ರಾಜ್ಯ

ಫಲಾನುಭವಿಗಳ ಸಮಾವೇಶ| ಮಜ್ಜಿಗೆ ಚೀಲಗಳನ್ನು ಹೊತ್ತೊಯ್ದ ಸಾರ್ವಜನಿಕರು

ಸಮಗ್ರ ನ್ಯೂಸ್: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆ ಫಲನುಭವಿಗಳಿಗೆ ಸಮಾವೇಶ ನಡೆದಿತ್ತು. ಆದರೆ ಸಮಾವೇಶಕ್ಕೆ ಬಂದ ಜನ ಮಜ್ಜಿಗೆ ಪ್ಯಾಕೆಟ್ ಚೀಲಗಳನ್ನು ಹೊತ್ತೊಯ್ದಿದ್ದಾರೆ. ಕಾರ್ಯಕ್ರಮದಲ್ಲಿ ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ಸ್ಟೇಜ್ ಹಿಂಭಾಗದಲ್ಲಿ ಮಜ್ಜಿಗೆ ಇರಿಸಲಾಗಿದ್ದು, ಜನ ಚೀಲಗಳನ್ನು ಎತ್ತಿಕೊಂಡು ಹೋಗಿದ್ದಾರೆ.

ಫಲಾನುಭವಿಗಳ ಸಮಾವೇಶ| ಮಜ್ಜಿಗೆ ಚೀಲಗಳನ್ನು ಹೊತ್ತೊಯ್ದ ಸಾರ್ವಜನಿಕರು Read More »

ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವು

ಸಮಗ್ರ ನ್ಯೂಸ್: ಯುವತಿಯೊಬ್ಬರು ರಾತ್ರಿ ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸದಾಶಿವ ನಗರದಲ್ಲಿ ನಡೆದಿದೆ. ಸದಾಶಿವ ನಗರದ ನಿವಾಸಿ ಓಶಾನಾ ರೊನಾಲ್ದೊ ಪಚೆಕೊ (21) ತಮ್ಮ ಸಾಕು ನಾಯಿಯನ್ನು ತೆಗೆದುಕೊಂಡು ಟೆರೆಸ್ ಮೇಲೆ ಹೋಗಿದ್ದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು, ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಓಶಾನಾ ಪಾಲಕರು ಎಪಿಎಂಸಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವು Read More »

ರಾಜ್ಯದಲ್ಲಿ ‌ಕಾಟನ್ ಕ್ಯಾಂಡಿ ನಿಷೇಧ| ಕ್ಯಾಂಡಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಸೂಚನೆ

ಸಮಗ್ರ ನ್ಯೂಸ್: ತಮಿಳುನಾಡು ಮತ್ತು ಪುದುಚೇರಿಯಲ್ಲಿ ರೋಡಮೈನ್-ಬಿ ಕ್ಯಾನ್ಸರ್ ಅಂಶವಿರುವ ಕಾರಣ ಬಾಂಬೆ ಮಿಠಾಯಿಗಳ ಮೇಲೆ ನಿಷೇಧ ಹೇರಿದ ನಂತರ ಪ್ರತಿ ಜಿಲ್ಲೆಯಿಂದ ಹತ್ತಿ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಕರ್ನಾಟಕ ವಿಭಾಗ ಅಧಿಕಾರಿಗಳಿಗೆ ಸೂಚಿಸಿದೆ. ಕೆಲವು ಜಿಲ್ಲೆಗಳಿಂದ ಹತ್ತಿ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. “ಕೆಲವು ನಗರಗಳಲ್ಲಿ, ಅವು ಪ್ಯಾಕ್‌ಗಳಲ್ಲಿಯೂ ಲಭ್ಯವಿದೆ. ನಾವು ಅವುಗಳನ್ನು ಸಂಗ್ರಹಿಸುತ್ತಿದ್ದೇವೆ. ಆದರೆ ಕೆಲವು ಜಿಲ್ಲೆಗಳಲ್ಲಿ, ಇದನ್ನು ಜಾತ್ರೆಗಳು ಮತ್ತು ಕೂಟಗಳ

ರಾಜ್ಯದಲ್ಲಿ ‌ಕಾಟನ್ ಕ್ಯಾಂಡಿ ನಿಷೇಧ| ಕ್ಯಾಂಡಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಸೂಚನೆ Read More »

ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಉದ್ದೇಶ/ ಫೆ. 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ

ಸಮಗ್ರ ನ್ಯೂಸ್: ಫೆ. 29ರಿಂದ ಮಾ.9ರವರೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ, ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ವಿಕಾಸಸೌಧದಲ್ಲಿ ಸಾರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದರು. ಬ್ರಾಂಡ್ ಬೆಂಗಳೂರು ಅಭಿಯಾನದಡಿಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು

ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಉದ್ದೇಶ/ ಫೆ. 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ Read More »

ಬೈಕ್ ಚಾಲನೆ ಮಾಡಿದ ಅಪ್ರಾಪ್ತ ಪುತ್ರ| ದಂಡ ತೆತ್ತು ಸಜೆ ಅನುಭವಿಸಿದ ತಾಯಿ

ಸಮಗ್ರ ನ್ಯೂಸ್: ಅಪ್ರಾಪ್ತ ಮಕ್ಕಳಿಗೆ ಚಾಲನೆ ಮಾಡಲು ವಾಹನ ಕೊಡಬೇಡಿ ಎಂದು ಪೊಲೀಸ್ ಇಲಾಖೆ ಎಚ್ಚರಿಸುತ್ತಲೇ ಇರುತ್ತದೆ. ಪೊಲೀಸರ ಕಳಕಳಿಯನ್ನು ಲೆಕ್ಕಿಸದೇ ಪೋಷಕರು ತಮ್ನ ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಕೊಟ್ಟು ಅನಾಹುತ ಸೃಷ್ಠಿಕೊಂಡಿರುವ ಪ್ರಕರಣಗಳು ಕೂಡ ಘಟಿಸಿವೆ. ಆದರೂ ಎಚ್ಚೆತ್ತುಕೊಳ್ಳದ ಇಲ್ಲೊಬ್ಬರು ತನ್ನ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟು ಪೋಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ. ಈ ಪ್ರಮಾದಕ್ಕಾಗಿ ಇವರಿಗೆ ಹಾಸನ ಜಿಲ್ಲೆ ಬೇಲೂರು ಸಿವಿಲ್ ಜಡ್ಜ್ ಕಿರಿಯ ಶ್ರೇಣಿ ನ್ಯಾಯಾಲಯವು ರೂ.16,000 ದಂಡವನ್ನು

ಬೈಕ್ ಚಾಲನೆ ಮಾಡಿದ ಅಪ್ರಾಪ್ತ ಪುತ್ರ| ದಂಡ ತೆತ್ತು ಸಜೆ ಅನುಭವಿಸಿದ ತಾಯಿ Read More »

ರಾಜ್ಯಸಭಾ ಚುನಾವಣೆ ಎ.ಎಸ್.ಪೊನ್ನಣ್ಣ ರವರಿಂದ ಪೂರ್ವ ಸಿದ್ದತೆ ವೀಕ್ಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತ್ಯಂತ ಕುತೂಹಲ ಮೂಡಿಸಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಫೆ. 27ರಂದು ಚುನಾವಣೆ ನಡೆಯಲಿದ್ದು, ವಿಧಾನ ಸೌಧದಲ್ಲಿ ಸಿದ್ದವಾಗುತ್ತಿರುವ ಮತಗಟ್ಟೆಯನ್ನುಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ರವರು ಫೆ. 23 ರಂದು ಸಂಜೆ ವೀಕ್ಷಣೆ ಮಾಡಿದರು. ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಐದನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಅಡ್ಡ ಮತದಾನವಾಗದೇ ಇರಲು ಕಾಂಗ್ರೆಸ್ ಮುಂಜಾಗ್ರತಾ ಕ್ರಮ ವಹಿಸಿದ್ದು ಕಾನೂನಾತ್ಮಕವಾಗಿ ಚುನಾವಣೆ ನಡೆಸುವ ಸಲುವಾಗಿ ಕಾನೂನು ತಜ್ಞರು

ರಾಜ್ಯಸಭಾ ಚುನಾವಣೆ ಎ.ಎಸ್.ಪೊನ್ನಣ್ಣ ರವರಿಂದ ಪೂರ್ವ ಸಿದ್ದತೆ ವೀಕ್ಷಣೆ Read More »

ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ| ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕ ತಿರಸ್ಕೃತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು. ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು. ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು.

ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ| ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕ ತಿರಸ್ಕೃತ Read More »

ಬೆಂಗಳೂರಿಗರಿಗೆ ಸಿಹಿ ಸುದ್ದಿ/ ಬೆಳಿಗ್ಗೆ ಐದರಿಂದ ಓಡಾಡಲಿದೆ ಮೆಟ್ರೋ

ಸಮಗ್ರ ನ್ಯೂಸ್: ಮೆಟ್ರೋ ರೈಲು ನಿಗಮವು ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಪೀಕ್ ಅವರ್ ಗಳಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾದ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ರೈಲು ಸೇವೆ ಕೂಡ ಆರಂಭ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ರೈಲುಗಳನ್ನು ಸಂಚರಿಸಲು ನಿರ್ಧಾರ ಮಾಡಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ರೈಲು ಸೇವೆ ಕೂಡ ಆರಂಭವಾಗುತ್ತಿದ್ದು, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲು

ಬೆಂಗಳೂರಿಗರಿಗೆ ಸಿಹಿ ಸುದ್ದಿ/ ಬೆಳಿಗ್ಗೆ ಐದರಿಂದ ಓಡಾಡಲಿದೆ ಮೆಟ್ರೋ Read More »

ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ| ಈ ಸಂಬಂಧ ಹೋರಾಟ ಮಾಡಲು ಕರವೇ ಚಿಂತನೆ

ಸಮಗ್ರ ನ್ಯೂಸ್:ಕರ್ನಾಟಕ ರಕ್ಷಣಾ ವೇದಿಕೆ ನಾಮಫಲಕ ವಿಚಾರವಾಗಿ ಡಿಸೆಂಬರ್​ 27 ರಂದು ಹೋರಾಟ ಮಾಡಿ, ಫೆಬ್ರವರಿ 28ರ ವರೆಗೆ ಗಡುವು ನೀಡಿದ್ದರ ಪರಿಣಾಮ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ ಮಾಡಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದರ ಪರಿಣಾಮವಾಗಿ ಈಗ ಬೆಂಗಳೂರು ಕನ್ನಡಮಯ ಆಗುತ್ತಿದೆ. ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇನ್ನೂ ಉದ್ಯೋಗ ಮೀಸಲಾತಿಗಾಗಿ ಹೋರಾಟ ಮಾಡುತ್ತೇವೆ. ಎಲ್ಲ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಲೇಬೇಕು. ಈ

ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ| ಈ ಸಂಬಂಧ ಹೋರಾಟ ಮಾಡಲು ಕರವೇ ಚಿಂತನೆ Read More »

ಲೋಕ ಗೆಲ್ಲಲ್ಲು ತಂತ್ರ|ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ ಎಂದು ಬಿಜೆಪಿ ಪೋಸ್ಟ್

ಸಮಗ್ರ ನ್ಯೂಸ್: ಇನ್ನೇನು ಲೋಕಸಭಾ ಚುನಾವಣೆ ಸಮೀಪದಲ್ಲಿ ಇದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ಮತದಾರರನ್ನು ಸೆಳೆಯಲು ಕುಕ್ಕರ್ ವಿತರಿಸಿ ಆಮಿಷವೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮೂಲಕ ಕ್ರಮಕ್ಕೆ ಒತ್ತಾಯಿಸಿದೆ. ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ! ದೇಶದ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ.

ಲೋಕ ಗೆಲ್ಲಲ್ಲು ತಂತ್ರ|ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ ಎಂದು ಬಿಜೆಪಿ ಪೋಸ್ಟ್ Read More »