ರಾಜ್ಯ

ಮೋದಿ ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ/ ಅವಹೇಳನಕಾರಿ ಹೇಳಿಕೆ ನೀಡಿದ ಶಿವರಾಜ ತಂಡರಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್: ಮೋದಿ ಮೋದಿ ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬುದಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಡರಗಿ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ವೆಂಕಟೇಶ್ ದೊಡೇರಿ, ರಾಜ್ಯ ಸಂಚಾಲಕ ವಸಂತ್ ಕುಮಾರ್ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳು, ಯುವಕರು ಮೋದಿ ಎಂದರೆ ಕಪಾಳಕ್ಕೆ ಹೊಡೆಯಿರಿ ಎಂದು ನಮ್ಮ ಪಕ್ಷದ ಮತದಾರರ ವಿರುದ್ಧ ಪ್ರಚೋದನಾತ್ಮಕ ಮಾತುಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಯುವ

ಮೋದಿ ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ/ ಅವಹೇಳನಕಾರಿ ಹೇಳಿಕೆ ನೀಡಿದ ಶಿವರಾಜ ತಂಡರಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಯಾದಗಿರಿ: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಸಮಗ್ರ ನ್ಯೂಸ್: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಿರುವ ಘಟನೆ ನಡೆದಿದೆ. ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಇವರಿಬ್ಬರನ್ನು ಅಮಾನತು ಮಾಡಿ ಯಾದಗಿರಿ ಜಿ.ಪಂ. ಸಿಇಒ ಗರೀಮಾ ಪನ್ವಾರ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ

ಯಾದಗಿರಿ: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು Read More »

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಓರ್ವ ಸಾವನ್ನಪ್ಪಿದ ಬೆನ್ನೆಲೆ ಇದೀಗ ಮತ್ತೋರ್ವ ಸಾವನ್ನಪ್ಪಿದ್ದು, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮ ವರ್ತೆಗುಂಡಿ ಬಳಿ ಟಿಂಬರ್ ಕಾರ್ಮಿಕ ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ನುಗ್ಗಿ ಬಂದಿದೆ. ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಲಿಟ್ಟು ಕಾಡಾನೆ ಕೊಂದಿದೆ. ಎಂಟು ತಿಂಗಳಲ್ಲಿ ಜಿಲ್ಲೆಯಲ್ಲಿ ನಾಲ್ವರನ್ನ ಬಲಿ ಪಡೆದಿರುವ ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ Read More »

ಜೈಲುಪಾಲಾದ ರೀಲ್ಸ್ ರಾಣಿ ಸೋನುಗೌಡ| 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ

ಸಮಗ್ರ ನ್ಯೂಸ್: ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಸೋನು ಗೌಡ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಸೋನು ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು

ಜೈಲುಪಾಲಾದ ರೀಲ್ಸ್ ರಾಣಿ ಸೋನುಗೌಡ| 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ Read More »

ರಾಮಲಲ್ಲಾನ ಮತ್ತೊಂದು ವಿಗ್ರಹ ಕೆತ್ತಿದ ಅರುಣ್‌ ಯೋಗಿರಾಜ್‌

ಸಮಗ್ರ ನ್ಯೂಸ್‌ : ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನವಾಗಿರುವ ಸುಂದರ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿ ವಿಶ್ವವಿಖ್ಯಾತಿ ಗಳಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ರವರು ಗರ್ಭಗುಡಿಯಲ್ಲಿರುವ ರಾಮಲಲ್ಲಾ ವಿಗ್ರಹದಂತೆಯೇ ಮತ್ತೊಂದು ಪುಟ್ಟ ವಿಗ್ರಹಕ್ಕೆ ಶಿಲ್ಪಿ ರೂಪ ನೀಡಿದ್ದಾರೆ. ರಾಮಲಲ್ಲಾನ ರೂಪವನ್ನು ಕೆತ್ತನೆ ಮಾಡಿ ಭಕ್ತರ ಮನಗೆದ್ದಿದ್ದು, ರಾಮಲಲ್ಲಾನ ಮತ್ತೊಂದು ಪುಟ್ಟ ವಿಗ್ರಹ ಹಿಡಿದುಕೊಂಡಿರುವ ಫೋಟೊ ಈಗ ಎಲ್ಲೆಡೆ ವೈರಲ್‌ ಆಗಿದೆ. ಇದಕ್ಕೂ ಮೊದಲು ಶಿಲ್ಪಿ ಯೋಗಿರಾಜ್‌, ‘ಪ್ರತಿಮೆಯ ಕಣ್ಣುಗಳನ್ನು ಕೆತ್ತಲು ಬಳಸಿದ ವಿಶೇಷ ಸಾಧನಗಳ ಚಿತ್ರವನ್ನು

ರಾಮಲಲ್ಲಾನ ಮತ್ತೊಂದು ವಿಗ್ರಹ ಕೆತ್ತಿದ ಅರುಣ್‌ ಯೋಗಿರಾಜ್‌ Read More »

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಕೆ ಮಾಡುತ್ತಿದ್ದ ಮೊಬೈಲ್‌ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಕೇಜ್ರಿವಾಲ್‌ ಅವರನ್ನು ಪ್ರಶ್ನಿಸಿದರೆ, ಮೊಬೈಲ್‌ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇ.ಡಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಮೊಬೈಲ್‌ನಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇರಬಹುದು. ಇದು ಈವರೆಗೆ ಕಾಣೆಯಾದ 171ನೇ ಸಾಧನವಾಗಿದೆ. ಪತ್ತೆಯಾಗಿರುವ

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ Read More »

ಕ್ಷಿಪ್ರ ರಾಜಕೀಯ ಬೆಳವಣಿಗೆ| ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಘರ್ ವಾಪಸಿ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು.ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ,

ಕ್ಷಿಪ್ರ ರಾಜಕೀಯ ಬೆಳವಣಿಗೆ| ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಘರ್ ವಾಪಸಿ Read More »

ಕಡಬ: ನದಿಗೆ ಹಾರಿದ ಯುವತಿ| ಪ್ರಾಣ ರಕ್ಷಿಸಿದ ಆಟೋ ಚಾಲಕ!

ಸಮಗ್ರ ನ್ಯೂಸ್: ನದಿಗೆ ಹಾರಿದ ಯುವತಿಯೋರ್ವಳನ್ನು ಆಟೋ ಚಾಲಕ ರಕ್ಷಿಸಿದ ಘಟನೆ ಕಡಬ ಆಲಂಕಾರು ಸಮೀಪದ ಶಾಂತಿಮೊಗರಿನಲ್ಲಿ ನಡೆದಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಯುವತಿಯು ತನ್ನ ಸ್ಕೂಟಿ ನಿಲ್ಲಿಸಿ ಹಾರಿದ್ದಾಳೆ. ಈ ವೇಳೆ ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಆಕೆ ಬದುಕುಳಿದಿರುವುದಾಗಿ ವರದಿಯಾಗಿದೆ. ಇನ್ನು ಯುವತಿ ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ. ಯುವತಿಯನ್ನು ಪೊಲೀಸರು ಕಡಬ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಯುವತಿ ನದಿಗೆ ಹಾರಿರಬಹುದೆಂಬುದು ಪೊಲೀಸರ

ಕಡಬ: ನದಿಗೆ ಹಾರಿದ ಯುವತಿ| ಪ್ರಾಣ ರಕ್ಷಿಸಿದ ಆಟೋ ಚಾಲಕ! Read More »

ಮಂಡ್ಯ ಟಿಕೆಟ್ ಜೆಡಿಎಸ್‍ಗೆ/ ಅಭ್ಯರ್ಥಿ ಯಾರು ಎಂಬುದು ಇಂದು ನಿರ್ಧಾರ

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದು, ಇಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಸೋಮವಾರ ನಿರ್ಧಾರವಾಗಲಿದೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ವಿಷಯ ತಿಳಿಸಿದ್ದಾರೆ. ಚೆನ್ನೈನಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೆಂಗಳೂರಿನ ನಿವಾಸಕ್ಕೆ ಮರಳಿದರು. ಈ ವೇಳೆ ಜೆ.ಪಿ.ನಗರದ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ನೆರೆದಿದ್ದರು. ಅವರು, ಕುಮಾರಸ್ವಾಮಿಯೇ ಮಂಡ್ಯದಿಂದ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದರು. ಈ ವೇಳೆ ಮಾತನಾಡಿದ

ಮಂಡ್ಯ ಟಿಕೆಟ್ ಜೆಡಿಎಸ್‍ಗೆ/ ಅಭ್ಯರ್ಥಿ ಯಾರು ಎಂಬುದು ಇಂದು ನಿರ್ಧಾರ Read More »

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ: ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಇದೀಗ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಯಾವುದೇ ಅಭ್ಯರ್ಥಿಗಳನ್ನು ಘೋಷಿಸದೆ ಪೆಂಡಿಂಗ್ ಉಳಿಸಿಕೊಂಡಿದೆ. ಇದೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ. ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವ್ರು 28 ಕ್ಷೇತ್ರ

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ: ಸಿಎಂ ಸಿದ್ದರಾಮಯ್ಯ Read More »