ಸ್ವಿಸ್ ಬ್ಯಾಂಕ್ ನಿಂದ ಭಾರತದ ಕಪ್ಪು ಹಣ ತರುತ್ತೇವೆ ಎಂದ ಮೋದಿ ಸರ್ಕಾರ ತಂದ್ರ ಹೇಳಿ: ಯತೀಂದ್ರ ಸಿದ್ದರಾಮಯ್ಯ
ಸಮಗ್ರ ನ್ಯೂಸ್ : ಮೋದಿ ಸರ್ಕಾರ ಆಡಳಿತಕ್ಕೆ ಬಂದು 10 ವರ್ಷ ಕಳೆದಿವೆ ಇಡೀ ದೇಶದ ಆರ್ಥಿಕ ಪರಿಸ್ಥಿತಿ ಹಿಂದೆ ಸರಿದಿದೆ. ಕಪ್ಪು ಹಣ ತರುತ್ತೇವೆ ಸುಖದ ಜೀವಮಾನ ನಿಮ್ಮದಾಗಬಹುದು ಎಂದ ಮೋದಿ ಕಪ್ಪು ಹಣ ತರಲೇ ಇಲ್ಲ, ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಅವರು ವಿರಾಜಪೇಟೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಟೀಕಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಡಗು ಮೈಸೂರು ಕ್ಷೇತ್ರದಿಂದ ಸರಳ ವ್ಯಕ್ತಿತ್ವ ಇರುವ ಜನರೊಂದಿಗೆ ಸದಾ ಬೆರೆಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ










