ರಾಜ್ಯ

ನಂಜನಗೂಡು: ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ

ಸಮಗ್ರ ನ್ಯೂಸ್‌ : ಏ.13 ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ ಪ್ರಕ್ರಿಯೆಗೆ ಇಂದು ಶನಿವಾರ ಚಾಲನೆ ನೀಡಲಾಗಿದೆ. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ನಗರದ ಗೌರಿ ಘಟ್ಟ ಬೀದಿಯಲ್ಲಿ ಚುನಾವಣಾ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾನ ಮಾಡಿಸಿದರು. ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು, 85 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅಂಗವಿಕಲರಿಗೆ ಮನೆ ಮನೆ ಮತದಾನ ನಡೆಸಲಾಗುತ್ತಿದೆ. ತಮ್ಮ ತಮ್ಮ

ನಂಜನಗೂಡು: ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ Read More »

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ದುರುದ್ದೇಶದಿಂದ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ) ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಲಾಗಿದೆ. ಅಲ್ಲಿ ಯಾವುದೇ ಹಣಕಾಸಿನ ವ್ಯವಹಾರವೇ ನಡೆದಿಲ್ಲ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಐ.ಟಿ ದಾಳಿ ಕುರಿತು ಪತ್ರಕರ್ತರು ನಗರದಲ್ಲಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಡಿಸಿಸಿ ಬ್ಯಾಂಕಿನ ಮೇಲೆ ದಾಳಿ ನಡೆಸಿದ್ದರಿಂದ ರೈತರು, ಕೃಷಿಕರ ಹಣಕಾಸಿನ ವಹಿವಾಟು, ಹಣ ಪಾವತಿಗೆ ಸಮಸ್ಯೆ ಆಗಲಿದೆ. ಸುಮಾರು ಮೂರು

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ Read More »

ಮುನಿಸು ಮರೆತ ಮಾಧುಸ್ವಾಮಿ/ ಸೋಮಣ್ಣ ಪರ ಪ್ರಚಾರ

ಸಮಗ್ರ ನ್ಯೂಸ್: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡಿದ್ದ ಮಾಜಿ ಸಚಿವ ಮಾಧುಸ್ವಾಮಿ ಅವರು ಇದೀಗ ಇದೇ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರದಲ್ಲಿ ಧುಮುಕಿದ್ದಾರೆ ಅದರಂತೆ ಶುಕ್ರವಾರ ಬೆಳಗ್ಗೆಯಿಂದಲೇ ಮೈತ್ರಿ ಪಕ್ಷದ ಅತೃಪ್ತ ಮುಖಂಡರನ್ನು ಭೇಟಿ ಮಾಡಿ ಬಿಜೆಪಿ ಪರ ಕೆಲಸ ಮಾಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯವಾಗಿ ಜಿಪಂ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಹಾಗೂ ರಾಜ್ಯ ಉಪ್ಪಾರ ಸಮುದಾಯದ ಉಪಾಧ್ಯಕ್ಷರೂ ಆಗಿರುವ ಕಲ್ಲೇಶ್ ಮನೆಗೆ ಭೇಟಿ ಕೊಟ್ಟ ಮಾಧುಸ್ವಾಮಿ

ಮುನಿಸು ಮರೆತ ಮಾಧುಸ್ವಾಮಿ/ ಸೋಮಣ್ಣ ಪರ ಪ್ರಚಾರ Read More »

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ/ ಮೊದಲ ದಿನ 41 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಎರಡನೇ ಹಂತದ ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಪ್ರಕ್ರಿಯೆ ಶುರುವಾಗಿದ್ದು, ಮೊದಲ ದಿನವೇ 41 ಅಭ್ಯರ್ಥಿಗಳಿಂದ 57 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೊಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ. ರಜಾ ದಿನಗಳನ್ನು ಹೊರತುಪಡಿಸಿ ಇತರ ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ/ ಮೊದಲ ದಿನ 41 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

Weather Report: ಬೇಗ ಮನೆ ಸೇರಿಕೊಳ್ಳಿ , ಮಳೆ ಬರುವ ಸಾಧ್ಯತೆ ಇದೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಮಳೆರಾಯನ ಆಗಮನದ ಸಾಧ್ಯತೆ ಇದ್ದು, ಇಂದು ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ. ನಗರದಲ್ಲಿ ಬೆಳಗ್ಗಿನಿಂದಲೂ ತಂಪಾಗಿರುವ ವಾತಾವರಣ ಇದ್ದು, ಸಿಟಿಯ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇದೆ ಎಂದು ಖಾಸಗಿ ಮಾಧ್ಯಮಕ್ಕೆ ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ತಾಪಮಾನ ಕಡಿಮೆ ಆಗುತ್ತಿದೆ. ಏಪ್ರಿಲ್ ಮೊದಲನೇ ವಾರ ತಾಪಮಾನ ಸರಾಸರಿ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಕಳೆದ 15 ವರ್ಷಗಳಲ್ಲಿ ದಾಖಲಾದ

Weather Report: ಬೇಗ ಮನೆ ಸೇರಿಕೊಳ್ಳಿ , ಮಳೆ ಬರುವ ಸಾಧ್ಯತೆ ಇದೆ Read More »

ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು

ಸಮಗ್ರ ನ್ಯೂಸ್: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಇತಿಹಾಸದಲ್ಲೇ ನಂದಿನಿ ಹಾಲು ಮತ್ತು ಮೊಸರು ದಾಖಲೆ ಮಟ್ಟದಲ್ಲಿ ಮಾರಾಟವಾಗಿದ್ದು, ಬಿರು ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳೇ ಇದಕ್ಕೆ ಕಾರಣ ಎನ್ನಲಾಗಿದೆ. ಏಪ್ರಿಲ್ 6 ರಂದು ಒಂದೇ ದಿನ 13.56 ಲಕ್ಷ ಲೀಟರ್ ಸ್ಯಾಚೆಟ್ ಮೊಸರು ಮತ್ತು ಏಪ್ರಿಲ್ 11ರಂದು 51.60 ಲಕ್ಷ ಲೀಟರ್ ಸ್ಯಾಚೆಟ್ ಹಾಲು ಮಾರಾಟವಾಗಿದೆ. ಇದು ಕೆಎಂಎಫ್ ಇತಿಹಾಸದಲ್ಲೇ ಇಲ್ಲಿಯವರೆಗೆ ಒಂದೇ ದಿನದಲ್ಲಿ ಹಾಲು, ಮೊಸರಿನ ಅತ್ಯಧಿಕ ಮಾರಾಟದ ದಾಖಲೆ

ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು Read More »

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ಡಾ. ಟಿ.ಶ್ಯಾಂ ಭಟ್ ನೇಮಕ

ಸಮಗ್ರ ನ್ಯೂಸ್: ರಾಜ್ಯ ಮಾನವ ಹಕ್ಕು ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ.ಶ್ಯಾಂ ಭಟ್ ಅವರನ್ನು ನೇಮಕ ಮಾಡಲಾಗಿದೆ. 2023ರ ನವೆಂಬರ್‍ನಲ್ಲಷ್ಟೇ ನಿವೃತ್ತ ನ್ಯಾ. ಎಲ್.ನಾರಾಯಣಸ್ವಾಮಿ ಅವರನ್ನು ಸರ್ಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ, ಕಳೆದ ಫೆಬ್ರವರಿಯಲ್ಲಿ ನ್ಯಾ. ಎಲ್.ನಾರಾಯಣಸ್ವಾಮಿ ಅವರು ಲೋಕಪಾಲದ ನ್ಯಾಯಾಂಗ ಸದಸ್ಯರಾಗಿ ನೇಮಕರಾಗಿದ್ದು, ಅದಾದ ನಂತರ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸ್ಥಾನ ತ್ಯಜಿಸಿದ್ದರು. ಹೀಗಾಗಿ ಕಳೆದ ಒಂದೂವರೆ ತಿಂಗಳಿಗಿಂತ ಹೆಚ್ಚು ಕಾಲ ರಾಜ್ಯ ಮಾನವ ಹಕ್ಕು

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ಡಾ. ಟಿ.ಶ್ಯಾಂ ಭಟ್ ನೇಮಕ Read More »

ಭೀಕರ ರಸ್ತೆ ಅಪಘಾತ.. ಬಬಲೇಶ್ವರದಲ್ಲಿ ನಾಲ್ವರು ಸಾವು

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು. KA 28 D 1021 ಸಂಖ್ಯೆಯ ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಗೆ ದೇವಸ್ಥಾನಕ್ಕೆ ಹೊರಟಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು

ಭೀಕರ ರಸ್ತೆ ಅಪಘಾತ.. ಬಬಲೇಶ್ವರದಲ್ಲಿ ನಾಲ್ವರು ಸಾವು Read More »

ರಾಜ್ಯದೆಲ್ಲೆಡೆ ವರುಣನ ಆರ್ಭಟ| ಜನಜೀವನ ಅಸ್ತವ್ಯಸ್ತ

ಸಮಗ್ರ ನ್ಯೂಸ್: ರಾಜ್ಯದ ಜನತೆ ಬಿರುಬಿಸಿಲಿನಿಂದ ಬೇಸತ್ತು ಹೋಗಿದ್ದರು. ಆದರೆ ಶುಕ್ರವಾರ ವರುಣದೇವ ತಂಪೆರೆದಿದ್ದಾನೆ. ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಆದರೆ ಅದರಂತೆ ಮಳೆಯಾಗಿದೆ. ಅಷ್ಟೇ ಅಲ್ಲದೆ ಒಂದು ದಿನ ಸುರಿದ ಮಳೆಗೆ ಅನಾಹುತಗಳು ಸಂಭವಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ

ರಾಜ್ಯದೆಲ್ಲೆಡೆ ವರುಣನ ಆರ್ಭಟ| ಜನಜೀವನ ಅಸ್ತವ್ಯಸ್ತ Read More »

ಗುಂಡ್ಲುಪೇಟೆ : ಯುವಕನ ಮೇಲೆ ಹುಲಿ ದಾಳಿ|ಕೈ, ಕುತ್ತಿಗೆಗೆ ಗಾಯ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್‌ : ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಇಂದು ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಹೊನ್ನೇಗೌಡನಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ಹಠಾತ್ತನೆ ಕಾಣಿಸಿಕೊಂಡ ಹುಲಿ ಆತಂಕ ಸೃಷ್ಟಿ ಮಾಡಿತ್ತು. ಹುಲಿಯನ್ನ ಕಂಡ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡುವ ವೇಳೆಗಾಗಲೇ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಕಾಲ್ಕಿತ್ತಿತ್ತು, ಇಲಾಖೆ

ಗುಂಡ್ಲುಪೇಟೆ : ಯುವಕನ ಮೇಲೆ ಹುಲಿ ದಾಳಿ|ಕೈ, ಕುತ್ತಿಗೆಗೆ ಗಾಯ ಆಸ್ಪತ್ರೆಗೆ ದಾಖಲು Read More »