ರಾಜ್ಯ

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಗೆ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಅವರ ಹಣೆಗೆ ಗಾಯಗಳಾಗಿದ್ದು, ಎಡ ಹುಬ್ಬಿನ ಬಳಿ ಗಾಯವಾಗಿದೆ. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರು ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಮೇಲಿನ ದಾಳಿಗೆ ತೆಲುಗು ದೇಶಂ ಮತ್ತು ಅದರ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಾರಣ ಎಂದು ವೈಎಸ್ಆರ್​​ಸಿಪಿ ಪಕ್ಷ ಆರೋಪಿಸಿದೆ. ವಿಜಯವಾಡದ ಸಿಂಗ್ ನಗರದ

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ Read More »

ಗದಗ:ಸಾರಿಗೆ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಪಾಟಾ ಕಟ್ ಆಗಿದ್ದರಿಂದ ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಘಟನೆಯ ವೇಳೆ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಅಪಘಾತವಾಗಿದೆ

ಗದಗ:ಸಾರಿಗೆ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ Read More »

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌

ಸಮಗ್ರ ನ್ಯೂಸ್ : ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ ಬಂದರಿಗೆ ಬರುತ್ತಿದ್ದ ಕಂಟೈನರ್‌ ಶಿಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌ Read More »

ಪ್ರಧಾನಿ ಮೈಸೂರು ಪ್ರವಾಸದ ಸಮಯ ಬದಲಾವಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಪ್ರವಾಸದ ಸಮಯ ಬದಲಾವಣೆಯಾಗಿದೆ. ಇಂದು ಸಂಜೆ ಸುಮಾರು ಒಂದು ಗಂಟೆ ತಡವಾಗಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆ ಬದಲಾಗಿ ಸಂಜೆ‌ 5.15ಕ್ಕೆ ಮೈಸೂರಿಗೆ ಬರಲಿದ್ದಾರೆ. ಮಧ್ಯಪ್ರದೇಶದ ಬೋಪಾಲ್ ಏರ್‌ಪೋರ್ಟ್‌ನಿಂದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದಾರೆ. ಸಂಜೆ 4.15ಕ್ಕೆ ಬದಲಾಗಿ 5.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಕಾರ್ಯಕ್ರಮ ಮುಗಿಸಿ, ರಸ್ತೆ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ

ಪ್ರಧಾನಿ ಮೈಸೂರು ಪ್ರವಾಸದ ಸಮಯ ಬದಲಾವಣೆ Read More »

ಹುಣಸೂರು: ಕಾಂಗ್ರೆಸ್ ಸೇರಿದ ನಾಪಂಡ ಮುತ್ತಪ್ಪ

ಸಮಗ್ರ ನ್ಯೂಸ್ : ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನಾಪಂಡ ಮುತ್ತಪ್ಪ ಕಾಂಗ್ರೆಸ್ ಗೆ ಮತ್ತೆ ಸೇಪ೯ಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜವನ್ನು ಮುತ್ತಪ್ಪ ಅವರಿಗೆ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದಭ೯ ಜೈ ಜೈ ಕಾಂಗ್ರೆಸ್ ಎಂದು ಮುತ್ತಪ್ಪ ಹಷ೯ದಿಂದ ಘೋಷಿಸಿದರು. ಮುತ್ತಪ್ಪ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯಥಿ೯ಯಾಗಿ ಸ್ಪಧಾ೯ ಕಣದಲ್ಲಿದ್ದರು. ಕೊಡಗು ಜೆಡಿಎಸ್ ಅಧ್ಕಕ್ಷರಾಗಿಯೂ ಕಾಯ೯ನಿವ೯ಹಿಸಿದ್ದರು. ಅಪಾರ ಬೆಂಬಲಿಗರೊಂದಿಗೆ ತಾನು ಕಾಂಗ್ರೆಸ್ ಸೇಪ೯ಡೆಯಾಗಿರುವುದಾಗಿ ನಾಪಂಡ ಮುತ್ತಪ್ಪ ಈ

ಹುಣಸೂರು: ಕಾಂಗ್ರೆಸ್ ಸೇರಿದ ನಾಪಂಡ ಮುತ್ತಪ್ಪ Read More »

ಧಾರವಾಡ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ

ಸಮಗ್ರ ನ್ಯೂಸ್‌ : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೇ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಕುಟುಂಬ ಸಮೇತರಾಗಿ ಬಂದು ಭೇಟಿ ನೀಡಿದ್ದಾರೆ. ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಳಿಕ ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿದ ಬೊಮ್ಮಾಯಿ, ಧಾರವಾಡದ ಮುರುಘಾಮಠಕ್ಕೆ ಅನಿರೀಕ್ಷಿತ ಭೇಟಿ ನೀಡಿ ಮೃತ್ಯುಂಜಯಪ್ಪಗಳ ದರ್ಶನ ಪಡೆದರು. ಅಲ್ಲದೇ, ಮುರುಘಾಮಠದ ಪೀಠಾಧಿಪತಿ ಡಾ.ಮಲ್ಲಿಕಾರ್ಜುನ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಧಾರವಾಡ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ Read More »

ಮೈಸೂರು: ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ-ಸಿದ್ದರಾಮಯ್ಯ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೋದಿ ಅವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶದ ಜನರಿಗೆ ಸತತವಾಗಿ ಸುಳ್ಳು ಹೇಳಿದ, ನೀಡಿದ ಭರವಸೆಗಳನ್ನು ಈಡೇರಿಸದ ನರೇಂದ್ರ ಮೋದಿ ಅವರು ಯಾವ ಮುಖ ಇಟ್ಟುಕೊಂಡು ಮತ ಕೇಳಲು ಕರ್ನಾಟಕಕ್ಕೆ ಬರುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಸುಳ್ಳು ಹೇಳಿದರೆ ಜನ ಮೋದಿ ಮೋದಿ

ಮೈಸೂರು: ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ-ಸಿದ್ದರಾಮಯ್ಯ Read More »

ಚಾಮರಾಜನಗರ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಿದೆ. ದಕ್ಷಿಣ ಕಾಶಿ ನಂಜನಗೂಡು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬೇಕು. ಉನ್ನತ ಮಟ್ಟಕ್ಕೆ ನಗರವನ್ನು

ಚಾಮರಾಜನಗರ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ Read More »

ಕಲಬುರಗಿ:ರಾಜ್ಯದ ಮುಖ್ಯಮಂತ್ರಿಯಾಗಿ ದತ್ತಾತ್ರೇಯ ದರ್ಶನಕ್ಕೆ‌ ಬರುವೆ ಎಂದ ಡಿಕೆಸಿ

ಸಮಗ್ರ ನ್ಯೂಸ್‌ : ಈ ಭಾಗದಲ್ಲಿ ದೇವಲ ಗಾಣಗಾಪುರ ದತ್ತ ಮಹಾರಾಜರ ದೇವಸ್ಥಾನ ಪವಿತ್ರವಾಗಿದ್ದು, ಅಪಾರ ಭಕ್ತರನ್ನು ಹೊಂದಿದ್ದಾರೆ. ಅದಕ್ಕಾಗಿ ಈ ದೇವಸ್ಥಾನವನ್ನು ಅಭಿವೃದ್ಧಿ ಮಾಡಲಾಗುವುದು, ತಾವೆಲ್ಲಾ ಅರ್ಚಕರು ನಾನು ಮುಖ್ಯಮಂತ್ರಿ ಆಗಿ ಬರಬೇಕೆಂದು ಆಶೀರ್ವಾದ ನೀಡಿ ಸನ್ಮಾನ ಮಾಡಿದ್ದೀರಿ.ಅದಕ್ಕೆ ದತ್ತಾತ್ರೇಯ ಮಹಾರಾಜರ ಆಶೀರ್ವಾದದಿಂದ ಮುಖ್ಯಮಂತ್ರಿಯಾದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರನ್ನು ಸನ್ಮಾನಿಸಿದ ಅರ್ಚಕರು ಮತ್ತೊಮ್ಮೆ

ಕಲಬುರಗಿ:ರಾಜ್ಯದ ಮುಖ್ಯಮಂತ್ರಿಯಾಗಿ ದತ್ತಾತ್ರೇಯ ದರ್ಶನಕ್ಕೆ‌ ಬರುವೆ ಎಂದ ಡಿಕೆಸಿ Read More »

ಕಲಬುರಗಿ ವಿಳಾಸದಲ್ಲಿ ಹಿಂದೂ ಹೆಸರು ಸೇರಿಸಿದ್ದ ಉಗ್ರರು

ಸಮಗ್ರ ನ್ಯೂಸ್‌ : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಪರಾರಿಯಾಗಿದ್ದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ಪಶ್ಚಿಮ ಬಂಗಾಳದ ಹೋಟೆಲ್‌ವೊಂದರಲ್ಲಿ ಕೊಠಡಿ ಪಡೆಯಲು ನಕಲಿ ವಿಳಾಸ ನೀಡಿದ್ದರು ಎಂಬುದು ತನಿಖೆಯಿಂದ ಪತ್ತೆಯಾಗಿದೆ. ‘ಕೋಲ್ಕತ್ತ ಮಹಾನಗರಕ್ಕೆ ಹೊಂದಿಕೊಂಡಿರುವ ಪೂರ್ವ ಮೇದಿನಿಪುರ ಜಿಲ್ಲೆಯ ಹೋಟೆಲ್‌ನಲ್ಲಿ ಮುಸಾವೀರ್ ಹಾಗೂ ಅಬ್ದುಲ್ ಮಥೀನ್ ತಂಗಿದ್ದರು. ಹೋಟೆಲ್‌ ಕೊಠಡಿಯಲ್ಲಿಯೇ ಇಬ್ಬರೂ ಸಿಕ್ಕಿಬಿದ್ದರು. ಇದೇ ಸಂದರ್ಭದಲ್ಲಿ ಹೋಟೆಲ್‌ ಗ್ರಾಹಕರ ಪಟ್ಟಿಯನ್ನು ಪರಿಶೀಲಿಸಿದಾಗ, ಅವರಿಬ್ಬರು ನಕಲಿ ಹೆಸರು ಹಾಗೂ ಅನ್ಯ ವಿಳಾಸ

ಕಲಬುರಗಿ ವಿಳಾಸದಲ್ಲಿ ಹಿಂದೂ ಹೆಸರು ಸೇರಿಸಿದ್ದ ಉಗ್ರರು Read More »