಮಗ್ರ ನ್ಯೂಸ್‌ : ಗುಮ್ಮಟ ನಗರಿ ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಮಳೆಗೆ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೆಹತರ ಮಹಲ್ ಗೆ ಸ್ವಲ್ಪ ಹಾನಿಯಾಗಿದ್ದು, ಒಂದು ಕಾರು, ಎರಡು ಬೈಕುಗಳು ಜಖಂ ಗೊಂಡಿವೆ. ಸಂಜೆ ಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಮೆಹತರ ಮಹಲ್ ನ ಮಿನಾರ್ ವೊಂದರ ಮೇಲ್ಭಾಗದಲ್ಲಿ ಮಿಂಚು ಸಹಿತ ಸಿಡಿಲು ಬಡಿದಿದ್ದು, ಆ ಭಾಗದ ಕಲ್ಲುಗಳು ಕೆಳಗೆ ಬಿದ್ದಿವೆ. ಇದರಿಂದಾಗಿ ಸ್ಮಾರಕದ ಎದುರು ನಿಲ್ಲಿಸಲಾಗಿದ್ದ ಒಂದು

ವಿಜಯಪುರ : ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಗೆ ಹಾನಿ Read More »

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ/ ಸೆರೆಸಿಕ್ಕಿದ ನರಹಂತಕ ಕರಡಿ ಕಾಡಾನೆ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಮಲೆನಾಡ ಭಾಗದಲ್ಲಿ ಉಪಟಳ ನೀಡುತ್ತಿರು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದ್ದು, ಕಾಡಾನೆ ಸೆರೆ ಇಂದಿನಿಂದ ಆರಂಭವಾಗಿದ್ದು, ಏ. 24 ವರೆಗೆ ನಡೆಯಲಿದೆ. ಇಂದು ಮೊದಲ ದಿನದ ಕಾರ್ಯಾಚರಣೆಯಲ್ಲಿ ನರಹಂತಕ ಕರಡಿ ಕಾಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಾಡಾನೆ ಕಾರ್ಯಾಚರಣೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ವಾಟೀಹಳ್ಳಿಯಲ್ಲಿ ಗ್ರಾಮದ ಐಬಿಸಿ. ಎಸ್ಟೇಟ್‍ನಲ್ಲಿ ಸೆರೆಸಿಕ್ಕ ನರಹಂತಕ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ. ಏಳು ಸಾಕಾನೆಗಳೊಂದಿಗೆ ಕಾರ್ಯಾಚರಣೆ ಆರಂಭಿಸಿದ

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ/ ಸೆರೆಸಿಕ್ಕಿದ ನರಹಂತಕ ಕರಡಿ ಕಾಡಾನೆ Read More »

ಬೀದರ್: ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿಯ ಎಸ್‌.ಕೆ. ಬೆಳ್ಳುಬ್ಬಿ ಆರೋಪ

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಹಿರಿಯ ಮುಖಂಡ ಎಸ್‌.ಕೆ. ಬೆಳ್ಳುಬ್ಬಿ ಹೇಳಿದರು. ನಗರದ ಗಣೇಶ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು ಭಾರತ ದೇಶವನ್ನು ಮೂರು ಭಾಗ ಮಾಡಿದವರು ಈ ಕಾಂಗ್ರೆಸ್ಸಿನವರು. ಈಗ ಆ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ಭಾರತ್‌ ಜೋಡೋ ಯಾತ್ರೆ ನಡೆಸುತ್ತಿರುವುದೇಕೆ? ಅಖಂಡ ಭಾರತ, ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದೆ ಎಂದರು.

ಬೀದರ್: ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿಯ ಎಸ್‌.ಕೆ. ಬೆಳ್ಳುಬ್ಬಿ ಆರೋಪ Read More »

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌| ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌| ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆ Read More »

ಬೆಳಗಾವಿ:ಬಾವಿಗೆ ಕಾಲು ಜಾರಿ ಬಿದ್ದ ಎತ್ತು ಕಾಪಾಡಿದ ಅಥಣಿ ಅಗ್ನಿಶಾಮಕ ಸಿಬ್ಬಂದಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದಲ್ಲಿ ಹಣಮಂತ ಸಿದ್ರಾಮ ಸಂಭೋಜಿ ಎಂಬುವವರ ಬಾವಿಯೊಂದರಲ್ಲಿ ಅದೆ ಗ್ರಾಮದ ತುಳಜಪ್ಪ ನಿಂಗಪ್ಪ ಬಡಕೆ ಎಂಬವರ ಗೂಳಿ (ಎತ್ತು) ಮೇಯುತ್ತ ಹೋಗಿ ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ತಕ್ಷಣ ಮೊಳೆ ಗ್ರಾಮದ ನಡೆದಿದೆ. ಸ್ಥಳೀಯರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಜಲವಾಹನ ಮತ್ತು ಅಗ್ನಿಶಾಮಕರವರ ನೇತೃತ್ವದಲ್ಲಿ ಘಟನಾ ಸ್ಥಳಕ್ಕೆ ರಕ್ಷಣಾ ಸಾಮಗ್ರಿಗಳೊಂದಿಗೆ ಆಗಮಿಸಿ 80 ಅಡಿ ಅಳತೆಯ 35×35 ವಿಸ್ತೀಣ೯ದ

ಬೆಳಗಾವಿ:ಬಾವಿಗೆ ಕಾಲು ಜಾರಿ ಬಿದ್ದ ಎತ್ತು ಕಾಪಾಡಿದ ಅಥಣಿ ಅಗ್ನಿಶಾಮಕ ಸಿಬ್ಬಂದಿ Read More »

ಚೀಟಿ ಹಣ ಎತ್ತಿಕೊಂಡು ದಂಪತಿ ಪರಾರಿ| ಹಣ ವಾಪಸ್ ಕೊಡಿಸುವಂತೆ ಪೋಲಿಸ್ ಠಾಣೆ ಮುಂದೆ ಚೀಟಿದಾರರ ದೌಡು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಚೀಟಿ ಹಣ ಗುಳುಂ ಮಾಡಿ ಇಡೀ ಕುಟುಂಬವೇ ಪರಾರಿ ಆದ ಘಟನೆ ನಡೆದಿದೆ. ಮಧ್ಯಮ ವರ್ಗದವರನ್ನೇ ಟಾರ್ಗೆಟ್‌ ಮಾಡುತ್ತಿದ್ದ ವಂಚಕ ದಂಪತಿ ಮಾತುಗಳಿಂದಲೆ ಬುಟ್ಟಿಗೆ ಬೀಳಿಸಿಕೊಳ್ಳುತ್ತಿದ್ದರು. ನಂತರ ಲಕ್ಷಾಂತರ ರೂಪಾಯಿ ಚೀಟಿ ಹೆಸರಿನಲ್ಲಿ ಹಾಕಿಸಿಕೊಂಡು ಪರಾರಿಯಾಗುತ್ತಿದ್ದರು. ಈಗ ಚೀಟಿ ಹಣ ವಾಪಸ್‌ ಕೊಡಿಸುವಂತೆ ಚೀಟಿದಾರರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ಮುಂದೆ 50ಕ್ಕೂ ಹೆಚ್ಚು ಜನ ಜಮಾಯಿಸಿ ಪ್ರತಿಭಟಿಸಿದ್ದಾರೆ. ಸಿದ್ದಲಿಂಗಯ್ಯ ಎಂಬಾತ ಶ್ರೀ ಸಾಯಿ ಲಕ್ಷ್ಮಿ ಕೃಪೆ ಚಿಟ್ಸ್‌

ಚೀಟಿ ಹಣ ಎತ್ತಿಕೊಂಡು ದಂಪತಿ ಪರಾರಿ| ಹಣ ವಾಪಸ್ ಕೊಡಿಸುವಂತೆ ಪೋಲಿಸ್ ಠಾಣೆ ಮುಂದೆ ಚೀಟಿದಾರರ ದೌಡು Read More »

ಚಿಕ್ಕೋಡಿ:ಚುಣಾವಣಾ ಪ್ರಚಾರದಿಂದ ಹಿಂದುಳಿದ ರಮೇಶ್ ಕತ್ತಿ, ಜೋಲ್ಲೆಗೆ ಎದುರಾದ ಸೋಲಿನ ಭೀತಿ|ಜಂಟಿ ಪಕ್ಷವಿದ್ದರೂ ಕ್ಷೇತ್ರದಲ್ಲಿ ಒಂಟಿಯಾದ್ರಾ ಜೊಲ್ಲೆ.!?

ಸಮಗ್ರ ನ್ಯೂಸ್: ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಕಾಂಗ್ರೆಸ್ ಪಕ್ಷದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಲ ಪ್ರದರ್ಶನ ಮಾಡುತ್ತಾ ಭರ್ಜರಿ ಚುನಾವಣೆ ಪ್ರಚಾರ ಮಾಡಿ ಮತಯಾಚನೆ ನಡೆಸುತ್ತಿದ್ದಾರೆ. ಆದರೆ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೇಗೆ ಸೋಲಿನ ಭೀತಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿಕ್ಕೋಡಿ ಬಿಜೆಪಿ ಲೋಕಸಭೆ ಟಿಕೆಟ್ ಪ್ರಭಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ ರಮೇಶ್ ಕತ್ತಿ ಅವರು ಯಾವುದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬರುತ್ತಿಲ್ಲ, ಟಿಕೆಟ್

ಚಿಕ್ಕೋಡಿ:ಚುಣಾವಣಾ ಪ್ರಚಾರದಿಂದ ಹಿಂದುಳಿದ ರಮೇಶ್ ಕತ್ತಿ, ಜೋಲ್ಲೆಗೆ ಎದುರಾದ ಸೋಲಿನ ಭೀತಿ|ಜಂಟಿ ಪಕ್ಷವಿದ್ದರೂ ಕ್ಷೇತ್ರದಲ್ಲಿ ಒಂಟಿಯಾದ್ರಾ ಜೊಲ್ಲೆ.!? Read More »