ರಾಜ್ಯ

ರಾಜ್ಯಾದ್ಯಂತ ರಣಬಿಸಿಲು ಹಿನ್ನಲೆ| ಎ. 15ರಿಂದ ಅಂಗನವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಬೇಸಿಗೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣಾ ಸಮಯವನ್ನು ಈ ಮೊದಲು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೂ ನಿಗದಿಪಡಿಸಲಾಗಿತ್ತು. ಬಿಸಿಲು ಹೆಚ್ಚಾಗಿರುವುದರಿಂದ ಉಳಿದ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಏ.15 ರಿಂದ

ರಾಜ್ಯಾದ್ಯಂತ ರಣಬಿಸಿಲು ಹಿನ್ನಲೆ| ಎ. 15ರಿಂದ ಅಂಗನವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ Read More »

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಕಾಂಗ್ರೆಸ್| ಪೆಂಡಾಲ್‌, ಮೈಕ್‌ ತೆಗೆಸಿದ ಬಿಬಿಎಂಪಿ

ಸಮಗ್ರ ನ್ಯೂಸ್: ಬೆಂಗಳೂರಿನ ವೈಯ್ಯಾಲಿಕಾವಲ್‌ನ ಕರ್ನಲ್ ವಸಂತ್ ಕ್ರೀಡಾಂಗಣದಲ್ಲಿ ಆರ್‌ಎಸ್‌ಎಸ್‌ ವತಿಯಿಂದ ಏಪ್ರಿಲ್‌ 9 ಆಯೋಜನೆ ಮಾಡಲಾಗಿದ ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಈ ರೀತಿ ಕಾರ್ಯಕ್ರಮ ಹೇಗೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪೊಲೀಸರಿಗೆ ಪ್ರಶ್ನಿಸಿದ್ದಾರೆ. ಇದರಿಂದ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಪೆಂಡಾಲ್‌ ಹಾಗೂ ಮೈಕ್‌ ಅನ್ನು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳು ತೆಗೆಸಿದ್ದು, ಕಾರ್ಯಕ್ರಮ ಮುಂದುರೆದಿದೆ. ಇನ್ನು ಮುನ್ನಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಕಾಂಗ್ರೆಸ್| ಪೆಂಡಾಲ್‌, ಮೈಕ್‌ ತೆಗೆಸಿದ ಬಿಬಿಎಂಪಿ Read More »

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು

ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು Read More »

ಮಂಡ್ಯ ಅಖಾಡಕ್ಕೆ ರಮ್ಯಾ ಎಂಟ್ರಿ/ ಸಕ್ಕರೆ ನಾಡಿನಲ್ಲಿ ಮೋಡಿ ಮಾಡುತ್ತಾರಾ ಮೋಹಕ ತಾರೆ?

ಸಮಗ್ರ ನ್ಯೂಸ್: ಮಂಡ್ಯ ಅಖಾಡದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಗೆಲುವಿಗೆ ತಂತ್ರ ರೂಪಿಸುತ್ತಿರುವ, ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಲು ಒಪ್ಪಿಗೆ ಸೂಚಿಸಿದ್ದಾರೆ. ರಮ್ಯ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ವಾರ ಅಭ್ಯರ್ಥಿ

ಮಂಡ್ಯ ಅಖಾಡಕ್ಕೆ ರಮ್ಯಾ ಎಂಟ್ರಿ/ ಸಕ್ಕರೆ ನಾಡಿನಲ್ಲಿ ಮೋಡಿ ಮಾಡುತ್ತಾರಾ ಮೋಹಕ ತಾರೆ? Read More »

ಉಡುಪಿ ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್‌ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಏ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು 1997ರಲ್ಲಿ ಉಡುಪಿ ಪ್ರತ್ಯೇಕ ಜಿಲ್ಲೆಯಾಗಿ ರಚನೆಗೊಂಡ ಬಳಿಕ ಉಡುಪಿ

ಉಡುಪಿ ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ Read More »

ಸೋಮವಾರಪೇಟೆ : ವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಂದ ಭರ್ಜರಿ ಚುನಾವಣಾ ಪ್ರಚಾರ

ಸಮಗ್ರ ನ್ಯೂಸ್‌ : ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಕೊಡಗು ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರಿಂದ ಭರ್ಜರಿ ಚುನಾವಣಾ ಪ್ರಚಾರ ನಡೆಯಿತು. ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸ್ಸೂರು, ಹಂಡ್ಲಿ ಮತ್ತು ಶನಿವಾರಸಂತೆಯಲ್ಲಿ ಮತಯಾಚನೆ ಮಾಡಿದರು. ಕೊಡ್ಲಿಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಪೂಜೆ ಸಲ್ಲಿಸಿದರು. ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಕೆಪಿಸಿಸಿ ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು. ಹಂಡ್ಲಿ ಸರ್ಕಲ್ ನಲ್ಲಿ ನಡೆದ

ಸೋಮವಾರಪೇಟೆ : ವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಂದ ಭರ್ಜರಿ ಚುನಾವಣಾ ಪ್ರಚಾರ Read More »

ನಂಜನಗೂಡು : ಹಾಲು ಉತ್ಪಾದಕರಿಗೆ ಹಣ ಜಮೆ ಮಾಡುವಂತೆ ಆಗ್ರಹ

ಸಮಗ್ರ ನ್ಯೂಸ್ : ಹಾಲು ಉತ್ಪಾದಕರಿಗೆ ಕೂಡಲೇ ಹಣವನ್ನು ಜಮೆ ಮಾಡುವಂತೆ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಂಪಾಪುರ ಗ್ರಾಮದ ಹಾಲು ಉತ್ಪಾದಕರು ಒತ್ತಾಯವನ್ನು ಮಾಡಿದ್ದಾರೆ. ನಂಜನಗೂಡು ನಗರದ ತಾಲೂಕು ಆಡಳಿತ ಭವನದ ಮುಂಭಾಗದಲ್ಲಿ ಇಂದು ಹಂಪಾಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಹಾಲು ಉತ್ಪಾದಕರಿಗೆ ಹಣ ಜಮೆಯಾಗಿಲ್ಲ. ಸರ್ಕಾರದಿಂದ ನೀಡುವ ಪ್ರೋತ್ಸಾಹ ಧನವನ್ನು ಸರಿಯಾಗಿ ನೀಡುತ್ತಿಲ್ಲ. ಮಹಿಳಾ ಸಹಕಾರ ಸಂಘ ಆಗಿರುವುದರಿಂದ ಮಹಿಳಾ ಕಾರ್ಯದರ್ಶಿ ಕಾರ್ಯನಿರ್ವಹಿಸಬೇಕು.

ನಂಜನಗೂಡು : ಹಾಲು ಉತ್ಪಾದಕರಿಗೆ ಹಣ ಜಮೆ ಮಾಡುವಂತೆ ಆಗ್ರಹ Read More »

ಬಿಜಾಪುರ : ಐಇಡಿ ಸ್ಫೋಟಗೊಂಡು ಇಬ್ಬರು ವಿಶೇಷ ಕಾರ್ಯ ಪಡೆಯ ಸಿಬ್ಬಂದಿಗೆ ಗಾಯ

ಸಮಗ್ರ ನ್ಯೂಸ್‌ : ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ವಿಶೇಷ ಕಾರ್ಯ ಪಡೆಯ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಛತ್ತೀಸಗಢದ ಬಿಜಾಪುರ ಜಿಲ್ಲೆಯ ಇಟ್ವಾರ್ ಗ್ರಾಮದಲ್ಲಿ ಇಂದು ನಸುಕಿನ ಜಾವ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭದ್ರತಾ ಕಾರ್ಯಾಚರಣೆ ಸಂಬಂಧ ಸಿಬ್ಬಂದಿಯು ಆ ಸ್ಥಳಕ್ಕೆ ತೆರಳಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗಾಯಗೊಂಡವರನ್ನು ಶಿವಲಾಲ್ ಮಾಂಡವಿ ಮತ್ತು ಮಿಥ್ಲೇಶ್ ಮಾರ್ಕಮ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಶೋಧ

ಬಿಜಾಪುರ : ಐಇಡಿ ಸ್ಫೋಟಗೊಂಡು ಇಬ್ಬರು ವಿಶೇಷ ಕಾರ್ಯ ಪಡೆಯ ಸಿಬ್ಬಂದಿಗೆ ಗಾಯ Read More »

ಬೆಕ್ಕನ್ನು ರಕ್ಷಿಸಲು ಪಾಳು ಬಾವಿಗೆ ಇಳಿದ ಐವರು‌ ದಾರುಣ ಸಾವು

ಸಮಗ್ರ ನ್ಯೂಸ್: ಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ. ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗಿದೆ. ಈ ಬಾವಿಗೆ ಬೆಕ್ಕು ಬಿದ್ದಿತ್ತು. ಬೆಕ್ಕನ್ನು ರಕ್ಷಿಸಲು ಒಬ್ಬರ ಬಳಿಕ ಒಬ್ಬರು ಬಾವಿಗೆ ಹಾರಿದ್ದಾರೆ.ಹೀಗೆ ಹಾರಿದವರು ಬಾವಿಯಲ್ಲಿ ಮೃತಪಟ್ಟಿದ್ದಾರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಹಾರಿದ್ದ ಓರ್ವನನ್ನು ಪೊಲಿಸರು ರಕ್ಷಿಸಿದ್ದಾರೆ. ಒಬ್ಬರ ಬಳಿಕ ಒಬ್ಬರು ಒಟ್ಟು 6 ಜನ ಬಾವಿಗೆ ಹಾರಿದ್ದು, ಅವರಲ್ಲಿ ಐವರು ಮೃತಪಟ್ಟಿದ್ದಾರೆ.

ಬೆಕ್ಕನ್ನು ರಕ್ಷಿಸಲು ಪಾಳು ಬಾವಿಗೆ ಇಳಿದ ಐವರು‌ ದಾರುಣ ಸಾವು Read More »

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ

Karnataka Second PUC Results 2024: ಬೆಂಗಳೂರು: ಕಳೆದ ಮಾರ್ಚ್‌ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳ ಎದೆ ಈಗಿಂದಲೇ ಲಬ್‌ಡಬ್‌ ಹೊಡೆಯಲು ಆರಂಭಿಸಿದೆ. ಸಾಮಾನ್ಯವಾಗಿ ಪಿಯುಸಿ ಸೇರಿದಂತೆ ಯಾವುದೇ ಪರೀಕ್ಷೆಯ ಫಲಿತಾಂಶ ಚೆಕ್ ಮಾಡೋವಾಗ ಅನೇಕರು ಎಡವುತ್ತಾರೆ. ಎಷ್ಟೇ ಬಾರಿ ರಿಸಲ್ಟ್ ಚೆಕ್ ಮಾಡಿದರೂ ಎರರ್‌ ಬಂದು ಅತ್ತ

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ Read More »