ಪುತ್ತೂರು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಮತ್ತು ಭಾರತೀಯ ಅಂಚೆ ಇಲಾಖೆ ಸಹಭಾಗಿತ್ವ ದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ
ಸಮಗ್ರ ನ್ಯೂಸ್: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಮುಳಿಯ ಜ್ಯುವೆಲ್ಸ್ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಂಚೆ ಜನ ಸಂಪರ್ಕ ಅಭಿಯಾನವನ್ನು ಮಾ.9 ರಂದು ಪುತ್ತೂರಿನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಸಂಸ್ಥೆ ಯ ನಿರ್ದೇಶಕಿ ಕೃಷ್ಣ ವೇಣಿ ಪ್ರಸಾದ್ ಮುಳಿಯ ಹಾಗೂ ಅಶ್ವಿನಿ ಕೃಷ್ಣ ಮುಳಿಯ ವಹಿಸಿದ್ದರು. ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಜನರ ಬಳಿಗೆ ಇಲಾಖೆ ಯೋಜನೆಯನ್ನು ಕೊಂಡೊಯ್ಯಲು ಯೋಜಿಸಲಾಗಿದೆ. ಇದರ ಭಾಗವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇಲಾಖೆಯ ಇತರ ಸೇವೆಗಳನ್ನು










