ರಾಜ್ಯ

ಕಾಫಿನಾಡಿಗೆ ವರುಣನ ಆಗಮನ| ರೈತರಿಗೆ ಸಂತಸ

ಸಮಗ್ರ ನ್ಯೂಸ್: ಬಿರು ಬೇಸಿಗೆಯಲ್ಲು ಕಾಫಿನಾಡಿಗೆ ವರುಣನ ಆಗಮನವಾಗಿದೆ. ಚಿಕ್ಕಮಗಳೂರಿಗೆ ವರುಣದೇವ ತಂಪೆರೆದಿದ್ದಾನೆ. ಈ ಮೂಲಕ ವರ್ಷದ ಮೊದಲ ಮಳೆ ಆರಂಭವಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಭಾರೀ ಮಳೆ ಬಿದ್ದಿದ್ದು, ಸತತ ಒಂದು ಗಂಟೆಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿದಿದೆ. ಕೊಳಗಾಮೆ, ಮೇಲಿನಹುಲುವತ್ತಿ ಭಾಗಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಗ್ರಾಮಸ್ಥರು, ಬೆಳೆಗಾರರು ಸಂತಸಕ್ಕೀಡಾಗಿದ್ದಾರೆ. ಹಲವು ಹಳ್ಳಿಗಳಲ್ಲಿ 20-30-40 ಸೆನ್ಸ್​ನಷ್ಟು ಮಳೆಯಾಗಿದೆ. ಅಡಿಕೆ-ಕಾಫಿ-ಮೆಣಸು ಉಳಿಸಿಕೊಳ್ಳಲು ಪರದಾಡ್ತಿದ್ದ ಬೆಳೆಗಾರರಿಗೆ ಮಳೆ ನೋಡುತ್ತಿದ್ದಂತೆ ಸಂತಸವಾಗಿದೆ.

ಕಾಫಿನಾಡಿಗೆ ವರುಣನ ಆಗಮನ| ರೈತರಿಗೆ ಸಂತಸ Read More »

ಕರ್ನಾಟಕದಲ್ಲಿ ಸಿಎಎ ಜಾರಿ/ ಇಂದು ಸಂಪುಟ ಸಭೆಯಲ್ಲಿ ಚರ್ಚೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಸಿಎಎ ಜಾರಿ ಕುರಿತು ಇಂದು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು. ಈ ಕಾನೂನಿನ ನಿಯಮಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ ಸಿಎಎ ಜಾರಿಗೆ ತಂದಿದೆ. ಇದನ್ನು ಮೊದಲೇ ಏಕೆ ಜಾರಿಗೆ ತರಲಿಲ್ಲ? ಇಷ್ಟು ವರ್ಷಗಳ ಕಾಲ ಸುಮ್ಮನಿದ್ದದ್ದು ಏಕೆ? ಸೋಲಿನ ಭಯದಿಂದ ಸಿಎಎ ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಸಿಎಎ ಜಾರಿ/ ಇಂದು ಸಂಪುಟ ಸಭೆಯಲ್ಲಿ ಚರ್ಚೆ Read More »

ಬೆಂಗಳೂರಿನಲ್ಲಿ ಇಂದಿನಿಂದ ಟೀನ್ ಇಂಡೀ ಫಿಲ್ಡ್ ಅವಾಡ್ರ್ಸ್ ಚಿತ್ರೋತ್ಸವ

ಸಮಗ್ರ ನ್ಯೂಸ್: ಟೀನ್ ಇಂಡೀ ಫಿಲ್ಡ್ ಅವಾಡ್ರ್ಸ್ ಚಿತ್ರೋತ್ಸವ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಇಂದಿನಿಂದ ಮೂರು ದಿನಗಳು ಜಯನಗರದ ಆರ್ ವಿ ವಿವಿ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳಿಗಾಗಿ ಆರ್ ವಿ ವಿಶ್ವವಿದ್ಯಾಲಯವು ಆಯೋಜಿಸುವ ಚಿತ್ರೋತ್ಸವ ಇದಾಗಿದೆ. ಒಟ್ಟಾರೆ 30 ದೇಶಗಳ 300 ಸಿನಿಮಾಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ. 13-17ವರ್ಷದೊಳಗಿನ ವಿದ್ಯಾರ್ಥಿಗಳು ನಿರ್ಮಿಸಿ ನಿರ್ದೇಶಿಸಿದ ಸಿನಿಮಾಗಳು ಇವಾಗಲಿವೆ.

ಬೆಂಗಳೂರಿನಲ್ಲಿ ಇಂದಿನಿಂದ ಟೀನ್ ಇಂಡೀ ಫಿಲ್ಡ್ ಅವಾಡ್ರ್ಸ್ ಚಿತ್ರೋತ್ಸವ Read More »

ದೊಡ್ಡಬಳ್ಳಾಪುರ:ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಹಾಸ್ಟೆಲ್ ನ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಹಾಸ್ಟೆಲ್ ನಲ್ಲಿ ನಡೆದಿದೆ. ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಎಂಬ ವಿದ್ಯಾರ್ಥಿ ರಾತ್ರಿ ಊಟ ಮಾಡಿದ ಬಳಿಕ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ವಿದ್ಯಾರ್ಥಿಯ ಸಾವಿನ ನಂತರ ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪದ ಮೇಲೆ ಐಪಿಸಿ 304 ಎ ದಾಖಲಿಸಲಾಗಿದೆ. ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ದಾಸರಿ ಬ್ರಹ್ಮಸಾಯಿ ರೆಡ್ಡಿ ಮಂಗಳವಾರ

ದೊಡ್ಡಬಳ್ಳಾಪುರ:ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು Read More »

ಟಿಕೆಟ್​ ಸಿಕ್ಕ ಖುಷಿಯಲ್ಲಿ ಯದುವೀರ್ ಒಡೆಯರ್: ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿನ್ನೆ ಬಿಡುಗಡೆಗೊಳಿಸಿದೆ. ಅದರಲ್ಲಿ ಮೈಸೂರು-ಕೊಡಗು ಕ್ಷೇತ್ರ ನೂತನ ಅಭ್ಯರ್ಥಿಯಾಗಿ ಯದುವೀರ್​ಗೆ ಟಿಕೆಟ್​ ಘೋಷಣೆ ಮಾಡಲಾಗಿದೆ. ಟಿಕೆಟ್​ ಸಿಕ್ಕ ಸಂತೋಷದಲ್ಲಿ ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ ಬರೆದಿದ್ದಾರೆ. “ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರಗಳು. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ

ಟಿಕೆಟ್​ ಸಿಕ್ಕ ಖುಷಿಯಲ್ಲಿ ಯದುವೀರ್ ಒಡೆಯರ್: ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ Read More »

ತುಮಕೂರಿನಲ್ಲಿ ತುಕಾಲಿ ಸಂತೋಷ್​ ಕಾರು ಅಪಘಾತ: ಆಟೋ ಜಖಂ

ಸಮಗ್ರ ನ್ಯೂಸ್: ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್​ ಅವರ ಕಾರು ಅಪಘಾತಕೀಡಾಗಿದೆ. ಎರಡು ವಾರಗಳ ಹಿಂದೆ ಅಷ್ಟೇ ಅವರು ಹೊಸ ಕಾರು ಖರೀದಿ ಮಾಡಿದ್ದರು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಇದರಿಂದ ಕಿಯಾ ಕಾರು ಜಖಂ ಆಗಿದೆ. ಆಟೋ ಕೂಡ ಭಾಗಶಃ ಜಖಂ ಆಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ತುಮಕೂರು ಕಡೆಯಿಂದ

ತುಮಕೂರಿನಲ್ಲಿ ತುಕಾಲಿ ಸಂತೋಷ್​ ಕಾರು ಅಪಘಾತ: ಆಟೋ ಜಖಂ Read More »

ಯಡಿಯೂರಪ್ಪ ಲಿಂಗಾಯತನೇ ಅಲ್ಲ : ಯತ್ನಾಳ್

ಸಮಗ್ರ ನ್ಯೂಸ್ : ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ ಅವರ ದಂಧೆಯಾಗಿದೆ. ಅಲ್ಲದೆ ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನು ಉದ್ದಾರ ಮಾಡಿಲ್ಲ ಹಾಗೂ ಅವನು ಲಿಂಗಾಯತನೇ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಹೌದು, ನಿರಂತರವಾಗಿ ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ಬಗ್ಗೆ ಕಿಡಿಕಾರುವ ಬಸವನಗೌಡ ಯತ್ನಾಳ್ ಅವರು ಇದೀಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನು

ಯಡಿಯೂರಪ್ಪ ಲಿಂಗಾಯತನೇ ಅಲ್ಲ : ಯತ್ನಾಳ್ Read More »

ಉಡುಪಿ: ‘ಶೋಭಾ ಕರಂದ್ಲಾಜೆ ಅನ್ಯಾಯದ ವಿರುದ್ಧ ಧ್ವನಿಯೆತ್ತಿಲ್ಲ’- ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್ : ಸಂಸದೆ ಶೋಭಾ ಕರಂದ್ಲಾಜೆ ಒಮ್ಮೆಯೂ ಅನ್ಯಾಯದ ವಿರುದ್ಧ ತಮ್ಮ ಧ್ವನಿಯೆತ್ತಲಿಲ್ಲ, ಇಂಥ ಸಂಸದರು ನಿಮಗೆ ಬೇಕಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಿಂದ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ 4.30 ಲಕ್ಷ ಕೋಟಿ ರೂ. ಸಂದಾಯವಾಗುತ್ತಿದ್ದರೂ ಅಲ್ಲಿಂದ ನಮಗೆ ವಾಪಸ್ಸು ಬರುತ್ತಿರೋದು ಕೇವಲ 50,257 ಕೋಟಿ ರೂ. ಮಾತ್ರ. ಈ ರೀತಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಶೋಭಾ ಕರಂದ್ಲಾಜೆ ಒಮ್ಮೆಯೂ ಅನ್ಯಾಯದ ವಿರುದ್ಧ ತಮ್ಮ ಧ್ವನಿಯೆತ್ತಲಿಲ್ಲ.

ಉಡುಪಿ: ‘ಶೋಭಾ ಕರಂದ್ಲಾಜೆ ಅನ್ಯಾಯದ ವಿರುದ್ಧ ಧ್ವನಿಯೆತ್ತಿಲ್ಲ’- ಸಿಎಂ ಸಿದ್ದರಾಮಯ್ಯ Read More »

ಡಿವಿಎಸ್ ಗೆ ಅಮಿತ್ ‘ಶಾ’ಕ್| ಬೆಂಗಳೂರು ಉತ್ತರಕ್ಕೆ ಶೋಭಾ; ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಾರಾ ಗೌಡ್ರು!?

ಸಮಗ್ರ ನ್ಯೂಸ್: 2 ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಈ ಬಗ್ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಸದಾನಂದಗೌಡ ಅವರಿಗೆ ಕರೆ ಮಾಡಿದ್ದು, ಅಭ್ಯರ್ಥಿ ಬದಲಾವಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ತಮಗೆ ಟಿಕೆಟ್​ ಇಲ್ಲ ಎನ್ನುವುದನ್ನು ಸದಾನಂದಗೌಡರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಟಿಕೆಟ್ ಇಲ್ಲ ಎನ್ನುವುದನ್ನು ದೂರವಾಣಿ ‌ಮೂಲಕ

ಡಿವಿಎಸ್ ಗೆ ಅಮಿತ್ ‘ಶಾ’ಕ್| ಬೆಂಗಳೂರು ಉತ್ತರಕ್ಕೆ ಶೋಭಾ; ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಾರಾ ಗೌಡ್ರು!? Read More »

ಗ್ಯಾರಂಟಿ ಯೋಜನೆ ಸ್ಥಗಿತವಾಗುವುದಿಲ್ಲ: ಸಚಿವೆ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯ ಕುಂಜಿಬೆಟ್ಟುವಿನ ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು,

ಗ್ಯಾರಂಟಿ ಯೋಜನೆ ಸ್ಥಗಿತವಾಗುವುದಿಲ್ಲ: ಸಚಿವೆ ಹೆಬ್ಬಾಳ್ಕರ್ Read More »