ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಶೇ.81.15 ರಷ್ಟು ಮಂದಿ ಉತ್ತೀರ್ಣ| ದ.ಕ ಪ್ರಥಮ, ಉಡುಪಿ‌ ದ್ವಿತೀಯ

ಸಮಗ್ರ ನ್ಯೂಸ್: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. 2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಶೇ.81.15 ರಷ್ಟು ಮಂದಿ ಉತ್ತೀರ್ಣ| ದ.ಕ ಪ್ರಥಮ, ಉಡುಪಿ‌ ದ್ವಿತೀಯ Read More »

ಈದ್ ಉಲ್ ಫಿತರ್ ಹಿನ್ನಲೆ| ದ.ಕ ಜಿಲ್ಲೆಯಲ್ಲಿ ಎ.10ಕ್ಕೆ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ಈದುಲ್ ಫಿತ್‌ರ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಏ.10) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಏ.11ರಂದು ಇದ್ದ ಸಾರ್ವತ್ರಿಕ ರಜೆಯನ್ನು ಏ.10ರಂದು ನೀಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಕರ್ನಾಟಕ ಸರಕಾರವು 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ: 11-04-2024 ರಂದು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿತ್ತು. ಏ. 9 ರಂದು ಚಂದ್ರ ದರ್ಶನವಾಗಿರುವುದರಿಂದ ಎ.11ರ ಬದಲಾಗಿ ದಿನಾಂಕ: ಏ.10 ಬುಧವಾರರಂದು ರಜೆ ಘೋಷಿಸಲು

ಈದ್ ಉಲ್ ಫಿತರ್ ಹಿನ್ನಲೆ| ದ.ಕ ಜಿಲ್ಲೆಯಲ್ಲಿ ಎ.10ಕ್ಕೆ ಸಾರ್ವತ್ರಿಕ ರಜೆ ಘೋಷಣೆ Read More »

ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ

ಸಮಗ್ರ ನ್ಯೂಸ್‌ : ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಮತ್ತೆ ಕಿರುತೆರೆಗೆ ಕಾಲಿಟ್ಟಿದ್ದಾರೆ.ಸೂಪರ್ ಸ್ಟಾರ್ ಆಗಿ ಮಿಂಚಲು ಮಲೆನಾಡಿನ ಬೆಡಗಿ ದಿವ್ಯಾ ಸಜ್ಜಾಗಿದ್ದು, ಹೊಸ ಪ್ರೋಮೋ ಮೂಲಕ ನಟಿ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ನಿನಗಾಗಿ’ ಎಂಬ ಸೀರಿಯಲ್ ಮೂಲಕ ಮತ್ತೆ ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದಿವ್ಯಾ ಉರುಡುಗ ಅವರು ರಚನಾ ಪಾತ್ರದಲ್ಲಿ ನಟಿಸಲಿದ್ದಾರೆ. ಸ್ಟಾರ್ ಆಗಿ ಮಿಂಚುತ್ತಿರುವ ಸಿನಿಮಾ ನಾಯಕಿಯ ಕಥೆಯನ್ನು ಹೇಳೋಕೆ ಹೊರಟಿದ್ದಾರೆ. ಸಿನಿಮಾ ಸ್ಟಾರ್ ಆಗಿರುವ ರಚನಾ ಬಾಳಿನ

ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ Read More »

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ| ಮಗುವಿನೊಂದಿಗೆ ಪೋಟೋ ಹಂಚಿಕೊಂಡ ನಟಿ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ನಟಿ ಅದಿತಿ ಪ್ರಭುದೇವ ಅವರು ತಾಯಿಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದಿರುವಂತಹದು. ಆದ್ರೆ ಇದೀಗ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದಾರೆ ಎಂಬ ವಿಚಾರವನ್ನು ಸ್ವತಃ ಅದಿತಿ ಪ್ರಭುದೇವ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ ಪೋಟೋಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆ ಪೋಸ್ಟ್ ನಲ್ಲಿ ಹೆಣ್ಣು ಮಗುವಿನ ಪುಟ್ಟ ಕೈಯನ್ನು ಅದಿತಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಈಗ ಎಲ್ಲರಿಂದ ಶುಭಾಶಯದ ಮಹಾಪೂರವೆ ಹರಿದು ಬರುತ್ತಿದೆ. ಆದ್ರೆ ಅದಿತಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ| ಮಗುವಿನೊಂದಿಗೆ ಪೋಟೋ ಹಂಚಿಕೊಂಡ ನಟಿ Read More »

ದಾವಣಗೆರೆ: ಅತ್ತೆ, ಮಾವನ ಸಿಟ್ಟಿಗೆ ಅಡಿಕೆ ಮರ ಕಡಿದು ಹಾಕಿದ ಸೊಸೆ!

ಸಮಗ್ರ ನ್ಯೂಸ್‌ : ಸೊಸೆಯೊಬ್ಬಳು ತನ್ನ ಅತ್ತೆ, ಮಾವನ ಮೇಲಿನ ಕೋಪದಿಂದ ಅಡಿಕೆ ಮರಗಳನ್ನೇ ಕಡಿದು ಹಾಕಿದ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ರೂಪಾ ಕುಮಾರಸ್ವಾಮಿ ಅಡಿಕೆ ಮರಗಳನ್ನು ಕಡಿದು ಹಾಕಿದ ಆರೋಪಿ ಸೊಸೆ. ಚಿದಾನಂದ ಸ್ವಾಮಿ ಹಾಗೂ ಶಿವನಾಗಮ್ಮ ದಂಪತಿಗೆ ಮೂವರು ಪುತ್ರರಿದ್ದಾರೆ. ಹಿರಿಯ ಪುತ್ರ ಕುಮಾರಸ್ವಾಮಿಗೆ ರೂಪಾಳೊಂದಿಗೆ ಮದುವೆ ಮಾಡಿಸಲಾಗಿತ್ತು. ಆದರೆ ಮದುವೆಯಾದ ಬಳಿಕ ರೂಪಾ, ಹಲವಾರು ಬಾರಿ ಆಸ್ತಿಯಲ್ಲಿ ಪಾಲು ಕೇಳಿತ್ತಿದ್ದಳು. ಅಲ್ಲದೇ ಮಾವ ಚಿದಾನಂದಸ್ವಾಮಿ ಬಳಿ 8 ಲಕ್ಷ

ದಾವಣಗೆರೆ: ಅತ್ತೆ, ಮಾವನ ಸಿಟ್ಟಿಗೆ ಅಡಿಕೆ ಮರ ಕಡಿದು ಹಾಕಿದ ಸೊಸೆ! Read More »

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ

ಸಮಗ್ರ ನ್ಯೂಸ್: ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು,ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024 ರಂದು ನೀಡುವ ಕುರಿತು ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ 11.04.2024 ಬದಲಿಗೆ ದಿನಾಂಕ:

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ Read More »

ಕೊಡಗಿನಲ್ಲಿ ಮಳೆ ಸುರಿಸಲು ಬಪ್ಪುರಾಯ ಸ್ವಾಮಿಗೆ ಮೊರೆ

ಸಮಗ್ರ ನ್ಯೂಸ್: ಕೊಡಗಿನಲ್ಲಿ ಮಳೆ ಬಾರದೆ ಕಾವೇರಿ ನದಿ ಬತ್ತಿದ್ದು, ಭೀಕರ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಿಲ್ಲದ ಕಾರಣದಿಂದಾಗಿ ಕಾಫಿ, ಕರಿಮೆಣಸು ಸೇರಿದಂತೆ ಬೆಳೆಗಳು ನಾಶವಾಗುವ ಭಯ ಶುರುವಾಗಿದೆ. ಮಳೆ ಬಂದರಷ್ಟೆ ಬದುಕು ಎಂಬ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಲ್ಲಿನ ಎಲ್ಲ ದೇಗುಲಗಳಲ್ಲಿ ಮಳೆಗಾಗಿ ಪೂಜೆ ಸಲ್ಲಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆ ಕುಶಾಲನಗರಕ್ಕೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಹೊರಭಾಗದಲ್ಲಿರುವ ಬಪ್ಪುರಾಯ ಸ್ವಾಮಿ ದೇವರಿಗೆ ಗ್ರಾಮಸ್ಥರು ಭಾನುವಾರ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥನೆ

ಕೊಡಗಿನಲ್ಲಿ ಮಳೆ ಸುರಿಸಲು ಬಪ್ಪುರಾಯ ಸ್ವಾಮಿಗೆ ಮೊರೆ Read More »

ಕಲಬುರಗಿ : ಗಲಾಟೆ ನಿಲ್ಲಿಸಲು ಹೋದ ಪೊಲೀಸಪ್ಪನ ಮೇಲೆ ಹಲ್ಲೆ!

ಸಮಗ್ರ ನ್ಯೂಸ್‌ : ಅಪಘಾತ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ಎರಡು ಗುಂಪುಗಳ ಮಧ್ಯೆ ಜಗಳ ಬಿಡಿಸಲು ಮುಂದಾಗಿದ್ದಕ್ಕೆ ಪುಂಡರು ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಹೊರವಲಯದಲ್ಲಿ ನಡೆದಿದೆ. ಕಾನ್ಸ್‌ಟೇಬಲ್ ಗಣಪತಿರಾವ್ ಘಂಟೆ ಹಲ್ಲೆಗೊಳಗಾಗಿರುವ ಪೇದೆ .ಆಳಂದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಳಂದ ಪಟ್ಟಣದ ಚಿಲ್ಲಾಳ ಪೆಟ್ರೋಲ್ ಬಂಕ್‌ ಬಳಿ ಬುಲೇರೋ ಟಂಟಂ ಆಟೋ ಮಧ್ಯೆ ಅಪಘಾತವಾಗಿದೆ. ಅಪಘಾತವಾಗಿದ್ದಕ್ಕೆ ಸ್ಥಳಕ್ಕೆ ಹೋಗಿದ್ದ ಪೊಲೀಸರು. ಆಕ್ಸಿಡೆಂಟ್ ವಿಚಾರಕ್ಕೆ ಎರಡು ಕಡೆಯ

ಕಲಬುರಗಿ : ಗಲಾಟೆ ನಿಲ್ಲಿಸಲು ಹೋದ ಪೊಲೀಸಪ್ಪನ ಮೇಲೆ ಹಲ್ಲೆ! Read More »

ಚಲನಚಿತ್ರಗಳಲ್ಲಿ ಮಕ್ಕಳ ನಟನೆಗೆ ಪೂರ್ವಾನುಮತಿ ಕಡ್ಡಾಯ : ಕಲಬುರಗಿ ಡಿಸಿ ಎಚ್ಚರಿಕೆ

ಸಮಗ್ರ ನ್ಯೂಸ್‌ : ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಮಕ್ಕಳು ನಟಿಸಬೇಕಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಾಲ ನಟರು, ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ಇಲ್ಲವೇ ನಿರ್ಮಾಪಕರು, ಆಯೋಜಕರು ಮೊದಲು ಜಿಲ್ಲಾಧಿಕಾರಿ ಅವರಿಂದ ಕಡ್ಡಾಯವಾಗಿ ಅನುಮತಿ ಪತ್ರ ಪಡೆಯಬೇಕು’ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಕಾರ್ಮಿಕ ಇಲಾಖೆಯು ಈ

ಚಲನಚಿತ್ರಗಳಲ್ಲಿ ಮಕ್ಕಳ ನಟನೆಗೆ ಪೂರ್ವಾನುಮತಿ ಕಡ್ಡಾಯ : ಕಲಬುರಗಿ ಡಿಸಿ ಎಚ್ಚರಿಕೆ Read More »

ಕಲಬುರಗಿ : ದೇಶದ ಉತ್ತಮ ಭವಿಷ್ಯತ್ತಿಗೆ ಮೋದಿ ಹ್ಯಾಟ್ರಿಕ್ ಗೆಲವು ಮುಖ್ಯ- ಉಮೇಶ್ ಜಾಧವ್

ಸಮಗ್ರ ನ್ಯೂಸ್‌ : ಭಾರತವು ಜಗತ್ತಿನಲ್ಲಿ ನಂಬರ್‌ ಒನ್ ರಾಷ್ಟ್ರವಾಗಲು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ಅವಶ್ಯ ಎಂದು ಸಂಸದ, ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅಭಿಪ್ರಾಯಪಟ್ಟರು. ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಮಹಾಶಕ್ತಿ ಕೇಂದ್ರದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಅಧಿಕಾರ ಪಡೆದು, ಉಜ್ವಲ ಭಾರತದ ನಿರ್ಮಾಣಕ್ಕೆ ಮತದಾರರು ಬಿಜೆಪಿಗೆ

ಕಲಬುರಗಿ : ದೇಶದ ಉತ್ತಮ ಭವಿಷ್ಯತ್ತಿಗೆ ಮೋದಿ ಹ್ಯಾಟ್ರಿಕ್ ಗೆಲವು ಮುಖ್ಯ- ಉಮೇಶ್ ಜಾಧವ್ Read More »