ರಾಜ್ಯ

ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್ : ಬಟ್ಟೆ ಒಗೆಯಲು ಹೋದ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ಮೀನಾ (33) ಪವಿತ್ರ (13) ಕೀರ್ತಿ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ತಾಯಿಯನ್ನು ರಕ್ಷಣೆ ಮಾಡಲು

ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು Read More »

ತುಮಕೂರು: ನೀರು ಕೇಳುವ ನೆಪದಲ್ಲಿ ಮನೆ ದರೋಡೆಗೆ ಯತ್ನ| ಆರೋಪಿಗಳ ಬಂಧನ

ಸಮಗ್ರ ನ್ಯೂಸ್‌ : ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಾಲೀಕನಿಗೆ ಪಿಸ್ತೂಲ್‍ನಿಂದ ಗುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಾರ್ಖಂಡ್ ಮೂಲದ ಏಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಮಾ.26 ರಂದು ಕುಣಿಗಲ್‍ನ ಉರ್ಕೆಹಳ್ಳಿ ಗ್ರಾಮದ ಗಂಗಣ್ಣ ಎಂಬುವರ ತೋಟದ ಮನೆಗೆ ಕುಡಿಯುವ ನೀರು ಕೇಳಿಕೊಂಡು ಬಂದಿದ್ದರು. ಬಳಿಕ ಮನೆಯಲ್ಲಿದ್ದ ಹಣ ದೋಚಲು ಯತ್ನಿಸಿದ್ದರು. ಈ ವೇಳೆ ದರೋಡೆ

ತುಮಕೂರು: ನೀರು ಕೇಳುವ ನೆಪದಲ್ಲಿ ಮನೆ ದರೋಡೆಗೆ ಯತ್ನ| ಆರೋಪಿಗಳ ಬಂಧನ Read More »

ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

ಸಮಗ್ರ ನ್ಯೂಸ್ : ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟನೆ ಮಾಡಿದರು. ಡಾ.ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಂ ಅವರ ಆದರ್ಶಗಳನ್ನು ಎಲ್ಲರೂ ಅನುಸರಿಸಿ, ಸರ್ವತೋಮುಖ ಅಭಿವೃದ್ಧಿಯಾಗಬೇಕು. 40ವರ್ಷಗಳ ಕಾಲ ಸಂಸತ್ತಿನಲ್ಲಿ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡಿ ಉತ್ತಮ ರಾಜಕಾರಣಿಯಾಗಿದ್ದರು.ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಇವರನ್ನು

ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ Read More »

ನಂಜನಗೂಡು : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗಭೂಷಣ್ (61) ಮೃತ ದುರ್ದೈವಿ. ತಮ್ಮ ಒಂದೂವರೆ ಎಕರೆ ಪ್ರದೇಶದಲ್ಲಿ ಬಾಳೆ ಬೆಳೆ ಬೆಳೆಯಲಾಗಿತ್ತು. ತೀವ್ರ ಬರಗಾಲ ಹಿನ್ನಲೆಯಲ್ಲಿ 200 ಅಡಿ ಬೋರ್ ತೆಗೆದರೂ ನೀರು ಬಾರದ ಕಾರಣ ಮಾಡಿದ ಸಾಲವನ್ನು ತೀರಿಸಲು ಆಗದೆ ಬಾಳೆ ಬೆಳೆಗೆ ತಂದಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡ ರೈತನನ್ನು ಕಳೆದ ಎಂಟು ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ

ನಂಜನಗೂಡು : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ Read More »

ಉಡುಪಿ : ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ

ಸಮಗ್ರ ನ್ಯೂಸ್‌ : ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲಿ ಹಸ್ತಾಂತರಿಸಲಾಯಿತು. ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಆ್ಯಂಬುಲೆನ್ಸ್ ನನ್ನು ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಆ್ಯಂಬುಲೆನ್ಸ್ ನನ್ನು

ಉಡುಪಿ : ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ Read More »

ಯುಗಾದಿ ಸಿಹಿ ಸುದ್ದಿ/ ಕೆಎಸ್ ಆರ್‌ಟಿಸಿಯಿಂದ ವಿಶೇಷ ಬಸ್‌ ಸೇವೆ

ಸಮಗ್ರ‌ ನ್ಯೂಸ್: ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ‌ ಇರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ‌ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್‌ಗಳು ಬುಕ್ ಆಗಿದ್ದು, ಜನ ಬಸ್‌ನಲ್ಲಿ ಓಡಾಟ ನಡೆಸುವ ಬಗ್ಗೆ ಆಲೋಚಿಸಿದ್ದಾರೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿ ಸಂಸ್ಥೆ ಯುಗಾದಿಗಾಗಿ ಹೆಚ್ಚುವರಿ ಬಸ್ ಸೇವೆ ನೀಡಲು ಮುಂದಾಗಿದೆ. ಜನರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಎರಡು ಸಾವಿರಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಲಾಗಿದೆ. ಕೆಎಸ್‌ಆರ್‌ಟಿಸಿಯಿಂದ 1,750ಬಸ್, NWKSRTCಯಿಂದ

ಯುಗಾದಿ ಸಿಹಿ ಸುದ್ದಿ/ ಕೆಎಸ್ ಆರ್‌ಟಿಸಿಯಿಂದ ವಿಶೇಷ ಬಸ್‌ ಸೇವೆ Read More »

ಕಲಬುರಗಿ: ಬಿಸಿಲಿನ ತಾಪಕ್ಕೆ ಪೊಲೀಸ್ ಶ್ವಾನಗಳಿಗೂ ಬಂತು ಶೂ ಭಾಗ್ಯ

ಸಮಗ್ರ ನ್ಯೂಸ್‌ : ಬಿಸಿಲಿನ ಬೇಗೆಗೆ ನಾವುಗಳೇ ಹೈರಾಣಾಗುತ್ತಿದ್ದೇವೆ. ಇನ್ನೂ ಮೂಕ ಪ್ರಾಣಿಗಳ ಗತಿ ಏನು? ಅದೇ ಕಾರಣಕ್ಕೆ ಕಲಬುರಗಿ ಪೊಲೀಸ್‌ ಇಲಾಖೆ ಬೆಸ್ಟ್‌ ಐಡಿಯಾ ಮಾಡಿದೆ. ತಮ್ಮ ಇಲಾಖೆಯ ಶ್ವಾನಗಳಿಗೆ ಶೂ ಭಾಗ್ಯ ಕರುಣಿಸಿದೆ. ರಾಜ್ಯದಲ್ಲಿಯೇ ಇದು ಮೊದಲು. ಲೋಕಸಭೆ ಚುನಾವಣೆ ಹಿನ್ನೆಲೆ ವಿಐಪಿ, ರಾಜಕೀಯ ಕಾರ್ಯಕ್ರಮಗಳು ನಡೆಯುತ್ತಿವೆ. ದಿನಪೂರ್ತಿ ಶ್ವಾನದಳ ಕಾರ್ಯಾಚರಣೆ ಇರುತ್ತದೆ. ಆದ್ದರಿಂದ ಶ್ವಾನಗಳ ಪಾದಗಳು ಬಿಸಿಲಿಗೆ ಹಾಳಾಗಿ ಕಾರ್ಯಕ್ಷಮತೆಗೆ ತೊಡಕಾಗುತ್ತದೆ ಎಂಬ ಕಾರಣಕ್ಕೆ ಶೂ ಹಾಕಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಕಲಬುರಗಿ ಶ್ವಾನದಳದಲ್ಲಿರುವ

ಕಲಬುರಗಿ: ಬಿಸಿಲಿನ ತಾಪಕ್ಕೆ ಪೊಲೀಸ್ ಶ್ವಾನಗಳಿಗೂ ಬಂತು ಶೂ ಭಾಗ್ಯ Read More »

ಸೋನು ಗೌಡಗೆ ಬಿಗ್ ರಿಲೀಫ್/ ಕೊನೆಗೂ ಸಿಕ್ತು ಜಾಮೀನು

ಸಮಗ್ರ ನ್ಯೂಸ್: ನಟಿ, ಬಿಗ್‍ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ, ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿ ಪಿಡಿಜೆ ಕೋರ್ಟ್ ಇಬ್ಬರ ಶೂರಿಟಿ ಹಾಗೂ ಒಂದು ಲಕ್ಷ ರೂ. ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ. ಮಾ.22ರಂದು ಈಕೆಯನ್ನು ಬ್ಯಾಡರಹಳ್ಳಿ ಪೆÇಲೀಸರು, ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸೋನು ಗೌಡಗೆ ಬಿಗ್ ರಿಲೀಫ್/ ಕೊನೆಗೂ ಸಿಕ್ತು ಜಾಮೀನು Read More »

ಹಂಪಿಯಲ್ಲಿ ಮತ್ತೊಂದು ಶಾಸನ ಪತ್ತೆ

ಸಮಗ್ರ ನ್ಯೂಸ್: ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ವಿಜಯನಗರದ ಸಂಗಮ ವಂಶದ ದೊರೆ ಎರಡನೇ ಪ್ರೌಢದೇವರಾಯನ ಕಾಲಕ್ಕೆ ಸೇರಿದ್ದ ಶಾಸನವೊಂದು ಪತ್ತೆಯಾಗಿದ್ದು, ಇತಿಹಾಸಪ್ರಿಯರಲ್ಲಿ ಕುತೂಹಲ ಮೂಡಿಸಿದೆ. ರಾಜ್ಯ ಪುರಾತತ್ವ ಇಲಾಖೆಯ ಉಪನಿರ್ದೇಶಕ ಡಾ.ಆರ್. ಶೇಜೇಶ್ವರ ಮತ್ತು ಪುರಾತತ್ವ ಸಹಾಯಕ ಡಾ.ಮಂಜ ನಾಯ್ಕ ಕ್ಷೇತ್ರ ಕಾರ್ಯ ಕೈಗೊಂಡಾಗ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಐದು ಸಾಲಿನ ಅಪ್ರಕಟಿತ

ಹಂಪಿಯಲ್ಲಿ ಮತ್ತೊಂದು ಶಾಸನ ಪತ್ತೆ Read More »

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು

ಸಮಗ್ರ ನ್ಯೂಸ್‌ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ 21 ಗಂಟೆಗಳ ಕಾರ್ಯಾಚರಣೆಯಿಂದ ಬದುಕುಳಿಯಲು ಮುಖ್ಯ ಕಾರಣ ಲಚ್ಚಾಣ ಸಿದ್ದನ ಮಹಿಮೆಯಿಂದ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮಗುವನ್ನು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದ್ದು, SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ನಿರಂತರ ಕಾರ್ಯಾಚರಣೆಗೆ ಫಲ ನೀಡಿದೆ. ಮೇಲೆತ್ತಿದ ಕೂಡಲೇ ಸನ್ನದ್ಧರಾಗಿದ್ದ ವೈದ್ಯರ

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು Read More »