ರಾಜ್ಯ

ವರ್ಷದ ಮೊದಲ ಮಳೆ ಆಗಿದ್ದು ಯಾವ ಜಿಲ್ಲೆಯಲ್ಲಿ? ಇಲ್ಲಿದೆ ನೋಡಿ ವೆದರ್ ಅಪ್ಡೇಟ್

ಸಮಗ್ರ ನ್ಯೂಸ್: ಹವಾಮಾನ ತಜ್ಞರು ಮಾರ್ಚ್ 20ರ ಬಳಿಕ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದ್ದರು. ಆದರೆ ಅದಕ್ಕೂ ಮೊದಲೇ ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಕೊಂಚ ಮಳೆಯಾಗಿದೆ. ಬಿರು ಬೇಸಿಗೆಯ ನಡುವೆ ರಾಜ್ಯದ ಜನರಿಗೆ ಸಂತಸದ ಸುದ್ದಿಯೊಂದು ಇಲ್ಲಿದೆ. ಈ ವರ್ಷದ ಮೊದಲ ಮಳೆಗೆ ಕರ್ನಾಟಕ ಸಾಕ್ಷಿಯಾಗಿದೆ. ಈ ಕುರಿತು ಮಾಹಿತಿ ನಿಮಗೆಂದೇ ಇಲ್ಲಿದೆ. ದಕ್ಷಿಣ ಕರ್ನಾಟಕದ ಹಲವು ಗ್ರಾಮಗಳಲ್ಲಿ ಬುಧವಾರ 2024 ರ ಮೊದಲ ಮಳೆ ದಾಖಲಾಗಿದೆ. ಮೈಸೂರು ಮತ್ತು ಕೊಡಗು

ವರ್ಷದ ಮೊದಲ ಮಳೆ ಆಗಿದ್ದು ಯಾವ ಜಿಲ್ಲೆಯಲ್ಲಿ? ಇಲ್ಲಿದೆ ನೋಡಿ ವೆದರ್ ಅಪ್ಡೇಟ್ Read More »

ವಿಜಯಪುರ : ನೆಮ್ಮದಿಯ ಬದುಕು ಬೇಕೋ, ಬಿಜೆಪಿಯ ಸುಳ್ಳು ಬೇಕೋ ನಿರ್ಧರಿಸಿ ಎಂದ ಅಪ್ಪಾಜಿ ನಾಡಗೌಡ

ಸಮಗ್ರ ನ್ಯೂಸ್‌ : ಮೋದಿ ಸರಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್ ಪಕ್ಷದ ಕಳಕಳಿ ಯೋಜನೆಗಳು ಬೇಕೊ ನೀವೇ ನಿರ್ಧರಿಸಿ ಎಂದು ಶಾಸಕ ಹಾಗೂ ಸಾಬೂನು-ಮಾರ್ಜಕ ನಿಗಮದ ಆಧ್ಯಕ್ಷರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ಮುದ್ದೇಬಿಹಾಳ ಕ್ಷೇತ್ರದ ಮಿಣಜಗಿಯಲ್ಲಿ ಮಂಗಳವಾರ ನಡೆದ ಜಿಪಂ ವ್ಯಾಪ್ತಿಯ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರ ನುಡಿದಂತೆ ನಡೆದುಕೊಂಡು ಹೆಣ್ಣುಮಕ್ಕಳ, ಯುವಕರ ಮನಸ್ಸು ಗೆದ್ದಿದೆ. ಕೆಲವೇ ತಿಂಗಳಲ್ಲಿ ಹೇಳಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದೆ. ಮೋದಿಯವರು ನೀಡಿದ್ದ ಯಾವೊಂದು ಮಾತನ್ನೂ ಉಳಿಸಿಕೊಂಡಿಲ್ಲ.

ವಿಜಯಪುರ : ನೆಮ್ಮದಿಯ ಬದುಕು ಬೇಕೋ, ಬಿಜೆಪಿಯ ಸುಳ್ಳು ಬೇಕೋ ನಿರ್ಧರಿಸಿ ಎಂದ ಅಪ್ಪಾಜಿ ನಾಡಗೌಡ Read More »

ಎಸ್ ಡಿಎಂ ಶಾಲೆಯ ಕಾಮುಕ ಶಿಕ್ಷಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್‌ : ದ. ಕ ಜಿಲ್ಲೆಯ ಉಜಿರೆಯ ಎಸ್ ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಾಮುಕ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್ ಜೈನ್ ಎಂಬಾತ ಅಪ್ರಾಪ್ತ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಕಳೆದ 2023 ಜೂನ್ ನಿಂದ ಈತನ ಈ ವರ್ತನೆಯಿಂದ ಶಾಲೆಗೆ ತೆರಳಲು ವಿದ್ಯಾರ್ಥಿನಿಯರು ಹಿಂದೇಟು ಹಾಕುತ್ತಿದ್ದರು. ಪೋಷಕರು ವಿಚಾರಿಸಿದಾಗ 6ನೇ ತರಗತಿಯ ಅಪ್ರಾಪ್ತ ಬಾಲಕಿ ಅಳಲು ತೋಡಿಕೊಂಡಿದ್ದಳು.

ಎಸ್ ಡಿಎಂ ಶಾಲೆಯ ಕಾಮುಕ ಶಿಕ್ಷಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ Read More »

ಲೋಕಸಭಾ ಚುನಾವಣೆ/ ದಾಖಲೆಯ ಮೊತ್ತದ ಹಣ ಮತ್ತು ವಸ್ತುಗಳು ವಶ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ವೇಳೆ ನಡೆಯುವ ಅಕ್ರಮಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ಇರಿಸಿದ್ದು, ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಇಲ್ಲಿಯ ತನಕ ದೇಶದಲ್ಲಿ ಬರೋಬ್ಬರಿ 4,650 ಕೋಟಿ ರು. ಮೌಲ್ಯದ ವಸ್ತುಗಳು ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದು ದೇಶದ 75 ವರ್ಷದ ಚುನಾವಣಾ ಇತಿಹಾಸದಲ್ಲೇ ದಾಖಲೆಯಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ. ಈ ಒಟ್ಟು ಅಕ್ರಮದಲ್ಲಿ 2069 ಕೋಟಿ ರು. ಮೌಲ್ಯದ ಮಾದಕ ವಸ್ತುಗಳು (ಡ್ರಗ್ಸ್) ಕೂಡ ಸೇರಿವೆ ಎಂದು ಅದು ಹೇಳಿದೆ.

ಲೋಕಸಭಾ ಚುನಾವಣೆ/ ದಾಖಲೆಯ ಮೊತ್ತದ ಹಣ ಮತ್ತು ವಸ್ತುಗಳು ವಶ Read More »

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ – ಮನೋಜ್ ಕುಮಾ ಮೀನಾ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್​ ಕುಮಾರ್​ ಮೀನಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಐಟಿ ವಲಯ ಸೇರಿದಂತೆ

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ – ಮನೋಜ್ ಕುಮಾ ಮೀನಾ Read More »

ವೋಟರ್ ಸ್ಲಿಪ್‍ಗಳಲ್ಲಿ ಮತಗಟ್ಟೆಯ ಕ್ಯೂಆರ್ ಕೋಡ್/ ಚುನಾವಣಾ ಆಯೋಗದ ನೂತನ ಪ್ರಯೋಗ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮತಗಟ್ಟೆಯನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುವಂತೆ ಮನೆ ಮನೆಗೆ ಹಂಚುವ ವೋಟರ್ ಸ್ಲಿಪ್‍ಗಳಲ್ಲಿ ಇದೇ ಮೊದಲ ಬಾರಿಗೆ ಮತಗಟ್ಟೆಯ ಕ್ಯೂಆರ್ ಕೋಡ್ ಮುದ್ರಿಸಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮಾಡಿರುವ ಪ್ರಯೋಗ ಇದಾಗಿದ್ದು, ರಾಜ್ಯದ ನಗರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸೌಲಭ್ಯ ಜಾರಿಯಾಗಿದೆ. ನಗರದ ನಿವಾಸಿಗಳು ಕ್ಯೂಆರ್ ಕೋಡ್ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ತಲುಪಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ

ವೋಟರ್ ಸ್ಲಿಪ್‍ಗಳಲ್ಲಿ ಮತಗಟ್ಟೆಯ ಕ್ಯೂಆರ್ ಕೋಡ್/ ಚುನಾವಣಾ ಆಯೋಗದ ನೂತನ ಪ್ರಯೋಗ Read More »

ಆನೇಕಲ್: ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಸೀಜ್

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ರಾಜ್ಯದಾದ್ಯಂತ ಅಲ್ಲಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದು ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಸಿಎಂಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ ಎಟಿಎಂಗೆ ಹಣ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಾಹನ ಪರಿಶೀಲನೆ ಮಾಡಿದ್ದು, ಬಂದೂಕು ಸಹಿತ ಸೆಕ್ಯೂರಿಟಿ ಗಾರ್ಡ್ ಇಲ್ಲದೆ

ಆನೇಕಲ್: ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಸೀಜ್ Read More »

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ತೆರಳಿದ್ದ ಸಚಿವ ಜಮೀರ್ ಅಹಮ್ಮದ್​ ಖಾನ್​ಗೆ​ ಎದೆ ನೋವು ಕಾಣಿಸಿಕೊಂಡಿದೆ. ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.. ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ, ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್​ ಬಂದಿದೆ

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು: ಆಸ್ಪತ್ರೆಗೆ ದಾಖಲು Read More »

ಮೈಸೂರಿನಲ್ಲಿ ಬಿಜೆಪಿ ಸಮಾವೇಶ/ ಸ್ಥಳದ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಯದುವೀರ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶದ ನಂತರ ಆ ಜಾಗದಲ್ಲಿ ಕಸ ಹೆಕ್ಕುವ ಮೂಲಕ ಯದುವೀರ್ ದಂಪತಿ ಗಮನ ಸೆಳೆದಿದ್ದಾರೆ. ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಭಾಷಣ ಮಾಡಿದ್ದು, ಕಾರ್ಯಕ್ರಮದಲ್ಲಿ ಒಟ್ಟಾರೆ ಅರವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಮೈಸೂರು ಕೊಡಗು ಕ್ಷೇತ್ರದ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಮತಯಾಚನೆ ಮಾಡಿದ್ದರು. ಜನರು ಸೇರಿದ್ದ ವೇಳೆ ನೀರಿನ ಬಾಟಲಿಗಳು, ತಿಂಡಿ ಕವರ್‍ಗಳು ಹೀಗೆ ಸಾಕಷ್ಟು

ಮೈಸೂರಿನಲ್ಲಿ ಬಿಜೆಪಿ ಸಮಾವೇಶ/ ಸ್ಥಳದ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಯದುವೀರ್ Read More »

ಕೊಡಗಿನಲ್ಲಿ ಹೆಚ್ಚಾಗುತ್ತಿದೆ ವನ್ಯಪ್ರಾಣಿಗಳ ಉಪಟಳ|ನಾಡಿನ ಜನರ ಸ್ವಚ್ಛಂದ ಬದುಕಿಗೆ ಸ್ಪಂದಿಸದ ಸರಕಾರಗಳು|ಕಂಗಾಲಾದ ಕೊಡಗಿನ ರೈತರು

ಸಮಗ್ರ ನ್ಯೂಸ್: ಕೊಡಗಿನಲ್ಲಿ ಆನೆ ಮಾನವ ಸಂಘರ್ಷದಿಂದ ನಾಡಿನಲ್ಲಿ ಹಲವು ಜೀವಗಳು ಬಲಿಯಾಗುತ್ತಿವೆ. ಈ ಸಂಘರ್ಷ ನಿನ್ನೆ ಮೊನ್ನೆಯದಲ್ಲ, ಆದರೆ ಇದುವರೆಗೆ ಕೂಡ ಯಾವ ಸರ್ಕಾರದಿಂದಲೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ. ನಮ್ಮ ರಾಜ್ಯ ಹಲವು ಮುಖ್ಯಮಂತ್ರಿಗಳನ್ನು ಕಂಡರೂ ಅರಣ್ಯ ಸಚಿವರನ್ನು ಕಂಡರು ಈ ಸಮಸ್ಯೆಗೆ ಪರಿಹಾರವನ್ನು ಯಾರು ಕಂಡುಹಿಡಿಯಲಿಲ್ಲ. ಅರಣ್ಯದೊಳಗಿರುವ ವನ್ಯ ಪ್ರಾಣಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಹಾಗೆ ನಾಡಿನಲ್ಲಿರುವವರನ್ನು ಅವರ ಸ್ವಚ್ಛಂದ ಬದುಕಿಗೆ ಅಡ್ಡಿ ಉಂಟಾದಾಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಕೂಡ ಸರ್ಕಾರವೇ. ಆದರೆ

ಕೊಡಗಿನಲ್ಲಿ ಹೆಚ್ಚಾಗುತ್ತಿದೆ ವನ್ಯಪ್ರಾಣಿಗಳ ಉಪಟಳ|ನಾಡಿನ ಜನರ ಸ್ವಚ್ಛಂದ ಬದುಕಿಗೆ ಸ್ಪಂದಿಸದ ಸರಕಾರಗಳು|ಕಂಗಾಲಾದ ಕೊಡಗಿನ ರೈತರು Read More »