ರಾಜ್ಯ

ಗ್ಯಾರಂಟಿ ಯೋಜನೆ ಸ್ಥಗಿತವಾಗುವುದಿಲ್ಲ: ಸಚಿವೆ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯ ಕುಂಜಿಬೆಟ್ಟುವಿನ ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು,

ಗ್ಯಾರಂಟಿ ಯೋಜನೆ ಸ್ಥಗಿತವಾಗುವುದಿಲ್ಲ: ಸಚಿವೆ ಹೆಬ್ಬಾಳ್ಕರ್ Read More »

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ/ ಜೆಡಿಎಸ್‍ಗೆ ಸಿಕ್ಕಿದ ಸೀಟುಗಳೆಷ್ಟು?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಫೈನಲ್ ಹಂತ ತಲುಪಿದ್ದು, ಜೆಡಿಎಸ್‍ಗೆ ಮೂರು ಲೋಕಸಭಾ ಕ್ಷೇತ್ರಗಳು ದೊರಕಿವೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದು, ಜೆಡಿಎಸ್ ಪಾಲಿಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರ ಸಿಕ್ಕಿದ್ದು, ಹಾಸನ ಕ್ಷೇತ್ರದಿಂದ ಜೆಡಿಎಸ್ ಪಾಲು ಆಗಿದ್ದು, ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಖಚಿತ ಎಂದು

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ/ ಜೆಡಿಎಸ್‍ಗೆ ಸಿಕ್ಕಿದ ಸೀಟುಗಳೆಷ್ಟು? Read More »

ಲೋಕಸಭಾ ಚುನಾವಣೆ/ ಮಹಿಳೆಯರಿಗಾಗಿ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಲು ಹರಸಾಹಸ ಪಡುತ್ತಿದ್ದು, ಇದೀಗ ಮಹಿಳೆಯರಿಗಾಗಿ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ಈ 5 ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಮಹಾಲಕ್ಷ್ಮಿ ಯೋಜನೆ, ಆದಿ ಅಬಾದಿ ಪೂರಾ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ, ಸಾವಿತ್ರಿ ಬಾಯಿ ಪುಲೆ ಹಾಸ್ಟೆಲ್ ಕಾಂಗ್ರೆಸ್ ಘೋಷಿಸಿದ ಹೊಸ ಗ್ಯಾರೆಂಟಿಗಳು. ಕಾಂಗ್ರೆಸ್ ಇಂದು ‘ನಾರಿ ನ್ಯಾಯ್ ಗ್ಯಾರಂಟಿ’ ಘೋಷಿಸುತ್ತಿದೆ. ದರ ಅಡಿಯಲ್ಲಿ ಕಾಂಗ್ರೆಸ್

ಲೋಕಸಭಾ ಚುನಾವಣೆ/ ಮಹಿಳೆಯರಿಗಾಗಿ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ Read More »

ಉಡುಪಿ ನಗರ ಪಾಲಿಕೆ ಮುಂದಿನ ಮೂರು ತಿಂಗಳಲ್ಲಿ ಕಾಗದ ರಹಿತ ಕಚೇರಿಯಾಗಿ ಪರಿವರ್ತನೆ

ಸಮಗ್ರ ನ್ಯೂಸ್ : ಮುಂದಿನ ಮೂರು ತಿಂಗಳೊಳಗೆ ಉಡುಪಿ ನಗರ ಪಾಲಿಕೆಯನ್ನು ಸಂಪೂರ್ಣ ಕಾಗದ ರಹಿತ ಕಚೇರಿಯನ್ನಾಗಿ ಪರಿವರ್ತಿಸಲಾಗುವುದು ಎಂದು ನಗರಸಭೆಯ ಆಯುಕ್ತ ರಾಯಪ್ಪ ಘೋಷಿಸಿದರು. ಉಡುಪಿ ಗ್ರಾಹಕರ ವೇದಿಕೆಯು ಸರಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಒಗ್ಗೂಡಿಸಿ ಆಯೋಜಿಸಿದ್ದ ಮುಖಾಮುಖಿ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಹೇಳಿದರು. ರಾಯಪ್ಪ ಅವರು ರಾಜ್ಯದ 28 ನಗರ ಪುರಸಭೆಗಳ ಕೌನ್ಸಿಲ್‌ಗಳಲ್ಲಿ ಅದರ ಪರಿಣಾಮಕಾರಿ ಹಣಕಾಸು ನಿರ್ವಹಣೆಗಾಗಿ ಉಡುಪಿಯ ಗೌರವಾನ್ವಿತ ಖ್ಯಾತಿಯನ್ನು ಎತ್ತಿ ತೋರಿಸಿದರು, ವಿವಿಧ ಮೂಲಗಳಿಂದ ವಾರ್ಷಿಕ ಸುಮಾರು 40-45

ಉಡುಪಿ ನಗರ ಪಾಲಿಕೆ ಮುಂದಿನ ಮೂರು ತಿಂಗಳಲ್ಲಿ ಕಾಗದ ರಹಿತ ಕಚೇರಿಯಾಗಿ ಪರಿವರ್ತನೆ Read More »

ಸೇತುವೆಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು

ಸಮಗ್ರ ನ್ಯೂಸ್ : ವಿದ್ಯಾರ್ಥಿಯೋರ್ವ ಎರಡು ಸೇತುವೆಗಳ ನಡುವಿನ ಅಂತರವನ್ನು ಜಿಗಿಯಲು ಪ್ರಯತ್ನಿಸುವಾಗ ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿದ ಘಟನೆ ಕಣ್ಣೂರಿನ ನೆಟ್ಟೂರಿನ ಮುಳಪಿಲಂಗಾಡ್ ತಲಕ್ಕೇರಿ-ಮಾಹಿ ಬೈಪಾಸ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಮಹಮ್ಮದ್ ನಿದಾನ್ (18) ಎಂದು ಗುರುತಿಸಲಾಗಿದೆ. ನೆಟ್ಟೂರಿನಿಂದ ಇನ್ನೂರು ಮೀಟರ್ ದೂರದಲ್ಲಿ ಮುಳಪಿಲಂಗಾಡ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಎರಡು ಸೇತುವೆಗಳ ನಡುವಿನ ಅಂತರವನ್ನು ಜಿಗಿಯಲು ಪ್ರಯತ್ನಿಸುವಾಗ ವಿದ್ಯಾರ್ಥಿ ಬಿದ್ದಿದ್ದಾನೆ. ತಕ್ಷಣ ಸ್ಥಳೀಯರು ಆತನನ್ನು ತಲಕ್ಕೇರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನೆಟ್ಟೂರು ಸೇತುವೆ

ಸೇತುವೆಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು Read More »

ಇಂದು ಡಾ .ಸಿ.ಎನ್ ಮಂಜುನಾಥ್ ಬಿಜೆಪಿ ಪಕ್ಷ ಸೇರ್ಪಡೆ..!

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಡಾ.ಸಿ.ಎನ್ ಮಂಜುನಾಥ್ ಅವರ ಹೆಸರು ಮುನ್ನೆಲೆಯಲ್ಲಿದೆ. ಡಾ.ಮಂಜುನಾಥ್ ಅವರಿಗೆ ಟಿಕೆಟ್ ಫಿಕ್ಸ್ ಆಗಿದ್ದು ಲೋಕಸಭಾ ಚುನಾವಣೆ ಅಖಾಡಕ್ಕೆ ಬರುವುದು ಖಚಿತವಾಗಿದೆ. ಇದಕ್ಕೆಲ್ಲದ್ದಕು ಬಿಗ್ ನ್ಯೂಸ್ ಆಗಿ ಇಂದು ಡಾ .ಸಿ.ಎನ್ ಮಂಜುನಾಥ್ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ10 ಗಂಟೆಗೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.

ಇಂದು ಡಾ .ಸಿ.ಎನ್ ಮಂಜುನಾಥ್ ಬಿಜೆಪಿ ಪಕ್ಷ ಸೇರ್ಪಡೆ..! Read More »

ರಾಜ್ಯ ಸರಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ಸಮಗ್ರ ನ್ಯೂಸ್: ರಾಜ್ಯ ಸರಕಾರದ ವಕ್ತಾರರಾಗಿ ಸಚಿವರಾದ ಈಶ್ವರ ಖಂಡ್ರೆ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಹಾಗೂ ಕೃಷ್ಣಬೈರೇಗೌಡ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆಗಳು, ದಾಖಲೆಗಳನ್ನು ಹಾಗೂ ಸರಕಾರದ ಮಾಹಿತಿಗಳ ಬಗ್ಗೆ ಸಚಿವರುಗಳಿಗೆ ಮಾಹಿತಿ ನೀಡಲು ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸಿಎಂ ಸೂಚಿಸಿದ್ದಾರೆ.

ರಾಜ್ಯ ಸರಕಾರದ ವಕ್ತಾರರಾಗಿ ಐವರು ಸಚಿವರ ನೇಮಕ Read More »

ಲೋಕಸಭೆ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಜಾರಿದ್ರಾ ಖರ್ಗೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಿಂದೇಟು ಹಾಕುತ್ತಿದ್ದಾರೆ ಎಂಬ ವರದಿಗಳನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ತಳ್ಳಿಹಾಕಿದ್ದು, ಒಂದು ವೇಳೆ ಕಾರ್ಯಕರ್ತರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ನಾವು ಹಿಂದ ಸರಿಯುತ್ತಿದ್ದೇವೆ ಎಂದು ಸೂಚಿಸುವುದು ತಪ್ಪು. ನನಗೆ ಈಗ 83 ವರ್ಷ. ನೀವು (ಪತ್ರಕರ್ತರು) 60-65 ವರ್ಷಕ್ಕೆ ನಿವೃತ್ತಿ ಪಡೆಯುತ್ತೀರಿ. ನಾನು 83 ಆದ ಮೇಲೆ

ಲೋಕಸಭೆ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಜಾರಿದ್ರಾ ಖರ್ಗೆ Read More »

ರಾಮಮಂದಿರಕ್ಕೆ ಪ್ರತಿದಿನ ಒಂದೂವರೆ ಲಕ್ಷ ಜನ ಭಕ್ತರು ಭೇಟಿ/ ಪ್ರವೇಶ ಸಂಪೂರ್ಣ ಉಚಿತ

ಸಮಗ್ರ ನ್ಯೂಸ್: ಪ್ರತೀದಿನ ರಾಮಮಂದಿರಕ್ಕೆ ಸರಾಸರಿ ಒಂದರಿಂದ ಒಂದೂವರೆ ಲಕ್ಷ ಜನ ಭಕ್ತರು ಭೇಟಿ ನೀಡುತ್ತಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ತಿಳಿಸಿದೆ. 60ರಿಂದ 70 ನಿಮಿಷದೊಳಗೆ ಶ್ರೀರಾಮ ದೇವರ ದರ್ಶನ ಮಾಡಲು ಭಕ್ತರ ಅನುಕೂಲಕ್ಕಾಗಿ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 6.30ರಿಂದ ಆರಂಭವಾಗಿ ರಾತ್ರಿ 9.30ರ ವರೆಗೆ ದರ್ಶನ ಸಮಯ ನಿಗದಿಪಡಿಸಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಟ್ವೀಟ್ ಮಾಡಿ ತಿಳಿಸಿದೆ. ದರ್ಶನ ಟಿಕೆಟ್ ಅನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್

ರಾಮಮಂದಿರಕ್ಕೆ ಪ್ರತಿದಿನ ಒಂದೂವರೆ ಲಕ್ಷ ಜನ ಭಕ್ತರು ಭೇಟಿ/ ಪ್ರವೇಶ ಸಂಪೂರ್ಣ ಉಚಿತ Read More »

ಪ್ರಿಯಕರನ ಜೊತೆ ಮಾತನಾಡಲು ಅಡ್ಡಿಯಾಗುತ್ತದೆ ಎಂದು 4 ವರ್ಷದ ಮಗುವಿಗೆ ಪಾತ್ರೆ ತೊಳೆಯಲು ಬಿಟ್ಟ ಪಾಪಿ ತಾಯಿ

ಸಮಗ್ರ ನ್ಯೂಸ್: ಪ್ರಿಯತಮನ ಆಸೆಗಾಗಿ ಮಕ್ಕಳಿಗೆ ಕೆಲಸಕೊಟ್ಟು ಪ್ರಿಯತಮನ ಜೊತೆ ಮಾತನಾಡುವ ಅಮಾನವೀಯ ಘಟನೆ ಚಿಕ್ಕಮಗಳೂರಿನ ಶಂಕರಮಠದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಮಾತನಾಡಲು ಅಡ್ಡಿಯಾಗುತ್ತದೆ ಎಂದು ಪ್ರಿಯತಮನ ಮನೆಯಲ್ಲಿ ಮಗನಿಗೆ ಪಾತ್ರೆ ತೊಳೆಯಲು ಬಿಟ್ಟಿದ್ದಾಳೆ ಈ ಪಾಪಿ ತಾಯಿ. 4 ವರ್ಷದ ಈ ಮಗು ದಿನ ಪಾತ್ರೆ ತೊಳೆಯುತ್ತಿದೆಯಂತೆ. ಮಗುವಿನ ಕಷ್ಟ ನೋಡಲಾರದೆ ಸ್ಥಳೀಯರು ವಿಡಿಯೋ ಮಾಡಿದ್ದಾರೆ. ಪತಿ ಇದ್ದರು ಈ ನೇತ್ರಾವತಿ ಪ್ರಿಯಕರನೊಂದಿಗೆ ಲವ್ವಿಡವ್ವಿ ಆಡುತ್ತಿದ್ದಳಂತೆ.11 ವರ್ಷಗಳ ಹಿಂದೆ ಈಕೆಗೆ ಶಿವು ಜೊತೆ ವಿವಾಹವಾಗಿತ್ತು. ಈಕೆಯ

ಪ್ರಿಯಕರನ ಜೊತೆ ಮಾತನಾಡಲು ಅಡ್ಡಿಯಾಗುತ್ತದೆ ಎಂದು 4 ವರ್ಷದ ಮಗುವಿಗೆ ಪಾತ್ರೆ ತೊಳೆಯಲು ಬಿಟ್ಟ ಪಾಪಿ ತಾಯಿ Read More »