ರಾಜ್ಯ

ಬಿಹಾರ : ಜೇಡದಲ್ಲೂ ಮಾನವನ ಮುಖದ ರೂಪ ಪತ್ತೆ|ವಿಡಿಯೋ ಎಲ್ಲೆಡೆ ವೈರಲ್‌

ಸಮಗ್ರ ನ್ಯೂಸ್: ಮಾನವನ ಮುಖವನ್ನು ಹೋಳುವ ಜೇಡವೊಂದು ಪತ್ತೆಯಾಗಿರುವ ಘಟನೆ ಬಿಹಾರದ ಜೆಹಾನಾಬಾದ್‌ನ ಮನೆಯೊಂದರಲ್ಲಿ ನಡೆದಿದೆ. ಈ ವಿಭಿನ್ನವಾದ ಜೇಡದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮನೆಯೊಂದರ ಗೋಡೆಯ ಮೇಲೆ ಅಂಟಿಕೊಂಡಿದ್ದ ಈ ಜೇಡವನ್ನು ಸ್ಥಳೀಯರು ನೋಡಲು ಮುಗಿಬಿದ್ದಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಮಾನವನ ಮುಖವನ್ನು ಹೋಳುವ ಜೇಡದ ವಿಡಿಯೋ ಹಾಕಿದ್ದು, ಒಂದೇ ವಾರದಲ್ಲಿ 38 ಸಾವಿರಕ್ಕೂ ಹೆಚ್ಚಿನ ಜನರು ನೋಡಿದ್ದಾರೆ. ಮಾನವನ ಮುಖವನ್ನು ಹೋಳುವ ಜೇಡದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್

ಬಿಹಾರ : ಜೇಡದಲ್ಲೂ ಮಾನವನ ಮುಖದ ರೂಪ ಪತ್ತೆ|ವಿಡಿಯೋ ಎಲ್ಲೆಡೆ ವೈರಲ್‌ Read More »

ಚಿಕ್ಕಮಗಳೂರು: ಚುನಾವಣೆ ಹಿನ್ನಲೆಯಲ್ಲಿ ಹೋಮ್ ಸ್ಟೇ, ರೆಸಾರ್ಟ್ ಬುಕ್ಕಿಂಗ್ ರದ್ದುಗೊಳಿಸಿ‌ ಡಿಸಿ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಜಿಲ್ಲೆಯಲ್ಲಿ ಹಾಗೂ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ಹೊರಗುಳಿಯಬಾರದು. ಪ್ರತಿಯೊಂದು ಮತವು ಅತ್ಯಮೂಲ್ಯ ಎಂಬ ತಾತ್ವಿಕ ನೆಲೆಗಟ್ಟಿನಡಿ ಏಪ್ರಿಲ್ 26 ರಂದು ಶೇ 100ರಷ್ಟು ಮತದಾನ ಆಗುವಂತೆ ನೋಡಿಕೊಳ್ಳುವುದು ಜಿಲ್ಲಾ ಚುನಾವಣಾಧಿಕಾರಿಗಳ ಕರ್ತವ್ಯವಾಗಿರುತ್ತದೆ, ರಾಜ್ಯದಲ್ಲಿ ಶೇ 100 ರಷ್ಟು ಮತದಾನ ಮಾಡಿಸುವ ನಿಟ್ಟಿನಲ್ಲಿ ಏಪ್ರಿಲ್ 25 ಹಾಗೂ ಏಪ್ರಿಲ್ 26 ರಂದು ಬೇರೆ ಬೇರೆ ಜಿಲ್ಲೆಯ ಪ್ರವಾಸಿಗರನ್ನು

ಚಿಕ್ಕಮಗಳೂರು: ಚುನಾವಣೆ ಹಿನ್ನಲೆಯಲ್ಲಿ ಹೋಮ್ ಸ್ಟೇ, ರೆಸಾರ್ಟ್ ಬುಕ್ಕಿಂಗ್ ರದ್ದುಗೊಳಿಸಿ‌ ಡಿಸಿ ಆದೇಶ Read More »

ಹವಾಮಾನ ವರದಿ| ರಾಜ್ಯಾದ್ಯಂತ ಎ.18ರಿಂದ 4‌ ದಿನ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿ ಕರ್ನಾಟಕದ 27ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 19ರಂದು ಬೆಂಗಳೂರಿನಲ್ಲಿ ಮಳೆಯಾಗಲಿದ್ದು, ಏಪ್ರಿಲ್ 18ರಂದು ಕೊಡಗು, ಮೈಸೂರು, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಕೆಲವೆಡೆ ಮಳೆಯಾಗಲಿದೆ. ಒಟ್ಟಿನಲ್ಲಿ ಮುಂದಿನ 4 ದಿನಗಳ ಕಾಲ ರಾಜ್ಯದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೂಡ ಈಗಾಗಲೇ ಮಳೆ ಶುರುವಾಗಿ ಬಿಸಿಲಿನಿಂದ ಮುಕ್ತಿ ದೊರೆತಿದೆ.

ಹವಾಮಾನ ವರದಿ| ರಾಜ್ಯಾದ್ಯಂತ ಎ.18ರಿಂದ 4‌ ದಿನ ಮಳೆ‌ ಸಾಧ್ಯತೆ Read More »

ಚುನಾವಣೆ ವೇಳೆ ಜಪ್ತಿ ಮಾಡಲಾಗುವ ಹಣ, ಒಡವೆ, ಮದ್ಯ ಎಲ್ಲಿಗೆ ಹೋಗುತ್ತೆ?|ವಶ ಪಡಿಸಿಕೊಂಡ ಹಣ ವಾಪಸ್ ಪಡೆಯಬಹುದಾ?

ಸಮಗ್ರ ನ್ಯೂಸ್: ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ದೊಡ್ಡ ಮೊತ್ತದ ಹಣವನ್ನು ವಾಹನಗಳಲ್ಲಿ ತೆಗೆದುಕೊಂಡು ಹೋಗಲು ಆಗುವುದಿಲ್ಲ. ಹೈವೇಗಳಲ್ಲಿ, ಗಡಿ ಭಾಗದಲ್ಲಿ, ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿ ತಪಾಸಣೆ ಮಾಡಲಾಗುತ್ತಿರುತ್ತದೆ. ಮದುವೆಗೆ ಹೋಗುತ್ತಿದ್ದೇವೆ, ಆಸ್ಪತ್ರೆಯಲ್ಲಿ ಆಪರೇಷನ್ ಇದೆ. ಹೀಗಾಗಿ ಹಣ ತೆಗೆದುಕೊಂಡು ಹೋಗುತ್ತಿದ್ದೀವಿ ಎಂದರೂ ಅಧಿಕಾರಿಗಳು ಬಿಡುವುದಿಲ್ಲ. ಹಣ ನಿಮ್ಮದು ಎನ್ನಲು ಪುರಾವೆ ನೀಡಿ ಎನ್ನುತ್ತಾರೆ. ಈ ರೀತಿ ಚುನಾವಣೆ ವೇಳೆ ಜಪ್ತಿ ಮಾಡಲಾಗುವ ಹಣ, ನಗದು, ಮದ್ಯವನ್ನು ಏನು ಮಾಡಲಾಗುತ್ತೆ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಿದರೆ,

ಚುನಾವಣೆ ವೇಳೆ ಜಪ್ತಿ ಮಾಡಲಾಗುವ ಹಣ, ಒಡವೆ, ಮದ್ಯ ಎಲ್ಲಿಗೆ ಹೋಗುತ್ತೆ?|ವಶ ಪಡಿಸಿಕೊಂಡ ಹಣ ವಾಪಸ್ ಪಡೆಯಬಹುದಾ? Read More »

ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ

ಸಮಗ್ರ ನ್ಯೂಸ್: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ವಯಸ್ಸು 85 ಮೀರಿರುವ ಹಿರಿಯ ನಾಗರೀಕರು(ಎವಿಎಸ್‍ಸಿ), ವಿಕಲಚೇತನರು (ಎವಿಪಿಡಿ) ಮತ್ತು ಕೋವಿಡ್ ಶಂಕಿತ/ಬಾಧಿತ ವ್ಯಕ್ತಿಗಳನ್ನು (ಎವಿಸಿಒ) ಮತ್ತು ಅಗತ್ಯ ಸೇವೆಗಳ ಮೇರೆ ನಿಯೋಜನೆಗೊಂಡಿರುವ (ಎವಿಇಎಸ್) ವ್ಯಕ್ತಿಗಳನ್ನು ಗೈರು ಹಾಜರಿ ಮತದಾರರು ಎಂದು ಪರಿಗಣಿಸಲಾಗುತ್ತದೆ. ಈ ಗೈರು ಹಾಜರಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದೆಂಬುದನ್ನು ಗಮನದಲ್ಲಿರಿಸಿ ಇವರುಗಳಿಗೆ ಮನೆಯಿಂದಲೆ ಮತದಾನ (ಹೋಮ್ ವೋಟಿಂಗ್) ಮಾಡುವ ಸೌಲಭ್ಯ ಕರ್ಣಾಟಕ ಸರಕಾರವು ಕಲ್ಪಿಸಲಾಗಿರುತ್ತದೆ. ಅದರಂತೆ ಮನೆಯಿಂದಲೆ ಮತದಾನ(ಹೋಮ್ ವೋಟಿಂಗ್) ಕಾರ್ಯಕ್ಕೆ ಇಬ್ಬರು

ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ Read More »

ಚಾಮರಾಜನಗರ : ವಿದ್ಯುತ್ ತಂತಿ ತಗುಲಿ ಮೇವು ಸಾಗಣೆ ಲಾರಿ ಸುಟ್ಟು ಭಸ್ಮ

ಸಮಗ್ರ ನ್ಯೂಸ್‌ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯಹಟ್ಟಿ ಹಾಗೂ ಪಳನಿಮೇಡು ಮಾರ್ಗ ಮಧ್ಯೆ ಗೋಶಾಲೆಗೆ ಮೇವು ತುಂಬಿಕೊಂಡು ತೆರುಳುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕುರಟ್ಟಿಹೊಸೂರಿಗೆ ಜಾನುವಾರುಗಳಿಗೆ ಮೇವು ಸಾಗಣೆ ಮಾಡುತ್ತಿದ್ದ ಲಾರಿಗೆ ಪಳನಿಮೇಡು ಹಾಗೂ ಕೆಂಪಯ್ಯನಹಟ್ಟಿ ಮಾರ್ಗ ಮಧ್ಯೆ ಅಚಾನ್ ಕ್ಕಾಗಿ ವಿದ್ಯುತ್ ತಂತಿ ತಗಲಿದ ಪರಿಣಾಮ ಮೇವು ಸಮೇತ ಲಾರಿ ಕೆಲವೇ ನಿಮಿಷಗಳಲ್ಲಿ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ

ಚಾಮರಾಜನಗರ : ವಿದ್ಯುತ್ ತಂತಿ ತಗುಲಿ ಮೇವು ಸಾಗಣೆ ಲಾರಿ ಸುಟ್ಟು ಭಸ್ಮ Read More »

ಯುಪಿಎಸ್ಸಿ ಫಲಿತಾಂಶ ಪ್ರಕಟ| ಕರ್ನಾಟಕದ ‌15ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಸ್

ಸಮಗ್ರ ನ್ಯೂಸ್: 2023 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ (UPSC) ನಾಗರೀಕ ಸೇವಾ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಗಳಲ್ಲಿ ಕರ್ನಾಟಕದ 15 ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಸಾಗುವ ಮೂಲಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ 2023ನೇ ಸಾಲಿನಲ್ಲಿ ಕೇಂದ್ರ ಲೋಕಸೇವಾ ಆಯೋಗವು 1016 ಪೋಸ್ಟ್​ಗಳಿಗೆ ಅರ್ಜಿ ಆಹ್ವಾನಿಸಿತ್ತು, ಇದಕ್ಕೆ ದೇಶಾದ್ಯಂತ ಲಕ್ಷಾಂತರ ಮಂದಿ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದರು. ಅಂತಿಮವಾಗಿ ಆದಿತ್ಯಾ ಶ್ರೀವಾಸ್ತವ ಮೊದಲೇ ರ್ಯಾಂಕ್​ ಪಡೆದರೆ, ಅನಿಮೇಶ್​ ಪ್ರಧಾನ್​ ದ್ವಿತೀಯ ರ್ಯಾಂಕ್​, ದೋರೂರು ಅನನ್ಯ

ಯುಪಿಎಸ್ಸಿ ಫಲಿತಾಂಶ ಪ್ರಕಟ| ಕರ್ನಾಟಕದ ‌15ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಸ್ Read More »

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ಬುದ್ದಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಬಿಲ್ಲವ ಮತಗಳೇ ನಿರ್ಣಾಯಕವಾಗಿದ್ದು, ಬಿಲ್ಲವ ವೋಟ್ ಛಿದ್ರವಾಗದಂತೆ ಮತಗಳನ್ನು ಭದ್ರಪಡಿಸಲು ಬಿಜೆಪಿ – – ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇದೇ ಸ್ಟ್ರಾಟಜಿಯನ್ನು ಮುಂದುವರಿಸಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರಿಂದ ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ ಸಹ ನೀಡಲಾಗಿದೆ. ಬಿಜೆಪಿಗೆ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಕಾಂಗ್ರೆಸ್ ನ

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ Read More »

ಎಪ್ರಿಲ್ 20 ರಂದು ಕರುನಾಡಿಗೆ ನಮೋ| ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಚಾರ, ರ್ಯಾಲಿಗಳು ನಡೆಯುತ್ತಿದ್ದು, ಮೊನ್ನೆಯಷ್ಟೆ ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ಮೈಸೂರು ಮಂಗಳೂರಿನಲ್ಲಿ ಸಮಾವೇಶ ಕೈಗೊಂಡಿದರು. ಇದೀಗ ಮತ್ತೊಮ್ಮೆ ಕರುನಾಡಿಗೆ ನಮೋ ಎಂಟ್ರಿ ಕೊಡಲಿದ್ದಾರೆ. ಇದೇ ಶನಿವಾರ ಎಪ್ರಿಲ್ 20 ರಂದು ನಮೋ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ. ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ

ಎಪ್ರಿಲ್ 20 ರಂದು ಕರುನಾಡಿಗೆ ನಮೋ| ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ Read More »

ಹಾಸನ: ಗ್ಯಾರಂಟಿ ಕುರಿತ ಹೆಚ್‌ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಸಮಗ್ರ ನ್ಯೂಸ್‌ : ರಾಜ್ಯ ಕಾಂಗೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಪಡೆಯುತ್ತಿರುವ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಇದೀಗ ವಿವಾಧಕ್ಕೆ ಕಾರಣವಾಗಿ ಇದೀಗ ಕಾಂಗ್ರೆಸ್ ಪಕ್ಷದ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರುತಿ ಗುಂಡೇಗೌಢ ಪಟ್ಟಣದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿ ಸರ್ಕಾರದ ಗ್ಯಾರಂಟಿಗಳು ಪಕ್ಷಾತೀತವಾಗಿ ಎಲ್ಲರೂ ಪಡೆಯುತ್ತಿದ್ಧಾರೆ. ಈ ಗ್ಯಾರಂಟಿಗಳಿಂದ ಅದೇಷ್ಟೊ ಕುಟುಂಬಗಳು ಇಂದು ನೆಮ್ಮದಿಯ ಜೀವನ ನಡೆಸುವಂತಾಗಿದೆ

ಹಾಸನ: ಗ್ಯಾರಂಟಿ ಕುರಿತ ಹೆಚ್‌ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ Read More »