ರಾಜ್ಯ

ಅಕ್ರಮ ಗೋಮಾಂಸ ಮಾರಾಟ|60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿದ ರಾಕ್ಷಸರು

ಸಮಗ್ರ ನ್ಯೂಸ್: ಅಕ್ರಮ ಗೋಮಾಂಸ ಮಾರಾಟಕ್ಕಾಗಿಜಾನುವಾರುಗಳನ್ನು ಮಾರಣಹೋಮ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು

ಅಕ್ರಮ ಗೋಮಾಂಸ ಮಾರಾಟ|60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿದ ರಾಕ್ಷಸರು Read More »

ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ|ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ..?

ಸಮಗ್ರ ನ್ಯೂಸ್: ನಿನ್ನೆ ಹಾಸನದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರಲ್ಲಿ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈಗ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ

ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ|ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ..? Read More »

ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ನೀತಿ ಸಂಹಿತೆ ಉಲ್ಲಂಘನೆ; ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದರು, ಅದನ್ನು ಉಲ್ಲಂಘಿಸಿದ ಕಾರಣಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ. ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚುನಾವಣಾ ಅಧಿಕಾರಿ‌ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಏಪ್ರಿಲ್​.30ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಸಮನ್ಸ್ ಜಾರಿಗೆ

ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ನೀತಿ ಸಂಹಿತೆ ಉಲ್ಲಂಘನೆ; ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ Read More »

ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು

ಸಮಗ್ರ ನ್ಯೂಸ್: ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಸಕ್ಸಸ್ ಆಗಿದ್ದೆ. ಒಂದುವರೆಗಂಟೆಗಳ ಕಾಲ ಸಂಧಾನ ಸಭೆ ನಡೆದಿದೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ, ಟಿಕೆಟ್ ಯಾರಿಗೆ ಕೊಟ್ಟರು ಒಗ್ಗಟಿನಿಂದ ಕೆಲಸ ಮಾಡುತ್ತೇವೆ ಎಂದು ಕೈ ನಾಯಕರು ಹೇಳಿದ್ದಾರೆ. ಟಿಕೆಟ್ ಗಾಗಿ ಕೋಲಾರ ಕಾಳಗದ ಕೋಲಾಹಲ ಎದ್ದಿದ್ದು. ಟಿಕೆಟ್ ಘೋಷಣೆ ಆಗ್ಬೇಕಿರೋ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಿನ

ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು Read More »

ಏರಿದ ತಾಪಮಾನ|ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ

ಸಮಗ್ರ ನ್ಯೂಸ್: ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲಗಳಲ್ಲಿ ಎರಡರಿಂದ ಮೂರು ಡಿಗ್ರಿಯಷ್ಟು ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವರುಣನ ಆಗಮನಕ್ಕೆ ತಡವಾದ ಕಾರಣ ನೆಲದ ಕಾವು ಏರುತ್ತಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಉಷ್ಣಾಂಶ ಮಿತಿಮೀರಿದೆ ಆದರಿಂದ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಟ ಉಷ್ಣಾಂಶ ಏರಿಕೆಯಾಗಿದೆ ಎಂದು ಹೇಳಲಾಗಿದೆ.

ಏರಿದ ತಾಪಮಾನ|ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ Read More »

ಚಾಲಕರಿಗೆ ಡಬಲ್ ಡ್ಯೂಟಿಯಿಂದ ವಿನಾಯಿತಿ/ ಕೆ ಎಸ್ ಆರ್ ಟಿ ಸಿ ಮಹತ್ವದ ನಿರ್ಣಯ

ಸಮಗ್ರ ನ್ಯೂಸ್: ಅತಿಯಾದ ಕೆಲಸ ಮತ್ತು ವಿಶ್ರಾಂತಿ ಕೊರತೆಯ ಕಾರಣದಿಂದಾಗಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ಕಂಡುಬಂದಿದ್ದು, ಹೀಗಾಗಿ ಚಾಲಕರಿಗೆ ಡಬಲ್ ಡ್ಯೂಟಿಯಿಂದ ವಿನಾಯಿತಿ ನೀಡುವ ಮಹತ್ವದ ನಿರ್ಧಾರ ಕೆ ಎಸ್ ಆರ್ ಟಿ ಸಿ ಕೈಗೊಂಡಿದೆ. ಇಂದಿನಿಂದ, ಚಾಲಕರು ರಾತ್ರಿ ಅಥವಾ ದೀರ್ಘ ಪ್ರಯಾಣದ ನಂತರ ವಿಶ್ರಾಂತಿ ಪಡೆಯಬೇಕು. 8 ಗಂಟೆಗಳಿಗಿಂತ ಹೆಚ್ಚು ಕಾಲ ಕೆಲಸ ಮಾಡಲು ನಿಮಗೆ ಅನುಮತಿ ಇಲ್ಲ. ಹೆಚ್ಚುವರಿ

ಚಾಲಕರಿಗೆ ಡಬಲ್ ಡ್ಯೂಟಿಯಿಂದ ವಿನಾಯಿತಿ/ ಕೆ ಎಸ್ ಆರ್ ಟಿ ಸಿ ಮಹತ್ವದ ನಿರ್ಣಯ Read More »

ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿ/ ಚುನಾವಣಾ ಆಯೋಗದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ರಾಜ್ಯ ಉಚ್ಛ ನ್ಯಾಯಾಲಯವು ಚುನಾವಣಾ ನೀತಿ ಸಂಹಿತೆ ಹೆಸರಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡಿದೆ. ಕೊಡಗು ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯ ಹಿರಿಯ ಸದಸ್ಯ ಸುನಿಲ್ ಮಾದಾಪುರ ಅವರು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಪ್ರವಚನ(ಭಾಷಣ)ಕ್ಕೆ ಅವಕಾಶವಿಲ್ಲವೆಂದು ಆದೇಶ ನೀಡುವ ಮೂಲಕ ಸಂವಿಧಾನ ದತ್ತವಾದ ಧಾರ್ಮಿಕ ಹಕ್ಕನ್ನು ಕಸಿದುಕೊಂಡಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಹಿರಿಯ ವಕೀಲರಾದ ಅರುಣ್ ಶ್ಯಾಂ, ಸುಯೋಗ್ ಹೇರಳೆ ಹಾಗೂ ಮೂಲತಃ ಕೊಡಗಿನವರಾದ ಹೈಕೋರ್ಟ್’ನ ಯುವ

ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿ/ ಚುನಾವಣಾ ಆಯೋಗದ ಆದೇಶಕ್ಕೆ ಹೈಕೋರ್ಟ್ ತಡೆ Read More »

ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಮೂವರಿಗೆ ಚಾಕು ಇರಿತ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇಂದು ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡದಲ್ಲಿ ನಡೆದಿದೆ. ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ರಾಗಿಗುಡ್ಡದ ಪರಿಕ್ಷಾ ಕೇಂದ್ರಕ್ಕೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ. ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ.

ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಮೂವರಿಗೆ ಚಾಕು ಇರಿತ Read More »

ಗುಣಮುಖರಾದ ಸದ್ಗುರು/ ಆಸ್ಪತ್ರೆಯಿಂದ ಬಿಡುಗಡೆ

ಸಮಗ್ರ ನ್ಯೂಸ್: ಈಶ ಪ್ರತಿಷ್ಠಾನದ ಮುಖ್ಯಸ್ಥ ಹಾಗೂ ಆಧ್ಯಾತ್ಮಿಕ ಚಿಂತಕ ಸದ್ಗುರು ಸಂಪೂರ್ಣ ಗುಣಮುಖರಾಗಿದ್ದು, ದಿಲ್ಲಿ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಸದ್ಗುರು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಅವರ ಚೇತರಿಕೆಯ ಕುರಿತು ಆಶಾಭಾವ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ದಿಸ್‍ಚಾರ್ಜ್ ಮಾಡಲಾಗುತ್ತಿದೆ. ಅವರು ಚೇತರಿಕೆಗೊಳ್ಳುವ ಸಮಯದಲ್ಲೂ ಅವರ ಉತ್ಸಾಹಭರಿತರಾಗಿದ್ದರು. ಇದರಿಂದ ಅವರ ಲಕ್ಷಾಂತರ ಅನುಯಾಯಿಗಳಿಗೆ ಸಂತಸವಾಗಲಿದೆ ಎಂದು ಆಸ್ಪತ್ರೆಯ ಜಂಟಿ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಸಂಗೀತ ರೆಡ್ಡಿ ಮಾಹಿತಿ ನೀಡಿದರು. ಮಿದುಳಿನಲ್ಲಿ ರಕ್ತಸ್ರಾವ ಸಮಸ್ಯೆ ಆದ

ಗುಣಮುಖರಾದ ಸದ್ಗುರು/ ಆಸ್ಪತ್ರೆಯಿಂದ ಬಿಡುಗಡೆ Read More »

ತಡರಾತ್ರಿ ಬೆಂಗಳೂರಿನ ರೆಸ್ಟೋರೆಂಟ್ ಗೆ ಬಂತು ಬಾಂಬ್ ಬೆದರಿಕೆ ಕರೆ

ಸಮಗ್ರ ನ್ಯೂಸ್: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಬೆನ್ನಲ್ಲೇ ಬೆಂಗಳೂರಿನಲ್ಲಿ ನಿನ್ನೆ ತಡ ರಾತ್ರಿ ಬಾಂಬ್ ಬೆದರಿಕೆ ಕರೆಯೊಂದು ಬಂದಿದೆ. ವ್ಯಕ್ತಿಯೊಬ್ಬ ರೆಸ್ಟೋರೆಂಟ್​ಗೆ ಕರೆ ಮಾಡಿ ಶೀಘ್ರದಲ್ಲೇ ರೆಸ್ಟೋರೆಂಟ್​ನಲ್ಲಿ ಬಾಂಬ್ ಸ್ಫೋಟವಾಗುತ್ತೆ ಎಂದು ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದೆ. ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಬೆಚ್ಚಿಬಿದ್ದ ರೆಸ್ಟೋರೆಂಟ್‌ನವರು ಪೊಲೀಸರನ್ನು ಕರೆಸಿದ್ದರು. ರಾತ್ರಿ ಪೂರ್ತಿ ರೆಸ್ಟೋರೆಂಟ್ ಪರಿಶೀಲನೆ ನಡೆಸಿದರು ಆದರೆ ಪೊಲೀಸರಿಗೆ ಬಾಂಬ್‌

ತಡರಾತ್ರಿ ಬೆಂಗಳೂರಿನ ರೆಸ್ಟೋರೆಂಟ್ ಗೆ ಬಂತು ಬಾಂಬ್ ಬೆದರಿಕೆ ಕರೆ Read More »