ರಾಜ್ಯ

ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ

ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ

ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ಇನ್ನಿಲ್ಲ Read More »

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ/ ಸಜ್ಜಾಗಿವೆ ಪರೀಕ್ಷಾ ಕೇಂದ್ರಗಳು

ಸಮಗ್ರ ನ್ಯೂಸ್: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಯಾಗಿರುವ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 2ರವರೆಗೆ ಯಾವುದೇ ಝರಾಕ್ಸ್ ಅಂಗಡಿ ತೆರೆಯುವಂತಿಲ್ಲ. ಸಿಸಿಟಿವಿ ಕ್ಯಾಮೆರಾಗಳನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಳವಡಿಸಲಾಗಿದೆ. ಈ ಬಾರಿ 80 ಅಂಕಕ್ಕೆ ಪರೀಕ್ಷೆ ಬರೆಯಲಿದ್ದು, 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಒಟ್ಟಾರೆ 6,98,624 ವಿದ್ಯಾರ್ಥಿಗಳು ಪರೀಕ್ಷೆ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ/ ಸಜ್ಜಾಗಿವೆ ಪರೀಕ್ಷಾ ಕೇಂದ್ರಗಳು Read More »

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಸಮಗ್ರ ನ್ಯೂಸ್: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗುತ್ತಿದ್ದು, ಇಂದು ಸಂಜೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ಶಿವರಾಜ್ ಕುಮಾರ್, ಡಾ. ಜಬ್ಬಾರ್ ಪಟೇಲ್, ಬಾಂಗ್ಲಾ ನಟಿ ಅಜಮೇರಿ ಬಂದೋನ್, ವಿಮರ್ಶಕಿ ವಿಯರಾ ಲ್ಯಾ0ಗರೋವಾ ಭಾಗಿಯಾಗಲಿದ್ದಾರೆ. ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮೂರು ಬಾರಿ ಗ್ರಾಮಿ ಪ್ರಶಸ್ತಿ ಗಳಿಸಿದ ರಿಕಿ ಕೇಜ್ ಅವರು ಉದ್ಘಾಟನೆ ಮಾಡಲಿದ್ದಾರೆ. ಬೋಂಜೊರ್ ಸ್ವಿಟ್ಸಲೆರ್ಂಡ್ ಸಿನಿಮಾ ಉದ್ಘಟನಾ ಚಿತ್ರವಾಗಿ ಪ್ರದರ್ಶನವಾಗಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ Read More »

ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ/ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಾಹಿತಿ

ಸಮಗ್ರ ನ್ಯೂಸ್: . ಸಂಸ್ಕರಣೆ ಮಾಡದೆ ನದಿಗೆ ಕೊಳಚೆ ನೀರು ಬಿಡುವುದರಿಂದ ಪಶ್ಚಿಮ ಬಂಗಾಳದಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಾಹಿತಿ ನೀಡಿದೆ. ಈ ರೀತಿ ಸಂಸ್ಕರಣೆ ಮಾಡದ ಕೊಳಚೆ ನೀರನ್ನು ನದಿಗೆ ಬಿಟ್ಟರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಒಟ್ಟಾರೆ 258 ಮಿಲಿಯನ್ ಲೀಟರ್‍ಗೂ ಹೆಚ್ಚು ಸಂಸ್ಕರಿಸದ ಕೊಳಚೆ ನೀರನ್ನು ನೇರವಾಗಿ ಗಂಗಾ ನದಿಗೆ ಬಿಡಲಾಗುತ್ತಿದ್ದು, ಮಲದಲ್ಲಿ ಬೆಳೆಯುವ ಕೋಲಿಫಾರ್ಮ್ ಬ್ಯಾಕ್ಟಿರಿಯಾ ನದಿಯ ನೀರಿನಲ್ಲಿ ಕಂಡುಬಂದಿದೆ. ಗಂಗಾ

ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಲ್ಲ/ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಾಹಿತಿ Read More »

ರಾಜ್ಯದ ಬಜೆಟ್ ಅಧಿವೇಶನ/ ಇಂದು ಅಧಿಕೃತ ತೆರೆ

ಸಮಗ್ರ ನ್ಯೂಸ್: ರಾಜ್ಯದ ಬಜೆಟ್ ಅಧಿವೇಶನ ಕಳೆದ 15 ದಿನಗಳಿಂದ ನಡೆಯುತ್ತಿದ್ದು, ಇಂದು ಅಧಿಕೃತವಾಗಿ ಮುಕ್ತಾಯಗೊಳ್ಳಲಿದೆ. ಕಳೆದ ಶುಕ್ರವಾರ ಕೊನೆಗೊಳ್ಳಬೇಕಿದ್ದ ಬಜೆಟ್ ಅಧಿವೇಶನವನ್ನು ನಾಲೈದು ದಿನ ವಿಸ್ತರಿಸಲಾಗಿತ್ತು. ಇಂದು ಸಂಸತ್ತು ಮತ್ತು ವಿಧಾನ ಪರಿಷತ್ತಿನಲ್ಲಿ ಬಜೆಟ್ ಮೇಲಿನ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಅವರು ಸರ್ಕಾರದ ಪರವಾಗಿ ಉತ್ತರ ನೀಡಲಿದ್ದಾರೆ. 2024-2025 ರ ಬಜೆಟ್ ಅನ್ನು ಆಯವ್ಯಯ ವಿಧೇಯಕಕ್ಕೆ ಸದನದಲ್ಲಿ ಅಂಗೀಕಾರ ಪಡೆಯಲಿದ್ದಾರೆ. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಾಹಾಕಾರ ಶುರುವಾಗಿದೆ. ಆದರೆ, ಸರ್ಕಾರ ನೀರಿನ

ರಾಜ್ಯದ ಬಜೆಟ್ ಅಧಿವೇಶನ/ ಇಂದು ಅಧಿಕೃತ ತೆರೆ Read More »

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು

ಸಮಗ್ರ ನ್ಯೂಸ್: ನಟ ದರ್ಶನ್ ವಿವಾದಗಳ ಮೇಲೆ ವಿವಾದ ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಆಡಿದ ಮಾತುಗಳು ದರ್ಶನ್​ ಅವರಿಗೆ ಸಂಕಷ್ಟ ತಂದೊಡ್ಡಿವೆ. ಈಗಾಗಲೇ ದರ್ಶನ್ ವಿರುದ್ದ ನಾಲ್ಕು ದೂರುಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಈಗ ರೇಣುಕಮ್ಮ ಎಂಬುವರು 37ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರನ್ನು ದರ್ಶನ್ ವಿರುದ್ಧ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(A), 509, 298, 504 ಅಡಿ ಕೇಸ್ ನಮೂದಿಸುವಂತೆ ಖಾಸಗಿ ದೂರನ್ನು ರೇಣುಕಮ್ಮ ದಾಖಲಿಸಿದ್ದಾರೆ. IPC 295(A), ಉದ್ದೇಶ

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು Read More »

ಕುಡಿದ ಮತ್ತಲ್ಲಿ ಸಿಕ್ಕ ಸಿಕ್ಕವರಿಗೆ ಕಚ್ಚಿದ ಯುವಕ

ಸಮಗ್ರ ನ್ಯೂಸ್: ಕುಡಿದ ಮತ್ತಲ್ಲಿ ಏನೇನೆಲ್ಲ ಮಾಡ್ತಾರೆ ಅನ್ನೋದಕ್ಕೆ ಇಲ್ಲೊಂದು ಸಾಕ್ಷಿ ಇದೆ ನೋಡಿ, ಮೂವರು ಪೊಲೀಸ್​ ಸಿಬ್ಬಂದಿ ಸೇರಿದಂತೆ ಸಿಕ್ಕ ಸಿಕ್ಕವರಿಗೆ ಮನಬಂದಂತೆ ಯುವಕ ಕಚ್ಚಿದಾನೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಮಹೇಶ್​​ ಎನ್ನುವ ಯುವಕನಿಂದ ಕೃತ್ಯವೆಸಗಲಾಗಿದೆ. ಶೇಖರ್​​, ಪೆಂಚಲಯ್ಯ, ಅಶ್ವತ್ಥ್​ ಎಂಬ ಪೊಲೀಸ್​ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯ ಮಾಡಿದ ವ್ಯಕ್ತಿಯನ್ನು ಹಿಡಿದು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ಮನವಿಗೂ ಸ್ಪಂದಿಸದೆ ಯುವಕ ರಂಪಾಟ ಮಾತ್ರ ಜೋರಾಗಿತ್ತು.

ಕುಡಿದ ಮತ್ತಲ್ಲಿ ಸಿಕ್ಕ ಸಿಕ್ಕವರಿಗೆ ಕಚ್ಚಿದ ಯುವಕ Read More »

ಮೆಟ್ರೋದಲ್ಲಿ ರೈತನಿಗೆ ಅವಮಾನ: ಮಾನವ ಹಕ್ಕುಗಳ ಆಯೋಗದಿಂದ BMRCLಗೆ ನೋಟಿಸ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮೆಟ್ರೋ ಅಂದ್ರೆ ಎಲ್ಲರಿಗೂ ಖುಷಿ, ಒಂದು ಸಲನಾದ್ರು ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂಬುದು ಜನರ ಆಸೆಯಾಗಿರುತ್ತದೆ. ಆದ್ರೆ ಇದೇ ಮೆಟ್ರೊದಲ್ಲಿ ಅಮಾನವೀಯ ಘಟನೆಯೊಂದು ನಡೆದು ಹೋಗಿದೆ.ಹೌದು ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ರೈತನೊರ್ವನಿಗೆ ಅವಮಾನ ಮಾಡಲಾಗಿದೆ. ಫೆಬ್ರವರಿ 26 ರಂದು ಬಟ್ಟೆ ಕೊಳೆಯಿದೆ ಎಂಬ ಕಾರಣಕ್ಕೆ ಬಡ ರೈತನ ಮೇಲೆ‌ ಮೇಟ್ರೋ ಸಿಬ್ಬಂದಿ ದುರಹಂಕಾರದ‌ ವರ್ತನೆ ಮೆರೆದಿದ್ದರು. ಇದನ್ನು ಸಹ ಪ್ರಯಾಣಿಕ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಅಷ್ಟೇ ಅಲ್ಲ, ರೈತನನ್ನು ಒಳಗೆ ಬಿಡದ ಸಿಬ್ಬಂದಿ

ಮೆಟ್ರೋದಲ್ಲಿ ರೈತನಿಗೆ ಅವಮಾನ: ಮಾನವ ಹಕ್ಕುಗಳ ಆಯೋಗದಿಂದ BMRCLಗೆ ನೋಟಿಸ್ Read More »

ರಾಜ್ಯಸಭಾ ಚುನಾವಣೆಯಲ್ಲಿ ಸೋಲು/ ರಾಜೀನಾಮೆ ನೀಡುತ್ತಾರಾ ಹಿಮಾಚಲ ಪ್ರದೇಶ ಮುಖ್ಯಮಂತ್ರಿ?

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಹೆಚ್ಚಾಗಿದ್ದು, ಸಿಎಂ ಸುಖೀಂದರ್ ಸಿಂಗ್ ಸುಖು ರಾಜೀನಾಮೆ ನೀಡಿದ್ದಾರೆ ಎಂಬ ರಾಜಕೀಯ ಪಡಸಾಲೆಯಲ್ಲಿ ಮಾತುಗಳು ಕೇಳಿಬರುತ್ತಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದು, ವಿಶ್ವಾಸಮತ ಸಾಬೀತುಪಡಿಸಲೂ ವಿಫಲವಾಗಬಹುದು ಎಂಬ ಸಾಧ್ಯತೆ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಮೊದಲೇ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯ ಉಸ್ತುವಾರಿ ವಹಿಸಲು ಬುಧವಾರ ಶಿಮ್ಲಾಕ್ಕೆ ಧಾವಿಸಿದ ಕಾಂಗ್ರೆಸ್ ವೀಕ್ಷಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು

ರಾಜ್ಯಸಭಾ ಚುನಾವಣೆಯಲ್ಲಿ ಸೋಲು/ ರಾಜೀನಾಮೆ ನೀಡುತ್ತಾರಾ ಹಿಮಾಚಲ ಪ್ರದೇಶ ಮುಖ್ಯಮಂತ್ರಿ? Read More »

“ಪಾಕಿಸ್ತಾನ್ ಜಿಂದಾಬಾದ್ ಅಲ್ಲ ನಾಸಿರ್ ಸಾಬ್ ಜಿಂದಾಬಾದ್ ಎಂದು ಘೋಷಣೆ ಮಾಡಿದ್ದು”| ಎಎನ್ಐ ಪತ್ರಕರ್ತ ಎಂ‌. ಮಧು ಎಕ್ಸ್ ನಲ್ಲಿ ಸ್ಪಷ್ಟನೆ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ನಾಸೀರ್ ಹುಸೇನ್ ಅವರು ಗೆದ್ದ ಸಂದರ್ಭದಲ್ಲಿ ಬೆಂಬಲಿಗರ ಗುಂಪಿನಿಂದ ಕೂಗಿದ್ದು “ನಾಸೀರ್ ಸಾಬ್ ಝಿಂದಾಬಾದ್” ಎಂದು, “ಪಾಕಿಸ್ತಾನ್ ಝಿಂದಾಬಾದ್ ಎಂದಲ್ಲ” ಎಂದು ಎಎನ್ಐ ಸುದ್ಧಿ ಸಂಸ್ಥೆಯ ಪತ್ರಕರ್ತ ಎಂ.ಮಧು ತನ್ನ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆ ಫಲಿತಾಂಶ ನಂತರದ ಸುದ್ದಿಗಾಗಿ ಸ್ಥಳದಲ್ಲಿದ್ದ ಎಎನ್ಐ ಸುದ್ದಿಸಂಸ್ಥೆಯ ಪತ್ರಕರ್ತ ಎಂ.ಮಧು, “ಕನ್ನಡದ ಮಾಧ್ಯಮಗಳು ಇದನ್ನು ತಿರುಚಿ ಸುದ್ದಿ ಮಾಡಿವೆ. ಇದು ಉದ್ದೇಶಪೂರ್ವಕ ಪ್ರಮಾದ” ಎಂದು ವಿಷಾದಿಸಿದ್ದಾರೆ. ಈ ಕುರಿತು ಅವರು

“ಪಾಕಿಸ್ತಾನ್ ಜಿಂದಾಬಾದ್ ಅಲ್ಲ ನಾಸಿರ್ ಸಾಬ್ ಜಿಂದಾಬಾದ್ ಎಂದು ಘೋಷಣೆ ಮಾಡಿದ್ದು”| ಎಎನ್ಐ ಪತ್ರಕರ್ತ ಎಂ‌. ಮಧು ಎಕ್ಸ್ ನಲ್ಲಿ ಸ್ಪಷ್ಟನೆ Read More »