ರಾಜ್ಯ

ಮೆಣಸಿನಕಾಯಿ ದರ ಕುಸಿತ… ರೈತರ ಆಕ್ರೋಶ

ಸಮಗ್ರ ನ್ಯೂಸ್: ಒಂದೇ ದಿನ 20 ಸಾವಿರದಿಂದ 12 ಸಾವಿರಕ್ಕೆ ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ದರ ದಿಢೀರ್ ಇಳಿಕೆಯಿಂದ ಆಕ್ರೋಶಗೊಂಡಿರುವ ರೈತರು ರೊಚ್ಚಿಗೆದ್ದು ಮೆಣಸಿನಕಾಯಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಇಷ್ಟೇ ಅಲ್ಲದೆ APMC ಅಧ್ಯಕ್ಷರ ಕಾರಿಗೆ ಬೆಂಕಿ

ಮೆಣಸಿನಕಾಯಿ ದರ ಕುಸಿತ… ರೈತರ ಆಕ್ರೋಶ Read More »

ಚಿಕ್ಕಮಗಳೂರು: ರಸ್ತೆ ಬಿಟ್ಟುಕೊಡಲು ಹೋಗಿ ಹಳ್ಳಕ್ಕೆ ಮಗುಚಿ ಬಿದ್ದ ಕಾರು

ಸಮಗ್ರ ನ್ಯೂಸ್: ಮೂಡಿಗೆರೆಯ ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆಬಿಟ್ಟು ಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದಿರುವ ಘಟನೆ ಮಾ.11 ರಂದು ನಡೆದಿದೆ. ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಸೈಡ್ ಕೊಡಲು ಸಾಧ್ಯವಾಗದೇ ಇನ್ನೋವಾ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ವೇಗವಾಗಿ ಬರುತ್ತಿದ್ದ ಕಾರಿಗೆ ಏಕಾಏಕಿ ಟಿಪ್ಪರ್ ಲಾರಿ ಎದುರಾಗಿದ್ದು, ಅಪಘಾತವನ್ನು ತಪ್ಪಿಸಲು ಕಾರಿನ ಚಾಲಕ ಬ್ರೇಕ್ ಹಾಕಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ

ಚಿಕ್ಕಮಗಳೂರು: ರಸ್ತೆ ಬಿಟ್ಟುಕೊಡಲು ಹೋಗಿ ಹಳ್ಳಕ್ಕೆ ಮಗುಚಿ ಬಿದ್ದ ಕಾರು Read More »

ಅಡಿಕೆಯ ವೈಜ್ಞಾನಿಕ ಅಧ್ಯಯನಕ್ಕೆ ₹10 ಕೋಟಿ ಮೀಸಲು – ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ದೇಶದ ಪ್ರತಿಷ್ಠಿತ ಸಂಸ್ಥೆಗಳನ್ನು ಸೇರಿಸಿಕೊಂಡು ನಮ್ಮ ಭಾಗದ ಅಡಿಕೆಯ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದಕ್ಕಾಗಿ ₹10 ಕೋಟಿಯನ್ನು ಮೀಸಲಿಟ್ಟಿದೆ’ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲ್ಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದ ಕಿದು ಸಿಪಿಸಿಆರ್‌ಐನಲ್ಲಿ ನಡೆದ ಕೃಷಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಈ ಹಿಂದಿನ ಸರ್ಕಾರ ವರದಿ ನೀಡಿದ್ದರಿಂದ ಅಡಿಕೆಯ

ಅಡಿಕೆಯ ವೈಜ್ಞಾನಿಕ ಅಧ್ಯಯನಕ್ಕೆ ₹10 ಕೋಟಿ ಮೀಸಲು – ಶೋಭಾ ಕರಂದ್ಲಾಜೆ Read More »

ಬಸ್​ ಮೇಲೆ ಬಿದ್ದ ಹೈ ಟೆನ್ಷನ್ ತಂತಿ: 6 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಗಾಜಿಪುರದಲ್ಲಿ ಬಸ್​ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾಗಿದ್ದಾರೆ. ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮಾಹಿತಿ ಪ್ರಕಾರ ಬೆಂಕಿಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದು ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದರು, ಬಸ್​ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು. ಅದೇ ಸಂಧರ್ಭದಲ್ಲಿ ಮರ್ದಾದಲ್ಲಿ ಅಪಘಾತ ಸಂಭವಿಸಿದೆ. ಡಿಎಂ, ಎಸ್​ಪಿ

ಬಸ್​ ಮೇಲೆ ಬಿದ್ದ ಹೈ ಟೆನ್ಷನ್ ತಂತಿ: 6 ಮಂದಿ ಸಜೀವ ದಹನ Read More »

ರಾಜಕೀಯದಲ್ಲಿ ಅಸಮಾಧಾನಗಳು ಸಹಜ – ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್ : “ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತದೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಆಗಿಯೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಐಆರ್ ಕಾರ್ಯಕ್ರಮದಲ್ಲಿ ಭಾಗಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಕೇಂದ್ರದ ಚುನಾವಣಾ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧರಾಗಿದ್ದೇವೆ ಎಂದರು. ನೀವು ಸ್ಪರ್ಧೆ ಮಾಡುತ್ತೀರಾ ಎಂಬ

ರಾಜಕೀಯದಲ್ಲಿ ಅಸಮಾಧಾನಗಳು ಸಹಜ – ಶೋಭಾ ಕರಂದ್ಲಾಜೆ Read More »

ದೇಶದಲ್ಲಿ ಪೌರತ್ವ ಕಾಯ್ದೆ ಅನುಷ್ಟಾನ ಅಧಿಸೂಚನೆ ಪ್ರಕಟ| ಮಸೂದೆ ಅಂಗೀಕಾರದ 4 ವರ್ಷಗಳ ಬಳಿಕ ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಅಧಿಸೂಚನೆಯನ್ನು ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನವನ್ನು ಘೋಷಿಸಿದೆ. 2024ರ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಕ್ರಮ ಕೈಗೊಳ್ಳಲಾಗಿದೆ. 2019ರ ಲೋಕಸಭಾ ಚುನಾವಣೆಯ ವೇಳೆ CAA ಜಾರಿಗೆ ತರುವುದು ಬಿಜೆಪಿಯ ಪ್ರಣಾಳಿಕೆಯ ಭಾಗವಾಗಿತ್ತು. ಈಗ 2024ರ ಚುನಾವಣೆಯ ಹೊಸ್ತಿಲಲ್ಲಿರುವಾಗ ಕಾಯ್ದೆ ಜಾರಿಗೆ ಬಂದಿದೆ. ಮಸೂದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ

ದೇಶದಲ್ಲಿ ಪೌರತ್ವ ಕಾಯ್ದೆ ಅನುಷ್ಟಾನ ಅಧಿಸೂಚನೆ ಪ್ರಕಟ| ಮಸೂದೆ ಅಂಗೀಕಾರದ 4 ವರ್ಷಗಳ ಬಳಿಕ ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ Read More »

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು

ಸಮಗ್ರ ನ್ಯೂಸ್: ಮನೆಯ ಕೌಂಪೌಂಡನ್ನು ಜೆಸಿಬಿ ಯಂತ್ರದ ಮೂಲಕ ಕೆಡವಿದ್ದಲ್ಲದೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿರುವುದಾಗಿ ಕಡಬ ಕೊಂಬಾರು ಗ್ರಾಮದ ಗಂಗಮ್ಮ(72) ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾ.10ರಂದು ನೆರೆಕೆರೆಯ ಸಂಬಂಧಿಯೂ ಆಗಿರುವ ಶಶಿಧರ ಎಂಬಾತ ಜೆಸಿಬಿ ಯಂತ್ರದ ಮೂಲಕ ಮನೆಯ ಆವರಣಗೋಡೆಯನ್ನು ಕೆಡವಿದ್ದು, ಇದನ್ನು ಪ್ರಶ್ನಿಸಿದಾಗ ಆತ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿದ್ದು, ಗಾಯಗೊಂಡ ಗಂಗಮ್ಮ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಗಂಗಮ್ಮ ನೀಡಿದ ದೂರಿನನ್ವಯ ಕಡಬ ಪೊಲೀಸರು

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು Read More »

ಕಡಬ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳು ಇಂದು ಜನಸಾಮಾನ್ಯರನ್ನು ಮುಟ್ಟಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಿದೆ. ಕಡಬ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ, ಕಾಂಗ್ರೆಸ್ ನಾಯಕರಾದ ಸುಧೀರ್ ಕುಮಾರ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಸುಧೀರ್ ಕುಮಾರ್ ಬಿಳಿನೆಲೆ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭೆ

ಕಡಬ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆ Read More »

ಚಿಕ್ಕಬಳ್ಳಾಪುರ: ವರನ ಮುಯ್ಯಿ ಹಣಕ್ಕೆ ಕಣ್ಣು ಹಾಕಿದ ಖದೀಮರು

ಸಮಗ್ರ ನ್ಯೂಸ್: ಮದುವೆಗಳಲ್ಲಿ ಮುಯ್ಯಿ ಕೊಟ್ಟು ಹಾರೈಸುವುದು ಸಂಪ್ರದಾಯ. ಅದೇ ರೀತಿ ಇಲ್ಲೊಂದು ಪ್ರತಿಷ್ಠಿತ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿದೆ.ಈ ಮದುವೆ ಕಾರ್ಯಕ್ರಮದಲ್ಲಿ ವರನ ಮುಯ್ಯಿ ಹಣಕ್ಕೆ ಕಣ್ಣು ಹಾಕಿದ ಖದೀಮರು ಮುಯ್ಯಿ ಹಣವಿದ್ದ ಬ್ಯಾಗ್ ಅನ್ನೇ ಕದ್ದು ಹೋಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕು, ಚದಲಪುರ ಗ್ರಾಮದ ಪ್ರಗತಿಪರ ರೈತ ಮುನಿರಾಜು ಎನ್ನುವವರು ಕಳೆದ ಫೆಬ್ರವರಿ 18-19 ರಂದು ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ತಮ್ಮ ಮಗನ ಅದ್ದೂರಿ ಮದುವೆ

ಚಿಕ್ಕಬಳ್ಳಾಪುರ: ವರನ ಮುಯ್ಯಿ ಹಣಕ್ಕೆ ಕಣ್ಣು ಹಾಕಿದ ಖದೀಮರು Read More »

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲರ್ ಕಾಟನ್‌ ಕ್ಯಾಂಡಿಯಲ್ಲಿ ಹಲವು ವಿಷಕಾರಿ ಅಂಶಗಳು ಒಳಗೊಂಡಿರುವುದರಿಂದ ಅವುಗಳನ್ನು ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಲರ್‌ ಬಳಸದೇ ಇರುವ ಕಾಟನ್‌ ಕ್ಯಾಂಡಿಗೆ ಅವಕಾಶ ನೀಡಲಾಗಿದ್ದು, ಗೋಬಿ ಮಂಚೂರಿಯನ್‌ ತಯಾರಿಕೆಯಲ್ಲಿಯೂ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ. ಯಾವುದೇ ರೀತಿಯ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ – ಸಚಿವ ದಿನೇಶ್ ಗುಂಡೂರಾವ್ Read More »