ರಾಜ್ಯ

ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ವಿಚಾರ ಗದ್ದಲ ಎಬ್ಬಿಸಿತು. ಇದೀಗ ಸುಮಲತಾ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ. ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಬಗ್ಗೆ ಗೊಂದಲವಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ

ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ Read More »

ಚಿಕ್ಕಮಗಳೂರು: ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ;ರಜ್ವಿ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಮುಸ್ಲಿಂ ರಾಜಕೀಯ ನಾಯಕರ ಕೊರತೆಯಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಹಳಷ್ಟು ಹಿಂದುಳಿದಿದ್ದಾರೆ ಎಂದು ಸಾಮಾಜಿಕ ಚಿಂತಕ ಫೈರೋಜ್ ಅಹ್ಮದ್ ರಜ್ವಿ ಹೇಳಿದರು. ಈ ಕುರಿತು ಹೇಳಿಕೆ ನೀಡಿರುವ ಅವರು ಮುಸ್ಲೀಂ ಪ್ರಾಮಾಣಿಕ ನಾಯಕರನ್ನು ಗುರುತಿಸಿ ಸಮುದಾಯದವರ ಹಿತದೃಷ್ಟಿಯನ್ನು ಕಾಪಾಡಲು ಹಾಗೂ ರಾಜಕೀಯ ಪ್ರವೃತ್ತಿಯನ್ನು ಬಲಗೊಳಿಸಲು ಪ್ರತಿಯೊಂದು ಸಂಘ-ಸಂಸ್ಥೆಗಳು ಮುಂದಾಗಬೇಕೆಂದು ತಿಳಿಸಿದ್ದಾರೆ. ಕಳೆದ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನೇಕ ಮುಸ್ಲಿಂ ನಾಯಕರು ಸೇವೆ ಸಲ್ಲಿಸಿದ್ದು ರಾಜಕೀಯದಲ್ಲಿ ಮುತವರ್ಜಿಯನ್ನು ವಹಿಸಿದ್ದರ ಕಾರಣ

ಚಿಕ್ಕಮಗಳೂರು: ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ;ರಜ್ವಿ Read More »

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ

ಸಮಗ್ರ ನ್ಯೂಸ್ : ಚಾಮರಾಜನಗರದ ಗಲ್ಲಿಗಲ್ಲಿಗಳಲ್ಲಿ ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್ ಮತ್ತು ಬರಹಗಳು ರಾರಾಜಿಸುತ್ತಿದ್ದು ಲೋಕಸಭಾ ಕೈ ಅಭ್ಯರ್ಥಿ ಸುನಿಲ್ ಬೋಸ್ಗೆ ಮುಜುಗರವನ್ನುಂಟುಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ಧ ಅನಾಮಿಕರು ಅಸಮಾಧಾನ ಹೊರಹಾಕಿದ್ದಾರೆ, ಪಟ್ಟಣದ ರಸ್ತೆ ಬದಿಯ ಗೋಡೆಗಳಲ್ಲಿ ಗೋಬ್ಯಾಕ್ ಪೋಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದು, ಗೋಬ್ಯಾಕ್ ಸುನಿಲ್ ಬೋಸ್ ಎಂದು ಬರೆದಿರುವ ಅಪರಿಚಿತರು ಮರಳು ಮಾಫಿಯಾ ದೊರೆಗೆ ಮರುಳಾಗಬೇಡಿ ಎಂದು ಬರೆದು ಪೋಸ್ಟರ್ ಗಳನ್ನು ಎಲ್ಲಾ ಕಡೆ ಅಂಟಿಸಿದ್ದಾರೆ.

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ Read More »

ಕೇರಳ : ಬಾವಿಗೆ ಬಿದ್ದ ಹುಲಿಯ ರಕ್ಷಣೆ

ಸಮಗ್ರ ನ್ಯೂಸ್‌ : ಜನವಸತಿ ಪ್ರದೇಶಕ್ಕೆ ಹುಲಿಯೊಂದು ನುಗ್ಗಿ ಮನೆಯೊಂದರ ಬಾವಿಗೆ ಬಿದ್ದ ಘಟನೆ ವಯನಾಡು ಜಿಲ್ಲೆಯ ಕಾಲಪೆಟ್ಟಾ ಎಂಬಲ್ಲಿ ನಡೆದಿದೆ. ಈ ವೇಳೆ ಮನೆಯವರು, ಛಾವಣಿ ಮೇಲಿನ ನೀರಿನ ಟ್ಯಾಂಕ್‌ಗೆ ನೀರು ಪೂರೈಕೆ ಆಗದಿದ್ದನ್ನು ಪರಿಶೀಲಿಸಲು ಹೋಗಿದ್ದಾಗ ಬಾವಿಯಲ್ಲಿ ಹುಲಿ ಇರುವುದನ್ನು ಕಂಡು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ಸುದ್ದಿ ತಿಳಿದ ಅರಣ್ಯಾಧಿಕಾರಿಗಳ ತಂಡ ಬಾವಿಯಿಂದ ನೀರನ್ನು ಹೊರ ಹಾಕಿ, ಬಳಿಕ ಅರವಳಿಕೆ ನೀಡಿ ಹುಲಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಗಂಡು ಹುಲಿಯನ್ನು ಕಾಡಿಗೆ

ಕೇರಳ : ಬಾವಿಗೆ ಬಿದ್ದ ಹುಲಿಯ ರಕ್ಷಣೆ Read More »

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಶೆಟ್ಟಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮುಖಂಡರಾದ ಮೊಟಮ್ಮ, ಅಂಶುಮತ್ ಉಪಸ್ಥಿತರಿದ್ದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಕೆ Read More »

ಮೈಸೂರು : ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿಯುವುದಿಲ್ಲ: ಪ್ರತಾಪ್‌ ಸಿಂಹ

ಸಮಗ್ರ ನ್ಯೂಸ್‌ : ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿದು ಗೊತ್ತಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಸಚಿವ ವೆಂಕಟೇಶ್‌ಗೆ ತಿರುಗೇಟು ನೀಡಿದ್ದಾರೆ. ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ ಎಂಬ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಅನ್ನ ತಿನ್ನುವ ಬಾಯಲ್ಲಿ ಏನೇನೋ ಮಾತನಾಡಬೇಡಿ. ನನಗೆ ಟಿಕೆಟ್ ಕೊಡಿಸಬೇಕು ಎಂದು ಅಮಿತ್ ಶಾ ಅವರ ಜೊತೆ ಫೋನಿನಲ್ಲಿ ದೇವೇಗೌಡರು ಮಾತನಾಡಿದ್ದರು ಎಂದು ಹೇಳಿದರು. ಅಮಿತ್ ಶಾ ಅವರಲ್ಲಿ ನನಗೆ ಟಿಕೆಟ್ ಕೊಡಿ ಎಂದು

ಮೈಸೂರು : ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿಯುವುದಿಲ್ಲ: ಪ್ರತಾಪ್‌ ಸಿಂಹ Read More »

ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡ ಸಿ.ಟಿ. ರವಿ, ಜೆಡಿಎಸ್ ಮುಖಂಡ ಎಸ್.ಎಲ್. ಭೋಜೆಗೌಡ ಇದ್ದರು‌

ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ Read More »

ಉಡುಪಿ: ಆಕಸ್ಮಿಕವಾಗಿ ಮಹಿಳೆ ಬಾವಿಗೆ ಬಿದ್ದು ಮೃತ್ಯು

ಸಮಗ್ರ ನ್ಯೂಸ್‌ : ಮಹಿಳೆಯೋರ್ವರು ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆ ಗೌರಿ (62) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಇವರು, ಹೊರಗಡೆ ಹೋದ ಸಂದರ್ಭ ಮನೆಯ ಹತ್ತಿರದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಆಕಸ್ಮಿಕವಾಗಿ ಮಹಿಳೆ ಬಾವಿಗೆ ಬಿದ್ದು ಮೃತ್ಯು Read More »

ಹವಾಮಾನ ವರದಿ| ರಾಜ್ಯದಲ್ಲಿ ಕಾವೇರಲಿದೆ‌ ಬಿಸಿಲು| ಮುಂದಿನ 3 ತಿಂಗಳು‌ ದೇಶಾದ್ಯಂತ ಕಾಡಲಿದೆ ಬಿಸಿಗಾಳಿ, ಬಿಸಿಲ ಝಳ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು ರಣಬಿಸಿಲು ಇರಲಿದ್ದು, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 2ರಿಂದ 8 ದಿನಗಳ ಕಾಲ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ. ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ಬಯಲುಸೀಮೆಯ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಬೀಸಲಿದೆ.

ಹವಾಮಾನ ವರದಿ| ರಾಜ್ಯದಲ್ಲಿ ಕಾವೇರಲಿದೆ‌ ಬಿಸಿಲು| ಮುಂದಿನ 3 ತಿಂಗಳು‌ ದೇಶಾದ್ಯಂತ ಕಾಡಲಿದೆ ಬಿಸಿಗಾಳಿ, ಬಿಸಿಲ ಝಳ Read More »

ಲೋಕಸಭಾ ಚುನಾವಣೆ/ ಚನ್ನಪಟ್ಟಣದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯ ಅಬ್ಬರದ ಪ್ರಚಾರ ಆರಂಭಗೊಂಡಿದ್ದು, ಇಂದು ರಾಜ್ಯಕ್ಕೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸತತ ಸಭೆ, ಸಮಾವೇಶಗಳ ಬಳಿಕ ಇದೀಗ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರು ಗ್ರಾಮಂತರ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಅಮಿತ್ ಶಾ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ.ಒಂದೂವರೆ ಕಿಲೋಮೀಟರ್ ಸಾಗಲಿರುವ ಈ ರೋಡ್‍ಶೋನಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ

ಲೋಕಸಭಾ ಚುನಾವಣೆ/ ಚನ್ನಪಟ್ಟಣದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ Read More »