ರಾಜ್ಯ

ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸಮಗ್ರ ನ್ಯೂಸ್‌ : ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಚನ್ನಗುಂಡಿ ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ನೀಡಿದ್ದಾರೆ. ಏಪ್ರಿಲ್ 26 ರಂದು ನಡೆಯುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ ಪಕ್ಕದ

ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ Read More »

ಹಾಸನ: ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ;ಹೆಚ್.ಡಿ. ಗಿರೀಶ್

ಸಮಗ್ರ ನ್ಯೂಸ್‌ : ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸುವಂತೆ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ. ಗಿರೀಶ್ ತಿಳಿಸಿದ್ದಾರೆ. ಹಾಸನ ನಗರದ ಜಾಕಿ ಮತ್ತು ಗೋಕುಲದಾಸ ಕೈಗಾರಿಕಾ ಕಾರ್ಖಾನೆಗೆ ಹಾಸನ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ಹಾಗೂ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಭೇಟಿ ನೀಡಿ ಮತದಾನ ಮಾಹಿತಿಯುಳ್ಳ ಬ್ಯಾನರ್ ಅಳವಡಿಸಿ ಅಲ್ಲಿನ ಕಾರ್ಮಿಕರಿಗೆ ಮತದಾನ ಬಗ್ಗೆ

ಹಾಸನ: ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ;ಹೆಚ್.ಡಿ. ಗಿರೀಶ್ Read More »

ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್

ಸಮಗ್ರ ನ್ಯೂಸ್‌ : ಆಲೂರು – ಸಕಲೇಶಪುರ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಮನವಿ ಮಾಡಿದರು. ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಬಿ,ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚುನಾವಣಾ ಪ್ರಚಾರ ಆರಂಭಿಸಿದರು. ಬೆಳಗ್ಗೆಯಿಂದ ರಾತ್ರಿಯ ವರೆಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತಾಲೂಕಿನ ೧೫ ಗ್ರಾಮ ಪಂಚಾಯತಿಗಳಾದ ಹಂಚೂರು, ಗಂಜಿಗೆರೆ, ಮಗ್ಗೆ, ಕೆಂಚಮ್ಮನ ಹೊಸಕೋಟೆ, ಅಬ್ಬನ,

ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್ Read More »

‘ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್’:ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್:ಲೋಕ ಚುನಾವಣೆ ಹಿನ್ನೆಲೆ ಪ್ರಚಾರದ ಅಬ್ಬರ ಜೋರಾಗಿದ್ದು, ಆಯಾ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸುತ್ತಿದ್ದಾರೆ. ಇದೇ ರೀತಿ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಪರ ನಟ ಪವನ್ ಕಲ್ಯಾಣ್ ಪ್ರಚಾರ ಮಾಡುತ್ತಾರೆ ಎಂಬ ಮಾಹಿತಿ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್, ಬಿಜೆಪಿ ಪರ ಪವನ್ ಕಲ್ಯಾಣ್ ಪ್ರಚಾರ ಮಾಡಲ್ಲ, ಒತ್ತಾಯದ ಮೇರೆಗೆ ಅವರು ಬರುತ್ತಿದ್ದಾರೆ. ನಾನು ಕೂಡ

‘ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್’:ಪ್ರದೀಪ್ ಈಶ್ವರ್ Read More »

ಬೇಲೂರು: ಉತ್ತಮ ಮಳೆಗಾಗಿ ಹನುಮನಿಗೆ ವಿಶೇಷ ಪೂಜೆ

ಸಮಗ್ರ ನ್ಯೂಸ್‌ : ಪಟ್ಟಣದ ಹೊಳೆ ಬೀದಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮನವಮಿಯ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಿದ ಸಂದರ್ಭದಲ್ಲಿ, ಹನುಮಂತ ದೇವರಿಗೆ ಉತ್ತಮ ಮಳೆಯಾಗಲೆಂದು ವಿಶೇಷ ಪುಷ್ಪಾಲಂಕಾರರೊಂದಿಗೆ ಪೊಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ, ದೇವಾಲಯದ ವತಿಯಿಂದ ಭಕ್ತಾದಿಗಳಿಗೂ ಹಾಗೂ ಸಾರ್ವಜನಿಕರಿಗೂ ಕೋಸಂಬರಿ, ಪಾನಕ ವಿತರಿಸಲಾಯಿತು. ದೇಗುಲದ ಉಪಾಧ್ಯಕ್ಷೆ ಸೌಮ್ಯ ಆನಂದ್ ಮಾತನಾಡಿ, ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೂ ಸಹ ಸಮಸ್ಯೆ ಆಗುತ್ತಿದೆ. ಈಗಾಗಲೇ ಮುಂಗಾರು ರಾಜ್ಯ

ಬೇಲೂರು: ಉತ್ತಮ ಮಳೆಗಾಗಿ ಹನುಮನಿಗೆ ವಿಶೇಷ ಪೂಜೆ Read More »

ಬೇಲೂರು: ಕುಡಿಯುವ ನೀರಿಲ್ಲದೆ ಪರದಾಟ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಸಮಗ್ರ ನ್ಯೂಸ್‌ : ತಾಲೂಕಿನ ಚಟಚಟನಹಳ್ಳಿ ಗ್ರಾಪಂ ವ್ಯಾಪ್ತೀಯ ನಾಗರಾಜಪುರ ಗ್ರಾಮದಲ್ಲಿ ಸುಮಾರು ೫ ತಿಂಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಇದ್ದರೂ ಸಹ ಯಾವುದೇ ಜಪ್ರತಿನಿಧಿಗಳಾಗಲಿ ಹಾಗು ತಾಲೂಕು ಆಡಳಿತಾಧಿಕಾರಿಗಳಾಗಲಿ ಗಮನ ಹರಿಸದೆ ಇರುವುದರಿಂದ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ನೀರು ಕೊಡಿ ಇಲ್ಲದಿದ್ದರೆ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಖಾಲಿ ಕೊಡ ಹಾಗೂ ಗುರುತಿನ ಚೀಟಿ ಹಿಡಿದು ಪ್ರತಿಭಟನೆ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಮದ ಮುಖಂಡ ಪರಮೇಶ್ ನಮ್ಮ ನಾಗರಾಜಪುರ ಗ್ರಾಮದಲ್ಲಿ ೧೫೦

ಬೇಲೂರು: ಕುಡಿಯುವ ನೀರಿಲ್ಲದೆ ಪರದಾಟ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ Read More »

ಕೋಲಾರ: ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಕರೆದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಹಲವು ಚರ್ಚೆಗಳ ನಡುವೆ ರಾಹುಲ್ ಗಾಂಧಿ ಅವರು ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಮಾತು ಭಾರೀ ಚರ್ಚೆಗೆ ಕಾರಣವಾಗಿದೆ. ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕರ್ನಾಟಕ ಜನರಿಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. ಆ ಬಳಿಕ ಕಾಂಗ್ರೆಸ್ ಪ್ರಬಲ ನಾಯಕರಿಬ್ಬರ ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು. ಖರ್ಗೆ ಜಿ,

ಕೋಲಾರ: ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಕರೆದ ರಾಹುಲ್ ಗಾಂಧಿ Read More »

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಶುಭ ಕೋರಿದ ಮೋದಿ

ಸಮಗ್ರ ನ್ಯೂಸ್‌ : ಸಿದ್ದಾರೂಢ ಶ್ರೀಗಳು ಉತ್ತರ ಕರ್ನಾಟಕದ ಆರಾಧ್ಯ ದೈವ. ಸಿದ್ದಾರೂಢ ಶ್ರೀಗಳನ್ನು ನೆನೆಯದೆ ಈ ಭಾಗದ ಜನರು ಯಾವುದೇ ಕಾರ್ಯಗಳನ್ನು ನಡೆಸುವುದಿಲ್ಲ. ಅಂತಹ ಮಹಾಪುರುಷ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. ಸಿದ್ಧಾರೂಢ ಶ್ರೀಗಳ 188 ನೇ ಜಯಂತಿ ಹಿನ್ನೆಲೆಯಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ. ಸದ್ಗುರು ಶ್ರೀ ಸಿದ್ದಾರೂಢ ಶ್ರೀಗಳಿಗೆ ನನ್ನ ಗೌರವ ನಮನಗಳು. ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಶುಭ ಕೋರಿದ ಮೋದಿ Read More »

ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ

ಸಮಗ್ರ ನ್ಯೂಸ್‌ : ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುರವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿರುವ ಘಟನೆ ನಡೆದಿದೆ. ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ರೂ. ಬೃಹತ್

ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ Read More »

ಬಿಜೆಪಿ ಸೇರಿದ ಅಖಂಡ ಶ್ರೀನಿವಾಸ ಮೂರ್ತಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಅಖಂಡ ಶ್ರೀನಿವಾಸ ಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಟಿಕೆಟ್ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡಿರುವ ಪುಲಿಕೇಶಿನಗರ ಜಿಲ್ಲೆಯ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಯಡಿಯೂರಪ್ಪ ಅವರು ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು,

ಬಿಜೆಪಿ ಸೇರಿದ ಅಖಂಡ ಶ್ರೀನಿವಾಸ ಮೂರ್ತಿ Read More »