ಪ್ರತಿಪಕ್ಷ ಸದಸ್ಯರು ಸಭಾತ್ಯಾಗ/ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್ಗೆ ಬೀಗ- ಕೀಲಿ ನೀಡಿದ ಪಂಜಾಬ್ ಮುಖ್ಯಮಂತ್ರಿ
ಸಮಗ್ರ ನ್ಯೂಸ್: ಸದನದಲ್ಲಿ ಚರ್ಚೆ ನಡೆಯುವಾಗ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿಬಿಡುತ್ತಾರೆ. ಹೀಗಾಗಿ ಯಾರೂ ಹೊರಗೆ ಹೋಗದಂತೆ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಬೀಗ- ಕೀಲಿ ನೀಡಿದ ಘಟನೆ ನಡೆದಿದೆ. ಮಾ.1ರಂದು ಪಂಜಾಬ್ ವಿಧಾನಸಭೆಯನ್ನು ಉದ್ದೇಶಿಸಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಭಾಷಣ ಮಾಡುವ ವೇಳೆ ಕಾಂಗ್ರೆಸ್ ಸದಸ್ಯರು, ರಾಜ್ಯಪಾಲರು ಪೂರ್ಣವಾಗಿ ಭಾಷಣ ಓದದೆ ಮಂಡಿಸಲಾಗಿದೆ ಎಂದು ಪ್ರತಿಭಟನೆ ನಡೆಸಿದ್ದರು. ವಿಪಕ್ಷಗಳ ಈ ವರ್ತನೆ ಬಗ್ಗೆ ಚರ್ಚೆ










